Homeಕರ್ನಾಟಕಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

- Advertisement -
- Advertisement -

ದಡಾರ ಮತ್ತು ರುಬೆಲ್ಲಾ (ಎಂಆರ್) ಲಸಿಕೆಗಳನ್ನು ಪಡೆದ ಬೆಳಗಾವಿ ಜಿಲ್ಲೆಯ ರಾಮದುರ್ಗದ ಮೂವರು ಮಕ್ಕಳ ಸಾವು ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್‌ ತಿಳಿಸಿದ್ದಾರೆ.

ಮಕ್ಕಳಿಗೆ ಲಸಿಕೆ ನೀಡಿದ್ದ ನರ್ಸ್, ಫಾರ್ಮಸಿಸ್ಟ್ ಬೇಜವಾಬ್ದಾರಿಯಿಂದ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿ ಬಂದಿದೆ. ಹೀಗಾಗಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಮಕ್ಕಳಿಗೆ ಸೆಪ್ಟಿಕ್ ಶಾಕ್ ಸಿಂಡ್ರೋಮ್‌ ಆಗಿರಬಹುದು. ದುರಂತದ ಕುರಿತು ಹೆಚ್ಚುವರಿ ತನಿಖೆಗಾಗಿ ನೊಡಲ್ ಅಧಿಕಾರಿಯನ್ನು ಕಳುಹಿಸಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಮೃತಪಟ್ಟ ಮೂವರು ಮಕ್ಕಳನ್ನು ರಾಮದುರ್ಗ ತಾಲೂಕಿನ ಬೋಚಬಾಳ್ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು) ಮತ್ತು ಮಧು ಉಮೇಶ ಕರಗುಂಡಿ (14 ತಿಂಗಳು) ಮತ್ತು ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಚೇತನ್ (15 ತಿಂಗಳು) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮಕ್ಕಳಿಗೆ ಲಸಿಕೆ: ‘ಅವೈಜ್ಞಾನಿಕ’ ಎಂದ ಕೊವಾಕ್ಸಿನ್‌ ಪ್ರಯೋಗಗಳ ತನಿಖಾಧಿಕಾರಿ!

ಆರೋಗ್ಯಾಧಿಕಾರಿಗಳ ಪ್ರಕಾರ, “ರಾಮದುರ್ಗದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜ.11 ಮತ್ತು 12 ರಂದು ಎರಡು ದಿನಗಳ ಕಾಲ ಮಾಸಿಕ ಮಾಸಿಕ ಲಸಿಕಾ ಅಭಿಯಾನ ನಡೆಯಿತು. ಜನವರಿ 12 ರಂದು ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 21 ಮಕ್ಕಳಿಗೆ ಎಂಆರ್ ಮತ್ತು ಇತರ ಲಸಿಕೆಗಳನ್ನು ನೀಡಲಾಯಿತು. ಆದರೆ ಲಸಿಕೆಗಳನ್ನು ತೆಗೆದುಕೊಂಡಿದ್ದ ನಾಲ್ಕು ಮಕ್ಕಳು ಅಸ್ವಸ್ಥರಾದರು. ಅವರಲ್ಲಿ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ, ಒಂದು ಮಗು ಸ್ಥಳೀಯ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದೆ” ಎಂದಿದ್ದಾರೆ.

“ಬೋಚಬಾಳ ಗ್ರಾಮದ ಒಂದೇ ಲಸಿಕಾ ಕೇಂದ್ರದಲ್ಲಿ ಮಕ್ಕಳಿಗೆ ಮಾಸಿಕ ಲಸಿಕೆ ಹಾಗೂ ಕೋವಿಡ್ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ, ಅವರ ಕಡೆಯಿಂದಲೇ ಲೋಪಗಳಾಗಿವೆ” ಎಂದು ಆರೋಪಿಸಿದ್ದಾರೆ ಎಂದು ಬೋಚಬಾಳ ಗ್ರಾಮ ಪಂಚಾಯಿತಿ ಸದಸ್ಯ ಭೀಮಶಿ ಹಾದಿಮನಿ ಅವರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

’ಎಂಆರ್ ಲಸಿಕೆ ಹಾಕಿದ ನಂತರ ಮಕ್ಕಳಲ್ಲಿ ವಾಂತಿ, ಬೇಧಿಯಂತಹ ಹೊಸ ಲಕ್ಷಣಗಳು ಕಂಡು ಬಂದವು. ಒಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ನಡೆಸಿದ್ದೇವೆ. ನಾವು ಮೂತ್ರ, ಮಲ ಮತ್ತು ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಜ್ಯ ಮಟ್ಟದ ಮತ್ತು ರಾಷ್ಟ್ರೀಯ ಮಟ್ಟದ ಪ್ರಯೋಗಾಲಯಗಳಿಗೆ ಕಳುಹಿಸಿದ್ದೇವೆ. ನಾನು ವರದಿಯನ್ನು ಸಲ್ಲಿಸಲು ಆರ್‌ಸಿಒಗೆ ನಿರ್ದೇಶನ ನೀಡಿದ್ದೇನೆ. ವರದಿಯನ್ನು ಪಡೆದ ನಂತರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಹೇಳಿದ್ದಾರೆ.


ಇದನ್ನೂ ಓದಿ: ನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...