Homeಕರ್ನಾಟಕಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

- Advertisement -
- Advertisement -

ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆ ಇಂದಿನಿಂದ (ಡಿಸೆಂಬರ್ 8) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭಗೊಂಡಿದೆ.

ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ ಏರಿಕೆಯ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಕಟ್ಟಿ ಹಾಕಲು ವಿರೋಧಪಕ್ಷಗಳು ಸಿದ್ದತೆ ನಡೆಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಜಟಾಪಟಿ ನಡೆಯುತ್ತಿದೆ ಎಂಬ ಸುದ್ದಿ ಹಿನ್ನೆಲೆ, ಸರ್ಕಾರದ ವಿರುದ್ದ ಅವಿಶ್ವಾಸ ನಿಲುವಳಿ ಮಂಡಿಸಲು ಬಿಜೆಪಿ ಯೋಜಿಸಿತ್ತು. ಆದರೆ, ಸಿಎಂ, ಡಿಸಿಎಂ ಬ್ರೇಕ್‌ ಫಾಸ್ಟ್ ಮೀಟಿಂಗ್ ಮೂಲಕ ಒಗ್ಗಟ್ಟು ಪ್ರದರ್ಶಿಸಿರುವ ಹಿನ್ನೆಲೆ, ಆ ಯೋಜನೆಯನ್ನು ಮರು ವಿಮರ್ಶೆ ನಡೆಸುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸರ್ಕಾರದ ಮೇಲೆ ಮುಗಿ ಬೀಳುವ ಸಾಧ್ಯತೆ ಇದೆ. ಆದರೆ, ಸರ್ಕಾರ ಕಬ್ಬು ಬೆಳಗಾರರ ಜೊತೆ ಸಭೆ ನಡೆಸಿ ಈಗಾಗಲೇ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹರಿಸಿದೆ. ಮೆಕ್ಕೆ ಜೋಳಕ್ಕೆ ಸಂಬಂಧಿಸಿದಂತೆ ಪ್ರತಿ ರೈತರಿಂದ ಕ್ವಿಂಟಲ್‌ಗೆ ರೂ. 2,400 ರಂತೆ ಎಕರೆಗೆ ಒಬ್ಬ ರೈತನಿಂದ ಗರಿಷ್ಠ 80 ಕ್ವಿಂಟಲ್‌ ಮೆಕ್ಕೆ ಜೋಳ ಖರೀದಿಸುವ ಸಂಬಂಧ ಭಾನುವಾರ ಆದೇಶ ಹೊರಡಿಸಿದೆ.

ಆದರೂ, ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಬೆಳಗಾವಿಯಲ್ಲಿ ಮಂಗಳವಾರ ಪ್ರತಿಭಟನೆ ಮತ್ತು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ವರದಿಗಳು ಹೇಳಿವೆ.

ಕೃಷ್ಣಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಸೇರಿದಂತೆ ನೀರಾವರಿ ಯೋಜನೆಗಳ ಬಗ್ಗೆಯೂ ಸದನದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಈ ಬಾರಿಯ ಕಲಾಪದಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆಯೂ ಸೇರಿ ಸುಮಾರು 30 ಮಸೂದೆಗಳು ಮಂಡನೆಯಾಗಲಿವೆ ಎಂದು ವರದಿಯಾಗಿದೆ.

ಎಂಇಎಸ್‌, ಶಿವಸೇನೆ ಪ್ರತಿಭಟನೆ ಎಚ್ಚರಿಕೆ

ಅಧಿವೇಶನದ ಸಮಯದಲ್ಲಿ ಎಂಇಎಸ್ ಹಾಗೂ ಶಿವಸೇನೆಯ ಚಟುವಟಿಕೆಗಳು ಬಿರುಸು ಪಡೆದಿದೆ. ಹಾಗಾಗಿ, ಬೆಳಗಾವಿ ನಗರದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಈ ವರ್ಷವೂ ಎಂಇಎಸ್ ಸಂಘಟನೆ ಮಹಾಮೇಳಾವ್ ಆಯೋಜಿಸಲು ಮುಂದಾಗಿತ್ತು. ಆದರೆ, ಕನ್ನಡ ಪರ ಸಂಘಟನೆಗಳ ತೀವ್ರ ವಿರೋಧ ಹಿನ್ನೆಲೆ, ಶಾಂತಿ–ಸುವ್ಯವಸ್ಥೆಗೆ ದಕ್ಕೆ ಉಂಟಾಗುವ ಕಾರಣ ನೀಡಿ ಪೊಲೀಸರು ಕಾರ್ಯಕ್ರಮಕ್ಕೆ ಸಂಪೂರ್ಣವಾಗಿ ಅನುಮತಿ ನಿರಾಕರಿಸಿದ್ದಾರೆ.

ಅನುಮತಿ ನಿರಾಕರಿಸಿದರೂ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಇಂದು ಬೆಳಗಾವಿ ನಗರದಲ್ಲಿ ತೀವ್ರ ಚಟುವಟಿಕೆ ನಡೆಸುವ ಸೂಚನೆ ನೀಡಿದ್ದಾರೆ. ಹಾಗಾಗಿ, ನಗರದ ಪ್ರಮುಖ ರಸ್ತೆ, ಚೌಕ, ಗಡಿ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...