Homeಕರ್ನಾಟಕಇಂದಿನಿಂದ ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಜೆಡಿಎಸ್-ಬಿಜೆಪಿ ಸಜ್ಜು

ಇಂದಿನಿಂದ ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಜೆಡಿಎಸ್-ಬಿಜೆಪಿ ಸಜ್ಜು

- Advertisement -
- Advertisement -

ಇಂದಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮುಂದಿನ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬರ, ವರ್ಗಾವಣೆ ಆರೋಪ ಮತ್ತು ಅನುದಾನ ಕೊರತೆ ಅಸ್ತ್ರಗಳನ್ನು ಪ್ರಯೋಗಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನವಾದ್ದರಿಂದ ಎರಡೂ ಪಕ್ಷಗಳು ಜಂಟಿಯಾಗಿ ಸರ್ಕಾರದ ವಿರುದ್ಧ ಮುಗಿ ಬೀಳಲು ಸಿದ್ದತೆ ಮಾಡಿಕೊಂಡಿವೆ.

ಬಿಜೆಪಿ-ಜೆಡಿಎಸ್ ಮೈತ್ರಿ, ಆರ್. ಅಶೋಕ್ ಪ್ರತಿಪಕ್ಷ ನಾಯಕ, ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮತ್ತು ಕಾಂಗ್ರೆಸ್‌ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಹಾಗಾಗಿ, ಈ ಬಾರಿಯ ಅಧಿವೇಶನ ಕುತೂಹಲಕ್ಕೆ ಕಾರಣವಾಗಿದೆ.

ವರ್ಗಾವಣೆ ದಂಧೆ ಆರೋಪ ಅಸ್ತ್ರ : ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪವನ್ನು ಪ್ರತಿಪಕ್ಷಗಳು ಮುಖ್ಯವಾಗಿ ಬಳಸುವ ಸಾಧ್ಯತೆ ಇದೆ. ಇತ್ತೀಚೆಗೆ ಸಿಎಂ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ವರ್ಗಾವಣೆ ದಂಧೆ ಆರೋಪವನ್ನು ಪ್ರತಿಪಕ್ಷಗಳು ಮಾಡಿದ್ದವು. ಇದೇ ಅಸ್ತ್ರವನ್ನು ಸದನದಲ್ಲಿ ಪ್ರಯೋಗಿಸುವ ಸಾಧ್ಯತೆ ಇದೆ.

ಡಿ.ಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಆದೇಶವನ್ನು ಇತ್ತೀಚೆಗೆ ಸರ್ಕಾರ ವಾಪಸ್ ಪಡೆದಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಅಧಿಕಾರ ದುರುಪಯೋಗದ ಆರೋಪ ಮಾಡಿ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬಹುದು.

ಜಮೀರ್ ಅಹ್ಮದ್ ಹೇಳಿಕೆ ವಿವಾದ : ತೆಲಂಗಾಣದ ವಿಧಾನಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ, ‘ಕರ್ನಾಟಕದಲ್ಲಿ ಅಲ್ಪ ಸಂಖ್ಯಾತ ಸಮುದಾಯದ ಸ್ಪೀಕರ್ ಯು.ಟಿ ಖಾದರ್ ಮುಂದೆ ಬಿಜೆಪಿ ನಾಯಕರು ಕೈ ಮುಗಿದು ನಿಲ್ಲಬೇಕಾದ ಪರಿಸ್ಥಿತಿ ಇದೆ’ ಎಂದು ಸಚಿವ ಝಮೀರ್ ಅಹ್ಮದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದರು. ಸದನದಲ್ಲಿ ಮತ್ತೊಮ್ಮೆ ಈ ವಿಚಾರ ಪ್ರಸ್ತಾಪ ಆಗಬಹುದು.

ಗ್ಯಾರಂಟಿ ಜಾರಿ ವೈಫಲ್ಯ ಆರೋಪ : ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜಾರಿಯಾಗಿಲ್ಲ. ಸರ್ಕಾರ ಸುಳ್ಳು ಹೇಳಿ ಜನರನ್ನು ವಂಚಿಸಿದೆ ಎಂದು ಬಿಜೆಪಿ ಆರೋಪಿಸುತ್ತಲೇ ಬಂದಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಸದನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ. ಗ್ಯಾರಂಟಿ ಹೇಸರೇಳಿ ಸರ್ಕಾರ ಶಾಸಕರಿಗೆ ಅನುದಾನ ಕಡಿತ ಮಾಡಿದೆ ಎಂದು ಬಿಜೆಪಿ-ಜೆಡಿಎಸ್ ಆರೋಪಿಸಿದೆ. ಈ ವಿಚಾರ ಕೂಡ ಪ್ರತಿಪಕ್ಷಗಳಿಗೆ ಅಸ್ತ್ರವಾಗಬಹುದು.

ಪ್ರತಿಪಕ್ಷಗಳ ಅಸ್ತ್ರಕ್ಕೆ ಸರ್ಕಾರದ ಕೌಂಟರ್ ಏನು? ಪ್ರತಿಪಕ್ಷಗಳು ಹಲವು ಅಸ್ತ್ರಗಳಿಗೆ ಸಿದ್ದರಾಮಯ್ಯ ಸರ್ಕಾರ ಕೂಡ ಸರಿಯಾದ ಕೌಂಟರ್ ಕೊಡಲು ಸಿದ್ದತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದೆ. ಆದರೆ, ಕೇಂದ್ರ ಸರ್ಕಾರ ನಯಾಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಇದನ್ನೇ ಸಿಎಂ ಮತ್ತೊಮ್ಮೆ ಪ್ರಸ್ತಾಪಿಸಬಹುದು. ರಾಜ್ಯ ಸರ್ಕಾರ ಬರ ಪರಿಹಾರವಾಗಿ ರೈತರಿಗೆ ಬಿಡುಗಡೆ ಮಾಡಿರುವ ತಲಾ 2 ಸಾವಿರ ರೂಪಾಯಿ ವರವಾಗಬಹುದು. ರಾಜ್ಯದ ಬಿಜೆಪಿ ಸಂಸದರು ಕೇಂದ್ರದಿಂದ ಬರ ಪರಿಹಾರ ಮತ್ತು ಇತರ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಬಹುದು.

ಇದನ್ನೂ ಓದಿ : 3 ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು: ಪಕ್ಷ ಬಲವರ್ಧನೆಯ ಸಂಕಲ್ಪ ಮಾಡಿದ ಎಐಸಿಸಿ ಅಧ್ಯಕ್ಷ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...