Homeಕರ್ನಾಟಕಇಂದಿನಿಂದ ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಜೆಡಿಎಸ್-ಬಿಜೆಪಿ ಸಜ್ಜು

ಇಂದಿನಿಂದ ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಜೆಡಿಎಸ್-ಬಿಜೆಪಿ ಸಜ್ಜು

- Advertisement -
- Advertisement -

ಇಂದಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮುಂದಿನ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬರ, ವರ್ಗಾವಣೆ ಆರೋಪ ಮತ್ತು ಅನುದಾನ ಕೊರತೆ ಅಸ್ತ್ರಗಳನ್ನು ಪ್ರಯೋಗಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನವಾದ್ದರಿಂದ ಎರಡೂ ಪಕ್ಷಗಳು ಜಂಟಿಯಾಗಿ ಸರ್ಕಾರದ ವಿರುದ್ಧ ಮುಗಿ ಬೀಳಲು ಸಿದ್ದತೆ ಮಾಡಿಕೊಂಡಿವೆ.

ಬಿಜೆಪಿ-ಜೆಡಿಎಸ್ ಮೈತ್ರಿ, ಆರ್. ಅಶೋಕ್ ಪ್ರತಿಪಕ್ಷ ನಾಯಕ, ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮತ್ತು ಕಾಂಗ್ರೆಸ್‌ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಹಾಗಾಗಿ, ಈ ಬಾರಿಯ ಅಧಿವೇಶನ ಕುತೂಹಲಕ್ಕೆ ಕಾರಣವಾಗಿದೆ.

ವರ್ಗಾವಣೆ ದಂಧೆ ಆರೋಪ ಅಸ್ತ್ರ : ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪವನ್ನು ಪ್ರತಿಪಕ್ಷಗಳು ಮುಖ್ಯವಾಗಿ ಬಳಸುವ ಸಾಧ್ಯತೆ ಇದೆ. ಇತ್ತೀಚೆಗೆ ಸಿಎಂ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ವರ್ಗಾವಣೆ ದಂಧೆ ಆರೋಪವನ್ನು ಪ್ರತಿಪಕ್ಷಗಳು ಮಾಡಿದ್ದವು. ಇದೇ ಅಸ್ತ್ರವನ್ನು ಸದನದಲ್ಲಿ ಪ್ರಯೋಗಿಸುವ ಸಾಧ್ಯತೆ ಇದೆ.

ಡಿ.ಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಆದೇಶವನ್ನು ಇತ್ತೀಚೆಗೆ ಸರ್ಕಾರ ವಾಪಸ್ ಪಡೆದಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಅಧಿಕಾರ ದುರುಪಯೋಗದ ಆರೋಪ ಮಾಡಿ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬಹುದು.

ಜಮೀರ್ ಅಹ್ಮದ್ ಹೇಳಿಕೆ ವಿವಾದ : ತೆಲಂಗಾಣದ ವಿಧಾನಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ, ‘ಕರ್ನಾಟಕದಲ್ಲಿ ಅಲ್ಪ ಸಂಖ್ಯಾತ ಸಮುದಾಯದ ಸ್ಪೀಕರ್ ಯು.ಟಿ ಖಾದರ್ ಮುಂದೆ ಬಿಜೆಪಿ ನಾಯಕರು ಕೈ ಮುಗಿದು ನಿಲ್ಲಬೇಕಾದ ಪರಿಸ್ಥಿತಿ ಇದೆ’ ಎಂದು ಸಚಿವ ಝಮೀರ್ ಅಹ್ಮದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದರು. ಸದನದಲ್ಲಿ ಮತ್ತೊಮ್ಮೆ ಈ ವಿಚಾರ ಪ್ರಸ್ತಾಪ ಆಗಬಹುದು.

ಗ್ಯಾರಂಟಿ ಜಾರಿ ವೈಫಲ್ಯ ಆರೋಪ : ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜಾರಿಯಾಗಿಲ್ಲ. ಸರ್ಕಾರ ಸುಳ್ಳು ಹೇಳಿ ಜನರನ್ನು ವಂಚಿಸಿದೆ ಎಂದು ಬಿಜೆಪಿ ಆರೋಪಿಸುತ್ತಲೇ ಬಂದಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಸದನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ. ಗ್ಯಾರಂಟಿ ಹೇಸರೇಳಿ ಸರ್ಕಾರ ಶಾಸಕರಿಗೆ ಅನುದಾನ ಕಡಿತ ಮಾಡಿದೆ ಎಂದು ಬಿಜೆಪಿ-ಜೆಡಿಎಸ್ ಆರೋಪಿಸಿದೆ. ಈ ವಿಚಾರ ಕೂಡ ಪ್ರತಿಪಕ್ಷಗಳಿಗೆ ಅಸ್ತ್ರವಾಗಬಹುದು.

ಪ್ರತಿಪಕ್ಷಗಳ ಅಸ್ತ್ರಕ್ಕೆ ಸರ್ಕಾರದ ಕೌಂಟರ್ ಏನು? ಪ್ರತಿಪಕ್ಷಗಳು ಹಲವು ಅಸ್ತ್ರಗಳಿಗೆ ಸಿದ್ದರಾಮಯ್ಯ ಸರ್ಕಾರ ಕೂಡ ಸರಿಯಾದ ಕೌಂಟರ್ ಕೊಡಲು ಸಿದ್ದತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದೆ. ಆದರೆ, ಕೇಂದ್ರ ಸರ್ಕಾರ ನಯಾಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಇದನ್ನೇ ಸಿಎಂ ಮತ್ತೊಮ್ಮೆ ಪ್ರಸ್ತಾಪಿಸಬಹುದು. ರಾಜ್ಯ ಸರ್ಕಾರ ಬರ ಪರಿಹಾರವಾಗಿ ರೈತರಿಗೆ ಬಿಡುಗಡೆ ಮಾಡಿರುವ ತಲಾ 2 ಸಾವಿರ ರೂಪಾಯಿ ವರವಾಗಬಹುದು. ರಾಜ್ಯದ ಬಿಜೆಪಿ ಸಂಸದರು ಕೇಂದ್ರದಿಂದ ಬರ ಪರಿಹಾರ ಮತ್ತು ಇತರ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಬಹುದು.

ಇದನ್ನೂ ಓದಿ : 3 ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು: ಪಕ್ಷ ಬಲವರ್ಧನೆಯ ಸಂಕಲ್ಪ ಮಾಡಿದ ಎಐಸಿಸಿ ಅಧ್ಯಕ್ಷ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...