Homeಕರ್ನಾಟಕಇಂದಿನಿಂದ ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಜೆಡಿಎಸ್-ಬಿಜೆಪಿ ಸಜ್ಜು

ಇಂದಿನಿಂದ ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಜೆಡಿಎಸ್-ಬಿಜೆಪಿ ಸಜ್ಜು

- Advertisement -
- Advertisement -

ಇಂದಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮುಂದಿನ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬರ, ವರ್ಗಾವಣೆ ಆರೋಪ ಮತ್ತು ಅನುದಾನ ಕೊರತೆ ಅಸ್ತ್ರಗಳನ್ನು ಪ್ರಯೋಗಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನವಾದ್ದರಿಂದ ಎರಡೂ ಪಕ್ಷಗಳು ಜಂಟಿಯಾಗಿ ಸರ್ಕಾರದ ವಿರುದ್ಧ ಮುಗಿ ಬೀಳಲು ಸಿದ್ದತೆ ಮಾಡಿಕೊಂಡಿವೆ.

ಬಿಜೆಪಿ-ಜೆಡಿಎಸ್ ಮೈತ್ರಿ, ಆರ್. ಅಶೋಕ್ ಪ್ರತಿಪಕ್ಷ ನಾಯಕ, ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮತ್ತು ಕಾಂಗ್ರೆಸ್‌ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಹಾಗಾಗಿ, ಈ ಬಾರಿಯ ಅಧಿವೇಶನ ಕುತೂಹಲಕ್ಕೆ ಕಾರಣವಾಗಿದೆ.

ವರ್ಗಾವಣೆ ದಂಧೆ ಆರೋಪ ಅಸ್ತ್ರ : ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪವನ್ನು ಪ್ರತಿಪಕ್ಷಗಳು ಮುಖ್ಯವಾಗಿ ಬಳಸುವ ಸಾಧ್ಯತೆ ಇದೆ. ಇತ್ತೀಚೆಗೆ ಸಿಎಂ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ವರ್ಗಾವಣೆ ದಂಧೆ ಆರೋಪವನ್ನು ಪ್ರತಿಪಕ್ಷಗಳು ಮಾಡಿದ್ದವು. ಇದೇ ಅಸ್ತ್ರವನ್ನು ಸದನದಲ್ಲಿ ಪ್ರಯೋಗಿಸುವ ಸಾಧ್ಯತೆ ಇದೆ.

ಡಿ.ಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಆದೇಶವನ್ನು ಇತ್ತೀಚೆಗೆ ಸರ್ಕಾರ ವಾಪಸ್ ಪಡೆದಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಅಧಿಕಾರ ದುರುಪಯೋಗದ ಆರೋಪ ಮಾಡಿ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬಹುದು.

ಜಮೀರ್ ಅಹ್ಮದ್ ಹೇಳಿಕೆ ವಿವಾದ : ತೆಲಂಗಾಣದ ವಿಧಾನಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ, ‘ಕರ್ನಾಟಕದಲ್ಲಿ ಅಲ್ಪ ಸಂಖ್ಯಾತ ಸಮುದಾಯದ ಸ್ಪೀಕರ್ ಯು.ಟಿ ಖಾದರ್ ಮುಂದೆ ಬಿಜೆಪಿ ನಾಯಕರು ಕೈ ಮುಗಿದು ನಿಲ್ಲಬೇಕಾದ ಪರಿಸ್ಥಿತಿ ಇದೆ’ ಎಂದು ಸಚಿವ ಝಮೀರ್ ಅಹ್ಮದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದರು. ಸದನದಲ್ಲಿ ಮತ್ತೊಮ್ಮೆ ಈ ವಿಚಾರ ಪ್ರಸ್ತಾಪ ಆಗಬಹುದು.

ಗ್ಯಾರಂಟಿ ಜಾರಿ ವೈಫಲ್ಯ ಆರೋಪ : ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜಾರಿಯಾಗಿಲ್ಲ. ಸರ್ಕಾರ ಸುಳ್ಳು ಹೇಳಿ ಜನರನ್ನು ವಂಚಿಸಿದೆ ಎಂದು ಬಿಜೆಪಿ ಆರೋಪಿಸುತ್ತಲೇ ಬಂದಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಸದನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ. ಗ್ಯಾರಂಟಿ ಹೇಸರೇಳಿ ಸರ್ಕಾರ ಶಾಸಕರಿಗೆ ಅನುದಾನ ಕಡಿತ ಮಾಡಿದೆ ಎಂದು ಬಿಜೆಪಿ-ಜೆಡಿಎಸ್ ಆರೋಪಿಸಿದೆ. ಈ ವಿಚಾರ ಕೂಡ ಪ್ರತಿಪಕ್ಷಗಳಿಗೆ ಅಸ್ತ್ರವಾಗಬಹುದು.

ಪ್ರತಿಪಕ್ಷಗಳ ಅಸ್ತ್ರಕ್ಕೆ ಸರ್ಕಾರದ ಕೌಂಟರ್ ಏನು? ಪ್ರತಿಪಕ್ಷಗಳು ಹಲವು ಅಸ್ತ್ರಗಳಿಗೆ ಸಿದ್ದರಾಮಯ್ಯ ಸರ್ಕಾರ ಕೂಡ ಸರಿಯಾದ ಕೌಂಟರ್ ಕೊಡಲು ಸಿದ್ದತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದೆ. ಆದರೆ, ಕೇಂದ್ರ ಸರ್ಕಾರ ನಯಾಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಇದನ್ನೇ ಸಿಎಂ ಮತ್ತೊಮ್ಮೆ ಪ್ರಸ್ತಾಪಿಸಬಹುದು. ರಾಜ್ಯ ಸರ್ಕಾರ ಬರ ಪರಿಹಾರವಾಗಿ ರೈತರಿಗೆ ಬಿಡುಗಡೆ ಮಾಡಿರುವ ತಲಾ 2 ಸಾವಿರ ರೂಪಾಯಿ ವರವಾಗಬಹುದು. ರಾಜ್ಯದ ಬಿಜೆಪಿ ಸಂಸದರು ಕೇಂದ್ರದಿಂದ ಬರ ಪರಿಹಾರ ಮತ್ತು ಇತರ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಬಹುದು.

ಇದನ್ನೂ ಓದಿ : 3 ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು: ಪಕ್ಷ ಬಲವರ್ಧನೆಯ ಸಂಕಲ್ಪ ಮಾಡಿದ ಎಐಸಿಸಿ ಅಧ್ಯಕ್ಷ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...