Homeಮುಖಪುಟಬೇಲೇಕೇರಿ ಬಂದರಿನಿಂದ ಅದಿರು ಕಳ್ಳ ಸಾಗಾಣಿಕೆ ಪ್ರಕರಣ; ಆರೋಪಿ ಅಧಿಕಾರಿಗಳನ್ನು ಪಾರುಮಾಡಿ ಅಧಿಕಾರದಿಂದ ಕೆಳಗಿಳಿದ ಯಡಿಯೂರಪ್ಪ!

ಬೇಲೇಕೇರಿ ಬಂದರಿನಿಂದ ಅದಿರು ಕಳ್ಳ ಸಾಗಾಣಿಕೆ ಪ್ರಕರಣ; ಆರೋಪಿ ಅಧಿಕಾರಿಗಳನ್ನು ಪಾರುಮಾಡಿ ಅಧಿಕಾರದಿಂದ ಕೆಳಗಿಳಿದ ಯಡಿಯೂರಪ್ಪ!

- Advertisement -
- Advertisement -

ಕಬ್ಬಿಣದ ಅದಿರನ್ನು ಬಳ್ಳಾರಿಯಿಂದ ಉತ್ತರ ಕನ್ನಡದ ಬೇಲೇಕೇರಿ ಬಂದರಿಗೆ ಅಕ್ರಮವಾಗಿ ಸಾಗಿಸಿ, ವಿದೇಶಕ್ಕೆ ಕಳ್ಳ ಸಾಗಣಿಕೆ ಆಗುತ್ತಿದ್ದ ಪ್ರಕರಣವನ್ನು ನಿಷ್ಟುರ ತನಿಖೆಗೊಳಪಡಿಸಿದ್ದರು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ. ಅವರು ಸರಕಾರಕ್ಕೆ ವರದಿ ಕೊಟ್ಟಾಗ ರಾಜಕೀಯ ಎದ್ದ ಅಲ್ಲೋಲ ಕಲ್ಲೋಲ ನೆನಪಿದೆಯಾ? ಅಂದು ಮುಖ್ಯ ಮಂತ್ರಿಯಾಗಿದ್ದದ್ದು ಯಡಿಯೂರಪ್ಪ. ಆಗ ಅದಾನಿ ಕಂಪನಿಯಿಂದ ಲಂಚ ಪಡೆದು ಅಕ್ರಮವಾಗಿ ಅದಿರು ಸಾಗಾಣಿಕೆಗೆ ಅವಕಾಶಕೊಟ್ಟ ಆರೋಪದ ಮೇಲೆ ದೊಡ್ಡ-ದೊಡ್ಡ ಅಧಿಕಾರಿಗಳೇ ಜೈಲು ಪಾಲಾಗಿದ್ದರು!

ಅದಾನಿ ಎಂಟರ್ ಪ್ರೈಸೆಸ್‌ನಿಂದ ಲಂಚದ ಕಾಸು ಪಡೆದುಕೊಂಡು ಅದಿರು ಕಳ್ಳ ಸಾಗಾಣಿಕೆಗೆ ಸಹಕರಿಸುತ್ತಿದ್ದ ಆರೋಪದ ವಿಚಾರಣೆ 24 ಅಧಿಕಾರಿಗಳು ಎದುರಿಸುತ್ತಿದ್ದರು. ಇವರಿಗೆಲ್ಲ ಯಡಿಯೂರಪ್ಪ ಸಿಎಂ ಪೀಠದಿಂದ ನಿರ್ಗಮಿಸುವ 18 ದಿನ ಮೊದಲು ಕ್ಲೀನ್ ಚಿಟ್ ನೀಡಿದ್ದಾರೆ. 2021ರ ಜುಲೈ 8ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆರೋಪಿ ಅಧಿಕಾರಿಗಳನ್ನು ದೋಷ ಮುಕ್ತಗೊಳಿಸಿ ಆದೇಶ ಹೊರಡಿಸಿರುವುದು ಈಗ ರಾಜಕೀಯ ಮತ್ತು ಅಧಿಕಾರಿ ವಲಯದಲ್ಲಿ ನಾನಾ ನಮೂನೆಯ ವ್ಯಾಖಾನಗಳಿಗೆ ವಸ್ತುವಾಗಿದೆ.

ನ್ಯಾ.ಸಂತೋಷ್ ಹೆಗ್ಡೆ ವರದಿಯಲ್ಲಿ ಅಧಿಕಾರಿಗಳು ಲಂಚ ಪಡೆದು ಅದಿರು ಕಳ್ಳ ಸಾಗಾಣಿಕೆಗೆ ಅವಕಾಶ ಕೊಟ್ಟಿದ್ದಾರೆಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಬಳ್ಳಾರಿ ಅಕ್ರಮ ಗಣಿಗಾರಿಕೆ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ದೂರು ದಾಖಲಿಸಿತ್ತು. ಸುಪ್ರೀಂ ಕೋರ್ಟು ಅಕ್ರಮ ಗಣಿಗಾರಿಕೆಯ ತನಿಖೆಗೆ ಉನ್ನತಾಧಿಕಾರ ಸಮಿತಿ [ಸಿಇಸಿ]ಯೊಂದನ್ನು ನೇಮಿಸಿತ್ತು. 8.50 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಳ್ಳ ಸಾಗಾಣಿಕೆಯಾಗಿರುವುದನ್ನು ತನ್ನ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದ ಸಿಇಸಿ, ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಆದಾನಿ ಕಂಪನಿ ವಿರುದ್ಧವು ತನಿಖೆ ಮಾಡುವಂತೆ ತಿಳಿಸಿತ್ತು.

ಇತ್ತ ರಾಜ್ಯ ಸರಕಾರ ಕರ್ನಾಟಕ ಸಿವಿಲ್ ಸೇವಾ ನಿಯಮದಂತೆ ಆರೋಪಿತ ಅಧಿಕಾರಿಗಳ ವಿಚಾರಣೆ ಶುರು ಹಚ್ಚಿಕೊಂಡಿತ್ತು. ಅಂದಿನ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ನಿರ್ದೇಶಕ ಕ್ಯಾಪ್ಟನ್ ಆರ್.ಮೋಹನ್ ಮತ್ತು ಹಲವು ಅಧಿಕಾರಿಗಳು-ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ಶಿಸ್ತು ಪ್ರಾಧಿಕಾರಿಯಾಗಿ ನೇಮಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆಯೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಧೀನ ಕಾರ್ಯದರ್ಶಿ ಎಚ್.ಕೆ.ಕಾಂತರಾಜು 8-7-2021ರಂದು, ಅಂದರೆ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಡುವ ಕಾಲ ಸನ್ನಿಹಿತವಾಗಿದ್ದ ಸಂದರ್ಭದಲ್ಲಿ ತಪ್ಪಿತಸ್ಥ ಅಧಿಕಾರಿಗಳು ನಿರ್ದೋಷಿಗಳೆಂದು ಆದೇಶ ಹೋರಡಿಸಿಬಿಟ್ಟಿದ್ದಾರೆ!!

ಆರೋಪಿತ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದ್ದ ಸಿಬಿಐ ನ್ಯಾಯಾಲಯದಲ್ಲಿ ಯಾವುದೇ ಪ್ರಕರಣ ಬಾಕಿಯುಳಿದಿಲ್ಲವೆಂಬ ನೆಪದಿಂದ ಬಂದರು ಇಲಾಖೆಯ ನಿರ್ದೇಶಕರಾಗಿದ್ದ ಕ್ಯಾಪ್ಟನ್ ಆರ್.ಮೋಹನ್, ಕ್ಯಾಪ್ಟನ್ ಸಿ. ಸ್ವಾಮಿ ಮುಂತಾದ ಒಟ್ಟು 24 ಅಧಿಕಾರಿ ಹಾಗು ಸಿಬ್ಬಂದಿಯನ್ನು ಬಚಾವ್ ಮಾಡಲಾಗಿದೆ!

ನ್ಯಾಯಯುತ ವಿಚಾರಣೆ ನಡೆದಿಲ್ಲವೆಂದೂ, ಅಧಿಕಾರಿಗಳನ್ನು ರಕ್ಷಿಸಲೆಂದೇ ಕ್ಲಿನ್‌ಚಿಟ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಂದೆ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೊನಾ ನೆಪದಲ್ಲಿ ಜಿಲ್ಲಾ ಅದಿರು ಫೌಂಡೇಷನ್ ನಿಧಿ ದುರುಪಯೋಗ: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...