Homeಮುಖಪುಟಬೇಲೇಕೇರಿ ಬಂದರಿನಿಂದ ಅದಿರು ಕಳ್ಳ ಸಾಗಾಣಿಕೆ ಪ್ರಕರಣ; ಆರೋಪಿ ಅಧಿಕಾರಿಗಳನ್ನು ಪಾರುಮಾಡಿ ಅಧಿಕಾರದಿಂದ ಕೆಳಗಿಳಿದ ಯಡಿಯೂರಪ್ಪ!

ಬೇಲೇಕೇರಿ ಬಂದರಿನಿಂದ ಅದಿರು ಕಳ್ಳ ಸಾಗಾಣಿಕೆ ಪ್ರಕರಣ; ಆರೋಪಿ ಅಧಿಕಾರಿಗಳನ್ನು ಪಾರುಮಾಡಿ ಅಧಿಕಾರದಿಂದ ಕೆಳಗಿಳಿದ ಯಡಿಯೂರಪ್ಪ!

- Advertisement -
- Advertisement -

ಕಬ್ಬಿಣದ ಅದಿರನ್ನು ಬಳ್ಳಾರಿಯಿಂದ ಉತ್ತರ ಕನ್ನಡದ ಬೇಲೇಕೇರಿ ಬಂದರಿಗೆ ಅಕ್ರಮವಾಗಿ ಸಾಗಿಸಿ, ವಿದೇಶಕ್ಕೆ ಕಳ್ಳ ಸಾಗಣಿಕೆ ಆಗುತ್ತಿದ್ದ ಪ್ರಕರಣವನ್ನು ನಿಷ್ಟುರ ತನಿಖೆಗೊಳಪಡಿಸಿದ್ದರು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ. ಅವರು ಸರಕಾರಕ್ಕೆ ವರದಿ ಕೊಟ್ಟಾಗ ರಾಜಕೀಯ ಎದ್ದ ಅಲ್ಲೋಲ ಕಲ್ಲೋಲ ನೆನಪಿದೆಯಾ? ಅಂದು ಮುಖ್ಯ ಮಂತ್ರಿಯಾಗಿದ್ದದ್ದು ಯಡಿಯೂರಪ್ಪ. ಆಗ ಅದಾನಿ ಕಂಪನಿಯಿಂದ ಲಂಚ ಪಡೆದು ಅಕ್ರಮವಾಗಿ ಅದಿರು ಸಾಗಾಣಿಕೆಗೆ ಅವಕಾಶಕೊಟ್ಟ ಆರೋಪದ ಮೇಲೆ ದೊಡ್ಡ-ದೊಡ್ಡ ಅಧಿಕಾರಿಗಳೇ ಜೈಲು ಪಾಲಾಗಿದ್ದರು!

ಅದಾನಿ ಎಂಟರ್ ಪ್ರೈಸೆಸ್‌ನಿಂದ ಲಂಚದ ಕಾಸು ಪಡೆದುಕೊಂಡು ಅದಿರು ಕಳ್ಳ ಸಾಗಾಣಿಕೆಗೆ ಸಹಕರಿಸುತ್ತಿದ್ದ ಆರೋಪದ ವಿಚಾರಣೆ 24 ಅಧಿಕಾರಿಗಳು ಎದುರಿಸುತ್ತಿದ್ದರು. ಇವರಿಗೆಲ್ಲ ಯಡಿಯೂರಪ್ಪ ಸಿಎಂ ಪೀಠದಿಂದ ನಿರ್ಗಮಿಸುವ 18 ದಿನ ಮೊದಲು ಕ್ಲೀನ್ ಚಿಟ್ ನೀಡಿದ್ದಾರೆ. 2021ರ ಜುಲೈ 8ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆರೋಪಿ ಅಧಿಕಾರಿಗಳನ್ನು ದೋಷ ಮುಕ್ತಗೊಳಿಸಿ ಆದೇಶ ಹೊರಡಿಸಿರುವುದು ಈಗ ರಾಜಕೀಯ ಮತ್ತು ಅಧಿಕಾರಿ ವಲಯದಲ್ಲಿ ನಾನಾ ನಮೂನೆಯ ವ್ಯಾಖಾನಗಳಿಗೆ ವಸ್ತುವಾಗಿದೆ.

ನ್ಯಾ.ಸಂತೋಷ್ ಹೆಗ್ಡೆ ವರದಿಯಲ್ಲಿ ಅಧಿಕಾರಿಗಳು ಲಂಚ ಪಡೆದು ಅದಿರು ಕಳ್ಳ ಸಾಗಾಣಿಕೆಗೆ ಅವಕಾಶ ಕೊಟ್ಟಿದ್ದಾರೆಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಬಳ್ಳಾರಿ ಅಕ್ರಮ ಗಣಿಗಾರಿಕೆ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ದೂರು ದಾಖಲಿಸಿತ್ತು. ಸುಪ್ರೀಂ ಕೋರ್ಟು ಅಕ್ರಮ ಗಣಿಗಾರಿಕೆಯ ತನಿಖೆಗೆ ಉನ್ನತಾಧಿಕಾರ ಸಮಿತಿ [ಸಿಇಸಿ]ಯೊಂದನ್ನು ನೇಮಿಸಿತ್ತು. 8.50 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಳ್ಳ ಸಾಗಾಣಿಕೆಯಾಗಿರುವುದನ್ನು ತನ್ನ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದ ಸಿಇಸಿ, ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಆದಾನಿ ಕಂಪನಿ ವಿರುದ್ಧವು ತನಿಖೆ ಮಾಡುವಂತೆ ತಿಳಿಸಿತ್ತು.

ಇತ್ತ ರಾಜ್ಯ ಸರಕಾರ ಕರ್ನಾಟಕ ಸಿವಿಲ್ ಸೇವಾ ನಿಯಮದಂತೆ ಆರೋಪಿತ ಅಧಿಕಾರಿಗಳ ವಿಚಾರಣೆ ಶುರು ಹಚ್ಚಿಕೊಂಡಿತ್ತು. ಅಂದಿನ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ನಿರ್ದೇಶಕ ಕ್ಯಾಪ್ಟನ್ ಆರ್.ಮೋಹನ್ ಮತ್ತು ಹಲವು ಅಧಿಕಾರಿಗಳು-ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ಶಿಸ್ತು ಪ್ರಾಧಿಕಾರಿಯಾಗಿ ನೇಮಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆಯೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಧೀನ ಕಾರ್ಯದರ್ಶಿ ಎಚ್.ಕೆ.ಕಾಂತರಾಜು 8-7-2021ರಂದು, ಅಂದರೆ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಡುವ ಕಾಲ ಸನ್ನಿಹಿತವಾಗಿದ್ದ ಸಂದರ್ಭದಲ್ಲಿ ತಪ್ಪಿತಸ್ಥ ಅಧಿಕಾರಿಗಳು ನಿರ್ದೋಷಿಗಳೆಂದು ಆದೇಶ ಹೋರಡಿಸಿಬಿಟ್ಟಿದ್ದಾರೆ!!

ಆರೋಪಿತ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದ್ದ ಸಿಬಿಐ ನ್ಯಾಯಾಲಯದಲ್ಲಿ ಯಾವುದೇ ಪ್ರಕರಣ ಬಾಕಿಯುಳಿದಿಲ್ಲವೆಂಬ ನೆಪದಿಂದ ಬಂದರು ಇಲಾಖೆಯ ನಿರ್ದೇಶಕರಾಗಿದ್ದ ಕ್ಯಾಪ್ಟನ್ ಆರ್.ಮೋಹನ್, ಕ್ಯಾಪ್ಟನ್ ಸಿ. ಸ್ವಾಮಿ ಮುಂತಾದ ಒಟ್ಟು 24 ಅಧಿಕಾರಿ ಹಾಗು ಸಿಬ್ಬಂದಿಯನ್ನು ಬಚಾವ್ ಮಾಡಲಾಗಿದೆ!

ನ್ಯಾಯಯುತ ವಿಚಾರಣೆ ನಡೆದಿಲ್ಲವೆಂದೂ, ಅಧಿಕಾರಿಗಳನ್ನು ರಕ್ಷಿಸಲೆಂದೇ ಕ್ಲಿನ್‌ಚಿಟ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಂದೆ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೊನಾ ನೆಪದಲ್ಲಿ ಜಿಲ್ಲಾ ಅದಿರು ಫೌಂಡೇಷನ್ ನಿಧಿ ದುರುಪಯೋಗ: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...