Homeಮುಖಪುಟಬೇಲೇಕೇರಿ ಬಂದರಿನಿಂದ ಅದಿರು ಕಳ್ಳ ಸಾಗಾಣಿಕೆ ಪ್ರಕರಣ; ಆರೋಪಿ ಅಧಿಕಾರಿಗಳನ್ನು ಪಾರುಮಾಡಿ ಅಧಿಕಾರದಿಂದ ಕೆಳಗಿಳಿದ ಯಡಿಯೂರಪ್ಪ!

ಬೇಲೇಕೇರಿ ಬಂದರಿನಿಂದ ಅದಿರು ಕಳ್ಳ ಸಾಗಾಣಿಕೆ ಪ್ರಕರಣ; ಆರೋಪಿ ಅಧಿಕಾರಿಗಳನ್ನು ಪಾರುಮಾಡಿ ಅಧಿಕಾರದಿಂದ ಕೆಳಗಿಳಿದ ಯಡಿಯೂರಪ್ಪ!

- Advertisement -
- Advertisement -

ಕಬ್ಬಿಣದ ಅದಿರನ್ನು ಬಳ್ಳಾರಿಯಿಂದ ಉತ್ತರ ಕನ್ನಡದ ಬೇಲೇಕೇರಿ ಬಂದರಿಗೆ ಅಕ್ರಮವಾಗಿ ಸಾಗಿಸಿ, ವಿದೇಶಕ್ಕೆ ಕಳ್ಳ ಸಾಗಣಿಕೆ ಆಗುತ್ತಿದ್ದ ಪ್ರಕರಣವನ್ನು ನಿಷ್ಟುರ ತನಿಖೆಗೊಳಪಡಿಸಿದ್ದರು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ. ಅವರು ಸರಕಾರಕ್ಕೆ ವರದಿ ಕೊಟ್ಟಾಗ ರಾಜಕೀಯ ಎದ್ದ ಅಲ್ಲೋಲ ಕಲ್ಲೋಲ ನೆನಪಿದೆಯಾ? ಅಂದು ಮುಖ್ಯ ಮಂತ್ರಿಯಾಗಿದ್ದದ್ದು ಯಡಿಯೂರಪ್ಪ. ಆಗ ಅದಾನಿ ಕಂಪನಿಯಿಂದ ಲಂಚ ಪಡೆದು ಅಕ್ರಮವಾಗಿ ಅದಿರು ಸಾಗಾಣಿಕೆಗೆ ಅವಕಾಶಕೊಟ್ಟ ಆರೋಪದ ಮೇಲೆ ದೊಡ್ಡ-ದೊಡ್ಡ ಅಧಿಕಾರಿಗಳೇ ಜೈಲು ಪಾಲಾಗಿದ್ದರು!

ಅದಾನಿ ಎಂಟರ್ ಪ್ರೈಸೆಸ್‌ನಿಂದ ಲಂಚದ ಕಾಸು ಪಡೆದುಕೊಂಡು ಅದಿರು ಕಳ್ಳ ಸಾಗಾಣಿಕೆಗೆ ಸಹಕರಿಸುತ್ತಿದ್ದ ಆರೋಪದ ವಿಚಾರಣೆ 24 ಅಧಿಕಾರಿಗಳು ಎದುರಿಸುತ್ತಿದ್ದರು. ಇವರಿಗೆಲ್ಲ ಯಡಿಯೂರಪ್ಪ ಸಿಎಂ ಪೀಠದಿಂದ ನಿರ್ಗಮಿಸುವ 18 ದಿನ ಮೊದಲು ಕ್ಲೀನ್ ಚಿಟ್ ನೀಡಿದ್ದಾರೆ. 2021ರ ಜುಲೈ 8ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆರೋಪಿ ಅಧಿಕಾರಿಗಳನ್ನು ದೋಷ ಮುಕ್ತಗೊಳಿಸಿ ಆದೇಶ ಹೊರಡಿಸಿರುವುದು ಈಗ ರಾಜಕೀಯ ಮತ್ತು ಅಧಿಕಾರಿ ವಲಯದಲ್ಲಿ ನಾನಾ ನಮೂನೆಯ ವ್ಯಾಖಾನಗಳಿಗೆ ವಸ್ತುವಾಗಿದೆ.

ನ್ಯಾ.ಸಂತೋಷ್ ಹೆಗ್ಡೆ ವರದಿಯಲ್ಲಿ ಅಧಿಕಾರಿಗಳು ಲಂಚ ಪಡೆದು ಅದಿರು ಕಳ್ಳ ಸಾಗಾಣಿಕೆಗೆ ಅವಕಾಶ ಕೊಟ್ಟಿದ್ದಾರೆಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಬಳ್ಳಾರಿ ಅಕ್ರಮ ಗಣಿಗಾರಿಕೆ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ದೂರು ದಾಖಲಿಸಿತ್ತು. ಸುಪ್ರೀಂ ಕೋರ್ಟು ಅಕ್ರಮ ಗಣಿಗಾರಿಕೆಯ ತನಿಖೆಗೆ ಉನ್ನತಾಧಿಕಾರ ಸಮಿತಿ [ಸಿಇಸಿ]ಯೊಂದನ್ನು ನೇಮಿಸಿತ್ತು. 8.50 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಳ್ಳ ಸಾಗಾಣಿಕೆಯಾಗಿರುವುದನ್ನು ತನ್ನ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದ ಸಿಇಸಿ, ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಆದಾನಿ ಕಂಪನಿ ವಿರುದ್ಧವು ತನಿಖೆ ಮಾಡುವಂತೆ ತಿಳಿಸಿತ್ತು.

ಇತ್ತ ರಾಜ್ಯ ಸರಕಾರ ಕರ್ನಾಟಕ ಸಿವಿಲ್ ಸೇವಾ ನಿಯಮದಂತೆ ಆರೋಪಿತ ಅಧಿಕಾರಿಗಳ ವಿಚಾರಣೆ ಶುರು ಹಚ್ಚಿಕೊಂಡಿತ್ತು. ಅಂದಿನ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ನಿರ್ದೇಶಕ ಕ್ಯಾಪ್ಟನ್ ಆರ್.ಮೋಹನ್ ಮತ್ತು ಹಲವು ಅಧಿಕಾರಿಗಳು-ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ಶಿಸ್ತು ಪ್ರಾಧಿಕಾರಿಯಾಗಿ ನೇಮಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆಯೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಧೀನ ಕಾರ್ಯದರ್ಶಿ ಎಚ್.ಕೆ.ಕಾಂತರಾಜು 8-7-2021ರಂದು, ಅಂದರೆ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಡುವ ಕಾಲ ಸನ್ನಿಹಿತವಾಗಿದ್ದ ಸಂದರ್ಭದಲ್ಲಿ ತಪ್ಪಿತಸ್ಥ ಅಧಿಕಾರಿಗಳು ನಿರ್ದೋಷಿಗಳೆಂದು ಆದೇಶ ಹೋರಡಿಸಿಬಿಟ್ಟಿದ್ದಾರೆ!!

ಆರೋಪಿತ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದ್ದ ಸಿಬಿಐ ನ್ಯಾಯಾಲಯದಲ್ಲಿ ಯಾವುದೇ ಪ್ರಕರಣ ಬಾಕಿಯುಳಿದಿಲ್ಲವೆಂಬ ನೆಪದಿಂದ ಬಂದರು ಇಲಾಖೆಯ ನಿರ್ದೇಶಕರಾಗಿದ್ದ ಕ್ಯಾಪ್ಟನ್ ಆರ್.ಮೋಹನ್, ಕ್ಯಾಪ್ಟನ್ ಸಿ. ಸ್ವಾಮಿ ಮುಂತಾದ ಒಟ್ಟು 24 ಅಧಿಕಾರಿ ಹಾಗು ಸಿಬ್ಬಂದಿಯನ್ನು ಬಚಾವ್ ಮಾಡಲಾಗಿದೆ!

ನ್ಯಾಯಯುತ ವಿಚಾರಣೆ ನಡೆದಿಲ್ಲವೆಂದೂ, ಅಧಿಕಾರಿಗಳನ್ನು ರಕ್ಷಿಸಲೆಂದೇ ಕ್ಲಿನ್‌ಚಿಟ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಂದೆ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೊನಾ ನೆಪದಲ್ಲಿ ಜಿಲ್ಲಾ ಅದಿರು ಫೌಂಡೇಷನ್ ನಿಧಿ ದುರುಪಯೋಗ: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...