Homeಮುಖಪುಟಬೇಲೇಕೇರಿ ಬಂದರಿನಿಂದ ಅದಿರು ಕಳ್ಳ ಸಾಗಾಣಿಕೆ ಪ್ರಕರಣ; ಆರೋಪಿ ಅಧಿಕಾರಿಗಳನ್ನು ಪಾರುಮಾಡಿ ಅಧಿಕಾರದಿಂದ ಕೆಳಗಿಳಿದ ಯಡಿಯೂರಪ್ಪ!

ಬೇಲೇಕೇರಿ ಬಂದರಿನಿಂದ ಅದಿರು ಕಳ್ಳ ಸಾಗಾಣಿಕೆ ಪ್ರಕರಣ; ಆರೋಪಿ ಅಧಿಕಾರಿಗಳನ್ನು ಪಾರುಮಾಡಿ ಅಧಿಕಾರದಿಂದ ಕೆಳಗಿಳಿದ ಯಡಿಯೂರಪ್ಪ!

- Advertisement -
- Advertisement -

ಕಬ್ಬಿಣದ ಅದಿರನ್ನು ಬಳ್ಳಾರಿಯಿಂದ ಉತ್ತರ ಕನ್ನಡದ ಬೇಲೇಕೇರಿ ಬಂದರಿಗೆ ಅಕ್ರಮವಾಗಿ ಸಾಗಿಸಿ, ವಿದೇಶಕ್ಕೆ ಕಳ್ಳ ಸಾಗಣಿಕೆ ಆಗುತ್ತಿದ್ದ ಪ್ರಕರಣವನ್ನು ನಿಷ್ಟುರ ತನಿಖೆಗೊಳಪಡಿಸಿದ್ದರು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ. ಅವರು ಸರಕಾರಕ್ಕೆ ವರದಿ ಕೊಟ್ಟಾಗ ರಾಜಕೀಯ ಎದ್ದ ಅಲ್ಲೋಲ ಕಲ್ಲೋಲ ನೆನಪಿದೆಯಾ? ಅಂದು ಮುಖ್ಯ ಮಂತ್ರಿಯಾಗಿದ್ದದ್ದು ಯಡಿಯೂರಪ್ಪ. ಆಗ ಅದಾನಿ ಕಂಪನಿಯಿಂದ ಲಂಚ ಪಡೆದು ಅಕ್ರಮವಾಗಿ ಅದಿರು ಸಾಗಾಣಿಕೆಗೆ ಅವಕಾಶಕೊಟ್ಟ ಆರೋಪದ ಮೇಲೆ ದೊಡ್ಡ-ದೊಡ್ಡ ಅಧಿಕಾರಿಗಳೇ ಜೈಲು ಪಾಲಾಗಿದ್ದರು!

ಅದಾನಿ ಎಂಟರ್ ಪ್ರೈಸೆಸ್‌ನಿಂದ ಲಂಚದ ಕಾಸು ಪಡೆದುಕೊಂಡು ಅದಿರು ಕಳ್ಳ ಸಾಗಾಣಿಕೆಗೆ ಸಹಕರಿಸುತ್ತಿದ್ದ ಆರೋಪದ ವಿಚಾರಣೆ 24 ಅಧಿಕಾರಿಗಳು ಎದುರಿಸುತ್ತಿದ್ದರು. ಇವರಿಗೆಲ್ಲ ಯಡಿಯೂರಪ್ಪ ಸಿಎಂ ಪೀಠದಿಂದ ನಿರ್ಗಮಿಸುವ 18 ದಿನ ಮೊದಲು ಕ್ಲೀನ್ ಚಿಟ್ ನೀಡಿದ್ದಾರೆ. 2021ರ ಜುಲೈ 8ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆರೋಪಿ ಅಧಿಕಾರಿಗಳನ್ನು ದೋಷ ಮುಕ್ತಗೊಳಿಸಿ ಆದೇಶ ಹೊರಡಿಸಿರುವುದು ಈಗ ರಾಜಕೀಯ ಮತ್ತು ಅಧಿಕಾರಿ ವಲಯದಲ್ಲಿ ನಾನಾ ನಮೂನೆಯ ವ್ಯಾಖಾನಗಳಿಗೆ ವಸ್ತುವಾಗಿದೆ.

ನ್ಯಾ.ಸಂತೋಷ್ ಹೆಗ್ಡೆ ವರದಿಯಲ್ಲಿ ಅಧಿಕಾರಿಗಳು ಲಂಚ ಪಡೆದು ಅದಿರು ಕಳ್ಳ ಸಾಗಾಣಿಕೆಗೆ ಅವಕಾಶ ಕೊಟ್ಟಿದ್ದಾರೆಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಬಳ್ಳಾರಿ ಅಕ್ರಮ ಗಣಿಗಾರಿಕೆ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ದೂರು ದಾಖಲಿಸಿತ್ತು. ಸುಪ್ರೀಂ ಕೋರ್ಟು ಅಕ್ರಮ ಗಣಿಗಾರಿಕೆಯ ತನಿಖೆಗೆ ಉನ್ನತಾಧಿಕಾರ ಸಮಿತಿ [ಸಿಇಸಿ]ಯೊಂದನ್ನು ನೇಮಿಸಿತ್ತು. 8.50 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಳ್ಳ ಸಾಗಾಣಿಕೆಯಾಗಿರುವುದನ್ನು ತನ್ನ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದ ಸಿಇಸಿ, ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಆದಾನಿ ಕಂಪನಿ ವಿರುದ್ಧವು ತನಿಖೆ ಮಾಡುವಂತೆ ತಿಳಿಸಿತ್ತು.

ಇತ್ತ ರಾಜ್ಯ ಸರಕಾರ ಕರ್ನಾಟಕ ಸಿವಿಲ್ ಸೇವಾ ನಿಯಮದಂತೆ ಆರೋಪಿತ ಅಧಿಕಾರಿಗಳ ವಿಚಾರಣೆ ಶುರು ಹಚ್ಚಿಕೊಂಡಿತ್ತು. ಅಂದಿನ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ನಿರ್ದೇಶಕ ಕ್ಯಾಪ್ಟನ್ ಆರ್.ಮೋಹನ್ ಮತ್ತು ಹಲವು ಅಧಿಕಾರಿಗಳು-ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ಶಿಸ್ತು ಪ್ರಾಧಿಕಾರಿಯಾಗಿ ನೇಮಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆಯೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಧೀನ ಕಾರ್ಯದರ್ಶಿ ಎಚ್.ಕೆ.ಕಾಂತರಾಜು 8-7-2021ರಂದು, ಅಂದರೆ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಡುವ ಕಾಲ ಸನ್ನಿಹಿತವಾಗಿದ್ದ ಸಂದರ್ಭದಲ್ಲಿ ತಪ್ಪಿತಸ್ಥ ಅಧಿಕಾರಿಗಳು ನಿರ್ದೋಷಿಗಳೆಂದು ಆದೇಶ ಹೋರಡಿಸಿಬಿಟ್ಟಿದ್ದಾರೆ!!

ಆರೋಪಿತ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದ್ದ ಸಿಬಿಐ ನ್ಯಾಯಾಲಯದಲ್ಲಿ ಯಾವುದೇ ಪ್ರಕರಣ ಬಾಕಿಯುಳಿದಿಲ್ಲವೆಂಬ ನೆಪದಿಂದ ಬಂದರು ಇಲಾಖೆಯ ನಿರ್ದೇಶಕರಾಗಿದ್ದ ಕ್ಯಾಪ್ಟನ್ ಆರ್.ಮೋಹನ್, ಕ್ಯಾಪ್ಟನ್ ಸಿ. ಸ್ವಾಮಿ ಮುಂತಾದ ಒಟ್ಟು 24 ಅಧಿಕಾರಿ ಹಾಗು ಸಿಬ್ಬಂದಿಯನ್ನು ಬಚಾವ್ ಮಾಡಲಾಗಿದೆ!

ನ್ಯಾಯಯುತ ವಿಚಾರಣೆ ನಡೆದಿಲ್ಲವೆಂದೂ, ಅಧಿಕಾರಿಗಳನ್ನು ರಕ್ಷಿಸಲೆಂದೇ ಕ್ಲಿನ್‌ಚಿಟ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಂದೆ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೊನಾ ನೆಪದಲ್ಲಿ ಜಿಲ್ಲಾ ಅದಿರು ಫೌಂಡೇಷನ್ ನಿಧಿ ದುರುಪಯೋಗ: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...