Homeಮುಖಪುಟಬೇಲೇಕೇರಿ ಬಂದರಿನಿಂದ ಅದಿರು ಕಳ್ಳ ಸಾಗಾಣಿಕೆ ಪ್ರಕರಣ; ಆರೋಪಿ ಅಧಿಕಾರಿಗಳನ್ನು ಪಾರುಮಾಡಿ ಅಧಿಕಾರದಿಂದ ಕೆಳಗಿಳಿದ ಯಡಿಯೂರಪ್ಪ!

ಬೇಲೇಕೇರಿ ಬಂದರಿನಿಂದ ಅದಿರು ಕಳ್ಳ ಸಾಗಾಣಿಕೆ ಪ್ರಕರಣ; ಆರೋಪಿ ಅಧಿಕಾರಿಗಳನ್ನು ಪಾರುಮಾಡಿ ಅಧಿಕಾರದಿಂದ ಕೆಳಗಿಳಿದ ಯಡಿಯೂರಪ್ಪ!

- Advertisement -
- Advertisement -

ಕಬ್ಬಿಣದ ಅದಿರನ್ನು ಬಳ್ಳಾರಿಯಿಂದ ಉತ್ತರ ಕನ್ನಡದ ಬೇಲೇಕೇರಿ ಬಂದರಿಗೆ ಅಕ್ರಮವಾಗಿ ಸಾಗಿಸಿ, ವಿದೇಶಕ್ಕೆ ಕಳ್ಳ ಸಾಗಣಿಕೆ ಆಗುತ್ತಿದ್ದ ಪ್ರಕರಣವನ್ನು ನಿಷ್ಟುರ ತನಿಖೆಗೊಳಪಡಿಸಿದ್ದರು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ. ಅವರು ಸರಕಾರಕ್ಕೆ ವರದಿ ಕೊಟ್ಟಾಗ ರಾಜಕೀಯ ಎದ್ದ ಅಲ್ಲೋಲ ಕಲ್ಲೋಲ ನೆನಪಿದೆಯಾ? ಅಂದು ಮುಖ್ಯ ಮಂತ್ರಿಯಾಗಿದ್ದದ್ದು ಯಡಿಯೂರಪ್ಪ. ಆಗ ಅದಾನಿ ಕಂಪನಿಯಿಂದ ಲಂಚ ಪಡೆದು ಅಕ್ರಮವಾಗಿ ಅದಿರು ಸಾಗಾಣಿಕೆಗೆ ಅವಕಾಶಕೊಟ್ಟ ಆರೋಪದ ಮೇಲೆ ದೊಡ್ಡ-ದೊಡ್ಡ ಅಧಿಕಾರಿಗಳೇ ಜೈಲು ಪಾಲಾಗಿದ್ದರು!

ಅದಾನಿ ಎಂಟರ್ ಪ್ರೈಸೆಸ್‌ನಿಂದ ಲಂಚದ ಕಾಸು ಪಡೆದುಕೊಂಡು ಅದಿರು ಕಳ್ಳ ಸಾಗಾಣಿಕೆಗೆ ಸಹಕರಿಸುತ್ತಿದ್ದ ಆರೋಪದ ವಿಚಾರಣೆ 24 ಅಧಿಕಾರಿಗಳು ಎದುರಿಸುತ್ತಿದ್ದರು. ಇವರಿಗೆಲ್ಲ ಯಡಿಯೂರಪ್ಪ ಸಿಎಂ ಪೀಠದಿಂದ ನಿರ್ಗಮಿಸುವ 18 ದಿನ ಮೊದಲು ಕ್ಲೀನ್ ಚಿಟ್ ನೀಡಿದ್ದಾರೆ. 2021ರ ಜುಲೈ 8ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆರೋಪಿ ಅಧಿಕಾರಿಗಳನ್ನು ದೋಷ ಮುಕ್ತಗೊಳಿಸಿ ಆದೇಶ ಹೊರಡಿಸಿರುವುದು ಈಗ ರಾಜಕೀಯ ಮತ್ತು ಅಧಿಕಾರಿ ವಲಯದಲ್ಲಿ ನಾನಾ ನಮೂನೆಯ ವ್ಯಾಖಾನಗಳಿಗೆ ವಸ್ತುವಾಗಿದೆ.

ನ್ಯಾ.ಸಂತೋಷ್ ಹೆಗ್ಡೆ ವರದಿಯಲ್ಲಿ ಅಧಿಕಾರಿಗಳು ಲಂಚ ಪಡೆದು ಅದಿರು ಕಳ್ಳ ಸಾಗಾಣಿಕೆಗೆ ಅವಕಾಶ ಕೊಟ್ಟಿದ್ದಾರೆಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಬಳ್ಳಾರಿ ಅಕ್ರಮ ಗಣಿಗಾರಿಕೆ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ದೂರು ದಾಖಲಿಸಿತ್ತು. ಸುಪ್ರೀಂ ಕೋರ್ಟು ಅಕ್ರಮ ಗಣಿಗಾರಿಕೆಯ ತನಿಖೆಗೆ ಉನ್ನತಾಧಿಕಾರ ಸಮಿತಿ [ಸಿಇಸಿ]ಯೊಂದನ್ನು ನೇಮಿಸಿತ್ತು. 8.50 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಳ್ಳ ಸಾಗಾಣಿಕೆಯಾಗಿರುವುದನ್ನು ತನ್ನ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದ ಸಿಇಸಿ, ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಆದಾನಿ ಕಂಪನಿ ವಿರುದ್ಧವು ತನಿಖೆ ಮಾಡುವಂತೆ ತಿಳಿಸಿತ್ತು.

ಇತ್ತ ರಾಜ್ಯ ಸರಕಾರ ಕರ್ನಾಟಕ ಸಿವಿಲ್ ಸೇವಾ ನಿಯಮದಂತೆ ಆರೋಪಿತ ಅಧಿಕಾರಿಗಳ ವಿಚಾರಣೆ ಶುರು ಹಚ್ಚಿಕೊಂಡಿತ್ತು. ಅಂದಿನ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ನಿರ್ದೇಶಕ ಕ್ಯಾಪ್ಟನ್ ಆರ್.ಮೋಹನ್ ಮತ್ತು ಹಲವು ಅಧಿಕಾರಿಗಳು-ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ಶಿಸ್ತು ಪ್ರಾಧಿಕಾರಿಯಾಗಿ ನೇಮಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆಯೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಧೀನ ಕಾರ್ಯದರ್ಶಿ ಎಚ್.ಕೆ.ಕಾಂತರಾಜು 8-7-2021ರಂದು, ಅಂದರೆ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಡುವ ಕಾಲ ಸನ್ನಿಹಿತವಾಗಿದ್ದ ಸಂದರ್ಭದಲ್ಲಿ ತಪ್ಪಿತಸ್ಥ ಅಧಿಕಾರಿಗಳು ನಿರ್ದೋಷಿಗಳೆಂದು ಆದೇಶ ಹೋರಡಿಸಿಬಿಟ್ಟಿದ್ದಾರೆ!!

ಆರೋಪಿತ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದ್ದ ಸಿಬಿಐ ನ್ಯಾಯಾಲಯದಲ್ಲಿ ಯಾವುದೇ ಪ್ರಕರಣ ಬಾಕಿಯುಳಿದಿಲ್ಲವೆಂಬ ನೆಪದಿಂದ ಬಂದರು ಇಲಾಖೆಯ ನಿರ್ದೇಶಕರಾಗಿದ್ದ ಕ್ಯಾಪ್ಟನ್ ಆರ್.ಮೋಹನ್, ಕ್ಯಾಪ್ಟನ್ ಸಿ. ಸ್ವಾಮಿ ಮುಂತಾದ ಒಟ್ಟು 24 ಅಧಿಕಾರಿ ಹಾಗು ಸಿಬ್ಬಂದಿಯನ್ನು ಬಚಾವ್ ಮಾಡಲಾಗಿದೆ!

ನ್ಯಾಯಯುತ ವಿಚಾರಣೆ ನಡೆದಿಲ್ಲವೆಂದೂ, ಅಧಿಕಾರಿಗಳನ್ನು ರಕ್ಷಿಸಲೆಂದೇ ಕ್ಲಿನ್‌ಚಿಟ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಂದೆ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೊನಾ ನೆಪದಲ್ಲಿ ಜಿಲ್ಲಾ ಅದಿರು ಫೌಂಡೇಷನ್ ನಿಧಿ ದುರುಪಯೋಗ: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...