Homeಕರ್ನಾಟಕಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

- Advertisement -
- Advertisement -

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಆಯ್ದ ಕೆಲ ಪಾಳೇಗಾರ ಕುಟುಂಬಗಳ ರಾಜಕಾರಣ. ಇಂತಹ ಊರಿನಲ್ಲಿ ಇಲ್ಲಿವರೆಗೂ ಎಂಪಿ ಇಲೆಕ್ಷನ್ ಅನ್ನು ಗಂಭೀರವಾಗಿ ಪರಿಗಣಿಸದೇ ಇದ್ದ ಕಾಂಗ್ರೆಸ್ ಈ ಸಲ ಶಾಸಕ ಸತೀಶ್ ಜಾರಕಿಹೊಳಿಯವರನ್ನು ಕಣಕ್ಕೆ ಇಳಿಸುತ್ತಿದೆ. ಅಂದರೆ ಆಟ ಚಾಲೂ ಅಂತಿವೆ ಗೋಕಾಕ್, ಅರಭಾವಿ, ಯಮಕನಮರಡಿ ಕಡೆಯ ಪಡ್ಡೆ ಯುವಕರು..

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್‌ವೊಂದರ ಲಾಬಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ತಾಳ್ಮೆ ಕಳೆದುಕೊಂಡರು. ನಗರಕ್ಕೆ ರಾಷ್ಟ್ರಮುಟ್ಟದ ನಾಯಕರನ್ನು ಸ್ವಾಗತಿಸುವ ಕೆಲವು ಬ್ಯಾನರ್‌ಗಳಲ್ಲಿ “ಸುರೇಶ್ ಅಂಗಡಿ ಅಭಿಮಾನಿಗಳ ಸಂಘ” ಎಂದು ಹಾಕಲಾಗಿದೆ ಎಂದು ಫುಲ್ ಗರಂ ಆಗಿದ್ದರು.

ತಕ್ಷಣ ಅವುಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದ್ದ ಅವರು “ಯಾರೂ ಮತ್ತೆ ಅಂತಹ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಾಕಬಾರದು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಸ್ಥಾನವಿಲ್ಲ. ನಮ್ಮ ಪಾಲಿಗೆ ಸಾಮೂಹಿಕ ನಾಯಕತ್ವವೇ ಫೈನಲ್” ಎಂದಿದ್ದರು. ಆದರೆ ನಳೀನ್ ಸಾಹೇಬರ ಆಟಾಟೋಪ ಈಗ ಏನಾಯಿತು? ಈಗ ಬಿಜೆಪಿ ಅಭ್ಯರ್ಥಿ ಯಾರು? ಮೃತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಮೇಡಂ!

ಸುರೇಶ ಅಂಗಡಿಯವರ ಎರಡನೇ ಮಗಳು ಅಭ್ಯರ್ಥಿಯಾಗುವ ಚಾನ್ಸ್ ಇತ್ತು. ಆಕೆ ಕೈಗಾರಿಕಾ ಸಚಿವ, ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಅವರ ಸೊಸೆ ಕೂಡ! ಅದ್ಯಾಕೋ ಕೊನೆ ಕ್ಷಣದಲ್ಲಿ ಅಂಗಡಿಯವರ ಪತ್ನಿ ಮಂಗಳಮ್ಮರಿಗೆ ಬಿಜೆಪಿ ಟಿಕೇಟ್ ನೀಡಲಾಗಿತು. ನಳಿನ್ ಕುಮಾರ್ ಕಟೀಲ್ ಅವರೇ, ಇದು ವಂಶ ಪಾರಂಪರ್ಯದ ಅಚ್ಚಿನಲ್ಲಿ ಬರುವುದಿಲ್ಲವೆ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

ಕ್ಯಾಂಡಿಡೇಟ್ ಕೊರತೆಯಲ್ಲಿ ಕಾಂಗ್ರೆಸ್

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಅದೊಂದು ಸಿಂಡಿಕೇಟ್ ದಂಧೆ. ಜಾರಕಿಹೊಳಿ, ಎ.ಬಿ ಪಾಟೀಲ್ ಮತ್ತು ಹುಕ್ಕೇರಿ ಕುಟುಂಬಗಳು ಪಕ್ಷಭೇಧ ಮರೆತು ಅಲ್ಲಿ ತಮ್ಮ ರಾಜಕೀಯ ಪ್ರಾಬಲ್ಯ ಮೆರೆಯಲು ತಮ್ಮ ತಮ್ಮ ಏರಿಯಾದಲ್ಲಿ ವೇದಿಕೆ ರೂಪಿಸಿಕೊಂಡಿವೆ ಎಂಬುದೇನೂ ಹೊಸ ವಿಷಯವಲ್ಲ. ಲಕ್ಷ್ಮೀ ಹೆಬ್ಬಾಳಕರ್ ಈ ಸಿಂಡಿಕೇಟ್ ಬುಡವನ್ನು ಕೊಂಚ ಅಲ್ಲಾಡಿಸಿದ್ದು ಕೂಡ ಸತ್ಯವೇ!

ಆದರೆ, ಕಳೆದ 15 ವರ್ಷದಿಂದ ಬೆಳಗಾವಿ ಸಂಸದ ಚುನಾವಣೆಗೆ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನೇ ಹಾಕದೆ ಬಿಜೆಪಿಗೆ ನೆರವಾಗುತ್ತ ಬಂದಿದೆ. ಪ್ರಬಲ ಅಭ್ಯರ್ಥಿ ಇದ್ದರೆ ತಾನೇ ಹಾಕಲು? ಪಕ್ಷದ ಇತರ ಕಾರ್ಯಕರ್ತರನ್ನು ಇವರು ಬೆಳೆಯಲು ಬಿಟ್ಟರೆ ತಾನೇ? ಎಂಬ ಪ್ರಶ್ನೆಗಳು ಸಹಜ.

ಈಗ ಅನಿವಾರ್ಯವಾಗಿ, ಇದ್ದುದರಲ್ಲಿ ಸ್ವಲ್ಪ ಪ್ರಗತಿಪರ ನಾಯಕ ಎಂದು ಕರೆಸಿಕೊಂಡಿರುವ ‘ದೊಡ್’ ಸಾಹುಕಾರ್ ಸತೀಶ ಜಾರಕಿಹೊಳಿಯವರನ್ನೇ ಕಾಂಗ್ರೆಸ್ ಕಣಕ್ಕೆ ಇಳಿಸುತ್ತಿದೆ. ಸದ್ಯ ಶಾಸಕರಾಗಿರುವ ಅವರು ರಾಜ್ಯ ರಾಜಕಾರಣದಲ್ಲಿಯೇ ಹೆಚ್ಚು ಆಸಕ್ತಿಯುಳ್ಳವರಾಗಿದ್ದರು. ಆದರೆ ಕಾಂಗ್ರೆಸ್‌ಗೆ ಕ್ಯಾಂಡಿಡೇಟ್‌ ಕೊರತೆ ಇರುವುದರಿಂದ ಈ ಕ್ಷೇತ್ರ ಗೆಲ್ಲಬೇಕಾದರೆ ಬೇರೆ ಮುಖ ಕಾಣುತ್ತಿಲ್ಲ.

ಆದರೆ ಈ ಉಪ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯ ಲೈಂಗಿಕ ಸಿ.ಡಿ ಪ್ರಕರಣ, ಎಂಇಎಸ್ ಇತ್ಯಾದಿ ಪಾತ್ರಗಳೂ ಯಾವ ಮಟ್ಟಿಗೆ ಪ್ರಭಾವ ಬೀರಬಹುದು ಎಂಬ ಪ್ರಶ್ನೆಗಳಿವೆ. ಅದು ಸ್ವಲ್ಪ ದಿನಗಳಲ್ಲಿಯೇ ಬಹಿರಂಗಗೊಳ್ಳಲ್ಲಿದೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ; ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...