Homeಕರ್ನಾಟಕಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

- Advertisement -
- Advertisement -

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಆಯ್ದ ಕೆಲ ಪಾಳೇಗಾರ ಕುಟುಂಬಗಳ ರಾಜಕಾರಣ. ಇಂತಹ ಊರಿನಲ್ಲಿ ಇಲ್ಲಿವರೆಗೂ ಎಂಪಿ ಇಲೆಕ್ಷನ್ ಅನ್ನು ಗಂಭೀರವಾಗಿ ಪರಿಗಣಿಸದೇ ಇದ್ದ ಕಾಂಗ್ರೆಸ್ ಈ ಸಲ ಶಾಸಕ ಸತೀಶ್ ಜಾರಕಿಹೊಳಿಯವರನ್ನು ಕಣಕ್ಕೆ ಇಳಿಸುತ್ತಿದೆ. ಅಂದರೆ ಆಟ ಚಾಲೂ ಅಂತಿವೆ ಗೋಕಾಕ್, ಅರಭಾವಿ, ಯಮಕನಮರಡಿ ಕಡೆಯ ಪಡ್ಡೆ ಯುವಕರು..

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್‌ವೊಂದರ ಲಾಬಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ತಾಳ್ಮೆ ಕಳೆದುಕೊಂಡರು. ನಗರಕ್ಕೆ ರಾಷ್ಟ್ರಮುಟ್ಟದ ನಾಯಕರನ್ನು ಸ್ವಾಗತಿಸುವ ಕೆಲವು ಬ್ಯಾನರ್‌ಗಳಲ್ಲಿ “ಸುರೇಶ್ ಅಂಗಡಿ ಅಭಿಮಾನಿಗಳ ಸಂಘ” ಎಂದು ಹಾಕಲಾಗಿದೆ ಎಂದು ಫುಲ್ ಗರಂ ಆಗಿದ್ದರು.

ತಕ್ಷಣ ಅವುಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದ್ದ ಅವರು “ಯಾರೂ ಮತ್ತೆ ಅಂತಹ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಾಕಬಾರದು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಸ್ಥಾನವಿಲ್ಲ. ನಮ್ಮ ಪಾಲಿಗೆ ಸಾಮೂಹಿಕ ನಾಯಕತ್ವವೇ ಫೈನಲ್” ಎಂದಿದ್ದರು. ಆದರೆ ನಳೀನ್ ಸಾಹೇಬರ ಆಟಾಟೋಪ ಈಗ ಏನಾಯಿತು? ಈಗ ಬಿಜೆಪಿ ಅಭ್ಯರ್ಥಿ ಯಾರು? ಮೃತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಮೇಡಂ!

ಸುರೇಶ ಅಂಗಡಿಯವರ ಎರಡನೇ ಮಗಳು ಅಭ್ಯರ್ಥಿಯಾಗುವ ಚಾನ್ಸ್ ಇತ್ತು. ಆಕೆ ಕೈಗಾರಿಕಾ ಸಚಿವ, ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಅವರ ಸೊಸೆ ಕೂಡ! ಅದ್ಯಾಕೋ ಕೊನೆ ಕ್ಷಣದಲ್ಲಿ ಅಂಗಡಿಯವರ ಪತ್ನಿ ಮಂಗಳಮ್ಮರಿಗೆ ಬಿಜೆಪಿ ಟಿಕೇಟ್ ನೀಡಲಾಗಿತು. ನಳಿನ್ ಕುಮಾರ್ ಕಟೀಲ್ ಅವರೇ, ಇದು ವಂಶ ಪಾರಂಪರ್ಯದ ಅಚ್ಚಿನಲ್ಲಿ ಬರುವುದಿಲ್ಲವೆ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

ಕ್ಯಾಂಡಿಡೇಟ್ ಕೊರತೆಯಲ್ಲಿ ಕಾಂಗ್ರೆಸ್

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಅದೊಂದು ಸಿಂಡಿಕೇಟ್ ದಂಧೆ. ಜಾರಕಿಹೊಳಿ, ಎ.ಬಿ ಪಾಟೀಲ್ ಮತ್ತು ಹುಕ್ಕೇರಿ ಕುಟುಂಬಗಳು ಪಕ್ಷಭೇಧ ಮರೆತು ಅಲ್ಲಿ ತಮ್ಮ ರಾಜಕೀಯ ಪ್ರಾಬಲ್ಯ ಮೆರೆಯಲು ತಮ್ಮ ತಮ್ಮ ಏರಿಯಾದಲ್ಲಿ ವೇದಿಕೆ ರೂಪಿಸಿಕೊಂಡಿವೆ ಎಂಬುದೇನೂ ಹೊಸ ವಿಷಯವಲ್ಲ. ಲಕ್ಷ್ಮೀ ಹೆಬ್ಬಾಳಕರ್ ಈ ಸಿಂಡಿಕೇಟ್ ಬುಡವನ್ನು ಕೊಂಚ ಅಲ್ಲಾಡಿಸಿದ್ದು ಕೂಡ ಸತ್ಯವೇ!

ಆದರೆ, ಕಳೆದ 15 ವರ್ಷದಿಂದ ಬೆಳಗಾವಿ ಸಂಸದ ಚುನಾವಣೆಗೆ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನೇ ಹಾಕದೆ ಬಿಜೆಪಿಗೆ ನೆರವಾಗುತ್ತ ಬಂದಿದೆ. ಪ್ರಬಲ ಅಭ್ಯರ್ಥಿ ಇದ್ದರೆ ತಾನೇ ಹಾಕಲು? ಪಕ್ಷದ ಇತರ ಕಾರ್ಯಕರ್ತರನ್ನು ಇವರು ಬೆಳೆಯಲು ಬಿಟ್ಟರೆ ತಾನೇ? ಎಂಬ ಪ್ರಶ್ನೆಗಳು ಸಹಜ.

ಈಗ ಅನಿವಾರ್ಯವಾಗಿ, ಇದ್ದುದರಲ್ಲಿ ಸ್ವಲ್ಪ ಪ್ರಗತಿಪರ ನಾಯಕ ಎಂದು ಕರೆಸಿಕೊಂಡಿರುವ ‘ದೊಡ್’ ಸಾಹುಕಾರ್ ಸತೀಶ ಜಾರಕಿಹೊಳಿಯವರನ್ನೇ ಕಾಂಗ್ರೆಸ್ ಕಣಕ್ಕೆ ಇಳಿಸುತ್ತಿದೆ. ಸದ್ಯ ಶಾಸಕರಾಗಿರುವ ಅವರು ರಾಜ್ಯ ರಾಜಕಾರಣದಲ್ಲಿಯೇ ಹೆಚ್ಚು ಆಸಕ್ತಿಯುಳ್ಳವರಾಗಿದ್ದರು. ಆದರೆ ಕಾಂಗ್ರೆಸ್‌ಗೆ ಕ್ಯಾಂಡಿಡೇಟ್‌ ಕೊರತೆ ಇರುವುದರಿಂದ ಈ ಕ್ಷೇತ್ರ ಗೆಲ್ಲಬೇಕಾದರೆ ಬೇರೆ ಮುಖ ಕಾಣುತ್ತಿಲ್ಲ.

ಆದರೆ ಈ ಉಪ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯ ಲೈಂಗಿಕ ಸಿ.ಡಿ ಪ್ರಕರಣ, ಎಂಇಎಸ್ ಇತ್ಯಾದಿ ಪಾತ್ರಗಳೂ ಯಾವ ಮಟ್ಟಿಗೆ ಪ್ರಭಾವ ಬೀರಬಹುದು ಎಂಬ ಪ್ರಶ್ನೆಗಳಿವೆ. ಅದು ಸ್ವಲ್ಪ ದಿನಗಳಲ್ಲಿಯೇ ಬಹಿರಂಗಗೊಳ್ಳಲ್ಲಿದೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ; ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...