Homeಕರ್ನಾಟಕಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

- Advertisement -
- Advertisement -

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಆಯ್ದ ಕೆಲ ಪಾಳೇಗಾರ ಕುಟುಂಬಗಳ ರಾಜಕಾರಣ. ಇಂತಹ ಊರಿನಲ್ಲಿ ಇಲ್ಲಿವರೆಗೂ ಎಂಪಿ ಇಲೆಕ್ಷನ್ ಅನ್ನು ಗಂಭೀರವಾಗಿ ಪರಿಗಣಿಸದೇ ಇದ್ದ ಕಾಂಗ್ರೆಸ್ ಈ ಸಲ ಶಾಸಕ ಸತೀಶ್ ಜಾರಕಿಹೊಳಿಯವರನ್ನು ಕಣಕ್ಕೆ ಇಳಿಸುತ್ತಿದೆ. ಅಂದರೆ ಆಟ ಚಾಲೂ ಅಂತಿವೆ ಗೋಕಾಕ್, ಅರಭಾವಿ, ಯಮಕನಮರಡಿ ಕಡೆಯ ಪಡ್ಡೆ ಯುವಕರು..

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್‌ವೊಂದರ ಲಾಬಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ತಾಳ್ಮೆ ಕಳೆದುಕೊಂಡರು. ನಗರಕ್ಕೆ ರಾಷ್ಟ್ರಮುಟ್ಟದ ನಾಯಕರನ್ನು ಸ್ವಾಗತಿಸುವ ಕೆಲವು ಬ್ಯಾನರ್‌ಗಳಲ್ಲಿ “ಸುರೇಶ್ ಅಂಗಡಿ ಅಭಿಮಾನಿಗಳ ಸಂಘ” ಎಂದು ಹಾಕಲಾಗಿದೆ ಎಂದು ಫುಲ್ ಗರಂ ಆಗಿದ್ದರು.

ತಕ್ಷಣ ಅವುಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದ್ದ ಅವರು “ಯಾರೂ ಮತ್ತೆ ಅಂತಹ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಾಕಬಾರದು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಸ್ಥಾನವಿಲ್ಲ. ನಮ್ಮ ಪಾಲಿಗೆ ಸಾಮೂಹಿಕ ನಾಯಕತ್ವವೇ ಫೈನಲ್” ಎಂದಿದ್ದರು. ಆದರೆ ನಳೀನ್ ಸಾಹೇಬರ ಆಟಾಟೋಪ ಈಗ ಏನಾಯಿತು? ಈಗ ಬಿಜೆಪಿ ಅಭ್ಯರ್ಥಿ ಯಾರು? ಮೃತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಮೇಡಂ!

ಸುರೇಶ ಅಂಗಡಿಯವರ ಎರಡನೇ ಮಗಳು ಅಭ್ಯರ್ಥಿಯಾಗುವ ಚಾನ್ಸ್ ಇತ್ತು. ಆಕೆ ಕೈಗಾರಿಕಾ ಸಚಿವ, ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಅವರ ಸೊಸೆ ಕೂಡ! ಅದ್ಯಾಕೋ ಕೊನೆ ಕ್ಷಣದಲ್ಲಿ ಅಂಗಡಿಯವರ ಪತ್ನಿ ಮಂಗಳಮ್ಮರಿಗೆ ಬಿಜೆಪಿ ಟಿಕೇಟ್ ನೀಡಲಾಗಿತು. ನಳಿನ್ ಕುಮಾರ್ ಕಟೀಲ್ ಅವರೇ, ಇದು ವಂಶ ಪಾರಂಪರ್ಯದ ಅಚ್ಚಿನಲ್ಲಿ ಬರುವುದಿಲ್ಲವೆ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

ಕ್ಯಾಂಡಿಡೇಟ್ ಕೊರತೆಯಲ್ಲಿ ಕಾಂಗ್ರೆಸ್

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಅದೊಂದು ಸಿಂಡಿಕೇಟ್ ದಂಧೆ. ಜಾರಕಿಹೊಳಿ, ಎ.ಬಿ ಪಾಟೀಲ್ ಮತ್ತು ಹುಕ್ಕೇರಿ ಕುಟುಂಬಗಳು ಪಕ್ಷಭೇಧ ಮರೆತು ಅಲ್ಲಿ ತಮ್ಮ ರಾಜಕೀಯ ಪ್ರಾಬಲ್ಯ ಮೆರೆಯಲು ತಮ್ಮ ತಮ್ಮ ಏರಿಯಾದಲ್ಲಿ ವೇದಿಕೆ ರೂಪಿಸಿಕೊಂಡಿವೆ ಎಂಬುದೇನೂ ಹೊಸ ವಿಷಯವಲ್ಲ. ಲಕ್ಷ್ಮೀ ಹೆಬ್ಬಾಳಕರ್ ಈ ಸಿಂಡಿಕೇಟ್ ಬುಡವನ್ನು ಕೊಂಚ ಅಲ್ಲಾಡಿಸಿದ್ದು ಕೂಡ ಸತ್ಯವೇ!

ಆದರೆ, ಕಳೆದ 15 ವರ್ಷದಿಂದ ಬೆಳಗಾವಿ ಸಂಸದ ಚುನಾವಣೆಗೆ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನೇ ಹಾಕದೆ ಬಿಜೆಪಿಗೆ ನೆರವಾಗುತ್ತ ಬಂದಿದೆ. ಪ್ರಬಲ ಅಭ್ಯರ್ಥಿ ಇದ್ದರೆ ತಾನೇ ಹಾಕಲು? ಪಕ್ಷದ ಇತರ ಕಾರ್ಯಕರ್ತರನ್ನು ಇವರು ಬೆಳೆಯಲು ಬಿಟ್ಟರೆ ತಾನೇ? ಎಂಬ ಪ್ರಶ್ನೆಗಳು ಸಹಜ.

ಈಗ ಅನಿವಾರ್ಯವಾಗಿ, ಇದ್ದುದರಲ್ಲಿ ಸ್ವಲ್ಪ ಪ್ರಗತಿಪರ ನಾಯಕ ಎಂದು ಕರೆಸಿಕೊಂಡಿರುವ ‘ದೊಡ್’ ಸಾಹುಕಾರ್ ಸತೀಶ ಜಾರಕಿಹೊಳಿಯವರನ್ನೇ ಕಾಂಗ್ರೆಸ್ ಕಣಕ್ಕೆ ಇಳಿಸುತ್ತಿದೆ. ಸದ್ಯ ಶಾಸಕರಾಗಿರುವ ಅವರು ರಾಜ್ಯ ರಾಜಕಾರಣದಲ್ಲಿಯೇ ಹೆಚ್ಚು ಆಸಕ್ತಿಯುಳ್ಳವರಾಗಿದ್ದರು. ಆದರೆ ಕಾಂಗ್ರೆಸ್‌ಗೆ ಕ್ಯಾಂಡಿಡೇಟ್‌ ಕೊರತೆ ಇರುವುದರಿಂದ ಈ ಕ್ಷೇತ್ರ ಗೆಲ್ಲಬೇಕಾದರೆ ಬೇರೆ ಮುಖ ಕಾಣುತ್ತಿಲ್ಲ.

ಆದರೆ ಈ ಉಪ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯ ಲೈಂಗಿಕ ಸಿ.ಡಿ ಪ್ರಕರಣ, ಎಂಇಎಸ್ ಇತ್ಯಾದಿ ಪಾತ್ರಗಳೂ ಯಾವ ಮಟ್ಟಿಗೆ ಪ್ರಭಾವ ಬೀರಬಹುದು ಎಂಬ ಪ್ರಶ್ನೆಗಳಿವೆ. ಅದು ಸ್ವಲ್ಪ ದಿನಗಳಲ್ಲಿಯೇ ಬಹಿರಂಗಗೊಳ್ಳಲ್ಲಿದೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ; ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...