Homeಕರ್ನಾಟಕಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

- Advertisement -
- Advertisement -

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಆಯ್ದ ಕೆಲ ಪಾಳೇಗಾರ ಕುಟುಂಬಗಳ ರಾಜಕಾರಣ. ಇಂತಹ ಊರಿನಲ್ಲಿ ಇಲ್ಲಿವರೆಗೂ ಎಂಪಿ ಇಲೆಕ್ಷನ್ ಅನ್ನು ಗಂಭೀರವಾಗಿ ಪರಿಗಣಿಸದೇ ಇದ್ದ ಕಾಂಗ್ರೆಸ್ ಈ ಸಲ ಶಾಸಕ ಸತೀಶ್ ಜಾರಕಿಹೊಳಿಯವರನ್ನು ಕಣಕ್ಕೆ ಇಳಿಸುತ್ತಿದೆ. ಅಂದರೆ ಆಟ ಚಾಲೂ ಅಂತಿವೆ ಗೋಕಾಕ್, ಅರಭಾವಿ, ಯಮಕನಮರಡಿ ಕಡೆಯ ಪಡ್ಡೆ ಯುವಕರು..

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್‌ವೊಂದರ ಲಾಬಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ತಾಳ್ಮೆ ಕಳೆದುಕೊಂಡರು. ನಗರಕ್ಕೆ ರಾಷ್ಟ್ರಮುಟ್ಟದ ನಾಯಕರನ್ನು ಸ್ವಾಗತಿಸುವ ಕೆಲವು ಬ್ಯಾನರ್‌ಗಳಲ್ಲಿ “ಸುರೇಶ್ ಅಂಗಡಿ ಅಭಿಮಾನಿಗಳ ಸಂಘ” ಎಂದು ಹಾಕಲಾಗಿದೆ ಎಂದು ಫುಲ್ ಗರಂ ಆಗಿದ್ದರು.

ತಕ್ಷಣ ಅವುಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದ್ದ ಅವರು “ಯಾರೂ ಮತ್ತೆ ಅಂತಹ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಾಕಬಾರದು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಸ್ಥಾನವಿಲ್ಲ. ನಮ್ಮ ಪಾಲಿಗೆ ಸಾಮೂಹಿಕ ನಾಯಕತ್ವವೇ ಫೈನಲ್” ಎಂದಿದ್ದರು. ಆದರೆ ನಳೀನ್ ಸಾಹೇಬರ ಆಟಾಟೋಪ ಈಗ ಏನಾಯಿತು? ಈಗ ಬಿಜೆಪಿ ಅಭ್ಯರ್ಥಿ ಯಾರು? ಮೃತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಮೇಡಂ!

ಸುರೇಶ ಅಂಗಡಿಯವರ ಎರಡನೇ ಮಗಳು ಅಭ್ಯರ್ಥಿಯಾಗುವ ಚಾನ್ಸ್ ಇತ್ತು. ಆಕೆ ಕೈಗಾರಿಕಾ ಸಚಿವ, ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಅವರ ಸೊಸೆ ಕೂಡ! ಅದ್ಯಾಕೋ ಕೊನೆ ಕ್ಷಣದಲ್ಲಿ ಅಂಗಡಿಯವರ ಪತ್ನಿ ಮಂಗಳಮ್ಮರಿಗೆ ಬಿಜೆಪಿ ಟಿಕೇಟ್ ನೀಡಲಾಗಿತು. ನಳಿನ್ ಕುಮಾರ್ ಕಟೀಲ್ ಅವರೇ, ಇದು ವಂಶ ಪಾರಂಪರ್ಯದ ಅಚ್ಚಿನಲ್ಲಿ ಬರುವುದಿಲ್ಲವೆ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

ಕ್ಯಾಂಡಿಡೇಟ್ ಕೊರತೆಯಲ್ಲಿ ಕಾಂಗ್ರೆಸ್

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಅದೊಂದು ಸಿಂಡಿಕೇಟ್ ದಂಧೆ. ಜಾರಕಿಹೊಳಿ, ಎ.ಬಿ ಪಾಟೀಲ್ ಮತ್ತು ಹುಕ್ಕೇರಿ ಕುಟುಂಬಗಳು ಪಕ್ಷಭೇಧ ಮರೆತು ಅಲ್ಲಿ ತಮ್ಮ ರಾಜಕೀಯ ಪ್ರಾಬಲ್ಯ ಮೆರೆಯಲು ತಮ್ಮ ತಮ್ಮ ಏರಿಯಾದಲ್ಲಿ ವೇದಿಕೆ ರೂಪಿಸಿಕೊಂಡಿವೆ ಎಂಬುದೇನೂ ಹೊಸ ವಿಷಯವಲ್ಲ. ಲಕ್ಷ್ಮೀ ಹೆಬ್ಬಾಳಕರ್ ಈ ಸಿಂಡಿಕೇಟ್ ಬುಡವನ್ನು ಕೊಂಚ ಅಲ್ಲಾಡಿಸಿದ್ದು ಕೂಡ ಸತ್ಯವೇ!

ಆದರೆ, ಕಳೆದ 15 ವರ್ಷದಿಂದ ಬೆಳಗಾವಿ ಸಂಸದ ಚುನಾವಣೆಗೆ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನೇ ಹಾಕದೆ ಬಿಜೆಪಿಗೆ ನೆರವಾಗುತ್ತ ಬಂದಿದೆ. ಪ್ರಬಲ ಅಭ್ಯರ್ಥಿ ಇದ್ದರೆ ತಾನೇ ಹಾಕಲು? ಪಕ್ಷದ ಇತರ ಕಾರ್ಯಕರ್ತರನ್ನು ಇವರು ಬೆಳೆಯಲು ಬಿಟ್ಟರೆ ತಾನೇ? ಎಂಬ ಪ್ರಶ್ನೆಗಳು ಸಹಜ.

ಈಗ ಅನಿವಾರ್ಯವಾಗಿ, ಇದ್ದುದರಲ್ಲಿ ಸ್ವಲ್ಪ ಪ್ರಗತಿಪರ ನಾಯಕ ಎಂದು ಕರೆಸಿಕೊಂಡಿರುವ ‘ದೊಡ್’ ಸಾಹುಕಾರ್ ಸತೀಶ ಜಾರಕಿಹೊಳಿಯವರನ್ನೇ ಕಾಂಗ್ರೆಸ್ ಕಣಕ್ಕೆ ಇಳಿಸುತ್ತಿದೆ. ಸದ್ಯ ಶಾಸಕರಾಗಿರುವ ಅವರು ರಾಜ್ಯ ರಾಜಕಾರಣದಲ್ಲಿಯೇ ಹೆಚ್ಚು ಆಸಕ್ತಿಯುಳ್ಳವರಾಗಿದ್ದರು. ಆದರೆ ಕಾಂಗ್ರೆಸ್‌ಗೆ ಕ್ಯಾಂಡಿಡೇಟ್‌ ಕೊರತೆ ಇರುವುದರಿಂದ ಈ ಕ್ಷೇತ್ರ ಗೆಲ್ಲಬೇಕಾದರೆ ಬೇರೆ ಮುಖ ಕಾಣುತ್ತಿಲ್ಲ.

ಆದರೆ ಈ ಉಪ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯ ಲೈಂಗಿಕ ಸಿ.ಡಿ ಪ್ರಕರಣ, ಎಂಇಎಸ್ ಇತ್ಯಾದಿ ಪಾತ್ರಗಳೂ ಯಾವ ಮಟ್ಟಿಗೆ ಪ್ರಭಾವ ಬೀರಬಹುದು ಎಂಬ ಪ್ರಶ್ನೆಗಳಿವೆ. ಅದು ಸ್ವಲ್ಪ ದಿನಗಳಲ್ಲಿಯೇ ಬಹಿರಂಗಗೊಳ್ಳಲ್ಲಿದೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ; ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...