Homeಕರ್ನಾಟಕಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

- Advertisement -
- Advertisement -

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಆಯ್ದ ಕೆಲ ಪಾಳೇಗಾರ ಕುಟುಂಬಗಳ ರಾಜಕಾರಣ. ಇಂತಹ ಊರಿನಲ್ಲಿ ಇಲ್ಲಿವರೆಗೂ ಎಂಪಿ ಇಲೆಕ್ಷನ್ ಅನ್ನು ಗಂಭೀರವಾಗಿ ಪರಿಗಣಿಸದೇ ಇದ್ದ ಕಾಂಗ್ರೆಸ್ ಈ ಸಲ ಶಾಸಕ ಸತೀಶ್ ಜಾರಕಿಹೊಳಿಯವರನ್ನು ಕಣಕ್ಕೆ ಇಳಿಸುತ್ತಿದೆ. ಅಂದರೆ ಆಟ ಚಾಲೂ ಅಂತಿವೆ ಗೋಕಾಕ್, ಅರಭಾವಿ, ಯಮಕನಮರಡಿ ಕಡೆಯ ಪಡ್ಡೆ ಯುವಕರು..

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್‌ವೊಂದರ ಲಾಬಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ತಾಳ್ಮೆ ಕಳೆದುಕೊಂಡರು. ನಗರಕ್ಕೆ ರಾಷ್ಟ್ರಮುಟ್ಟದ ನಾಯಕರನ್ನು ಸ್ವಾಗತಿಸುವ ಕೆಲವು ಬ್ಯಾನರ್‌ಗಳಲ್ಲಿ “ಸುರೇಶ್ ಅಂಗಡಿ ಅಭಿಮಾನಿಗಳ ಸಂಘ” ಎಂದು ಹಾಕಲಾಗಿದೆ ಎಂದು ಫುಲ್ ಗರಂ ಆಗಿದ್ದರು.

ತಕ್ಷಣ ಅವುಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದ್ದ ಅವರು “ಯಾರೂ ಮತ್ತೆ ಅಂತಹ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಾಕಬಾರದು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಸ್ಥಾನವಿಲ್ಲ. ನಮ್ಮ ಪಾಲಿಗೆ ಸಾಮೂಹಿಕ ನಾಯಕತ್ವವೇ ಫೈನಲ್” ಎಂದಿದ್ದರು. ಆದರೆ ನಳೀನ್ ಸಾಹೇಬರ ಆಟಾಟೋಪ ಈಗ ಏನಾಯಿತು? ಈಗ ಬಿಜೆಪಿ ಅಭ್ಯರ್ಥಿ ಯಾರು? ಮೃತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಮೇಡಂ!

ಸುರೇಶ ಅಂಗಡಿಯವರ ಎರಡನೇ ಮಗಳು ಅಭ್ಯರ್ಥಿಯಾಗುವ ಚಾನ್ಸ್ ಇತ್ತು. ಆಕೆ ಕೈಗಾರಿಕಾ ಸಚಿವ, ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಅವರ ಸೊಸೆ ಕೂಡ! ಅದ್ಯಾಕೋ ಕೊನೆ ಕ್ಷಣದಲ್ಲಿ ಅಂಗಡಿಯವರ ಪತ್ನಿ ಮಂಗಳಮ್ಮರಿಗೆ ಬಿಜೆಪಿ ಟಿಕೇಟ್ ನೀಡಲಾಗಿತು. ನಳಿನ್ ಕುಮಾರ್ ಕಟೀಲ್ ಅವರೇ, ಇದು ವಂಶ ಪಾರಂಪರ್ಯದ ಅಚ್ಚಿನಲ್ಲಿ ಬರುವುದಿಲ್ಲವೆ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

ಕ್ಯಾಂಡಿಡೇಟ್ ಕೊರತೆಯಲ್ಲಿ ಕಾಂಗ್ರೆಸ್

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಅದೊಂದು ಸಿಂಡಿಕೇಟ್ ದಂಧೆ. ಜಾರಕಿಹೊಳಿ, ಎ.ಬಿ ಪಾಟೀಲ್ ಮತ್ತು ಹುಕ್ಕೇರಿ ಕುಟುಂಬಗಳು ಪಕ್ಷಭೇಧ ಮರೆತು ಅಲ್ಲಿ ತಮ್ಮ ರಾಜಕೀಯ ಪ್ರಾಬಲ್ಯ ಮೆರೆಯಲು ತಮ್ಮ ತಮ್ಮ ಏರಿಯಾದಲ್ಲಿ ವೇದಿಕೆ ರೂಪಿಸಿಕೊಂಡಿವೆ ಎಂಬುದೇನೂ ಹೊಸ ವಿಷಯವಲ್ಲ. ಲಕ್ಷ್ಮೀ ಹೆಬ್ಬಾಳಕರ್ ಈ ಸಿಂಡಿಕೇಟ್ ಬುಡವನ್ನು ಕೊಂಚ ಅಲ್ಲಾಡಿಸಿದ್ದು ಕೂಡ ಸತ್ಯವೇ!

ಆದರೆ, ಕಳೆದ 15 ವರ್ಷದಿಂದ ಬೆಳಗಾವಿ ಸಂಸದ ಚುನಾವಣೆಗೆ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನೇ ಹಾಕದೆ ಬಿಜೆಪಿಗೆ ನೆರವಾಗುತ್ತ ಬಂದಿದೆ. ಪ್ರಬಲ ಅಭ್ಯರ್ಥಿ ಇದ್ದರೆ ತಾನೇ ಹಾಕಲು? ಪಕ್ಷದ ಇತರ ಕಾರ್ಯಕರ್ತರನ್ನು ಇವರು ಬೆಳೆಯಲು ಬಿಟ್ಟರೆ ತಾನೇ? ಎಂಬ ಪ್ರಶ್ನೆಗಳು ಸಹಜ.

ಈಗ ಅನಿವಾರ್ಯವಾಗಿ, ಇದ್ದುದರಲ್ಲಿ ಸ್ವಲ್ಪ ಪ್ರಗತಿಪರ ನಾಯಕ ಎಂದು ಕರೆಸಿಕೊಂಡಿರುವ ‘ದೊಡ್’ ಸಾಹುಕಾರ್ ಸತೀಶ ಜಾರಕಿಹೊಳಿಯವರನ್ನೇ ಕಾಂಗ್ರೆಸ್ ಕಣಕ್ಕೆ ಇಳಿಸುತ್ತಿದೆ. ಸದ್ಯ ಶಾಸಕರಾಗಿರುವ ಅವರು ರಾಜ್ಯ ರಾಜಕಾರಣದಲ್ಲಿಯೇ ಹೆಚ್ಚು ಆಸಕ್ತಿಯುಳ್ಳವರಾಗಿದ್ದರು. ಆದರೆ ಕಾಂಗ್ರೆಸ್‌ಗೆ ಕ್ಯಾಂಡಿಡೇಟ್‌ ಕೊರತೆ ಇರುವುದರಿಂದ ಈ ಕ್ಷೇತ್ರ ಗೆಲ್ಲಬೇಕಾದರೆ ಬೇರೆ ಮುಖ ಕಾಣುತ್ತಿಲ್ಲ.

ಆದರೆ ಈ ಉಪ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯ ಲೈಂಗಿಕ ಸಿ.ಡಿ ಪ್ರಕರಣ, ಎಂಇಎಸ್ ಇತ್ಯಾದಿ ಪಾತ್ರಗಳೂ ಯಾವ ಮಟ್ಟಿಗೆ ಪ್ರಭಾವ ಬೀರಬಹುದು ಎಂಬ ಪ್ರಶ್ನೆಗಳಿವೆ. ಅದು ಸ್ವಲ್ಪ ದಿನಗಳಲ್ಲಿಯೇ ಬಹಿರಂಗಗೊಳ್ಳಲ್ಲಿದೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ; ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...