Homeಕರ್ನಾಟಕಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

ಬೆಳಗಾವಿಯ ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ ಎಂದು ಅವರು ಪ್ರತಿಪಾದಿಸಿದ್ದಾರೆ

- Advertisement -
- Advertisement -

ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ. ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ. ಸರ್ಕಾರದ ವಿರುದ್ಧ ಜನರಿಗೆ ಇರುವ ಅಸಮಾಧಾನ ಮರೆಮಾಚಲು ಶಿವಸೇನೆ ಈ ಕೆಣಕುವ ಕೆಲಸ ಮಾಡುತ್ತಿದೆ ಎಂದು ಜೆಡಿಎಸ್‌ ಮುಖಂಡ ಹೆಚ್‌‌.ಡಿ. ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ. ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಅಸಲಿಗೆ ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ; ಒಂದು ಲಂಚ, ಮತ್ತೊಂದು ಮಂಚ – ಕಾಂಗ್ರೆಸ್ ವ್ಯಂಗ್ಯ

“ಕಳೆದೆಂಟು ದಿನಗಳಿಂದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆದಿದೆ ಎಂದು ಮಹಾರಾಷ್ಟ್ರ ಹೇಳಿದೆ. ಕೊಲ್ಲಾಪುರದಲ್ಲಿ ಮೊದಲಿಗೆ ನಮ್ಮ ಬಸ್‌ಗಳ ಮೇಲೆ ದಾಳಿ ನಡೆಸಿದವರು ಯಾರು? ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕ ತೆರವು ವೇಳೆ ದಾಳಿ ನಡೆದಿದ್ದು ಕನ್ನಡಿಗರ ಮೇಲೆ. ಇಷ್ಟಾಗಿಯೂ ಮಹಾರಾಷ್ಟ್ರ ಅತ್ತೂ ಕರೆದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

“ಬೆಳಗಾವಿಯಲ್ಲಿ ಅಕ್ರಮವಾಗಿ ವಿಧಾನಸೌಧ ನಿರ್ಮಿಸಿ 2 ನೇ ರಾಜಧಾನಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಾದಿಸಿದೆ. ಬೆಳಗಾವಿ ವಿಚಾರದಲ್ಲಿನ ಮಹಾರಾಷ್ಟ್ರ ಖ್ಯಾತೆ ಗಮನಿಸಿಯೇ ನನ್ನ ಅವಧಿಯಲ್ಲಿ ಅದನ್ನು ನಿರ್ಮಿಸಲಾಯಿತು, ಕಲಾಪವನ್ನೂ ನಡೆಸಲಾಯಿತು. ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ” ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ –

“ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ‌ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು” ಎಂದು ಅವರು ಹೇಳಿದ್ದಾರೆ.

“ಗಡಿ ವಿವಾದದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಲಕ್ಷ್ಮಣ ಸವದಿ ಬಯಸಿದ್ದಾರೆ. ಈ ವಿವಾದದಲ್ಲಿ ಯಾರ ಮಧ್ಯಸ್ಥಿತಿಕೆಯೂ ಬೇಡ. ಪ್ರಧಾನಿ ಮಧ್ಯಸ್ಥಿಕೆ ಮಾಡಿದರೆ ಮಹಾರಾಷ್ಟ್ರ ಬಿಜೆಪಿಯು ಅವರ ಮೇಲೆ ಪ್ರಭಾವ ಬೀರದೇ ಇರದೇ? ಮಧ್ಯಸ್ಥಿಕೆಯಲ್ಲಿ ಮೋದಿಯವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ ಬಿಜೆಪಿಗರು ಒಪ್ಪುವರೇ?” ಎಂದು ಬಿಜೆಪಿಗೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ: ವೀಲ್‌ ಚೇರ್‌ನಲ್ಲಿಯೇ ರೋಡ್‌ ಶೋ ನಡೆಸಲಿರುವ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...