Homeಕರ್ನಾಟಕಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

ಬೆಳಗಾವಿಯ ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ ಎಂದು ಅವರು ಪ್ರತಿಪಾದಿಸಿದ್ದಾರೆ

- Advertisement -
- Advertisement -

ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ. ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ. ಸರ್ಕಾರದ ವಿರುದ್ಧ ಜನರಿಗೆ ಇರುವ ಅಸಮಾಧಾನ ಮರೆಮಾಚಲು ಶಿವಸೇನೆ ಈ ಕೆಣಕುವ ಕೆಲಸ ಮಾಡುತ್ತಿದೆ ಎಂದು ಜೆಡಿಎಸ್‌ ಮುಖಂಡ ಹೆಚ್‌‌.ಡಿ. ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ. ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಅಸಲಿಗೆ ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ; ಒಂದು ಲಂಚ, ಮತ್ತೊಂದು ಮಂಚ – ಕಾಂಗ್ರೆಸ್ ವ್ಯಂಗ್ಯ

“ಕಳೆದೆಂಟು ದಿನಗಳಿಂದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆದಿದೆ ಎಂದು ಮಹಾರಾಷ್ಟ್ರ ಹೇಳಿದೆ. ಕೊಲ್ಲಾಪುರದಲ್ಲಿ ಮೊದಲಿಗೆ ನಮ್ಮ ಬಸ್‌ಗಳ ಮೇಲೆ ದಾಳಿ ನಡೆಸಿದವರು ಯಾರು? ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕ ತೆರವು ವೇಳೆ ದಾಳಿ ನಡೆದಿದ್ದು ಕನ್ನಡಿಗರ ಮೇಲೆ. ಇಷ್ಟಾಗಿಯೂ ಮಹಾರಾಷ್ಟ್ರ ಅತ್ತೂ ಕರೆದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

“ಬೆಳಗಾವಿಯಲ್ಲಿ ಅಕ್ರಮವಾಗಿ ವಿಧಾನಸೌಧ ನಿರ್ಮಿಸಿ 2 ನೇ ರಾಜಧಾನಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಾದಿಸಿದೆ. ಬೆಳಗಾವಿ ವಿಚಾರದಲ್ಲಿನ ಮಹಾರಾಷ್ಟ್ರ ಖ್ಯಾತೆ ಗಮನಿಸಿಯೇ ನನ್ನ ಅವಧಿಯಲ್ಲಿ ಅದನ್ನು ನಿರ್ಮಿಸಲಾಯಿತು, ಕಲಾಪವನ್ನೂ ನಡೆಸಲಾಯಿತು. ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ” ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ –

“ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ‌ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು” ಎಂದು ಅವರು ಹೇಳಿದ್ದಾರೆ.

“ಗಡಿ ವಿವಾದದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಲಕ್ಷ್ಮಣ ಸವದಿ ಬಯಸಿದ್ದಾರೆ. ಈ ವಿವಾದದಲ್ಲಿ ಯಾರ ಮಧ್ಯಸ್ಥಿತಿಕೆಯೂ ಬೇಡ. ಪ್ರಧಾನಿ ಮಧ್ಯಸ್ಥಿಕೆ ಮಾಡಿದರೆ ಮಹಾರಾಷ್ಟ್ರ ಬಿಜೆಪಿಯು ಅವರ ಮೇಲೆ ಪ್ರಭಾವ ಬೀರದೇ ಇರದೇ? ಮಧ್ಯಸ್ಥಿಕೆಯಲ್ಲಿ ಮೋದಿಯವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ ಬಿಜೆಪಿಗರು ಒಪ್ಪುವರೇ?” ಎಂದು ಬಿಜೆಪಿಗೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ: ವೀಲ್‌ ಚೇರ್‌ನಲ್ಲಿಯೇ ರೋಡ್‌ ಶೋ ನಡೆಸಲಿರುವ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...