Homeಕರ್ನಾಟಕಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್‌.ಡಿ.ಕೆ

ಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್‌.ಡಿ.ಕೆ

ಡಿ. 28 ರಂದು ಕನ್ನಡ ಪರ ಹೋರಾಟಗಾರರು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಿದ್ದರು ಇದಕ್ಕೆ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಆಕ್ಷೇಪ ವ್ಯಕ್ತಪಡಿಸಿತ್ತು.

- Advertisement -
- Advertisement -

ಕಳೆದ ಡಿಸೆಂಬರ್‌ 28 ರಂದು ಕನ್ನಡಪರ ಹೋರಾಟಗಾರರು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದ ನಂತರ ಹಲವು ಅವಘಡಗಳಿಗೆ ಸಾಕ್ಷಿಯಗಿದ್ದ ಬೆಳಗಾವಿ ಈಗ ಮತ್ತೊಂದು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ. ಕನ್ನಡ ಮತ್ತು ಮರಾಠಿಗರ ಸ್ವಾಭಿಮಾನದ ಪ್ರಶ್ನೆಯಾಗಿ ಕನ್ನಡ ಧ್ವಜ ಪಾಲಿಕೆ ಆವರಣದಲ್ಲಿ ನಿಂತಿದೆ.

ಪಾಲಿಕೆ ಎದುರು ಧ್ಜಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆ ನಡೆದಿದೆ. ವಡಗಾವಿಯ ಕಲ್ಯಾಣ ನಗರದಲ್ಲಿರುವ ಅಂಗಡಿಗೆ ಗುರುವಾರ ಮಧ್ಯರಾತ್ರಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

ಬೆಂಕಿ ಹಚ್ಚಿರುವ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಶ್ರೀನಿವಾಸ ತಾಳೂಕರ ಮತ್ತು ಅವರ ಕುಟುಂಬದ ಸದಸ್ಯರು ಬೆಂಕಿ ನಂದಿಸಿದ್ದಾರೆ. ಶ್ರೀನಿವಾಸ ಅವರ ಅಂಗಡಿಯಲ್ಲಿ ಕನ್ನಡ ಬಾವುಟಗಳು, ಕನ್ನಡ ಶಾಲು, ತೋರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದನ್ನೂ ಓದಿ: ಬೆಳಗಾವಿ: ಕನ್ನಡ ಧ್ವಜ ಕೆಳಗಿಳಿಸದಿದ್ದರೆ ಭಗವಾಧ್ವಜ ಹಾರಿಸುತ್ತೇವೆ ಎಂದ ಮಹಾರಾಷ್ಟ್ರ ಏಕೀಕರಣ ಸಮಿತಿ

ಘಟನೆ ಕುರಿತು ಖಂಡನೆ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ನಡೆಯುತ್ತಿರುವ ದಾಳಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

“ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ” ಎಂದು ತಮ್ಮ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

“ಪಾಲಿಕೆ ಎದುರು ಧ್ಜಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆಯೂ ನಡೆದು ಹೋಗಿದೆ. ಕರ್ನಾಟಕದಲ್ಲಿ, ಕನ್ನಡ ಧ್ವಜಕ್ಕಾಗಿ ಹೋರಾಡಿದವರ ಮೇಲೆ ಪದೇ ಪದೇ ದಾಳಿ ನಡೆಯುತ್ತದೆ ಎಂದರೆ, ಅವರಿಗೆ ರಕ್ಷಣೆ ನೀಡಲಾಗುತ್ತಿಲ್ಲ ಎಂದರೆ ಆಳುವವರ ಕನ್ನಡಾಭಿಮಾನ, ನಾಡ ಪ್ರೇಮ ಪ್ರಶ್ನಾರ್ಹ” ಎಂದು ರಾಜ್ಯ ಸರ್ಕಾರದ ಮೌನದ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

’ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು’ ಎಂದು ಆಗ್ರಹಿಸಿದ್ದಾರೆ.

“ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಘಟನೆಯಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ ‘ಕನ್ನಡಿಗನೇ ಸಾರ್ವಭೌಮ’ ಎಂಬ ಸಂದೇಶ ರವಾನಿಸಬೇಕು. ಇಲ್ಲವಾದರೆ, ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಏನಿದು ವಿವಾದ…?

ಡಿಸೆಂಬರ್‌ 28 ರಂದು ಕನ್ನಡ ಪರ ಹೋರಾಟಗಾರರು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಿದ್ದರು ಇದಕ್ಕೆ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಆಕ್ಷೇಪ ವ್ಯಕ್ತಪಡಿಸಿತ್ತು. ರಾಷ್ಟ್ರಧ್ವಜದ ಮುಂದೆ ಮಾನ್ಯತೆ ಸಿಗದ ಹಳದಿ-ಕೆಂಪು ಧ್ವಜವನ್ನು ಹಾರಿಸಿ ರಾಷ್ಟ್ರೀಯ ಭಾವೈಕ್ಯತೆಗೆ ಕನ್ನಡ ಸಂಘಟನೆಗಳು ಧಕ್ಕೆ ತಂದಿವೆ ಎಂದು ಕನ್ನಡ ಹೋರಾಟಗಾರರ ವಿರುದ್ಧ ಕ್ರಮ ಜರುಗಿಸಿ ಎಂದು ಎಂಇಎಸ್‌ ಆಗ್ರಹಿಸಿತ್ತು.

ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಡಿಸೆಂಬರ್‌ 31 ರೊಳಗೆ ಧ್ವಜ ತೆರುವು ಮಾಡಬೇಕು ಎಂದು ನಗರ ಪೊಲೀಸ್‌ ಆಯುಕ್ತರಿಗೆ ಗಡುವು ನೀಡಿತ್ತು ಜೊತೆಗೆ ತೆರುವು ಮಾಡದೇ ಇದ್ದಲ್ಲಿ ನಾವು ಅಲ್ಲಿ ಭಗವಾಧ್ವಜ ಹಾರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಆದರೆ ಇದನ್ನು ಖಂಡಿಸಿರುವ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಗಲು ರಾತ್ರಿ ಎನ್ನದೇ ಧ್ವಜಸ್ತಂಭ ಮತ್ತು ಧ್ವಜವನ್ನು ತೆರವುಗೊಳಿಸದಂತೆ ಅಲ್ಲಿಯೇ ಕಾವಲು ಕಾಯುತ್ತಿದ್ದಾರೆ. ಕನ್ನಡ ಪರ ಹೋರಾಟಗಾರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಟ್ವಿಟರ್ ಅಭಿಯಾನ ಕೂಡ ಮಾಡಲಾಗಿತ್ತು.

ಈಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಘಟನೆಗಳ ಕುರಿತು ರಾಜ್ಯ ಸರ್ಕಾರ ಮಾತಾಡದೇ ಇರುವುದನ್ನು ಪ್ರಶ್ನಿಸಿದ್ದಾರೆ. ಕರ್ನಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಸಂದೇಶ ರವಾನಿಸಿ, ಕನ್ನಡಿಗರ ಮೇಲೆ ನಡೆಯುತ್ತಿರುವ ದಾಳಿಗೆ ಕಠಿಣ ಕ್ರಮ ಕೈಗೊಳ್ಳಿ ಎಂದಿದ್ದಾರೆ.


ಇದನ್ನೂ ಓದಿ: ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....