Homeಕರ್ನಾಟಕಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್‌.ಡಿ.ಕೆ

ಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್‌.ಡಿ.ಕೆ

ಡಿ. 28 ರಂದು ಕನ್ನಡ ಪರ ಹೋರಾಟಗಾರರು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಿದ್ದರು ಇದಕ್ಕೆ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಆಕ್ಷೇಪ ವ್ಯಕ್ತಪಡಿಸಿತ್ತು.

- Advertisement -
- Advertisement -

ಕಳೆದ ಡಿಸೆಂಬರ್‌ 28 ರಂದು ಕನ್ನಡಪರ ಹೋರಾಟಗಾರರು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದ ನಂತರ ಹಲವು ಅವಘಡಗಳಿಗೆ ಸಾಕ್ಷಿಯಗಿದ್ದ ಬೆಳಗಾವಿ ಈಗ ಮತ್ತೊಂದು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ. ಕನ್ನಡ ಮತ್ತು ಮರಾಠಿಗರ ಸ್ವಾಭಿಮಾನದ ಪ್ರಶ್ನೆಯಾಗಿ ಕನ್ನಡ ಧ್ವಜ ಪಾಲಿಕೆ ಆವರಣದಲ್ಲಿ ನಿಂತಿದೆ.

ಪಾಲಿಕೆ ಎದುರು ಧ್ಜಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆ ನಡೆದಿದೆ. ವಡಗಾವಿಯ ಕಲ್ಯಾಣ ನಗರದಲ್ಲಿರುವ ಅಂಗಡಿಗೆ ಗುರುವಾರ ಮಧ್ಯರಾತ್ರಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

ಬೆಂಕಿ ಹಚ್ಚಿರುವ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಶ್ರೀನಿವಾಸ ತಾಳೂಕರ ಮತ್ತು ಅವರ ಕುಟುಂಬದ ಸದಸ್ಯರು ಬೆಂಕಿ ನಂದಿಸಿದ್ದಾರೆ. ಶ್ರೀನಿವಾಸ ಅವರ ಅಂಗಡಿಯಲ್ಲಿ ಕನ್ನಡ ಬಾವುಟಗಳು, ಕನ್ನಡ ಶಾಲು, ತೋರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದನ್ನೂ ಓದಿ: ಬೆಳಗಾವಿ: ಕನ್ನಡ ಧ್ವಜ ಕೆಳಗಿಳಿಸದಿದ್ದರೆ ಭಗವಾಧ್ವಜ ಹಾರಿಸುತ್ತೇವೆ ಎಂದ ಮಹಾರಾಷ್ಟ್ರ ಏಕೀಕರಣ ಸಮಿತಿ

ಘಟನೆ ಕುರಿತು ಖಂಡನೆ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ನಡೆಯುತ್ತಿರುವ ದಾಳಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

“ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ” ಎಂದು ತಮ್ಮ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

“ಪಾಲಿಕೆ ಎದುರು ಧ್ಜಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆಯೂ ನಡೆದು ಹೋಗಿದೆ. ಕರ್ನಾಟಕದಲ್ಲಿ, ಕನ್ನಡ ಧ್ವಜಕ್ಕಾಗಿ ಹೋರಾಡಿದವರ ಮೇಲೆ ಪದೇ ಪದೇ ದಾಳಿ ನಡೆಯುತ್ತದೆ ಎಂದರೆ, ಅವರಿಗೆ ರಕ್ಷಣೆ ನೀಡಲಾಗುತ್ತಿಲ್ಲ ಎಂದರೆ ಆಳುವವರ ಕನ್ನಡಾಭಿಮಾನ, ನಾಡ ಪ್ರೇಮ ಪ್ರಶ್ನಾರ್ಹ” ಎಂದು ರಾಜ್ಯ ಸರ್ಕಾರದ ಮೌನದ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

’ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು’ ಎಂದು ಆಗ್ರಹಿಸಿದ್ದಾರೆ.

“ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಘಟನೆಯಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ ‘ಕನ್ನಡಿಗನೇ ಸಾರ್ವಭೌಮ’ ಎಂಬ ಸಂದೇಶ ರವಾನಿಸಬೇಕು. ಇಲ್ಲವಾದರೆ, ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಏನಿದು ವಿವಾದ…?

ಡಿಸೆಂಬರ್‌ 28 ರಂದು ಕನ್ನಡ ಪರ ಹೋರಾಟಗಾರರು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಿದ್ದರು ಇದಕ್ಕೆ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಆಕ್ಷೇಪ ವ್ಯಕ್ತಪಡಿಸಿತ್ತು. ರಾಷ್ಟ್ರಧ್ವಜದ ಮುಂದೆ ಮಾನ್ಯತೆ ಸಿಗದ ಹಳದಿ-ಕೆಂಪು ಧ್ವಜವನ್ನು ಹಾರಿಸಿ ರಾಷ್ಟ್ರೀಯ ಭಾವೈಕ್ಯತೆಗೆ ಕನ್ನಡ ಸಂಘಟನೆಗಳು ಧಕ್ಕೆ ತಂದಿವೆ ಎಂದು ಕನ್ನಡ ಹೋರಾಟಗಾರರ ವಿರುದ್ಧ ಕ್ರಮ ಜರುಗಿಸಿ ಎಂದು ಎಂಇಎಸ್‌ ಆಗ್ರಹಿಸಿತ್ತು.

ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಡಿಸೆಂಬರ್‌ 31 ರೊಳಗೆ ಧ್ವಜ ತೆರುವು ಮಾಡಬೇಕು ಎಂದು ನಗರ ಪೊಲೀಸ್‌ ಆಯುಕ್ತರಿಗೆ ಗಡುವು ನೀಡಿತ್ತು ಜೊತೆಗೆ ತೆರುವು ಮಾಡದೇ ಇದ್ದಲ್ಲಿ ನಾವು ಅಲ್ಲಿ ಭಗವಾಧ್ವಜ ಹಾರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಆದರೆ ಇದನ್ನು ಖಂಡಿಸಿರುವ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಗಲು ರಾತ್ರಿ ಎನ್ನದೇ ಧ್ವಜಸ್ತಂಭ ಮತ್ತು ಧ್ವಜವನ್ನು ತೆರವುಗೊಳಿಸದಂತೆ ಅಲ್ಲಿಯೇ ಕಾವಲು ಕಾಯುತ್ತಿದ್ದಾರೆ. ಕನ್ನಡ ಪರ ಹೋರಾಟಗಾರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಟ್ವಿಟರ್ ಅಭಿಯಾನ ಕೂಡ ಮಾಡಲಾಗಿತ್ತು.

ಈಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಘಟನೆಗಳ ಕುರಿತು ರಾಜ್ಯ ಸರ್ಕಾರ ಮಾತಾಡದೇ ಇರುವುದನ್ನು ಪ್ರಶ್ನಿಸಿದ್ದಾರೆ. ಕರ್ನಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಸಂದೇಶ ರವಾನಿಸಿ, ಕನ್ನಡಿಗರ ಮೇಲೆ ನಡೆಯುತ್ತಿರುವ ದಾಳಿಗೆ ಕಠಿಣ ಕ್ರಮ ಕೈಗೊಳ್ಳಿ ಎಂದಿದ್ದಾರೆ.


ಇದನ್ನೂ ಓದಿ: ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...