Homeಕರ್ನಾಟಕಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

ಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದೆ. ಕೊಲೆ ಬೆದರಿಕೆ ಪತ್ರ ಆಗಸ್ಟ್- 8ರಂದೇ ಈ ಪತ್ರ ಬಂದಿದ್ದು ವಿಷಯ ತಡವಾಗಿ ಬಹಿರಂಗವಾಗಿದೆ.

ಈ ಬೆದರಿಕೆ ಪತ್ರದಲ್ಲಿ ”2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ಎಂದು ಪೋಸ್ಟ್ ಮೂಲಕ ಜೀವ ಬದರಿಕೆ ಪತ್ರ ಮಠಕ್ಕೆ ಬಂದಿದೆ. ತಮಗೆ ಬೆದರಿಕೆ ಪತ್ರ ಬಂದಿರುವ ಕುರಿತು ಶ್ರೀಗಳು ತಮ್ಮ ಭಕ್ತರಿಗೆ ವಿಷಯ ತಿಳಿಸಿದ್ದಾರೆ.

”ನಮ್ಮ ಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆ ಬರಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ. ಕೊಣೆಯಲ್ಲಿ ”ಓಂ ಶ್ರೀ ಕಾಳಿಕಾದೇವಿ ನಮಃ” ”ಸಹಿಷ್ಣು ಹಿಂದೂ” ಎಂದು ಬರೆಯಲಾಗಿದೆ.

2020ರಲ್ಲಿ ಹತ್ಯೆ ಮಾಡುವುದಾಗಿ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಈವರೆಗೂ 5ಕ್ಕೂ ಹೆಚ್ಚು ಬಾರಿ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದಾರೆ. ತಮ್ಮ ಖಡಕ್ ಮಾತುಗಳಿಂದಲೇ ರಾಜ್ಯದಲ್ಲಿ ಖ್ಯಾತಿಗಳಿಸಿರುವ ನಿಜಗುಣಾನಂದ ಸ್ವಾಮೀಜಿ ಪ್ರಮುಖ ಲಿಂಗಾಯತ ಸ್ವಾಮೀಜಿಗಳಲ್ಲಿ ಒಬ್ಬರು. ದಶಕಗಳಿಂದ ಬಸವಣ್ಣನವರ ವಿಚಾರಧಾರೆಯ ಪ್ರಚಾರಕರಾಗಿದ್ದಾರೆ. ತಮ್ಮ ವಿಚಾರಗಳನ್ನು ಬಿತ್ತುತ್ತಾ ಬಂದಿದ್ದಾರೆ. ಮೂರ್ತಿ ಪೂಜೆ, ಮೌಢ್ಯ ವಿರೋಧಿ ವಿಚಾರಗಳನ್ನು ಅವರ ಪ್ರವಚನದಲ್ಲಿ ಕಾಣಬಹುದಾಗಿದೆ.

ಪತ್ರದಲ್ಲೇನಿದೆ?

”ನಿಜಗುಣಾನಂದ ಸ್ವಾಮೀಜಿ ನಿನ್ನ ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಮಾತಿನ ಕೊಡ ತುಂಬಿದೆ. ಆದಷ್ಟು ಬೇಗ ನಿನ್ನ ಭಕ್ತಾದಿಗಳಿಗೆ ನಿನ್ನ ತಿಥಿ ಬಗ್ಗೆ ಹೇಳು. ನಮ್ಮಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆಯೇ ಬರುತ್ತದೆ. ನಿನ್ನ ಅಂತಿಮ ದಿನಗಳು ಪ್ರಾರಂಭವಾಗಿವೆ. ದಿನಗಳನ್ನು ಎಣಿಸು. ಓಂ ಶ್ರೀ ಕಾಳಿಕಾದೇವಿ ನಮಃ, ಓಂ ಶ್ರೀ ಕಾಳಿಕಾದೇವಿ ನಮಃ” ಎಂದು ಬಿಳಿ ಹಾಳೆಯಲ್ಲಿ ಬರೆದು, ಅದನ್ನು ಪ್ಯಾಕೇಟ್‌ನಲ್ಲಿಟ್ಟು ಕಳಿಸಲಾಗಿದೆ.

ನಿಜಗುಣಾನಂದ ಶ್ರೀಗಳು ದಶಕಗಳಿಂದ ಬಸವಾದಿ ಶರಣ ತತ್ವಗಳನ್ನು ಪ್ರಚುರಪಡಿಸುವಲ್ಲಿ ನಿರತರಾಗಿದ್ದಾರೆ. ಬೈಲೂರಿನ ಮಠವನ್ನು ಕೇಂದ್ರವಾಗಿಸಿಕೊಂಡು ತಮ್ಮ ವಿಚಾರಗಳನ್ನು ಬಿತ್ತುತ್ತಿದ್ದಾರೆ. ಅವರ ಪ್ರವಚನದಲ್ಲಿ ಮೌಡ್ಯ ವಿರೋಧಿ, ಕಂದಾಚಾರ ವಿರೋಧಿ, ಮೂರ್ತಿ ಪೂಜೆಯ ವಿರುದ್ಧ ಟೀಕೆಗಳು ಸಾಮಾನ್ಯವಾಗಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ನಿಜಗುಣಾನಂದ ಸ್ವಾಮೀಜಿ, ”ಕಳೆದ 15 ದಿನಗಳ ಹಿಂದೆ ಕೊಲೆ ಬೆದರಿಕೆ ಪತ್ರ ಬಂದಿದೆ. ಒಂದೇ ತರಹ ಬರಹದ ಪತ್ರಗಳು ಬೇರೆ ಬೇರೆ ಭಾಗಗಳಿಂದ ಬರುತ್ತಿವೆ. ಈಗಾಗಲೇ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಳೆದ ಐದು ವರ್ಷಗಳಿಂದ ಸತತವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿವೆ. ಪತ್ರ ಬರೆಯುವವರ ಹಾಗೂ ನನ್ನ ಮಧ್ಯೆ ಯಾವುದೇ ದ್ವೇಷ ಇಲ್ಲ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಇಂತಹ ಕೊಲೆ ಬೆದರಿಕೆ ಪತ್ರಗಳನ್ನು ನಾನು ಪ್ರೇಮಪತ್ರಗಳೆಂದು ಭಾವಿಸಿದ್ದೇನೆ. ನನಗೆ ಸಾವಿನ ಬಗ್ಗೆ ಭಯವಿಲ್ಲ, ಸೇವೆ ಮಾಡುವುದು ನಿಲ್ಲುತ್ತದೆ ಎನ್ನುವ ಕೊರಗಷ್ಟೇ. ನಾನು ಸಮಾಜದ ಮಗ. ಈ ರೀತಿಯ ಪತ್ರಗಳಿಂದ ಭಕ್ತರಲ್ಲಿ ಆತಂಕ ಸಹಜ. ಪೊಲೀಸರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...