Homeಕರ್ನಾಟಕಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

ಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದೆ. ಕೊಲೆ ಬೆದರಿಕೆ ಪತ್ರ ಆಗಸ್ಟ್- 8ರಂದೇ ಈ ಪತ್ರ ಬಂದಿದ್ದು ವಿಷಯ ತಡವಾಗಿ ಬಹಿರಂಗವಾಗಿದೆ.

ಈ ಬೆದರಿಕೆ ಪತ್ರದಲ್ಲಿ ”2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ಎಂದು ಪೋಸ್ಟ್ ಮೂಲಕ ಜೀವ ಬದರಿಕೆ ಪತ್ರ ಮಠಕ್ಕೆ ಬಂದಿದೆ. ತಮಗೆ ಬೆದರಿಕೆ ಪತ್ರ ಬಂದಿರುವ ಕುರಿತು ಶ್ರೀಗಳು ತಮ್ಮ ಭಕ್ತರಿಗೆ ವಿಷಯ ತಿಳಿಸಿದ್ದಾರೆ.

”ನಮ್ಮ ಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆ ಬರಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ. ಕೊಣೆಯಲ್ಲಿ ”ಓಂ ಶ್ರೀ ಕಾಳಿಕಾದೇವಿ ನಮಃ” ”ಸಹಿಷ್ಣು ಹಿಂದೂ” ಎಂದು ಬರೆಯಲಾಗಿದೆ.

2020ರಲ್ಲಿ ಹತ್ಯೆ ಮಾಡುವುದಾಗಿ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಈವರೆಗೂ 5ಕ್ಕೂ ಹೆಚ್ಚು ಬಾರಿ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದಾರೆ. ತಮ್ಮ ಖಡಕ್ ಮಾತುಗಳಿಂದಲೇ ರಾಜ್ಯದಲ್ಲಿ ಖ್ಯಾತಿಗಳಿಸಿರುವ ನಿಜಗುಣಾನಂದ ಸ್ವಾಮೀಜಿ ಪ್ರಮುಖ ಲಿಂಗಾಯತ ಸ್ವಾಮೀಜಿಗಳಲ್ಲಿ ಒಬ್ಬರು. ದಶಕಗಳಿಂದ ಬಸವಣ್ಣನವರ ವಿಚಾರಧಾರೆಯ ಪ್ರಚಾರಕರಾಗಿದ್ದಾರೆ. ತಮ್ಮ ವಿಚಾರಗಳನ್ನು ಬಿತ್ತುತ್ತಾ ಬಂದಿದ್ದಾರೆ. ಮೂರ್ತಿ ಪೂಜೆ, ಮೌಢ್ಯ ವಿರೋಧಿ ವಿಚಾರಗಳನ್ನು ಅವರ ಪ್ರವಚನದಲ್ಲಿ ಕಾಣಬಹುದಾಗಿದೆ.

ಪತ್ರದಲ್ಲೇನಿದೆ?

”ನಿಜಗುಣಾನಂದ ಸ್ವಾಮೀಜಿ ನಿನ್ನ ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಮಾತಿನ ಕೊಡ ತುಂಬಿದೆ. ಆದಷ್ಟು ಬೇಗ ನಿನ್ನ ಭಕ್ತಾದಿಗಳಿಗೆ ನಿನ್ನ ತಿಥಿ ಬಗ್ಗೆ ಹೇಳು. ನಮ್ಮಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆಯೇ ಬರುತ್ತದೆ. ನಿನ್ನ ಅಂತಿಮ ದಿನಗಳು ಪ್ರಾರಂಭವಾಗಿವೆ. ದಿನಗಳನ್ನು ಎಣಿಸು. ಓಂ ಶ್ರೀ ಕಾಳಿಕಾದೇವಿ ನಮಃ, ಓಂ ಶ್ರೀ ಕಾಳಿಕಾದೇವಿ ನಮಃ” ಎಂದು ಬಿಳಿ ಹಾಳೆಯಲ್ಲಿ ಬರೆದು, ಅದನ್ನು ಪ್ಯಾಕೇಟ್‌ನಲ್ಲಿಟ್ಟು ಕಳಿಸಲಾಗಿದೆ.

ನಿಜಗುಣಾನಂದ ಶ್ರೀಗಳು ದಶಕಗಳಿಂದ ಬಸವಾದಿ ಶರಣ ತತ್ವಗಳನ್ನು ಪ್ರಚುರಪಡಿಸುವಲ್ಲಿ ನಿರತರಾಗಿದ್ದಾರೆ. ಬೈಲೂರಿನ ಮಠವನ್ನು ಕೇಂದ್ರವಾಗಿಸಿಕೊಂಡು ತಮ್ಮ ವಿಚಾರಗಳನ್ನು ಬಿತ್ತುತ್ತಿದ್ದಾರೆ. ಅವರ ಪ್ರವಚನದಲ್ಲಿ ಮೌಡ್ಯ ವಿರೋಧಿ, ಕಂದಾಚಾರ ವಿರೋಧಿ, ಮೂರ್ತಿ ಪೂಜೆಯ ವಿರುದ್ಧ ಟೀಕೆಗಳು ಸಾಮಾನ್ಯವಾಗಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ನಿಜಗುಣಾನಂದ ಸ್ವಾಮೀಜಿ, ”ಕಳೆದ 15 ದಿನಗಳ ಹಿಂದೆ ಕೊಲೆ ಬೆದರಿಕೆ ಪತ್ರ ಬಂದಿದೆ. ಒಂದೇ ತರಹ ಬರಹದ ಪತ್ರಗಳು ಬೇರೆ ಬೇರೆ ಭಾಗಗಳಿಂದ ಬರುತ್ತಿವೆ. ಈಗಾಗಲೇ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಳೆದ ಐದು ವರ್ಷಗಳಿಂದ ಸತತವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿವೆ. ಪತ್ರ ಬರೆಯುವವರ ಹಾಗೂ ನನ್ನ ಮಧ್ಯೆ ಯಾವುದೇ ದ್ವೇಷ ಇಲ್ಲ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಇಂತಹ ಕೊಲೆ ಬೆದರಿಕೆ ಪತ್ರಗಳನ್ನು ನಾನು ಪ್ರೇಮಪತ್ರಗಳೆಂದು ಭಾವಿಸಿದ್ದೇನೆ. ನನಗೆ ಸಾವಿನ ಬಗ್ಗೆ ಭಯವಿಲ್ಲ, ಸೇವೆ ಮಾಡುವುದು ನಿಲ್ಲುತ್ತದೆ ಎನ್ನುವ ಕೊರಗಷ್ಟೇ. ನಾನು ಸಮಾಜದ ಮಗ. ಈ ರೀತಿಯ ಪತ್ರಗಳಿಂದ ಭಕ್ತರಲ್ಲಿ ಆತಂಕ ಸಹಜ. ಪೊಲೀಸರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...