Homeಕರ್ನಾಟಕಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

ಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದೆ. ಕೊಲೆ ಬೆದರಿಕೆ ಪತ್ರ ಆಗಸ್ಟ್- 8ರಂದೇ ಈ ಪತ್ರ ಬಂದಿದ್ದು ವಿಷಯ ತಡವಾಗಿ ಬಹಿರಂಗವಾಗಿದೆ.

ಈ ಬೆದರಿಕೆ ಪತ್ರದಲ್ಲಿ ”2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ಎಂದು ಪೋಸ್ಟ್ ಮೂಲಕ ಜೀವ ಬದರಿಕೆ ಪತ್ರ ಮಠಕ್ಕೆ ಬಂದಿದೆ. ತಮಗೆ ಬೆದರಿಕೆ ಪತ್ರ ಬಂದಿರುವ ಕುರಿತು ಶ್ರೀಗಳು ತಮ್ಮ ಭಕ್ತರಿಗೆ ವಿಷಯ ತಿಳಿಸಿದ್ದಾರೆ.

”ನಮ್ಮ ಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆ ಬರಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ. ಕೊಣೆಯಲ್ಲಿ ”ಓಂ ಶ್ರೀ ಕಾಳಿಕಾದೇವಿ ನಮಃ” ”ಸಹಿಷ್ಣು ಹಿಂದೂ” ಎಂದು ಬರೆಯಲಾಗಿದೆ.

2020ರಲ್ಲಿ ಹತ್ಯೆ ಮಾಡುವುದಾಗಿ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಈವರೆಗೂ 5ಕ್ಕೂ ಹೆಚ್ಚು ಬಾರಿ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದಾರೆ. ತಮ್ಮ ಖಡಕ್ ಮಾತುಗಳಿಂದಲೇ ರಾಜ್ಯದಲ್ಲಿ ಖ್ಯಾತಿಗಳಿಸಿರುವ ನಿಜಗುಣಾನಂದ ಸ್ವಾಮೀಜಿ ಪ್ರಮುಖ ಲಿಂಗಾಯತ ಸ್ವಾಮೀಜಿಗಳಲ್ಲಿ ಒಬ್ಬರು. ದಶಕಗಳಿಂದ ಬಸವಣ್ಣನವರ ವಿಚಾರಧಾರೆಯ ಪ್ರಚಾರಕರಾಗಿದ್ದಾರೆ. ತಮ್ಮ ವಿಚಾರಗಳನ್ನು ಬಿತ್ತುತ್ತಾ ಬಂದಿದ್ದಾರೆ. ಮೂರ್ತಿ ಪೂಜೆ, ಮೌಢ್ಯ ವಿರೋಧಿ ವಿಚಾರಗಳನ್ನು ಅವರ ಪ್ರವಚನದಲ್ಲಿ ಕಾಣಬಹುದಾಗಿದೆ.

ಪತ್ರದಲ್ಲೇನಿದೆ?

”ನಿಜಗುಣಾನಂದ ಸ್ವಾಮೀಜಿ ನಿನ್ನ ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಮಾತಿನ ಕೊಡ ತುಂಬಿದೆ. ಆದಷ್ಟು ಬೇಗ ನಿನ್ನ ಭಕ್ತಾದಿಗಳಿಗೆ ನಿನ್ನ ತಿಥಿ ಬಗ್ಗೆ ಹೇಳು. ನಮ್ಮಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆಯೇ ಬರುತ್ತದೆ. ನಿನ್ನ ಅಂತಿಮ ದಿನಗಳು ಪ್ರಾರಂಭವಾಗಿವೆ. ದಿನಗಳನ್ನು ಎಣಿಸು. ಓಂ ಶ್ರೀ ಕಾಳಿಕಾದೇವಿ ನಮಃ, ಓಂ ಶ್ರೀ ಕಾಳಿಕಾದೇವಿ ನಮಃ” ಎಂದು ಬಿಳಿ ಹಾಳೆಯಲ್ಲಿ ಬರೆದು, ಅದನ್ನು ಪ್ಯಾಕೇಟ್‌ನಲ್ಲಿಟ್ಟು ಕಳಿಸಲಾಗಿದೆ.

ನಿಜಗುಣಾನಂದ ಶ್ರೀಗಳು ದಶಕಗಳಿಂದ ಬಸವಾದಿ ಶರಣ ತತ್ವಗಳನ್ನು ಪ್ರಚುರಪಡಿಸುವಲ್ಲಿ ನಿರತರಾಗಿದ್ದಾರೆ. ಬೈಲೂರಿನ ಮಠವನ್ನು ಕೇಂದ್ರವಾಗಿಸಿಕೊಂಡು ತಮ್ಮ ವಿಚಾರಗಳನ್ನು ಬಿತ್ತುತ್ತಿದ್ದಾರೆ. ಅವರ ಪ್ರವಚನದಲ್ಲಿ ಮೌಡ್ಯ ವಿರೋಧಿ, ಕಂದಾಚಾರ ವಿರೋಧಿ, ಮೂರ್ತಿ ಪೂಜೆಯ ವಿರುದ್ಧ ಟೀಕೆಗಳು ಸಾಮಾನ್ಯವಾಗಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ನಿಜಗುಣಾನಂದ ಸ್ವಾಮೀಜಿ, ”ಕಳೆದ 15 ದಿನಗಳ ಹಿಂದೆ ಕೊಲೆ ಬೆದರಿಕೆ ಪತ್ರ ಬಂದಿದೆ. ಒಂದೇ ತರಹ ಬರಹದ ಪತ್ರಗಳು ಬೇರೆ ಬೇರೆ ಭಾಗಗಳಿಂದ ಬರುತ್ತಿವೆ. ಈಗಾಗಲೇ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಳೆದ ಐದು ವರ್ಷಗಳಿಂದ ಸತತವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿವೆ. ಪತ್ರ ಬರೆಯುವವರ ಹಾಗೂ ನನ್ನ ಮಧ್ಯೆ ಯಾವುದೇ ದ್ವೇಷ ಇಲ್ಲ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಇಂತಹ ಕೊಲೆ ಬೆದರಿಕೆ ಪತ್ರಗಳನ್ನು ನಾನು ಪ್ರೇಮಪತ್ರಗಳೆಂದು ಭಾವಿಸಿದ್ದೇನೆ. ನನಗೆ ಸಾವಿನ ಬಗ್ಗೆ ಭಯವಿಲ್ಲ, ಸೇವೆ ಮಾಡುವುದು ನಿಲ್ಲುತ್ತದೆ ಎನ್ನುವ ಕೊರಗಷ್ಟೇ. ನಾನು ಸಮಾಜದ ಮಗ. ಈ ರೀತಿಯ ಪತ್ರಗಳಿಂದ ಭಕ್ತರಲ್ಲಿ ಆತಂಕ ಸಹಜ. ಪೊಲೀಸರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...