Homeಕರ್ನಾಟಕಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

ಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದೆ. ಕೊಲೆ ಬೆದರಿಕೆ ಪತ್ರ ಆಗಸ್ಟ್- 8ರಂದೇ ಈ ಪತ್ರ ಬಂದಿದ್ದು ವಿಷಯ ತಡವಾಗಿ ಬಹಿರಂಗವಾಗಿದೆ.

ಈ ಬೆದರಿಕೆ ಪತ್ರದಲ್ಲಿ ”2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ಎಂದು ಪೋಸ್ಟ್ ಮೂಲಕ ಜೀವ ಬದರಿಕೆ ಪತ್ರ ಮಠಕ್ಕೆ ಬಂದಿದೆ. ತಮಗೆ ಬೆದರಿಕೆ ಪತ್ರ ಬಂದಿರುವ ಕುರಿತು ಶ್ರೀಗಳು ತಮ್ಮ ಭಕ್ತರಿಗೆ ವಿಷಯ ತಿಳಿಸಿದ್ದಾರೆ.

”ನಮ್ಮ ಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆ ಬರಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ. ಕೊಣೆಯಲ್ಲಿ ”ಓಂ ಶ್ರೀ ಕಾಳಿಕಾದೇವಿ ನಮಃ” ”ಸಹಿಷ್ಣು ಹಿಂದೂ” ಎಂದು ಬರೆಯಲಾಗಿದೆ.

2020ರಲ್ಲಿ ಹತ್ಯೆ ಮಾಡುವುದಾಗಿ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಈವರೆಗೂ 5ಕ್ಕೂ ಹೆಚ್ಚು ಬಾರಿ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದಾರೆ. ತಮ್ಮ ಖಡಕ್ ಮಾತುಗಳಿಂದಲೇ ರಾಜ್ಯದಲ್ಲಿ ಖ್ಯಾತಿಗಳಿಸಿರುವ ನಿಜಗುಣಾನಂದ ಸ್ವಾಮೀಜಿ ಪ್ರಮುಖ ಲಿಂಗಾಯತ ಸ್ವಾಮೀಜಿಗಳಲ್ಲಿ ಒಬ್ಬರು. ದಶಕಗಳಿಂದ ಬಸವಣ್ಣನವರ ವಿಚಾರಧಾರೆಯ ಪ್ರಚಾರಕರಾಗಿದ್ದಾರೆ. ತಮ್ಮ ವಿಚಾರಗಳನ್ನು ಬಿತ್ತುತ್ತಾ ಬಂದಿದ್ದಾರೆ. ಮೂರ್ತಿ ಪೂಜೆ, ಮೌಢ್ಯ ವಿರೋಧಿ ವಿಚಾರಗಳನ್ನು ಅವರ ಪ್ರವಚನದಲ್ಲಿ ಕಾಣಬಹುದಾಗಿದೆ.

ಪತ್ರದಲ್ಲೇನಿದೆ?

”ನಿಜಗುಣಾನಂದ ಸ್ವಾಮೀಜಿ ನಿನ್ನ ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಮಾತಿನ ಕೊಡ ತುಂಬಿದೆ. ಆದಷ್ಟು ಬೇಗ ನಿನ್ನ ಭಕ್ತಾದಿಗಳಿಗೆ ನಿನ್ನ ತಿಥಿ ಬಗ್ಗೆ ಹೇಳು. ನಮ್ಮಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆಯೇ ಬರುತ್ತದೆ. ನಿನ್ನ ಅಂತಿಮ ದಿನಗಳು ಪ್ರಾರಂಭವಾಗಿವೆ. ದಿನಗಳನ್ನು ಎಣಿಸು. ಓಂ ಶ್ರೀ ಕಾಳಿಕಾದೇವಿ ನಮಃ, ಓಂ ಶ್ರೀ ಕಾಳಿಕಾದೇವಿ ನಮಃ” ಎಂದು ಬಿಳಿ ಹಾಳೆಯಲ್ಲಿ ಬರೆದು, ಅದನ್ನು ಪ್ಯಾಕೇಟ್‌ನಲ್ಲಿಟ್ಟು ಕಳಿಸಲಾಗಿದೆ.

ನಿಜಗುಣಾನಂದ ಶ್ರೀಗಳು ದಶಕಗಳಿಂದ ಬಸವಾದಿ ಶರಣ ತತ್ವಗಳನ್ನು ಪ್ರಚುರಪಡಿಸುವಲ್ಲಿ ನಿರತರಾಗಿದ್ದಾರೆ. ಬೈಲೂರಿನ ಮಠವನ್ನು ಕೇಂದ್ರವಾಗಿಸಿಕೊಂಡು ತಮ್ಮ ವಿಚಾರಗಳನ್ನು ಬಿತ್ತುತ್ತಿದ್ದಾರೆ. ಅವರ ಪ್ರವಚನದಲ್ಲಿ ಮೌಡ್ಯ ವಿರೋಧಿ, ಕಂದಾಚಾರ ವಿರೋಧಿ, ಮೂರ್ತಿ ಪೂಜೆಯ ವಿರುದ್ಧ ಟೀಕೆಗಳು ಸಾಮಾನ್ಯವಾಗಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ನಿಜಗುಣಾನಂದ ಸ್ವಾಮೀಜಿ, ”ಕಳೆದ 15 ದಿನಗಳ ಹಿಂದೆ ಕೊಲೆ ಬೆದರಿಕೆ ಪತ್ರ ಬಂದಿದೆ. ಒಂದೇ ತರಹ ಬರಹದ ಪತ್ರಗಳು ಬೇರೆ ಬೇರೆ ಭಾಗಗಳಿಂದ ಬರುತ್ತಿವೆ. ಈಗಾಗಲೇ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಳೆದ ಐದು ವರ್ಷಗಳಿಂದ ಸತತವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿವೆ. ಪತ್ರ ಬರೆಯುವವರ ಹಾಗೂ ನನ್ನ ಮಧ್ಯೆ ಯಾವುದೇ ದ್ವೇಷ ಇಲ್ಲ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಇಂತಹ ಕೊಲೆ ಬೆದರಿಕೆ ಪತ್ರಗಳನ್ನು ನಾನು ಪ್ರೇಮಪತ್ರಗಳೆಂದು ಭಾವಿಸಿದ್ದೇನೆ. ನನಗೆ ಸಾವಿನ ಬಗ್ಗೆ ಭಯವಿಲ್ಲ, ಸೇವೆ ಮಾಡುವುದು ನಿಲ್ಲುತ್ತದೆ ಎನ್ನುವ ಕೊರಗಷ್ಟೇ. ನಾನು ಸಮಾಜದ ಮಗ. ಈ ರೀತಿಯ ಪತ್ರಗಳಿಂದ ಭಕ್ತರಲ್ಲಿ ಆತಂಕ ಸಹಜ. ಪೊಲೀಸರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತಮಿಳುನಾಡು: 1 ಗಂಟೆಗಳ ಕಾಲ ಕಾರ್ಯನಿರ್ವಹಿಸದ ಮತಯಂತ್ರ ಸಂಗ್ರಹಿಸಿಟ್ಟಿದ್ದ ‘ಸ್ಟ್ರಾಂಗ್ ರೂಂ’ ಹೊರಗಿನ ಸಿಸಿಟಿವಿ

0
ತಮಿಳುನಾಡಿನ ಈರೋಡ್ ಸಂಸದೀಯ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳು (ಇವಿಎಂ) ಮತ್ತು ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಯಂತ್ರಗಳನ್ನು ಸಂಗ್ರಹಿಸಿಟ್ಟಿದ್ದ 'ಸ್ಟ್ರಾಂಗ್ ರೂಂ' ಹೊರಗೆ ಇರಿಸಲಾದ ಸಿಸಿಟಿವಿ ಕ್ಯಾಮೆರಾ ಸೋಮವಾರ...