Homeಚಳವಳಿಬೆಳಗಾವಿ: ದುಷ್ಕರ್ಮಿಗಳಿಂದ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ- 144 ಸೆಕ್ಷನ್ ಜಾರಿ

ಬೆಳಗಾವಿ: ದುಷ್ಕರ್ಮಿಗಳಿಂದ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ- 144 ಸೆಕ್ಷನ್ ಜಾರಿ

ಈ ದುಷ್ಕೃತ್ಯ ಖಂಡಿಸಿ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.

- Advertisement -
- Advertisement -

ಬೆಳಗಾವಿಯ ಅನಗೋಳದ ಕನಕದಾಸ ಕಾಲೋನಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿ, ಖಡ್ಗ, ಗುರಾಣಿ ಕಿತ್ತುಹಾಕಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಬೆಳಗಾವಿಯಲ್ಲಿ ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ.

ಘಟನೆ ಸಂಬಂಧ ತಿಲಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವರನ್ನು ಬಂಧಿಸಿದ್ದು, ಸದ್ಯಕ್ಕೆ ಪುತ್ಥಳಿಯನ್ನು ವಶಕ್ಕೆ ತೆಗೆದುಕೊಂಡಿದ್ದು ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ರಾತ್ರಿ 8 ಗಂಟೆಯವರೆಗೂ 144 ಸೆಕ್ಷನ್ ಜಾರಿಯಲ್ಲಿದೆ ಜಿಲ್ಲಾಡಳಿತ ಹೇಳಿದೆ.

ಬೆಳಗಾವಿಯ ಅಧಿವೇಶನವನ್ನು ವಿರೋಧಿಸಿ ಎಂಇಎಸ್ ಸಂಘಟನೆಯ ಕಾರ್ಯಕರ್ತರು ಮಹಾಮೇಳವ್ ಎಂಬ ಉತ್ಸವ ಸಂಘಟಿಸಿದ್ದರು. ಇದನ್ನು ವಿರೋಧಿಸಿ ಕನ್ನಡಪರ ಕಾರ್ಯಕರ್ತರು ಉತ್ಸವ ವೇಳೆ ಎಂಇಎಸ್ ನಾಯಕರಿಗೆ ಮಸಿ ಬಳಿದಿದ್ದರು. ಈ ಸಂಬಂಧ ಸಂಪತ್ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಎಂಇಎಸ್ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟು ಉದ್ಧಟತನ ಮೆರೆದಿದ್ದರು. ಇದರಿಂದ ಕ್ರೋಧಗೊಂಡ ಕೆಲ ಕನ್ನಡ ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಭಗ್ನಗೊಳಿಸಲಾಗಿದೆ ಮತ್ತು ಕಲ್ಲು ತೂರಾಟ ಮಾಡಿ ಗಲಭೆಗೆ ಪ್ರಚೋದಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, “ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ ನಡೆಯದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ರಾಷ್ಟ್ರಭಕ್ತರ ಪ್ರತಿಮೆಗೆ ಭಂಗ ತರುವುದು ಸರಿಯಲ್ಲ. ದೇಶಕ್ಕಾಗಿ ತ್ಯಾಗ ಮಾಡಿದವರನ್ನು ಗೌರವಿಸಬೇಕು. ನಾಡಿಗೆ ಹೋರಾಡಿದವರ, ತ್ಯಾಗ ಮಾಡಿದವರ ಗೌರವ ಉಳಿಸಬೇಕು. ಸಮಾಜದಲ್ಲಿ ಕ್ಷೋಭೆ ಉಂಟುಮಾಡುವುದು ಸರಿಯಲ್ಲ. ಕೆಲವೇ ಕೆಲವು ಪುಂಡರು ಇಂತಹ ದುಷ್ಕೃತ್ಯ ಮಾಡುತ್ತಿದ್ದು, ಅವರನ್ನು ಸದೆಬಡಿಯುತ್ತೇವೆ” ಎಂದಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ ಸಿಎಂ ಬಸವರಾಜ ಬೊಮ್ಮಾಯಿಯವರು ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ‌ ಆದೇಶ ನೀಡಬೇಕು. ಇದಕ್ಕೆಲ್ಲ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ,‌‌‌ ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು‌ ಬರಬೇಕೆಂದು‌ ಮನವಿ ಮಾಡುತ್ತೇನೆ” ಎಂದಿದ್ದಾರೆ.

ಪ್ರತಿಭಟನೆಗೆ ಕರೆ

ತುರ್ತು ಪ್ರತಿಭಟನೆ ಇಂದು ಬೆಳಿಗ್ಗೆ11 ಗಂಟೆಗೆ

ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ ಎಂದು ನಾವು ಸುಮ್ಮನೆ ಕೂರುವುದು ಬೇಡ.
ಕನ್ನಡಿಗರ ಹೆಮ್ಮೆಯ ಪ್ರತೀಕ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಬೆಳಗಾವಿಯಲ್ಲಿ ಭಗ್ನಗೊಳಿಸಿ ಕರ್ನಾಟಕ ಪೊಲೀಸ್ ಮೇಲೆ ಕಲ್ಲು ತೂರಾಟ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಹಾಗೂ ದೇಶದ್ರೋಹಿ ಎಂಇಎಸ್ ಸಂಘಟನೆಯನ್ನು ಈ ಕೂಡಲೇ ನಿಷೇಧಿಸಲು ಒತ್ತಾಯಿಸಿ ಇಂದು ಬಳಿಗ್ಗೆ 11ಕ್ಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ. ಹತ್ತಿರವಿರುವ ಎಲ್ಲಾ ಕನ್ನಡಪರ ಮನಸ್ಸುಗಳು ಜೊತೆಗೂಡಿ ಎಂದು ಕನ್ನಡಪರ ಸಂಘಟನೆಗಳು ಕರೆ ನೀಡಿವೆ.


ಇದನ್ನೂ ಓದಿ: ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...