Homeಚಳವಳಿಬೆಳಗಾವಿ: ದುಷ್ಕರ್ಮಿಗಳಿಂದ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ- 144 ಸೆಕ್ಷನ್ ಜಾರಿ

ಬೆಳಗಾವಿ: ದುಷ್ಕರ್ಮಿಗಳಿಂದ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ- 144 ಸೆಕ್ಷನ್ ಜಾರಿ

ಈ ದುಷ್ಕೃತ್ಯ ಖಂಡಿಸಿ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.

- Advertisement -
- Advertisement -

ಬೆಳಗಾವಿಯ ಅನಗೋಳದ ಕನಕದಾಸ ಕಾಲೋನಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿ, ಖಡ್ಗ, ಗುರಾಣಿ ಕಿತ್ತುಹಾಕಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಬೆಳಗಾವಿಯಲ್ಲಿ ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ.

ಘಟನೆ ಸಂಬಂಧ ತಿಲಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವರನ್ನು ಬಂಧಿಸಿದ್ದು, ಸದ್ಯಕ್ಕೆ ಪುತ್ಥಳಿಯನ್ನು ವಶಕ್ಕೆ ತೆಗೆದುಕೊಂಡಿದ್ದು ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ರಾತ್ರಿ 8 ಗಂಟೆಯವರೆಗೂ 144 ಸೆಕ್ಷನ್ ಜಾರಿಯಲ್ಲಿದೆ ಜಿಲ್ಲಾಡಳಿತ ಹೇಳಿದೆ.

ಬೆಳಗಾವಿಯ ಅಧಿವೇಶನವನ್ನು ವಿರೋಧಿಸಿ ಎಂಇಎಸ್ ಸಂಘಟನೆಯ ಕಾರ್ಯಕರ್ತರು ಮಹಾಮೇಳವ್ ಎಂಬ ಉತ್ಸವ ಸಂಘಟಿಸಿದ್ದರು. ಇದನ್ನು ವಿರೋಧಿಸಿ ಕನ್ನಡಪರ ಕಾರ್ಯಕರ್ತರು ಉತ್ಸವ ವೇಳೆ ಎಂಇಎಸ್ ನಾಯಕರಿಗೆ ಮಸಿ ಬಳಿದಿದ್ದರು. ಈ ಸಂಬಂಧ ಸಂಪತ್ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಎಂಇಎಸ್ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟು ಉದ್ಧಟತನ ಮೆರೆದಿದ್ದರು. ಇದರಿಂದ ಕ್ರೋಧಗೊಂಡ ಕೆಲ ಕನ್ನಡ ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಭಗ್ನಗೊಳಿಸಲಾಗಿದೆ ಮತ್ತು ಕಲ್ಲು ತೂರಾಟ ಮಾಡಿ ಗಲಭೆಗೆ ಪ್ರಚೋದಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, “ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ ನಡೆಯದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ರಾಷ್ಟ್ರಭಕ್ತರ ಪ್ರತಿಮೆಗೆ ಭಂಗ ತರುವುದು ಸರಿಯಲ್ಲ. ದೇಶಕ್ಕಾಗಿ ತ್ಯಾಗ ಮಾಡಿದವರನ್ನು ಗೌರವಿಸಬೇಕು. ನಾಡಿಗೆ ಹೋರಾಡಿದವರ, ತ್ಯಾಗ ಮಾಡಿದವರ ಗೌರವ ಉಳಿಸಬೇಕು. ಸಮಾಜದಲ್ಲಿ ಕ್ಷೋಭೆ ಉಂಟುಮಾಡುವುದು ಸರಿಯಲ್ಲ. ಕೆಲವೇ ಕೆಲವು ಪುಂಡರು ಇಂತಹ ದುಷ್ಕೃತ್ಯ ಮಾಡುತ್ತಿದ್ದು, ಅವರನ್ನು ಸದೆಬಡಿಯುತ್ತೇವೆ” ಎಂದಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ ಸಿಎಂ ಬಸವರಾಜ ಬೊಮ್ಮಾಯಿಯವರು ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ‌ ಆದೇಶ ನೀಡಬೇಕು. ಇದಕ್ಕೆಲ್ಲ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ,‌‌‌ ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು‌ ಬರಬೇಕೆಂದು‌ ಮನವಿ ಮಾಡುತ್ತೇನೆ” ಎಂದಿದ್ದಾರೆ.

ಪ್ರತಿಭಟನೆಗೆ ಕರೆ

ತುರ್ತು ಪ್ರತಿಭಟನೆ ಇಂದು ಬೆಳಿಗ್ಗೆ11 ಗಂಟೆಗೆ

ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ ಎಂದು ನಾವು ಸುಮ್ಮನೆ ಕೂರುವುದು ಬೇಡ.
ಕನ್ನಡಿಗರ ಹೆಮ್ಮೆಯ ಪ್ರತೀಕ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಬೆಳಗಾವಿಯಲ್ಲಿ ಭಗ್ನಗೊಳಿಸಿ ಕರ್ನಾಟಕ ಪೊಲೀಸ್ ಮೇಲೆ ಕಲ್ಲು ತೂರಾಟ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಹಾಗೂ ದೇಶದ್ರೋಹಿ ಎಂಇಎಸ್ ಸಂಘಟನೆಯನ್ನು ಈ ಕೂಡಲೇ ನಿಷೇಧಿಸಲು ಒತ್ತಾಯಿಸಿ ಇಂದು ಬಳಿಗ್ಗೆ 11ಕ್ಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ. ಹತ್ತಿರವಿರುವ ಎಲ್ಲಾ ಕನ್ನಡಪರ ಮನಸ್ಸುಗಳು ಜೊತೆಗೂಡಿ ಎಂದು ಕನ್ನಡಪರ ಸಂಘಟನೆಗಳು ಕರೆ ನೀಡಿವೆ.


ಇದನ್ನೂ ಓದಿ: ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....