Homeಕರ್ನಾಟಕಬೆಳಗಾವಿಯಲ್ಲೊಂದು ಆಘಾತಕಾರಿ ಘಟನೆ: ಹಳ್ಳದಲ್ಲಿ ತೇಲಿ ಬಂದ 7 ಮೃತ ಭ್ರೂಣಗಳು

ಬೆಳಗಾವಿಯಲ್ಲೊಂದು ಆಘಾತಕಾರಿ ಘಟನೆ: ಹಳ್ಳದಲ್ಲಿ ತೇಲಿ ಬಂದ 7 ಮೃತ ಭ್ರೂಣಗಳು

- Advertisement -
- Advertisement -

ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಶುಕ್ರವಾರ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಮೂಡಲಗಿ ಬಸ್ ನಿಲ್ದಾಣದ ಬಳಿಯ ಚರಂಡಿಯಲ್ಲಿ ಹಳ್ಳದಲ್ಲಿ ಏಳು ಭ್ರೂಣಗಳನ್ನು ಡಬ್ಬಗಳಲ್ಲಿ ಹಾಕಿ ತೇಲಿ ಬಿಟ್ಟಿದ್ದಾರೆ.

ಐದು ಚಾಕಲೇಟ್ ಡಬ್ಬಿಗಳಲ್ಲಿ ಗರ್ಭಪಾತ ಮಾಡಿ ತೆಗೆದ ಏಳು ಭ್ರೂಣಗಳನ್ನು ಹಾಕಿ ಚರಂಡಿಗೆ ಎಸೆಯಲಾಗಿದೆ. ಇದನ್ನು ಕಂಡ ಜನತೆ ಗಾಬರಿಯಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹೀಗೆ ಭ್ರೂಣಗಳನ್ನು ಯಾರು ಎಸೆದಿದ್ದಾರೆ ಎನ್ನುವುದು ಇನ್ನು ನಿಗೂಢವಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಮಹೇಶ್ ಕೋಣಿ ಘಟನೆಯನ್ನು ಖಚಿತಪಡಿಸಿದ್ದು, ಮೇಲ್ನೋಟಕ್ಕೆ ಇದು ಲಿಂಗ ಪತ್ತೆ ಮತ್ತು ಭ್ರೂಣಹತ್ಯೆಯ ಪ್ರಕರಣವಾಗಿ ಕಂಡುಬರುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

’ಎಲ್ಲಾ ಭ್ರೂಣಗಳಿಗೂ ಐದು ತಿಂಗಳಾಗಿದ್ದು, ಈ ಬಗ್ಗೆ ಗ್ರಾಮ ಪಂಚಾಯಿತಿ ಮೂಲಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು. ಭ್ರೂಣಗಳನ್ನು ಏಕೆ ಹತ್ಯೆ ಮಾಡಲಾಗಿದೆ, ಎಲ್ಲಿಂದ ತರಲಾಗಿದೆ, ಯಾವಾಗ ಹಳ್ಳಕ್ಕೆ ಎಸೆಯಲಾಗಿದೆ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು’ ಎಂದು ಮಹೇಶ್ ಕೋಣಿ ತಿಳಿಸಿದ್ದಾರೆ.

’ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿ ಭ್ರೂಣಗಳನ್ನು ಇರಿಸಲಾಗಿದೆ. ದೂರು ದಾಖಲಾದ ನಂತರ, ಭ್ರೂಣಗಳನ್ನು ಪರೀಕ್ಷೆ ನಡೆಸಲು ಬೆಳಗಾವಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕೊಂಡೊಯ್ಯಲಾಗುವುದು. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ನಂತರ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಗುವುದು ’ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...