Homeಕರ್ನಾಟಕಬಂದ್‌ನಿಂದ ಕನ್ನಡಿಗರಿಗೇ ಕಷ್ಟ; ಕಾನೂನಾತ್ಮಕವಾಗಿ ಎಂಇಎಸ್ ನಿಷೇಧಿಸಿ- ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

ಬಂದ್‌ನಿಂದ ಕನ್ನಡಿಗರಿಗೇ ಕಷ್ಟ; ಕಾನೂನಾತ್ಮಕವಾಗಿ ಎಂಇಎಸ್ ನಿಷೇಧಿಸಿ- ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

- Advertisement -
- Advertisement -

ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸಿದ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಡಿಸೆಂಬರ್‌ 31 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದರೆ ಬಂದ್‌ಗೆ ಹಲವು ವಲಯಗಳಿಂದ ಅಸಮಾಧಾನ ವ್ಯಕ್ತವಾಗಿದೆ. ಬಂದ್‌ ಮಾಡಿದರೇ ತೊಂದರೆ, ನಷ್ಟ ಅನುಭವಿಸುವುದು ನಾವೇ ಎನ್ನುವ ಹೇಳಿಕೆಗಳು ಬರುತ್ತಿದೆ.

ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ, ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೇ ಕಷ್ಟ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಿ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ  ಹೆಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಹೆಚ್‌.ಡಿ.ಕುಮಾರಸ್ವಾಮಿ, “ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡುವುದಕ್ಕೆ ಕರೆ ನೀಡಲಾಗಿದೆ. ಬಂದ್ ಮಾಡುವುದರಿಂದ ಏನು ಪ್ರಯೋಜನ..? ಅನುಕೂಲ ಯಾರಿಗೆ..? ಅನನುಕೂಲ ಯಾರಿಗೆ..? ಅನ್ನೋದು ಮುಖ್ಯ. ಈ  ಬಂದ್ ಕರೆಯಿಂದ ಮಹಾರಾಷ್ಟ್ರಕ್ಕೆ ತೊಂದರೆ ಇಲ್ಲ. ರಾಜ್ಯದ ಜನರಿಗೆ ತೊಂದರೆ ಆಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

’ಎಂಇಎಸ್ ಸೇರಿದಂತೆ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರಕಾರ ಮುಲಾಜಿಲ್ಲದೆ ಮುಂದಾಗಬೇಕು. ಕಾನೂನು ವ್ಯಾಪ್ತಿಯಲ್ಲಿ ಕ್ರಮಕ್ಕೆ ಸರ್ಕಾರ ಮೀನಾಮೇಷ ಇಲ್ಲದೇ ಮುಂದಾಗಬೇಕು. ಕಠಿಣ ಕ್ರಮ ತೆಗೆದುಕೊಳ್ಳುವುದು ಸರ್ಕಾರದ ಜವಾಬ್ದಾರಿ. ಬಂದ್ ಘೋಷಣೆಯಿಂದ ನಮ್ಮ ಜನರಿಗೆ ತೊಂದರೆ ಆಗುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ, ಕೂಲಿ ಕೆಲಸದವರಿಗೆ ಆಗುವ ಕಷ್ಟದ ಬಗ್ಗೆ ಚಿಂತಿಸಬೇಕು. ಬಂದ್‌ಗೆ ಕರೆ ನೀಡಿದವರು ಕೂಡ ಈ ಬಗ್ಗೆ ಯೋಚಿಸಬೇಕು’ ಎಂದು ಮಾಜಿ ಸಿಎಂ ಹೇಳಿದ್ದಾರೆ.

’ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಬಹಳ ಅನಾನುಕೂಲವೇ ಆಗುತ್ತದೆ. ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಕನ್ನಡ ದ್ರೋಹಿಗಳನ್ನು ಹತ್ತಿಕ್ಕಲು ಏನು ಬೇಕೋ ಆ ಕ್ರಮ ಕೈಗೊಳ್ಳಲು ಒತ್ತಡ ಹೇರಬೇಕು’ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

“ಎಂಇಎಸ್ ಸಂಘಟನೆಯನ್ನು ಕಾನೂನಾತ್ಮಕವಾಗಿ ನಿಷೇಧ ಮಾಡಬೇಕು. ಸರಿಯಾದ ತೀರ್ಮಾನ ಮಾಡಬೇಕು. ಕೋರ್ಟ್‌ಗೆ ಹೋಗಿ ತಡೆ ತರುವಂತೆ ನಿಷೇಧ ಹೇರಬಾರದು. ಸರ್ಕಾರ ಈ ಬಗ್ಗೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳಲಿ” ಎಂದಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಬೆಳಗಾವಿಯಲ್ಲಿ ನಡೆಸಿರುವ ಪುಂಡಾಟಿಕೆ ವಿರೋಧಿಸಿರುವ ವಿವಿಧ ಕನ್ನಡ ಪರ ಸಂಘಟನೆಗಳು, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್‌ 31 ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿ, ಕರೆ ನೀಡಿವೆ.


ಇದನ್ನೂ ಓದಿ: ಎಂಇಎಸ್‌ ನಿಷೇಧಕ್ಕೆ ಒತ್ತಡ: ಡಿಸೆಂಬರ್‌ 31ಕ್ಕೆ ಸಂಪೂರ್ಣ ಕರ್ನಾಟಕ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...