Homeಚಳವಳಿಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! - ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ 'ಬೆಲ್ಲಾ ಚಾವ್'

ಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! – ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ ‘ಬೆಲ್ಲಾ ಚಾವ್’

"ಈ ಹಾಡನ್ನು ಫ್ಯಾಸಿಸ್ಟ್ ವಿರೋಧಿ ಗುಂಪುಗಳ ಸದಸ್ಯರು ಎರಡನೇ ವಿಶ್ವಯುದ್ಧದ ಸಮಯದಲ್ಲಿ ಬೆನಿಟೊ ಮುಸೊಲೊನಿ ವಿರುದ್ಧ ಬಳಸಿದ್ದರು"

- Advertisement -
- Advertisement -

ಪ್ರತಿರೋಧದ ಗೀತೆಯಾಗಿ ಪ್ರಪಂಚದಾದ್ಯಂತ ಪ್ರಸಿದ್ಧಿ ಪಡೆದಿರುವ ‘ಬೆಲ್ಲಾ ಚಾವ್’ ಹಾಡು ಇದೀಗ ರೈತರ ಪ್ರತಿಭಟನೆಯನ್ನೂ ಪ್ರತಿಧ್ವನಿಸುತ್ತಿದೆ. ಇಟಲಿ ಮೂಲದ ಈ ಹಾಡನ್ನು 27 ವರ್ಷದ ಪೂಜನ್ ಸಾಹಿಲ್ ಪಂಜಾಬಿ ಭಾಷೆಗೆ ಅನುವಾದಿಸಿ ಹಾಡಿದ್ದಾರೆ. ಹೋರಾಟನಿರತ ರೈತರೇ ಆರಂಭಿಸಿರುವ ಯೂಟೂಬ್ ಚಾನೆಲ್‌ನಲ್ಲಿ ಇದು ಕೇವಲ ಒಂದು ವಾರದಲ್ಲಿ 2 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿ ದಾಖಲೆ ಮಾಡಿದೆ. ಪ್ರಸ್ತುತ ಈ ಹಾಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ದೆಹಲಿಯ ಶಾಲೆಯೊಂದರಲ್ಲಿ ಗಣಿತ ಪಾಠ ಮಾಡುವ ಸಾಹಿಲ್, “ಸಾಮಾಜಿಕ ಪ್ರಜ್ಞೆಯಿರುವ ಸಂಗೀತಗಾರನಿಗೆ ಭಯ, ನಿಂದನೆ ಮತ್ತು ನಿರಾಶೆಗಳು ಒಂದು ಕೋರ್ಸ್‌ಗೆ ಸಮನಾಗಿರುತ್ತದೆ. ನಮ್ಮ ಪದಗಳು ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ರೈತರಿಗೆ ಬಲ ನೀಡಿದರೆ ಅದು ಸಾರ್ಥಕವಾದಂತೆ. ಕೇಂದ್ರವು ತನ್ನ ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯಲು ಈ ಮೂಲಕ ಒತ್ತಾಯಿಸುತ್ತಿದ್ದೇನೆ” ಎಂದು ಪಿಟಿಐಗೆ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ದೇಶದಾದ್ಯಂತ ನಡೆದ ಸಿಎಎ ಪ್ರತಿಭಟನೆಯ ಸಂದರ್ಭದಲ್ಲಿ ‘ಬೆಲ್ಲಾ ಚಾವ್’ ಹಾಡನ್ನು ಹಿಂದಿಗೆ ಅನುವಾದ ಮಾಡಿ ಹಾಡಲಾಗಿತ್ತು. ಕಳೆದ ಜುಲೈನಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ‘ಮನಿ ಹೈಸ್ಟ್‌’ ವೆಬ್‌ ಸರಣಿಯಲ್ಲಿ ಈ ಮೂಲ ಹಾಡನ್ನು ಬಳಸಿಕೊಳ್ಳಲಾಗಿತ್ತು. ಇದರಿಂದ ವಿಶ್ವದಾದ್ಯಂತ ಈ ಹಾಡು ಇನ್ನಷ್ಟು ಜನಪ್ರಿಯತೆ ಗಳಿಸಿತು.

ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

“ನಾನು ಈಗಾಗಲೇ ಭಾರತದ ವಿವಿಧ ವಿದ್ಯಾರ್ಥಿ ಪ್ರತಿಭಟನೆಗಳಲ್ಲಿ ‘ಬೆಲ್ಲಾ ಚಾವ್’ ಹಾಡಿನ ಹಿಂದಿ ಅನುವಾದ ‘ವಾಪಾಸ್ ಜಾವೊ’ ಹಾಡನ್ನು ರಚಿಸಿದ್ದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ನಂತರ ಇದನ್ನು ಸಿಎಎ ಪ್ರತಿಭಟನೆಗಳಲ್ಲಿ ಹಲವು ಬಾರಿ ಬಳಸಿಕೊಳ್ಳಲಾಗಿದೆ. ಈ ಹಾಡಿನ ಇತಿಹಾಸವನ್ನು ಗಮನಿಸಿದಾಗ ಇದು ರೈತರ ಪ್ರತಿಭಟನೆಗೆ ಚೆನ್ನಾಗಿ ಹೊಂದುತ್ತದೆ ಎಂದು ನಾನು ಭಾವಿಸಿದೆ” ಎಂದು ಸಾಹಿಲ್ ಹೇಳಿದರು.

ಉತ್ತರ ಇಟಲಿಯಲ್ಲಿ 19 ನೇ ಶತಮಾನದ ಉತ್ತರಾರ್ಧದಲ್ಲಿ “ಬೆಲ್ಲಾ ಚಾವ್” (ಗುಡ್‌ಬೈ ಬ್ಯೂಟಿಫುಲ್) ಹಾಡು ಹುಟ್ಟಿಕೊಂಡಿತ್ತು. ಅಲ್ಲಿನ ಮಹಿಳಾ ರೈತರು ಕಠಿಣ ಕೆಲಸದ ಸಂದರ್ಭಗಳಲ್ಲಿ ಇದನ್ನು ಹಾಡುತ್ತಿದ್ದರು. ನಂತರ ಈ ಹಾಡನ್ನು ಫ್ಯಾಸಿಸ್ಟ್ ವಿರೋಧಿ ಗುಂಪುಗಳ ಸದಸ್ಯರು ಎರಡನೇ ವಿಶ್ವಯುದ್ಧದ ಸಮಯದಲ್ಲಿ ಬೆನಿಟೊ ಮುಸೊಲೊನಿ ವಿರುದ್ಧ ಬಳಸಿದ್ದರು. ನಂತರದ ವರ್ಷಗಳಲ್ಲಿ ಇದು ಗ್ರೀಸ್, ಫ್ರಾನ್ಸ್ ಸೇರಿದಂತೆ ಜಗತ್ತಿನಾದ್ಯಂತ ನಡೆಯುವ ಎಲ್ಲಾ ಪ್ರತಿಭಟನೆಯಲ್ಲಿಯೂ ಬಳಕೆಗೆ ಬಂತು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಹಾಡಿನ ಪಂಜಾಬಿ ಸಾಹಿತ್ಯದ ಅನುವಾದದಲ್ಲಿ, ಸಾಮಾಜಿಕ ಸಾಮರಸ್ಯ, ನಾಗರಿಕ ಸಮಾಜದ ಅಭಿಯಾನ, ರೈತರ ತ್ಯಾಗ, ಕೇಂದ್ರದ ಕೃಷಿ ಕಾನೂನುಗಳಿಗೆ ವಿರೋಧ, ಪ್ರತಿಭಟನೆ ಮುಂತಾದ ಅಂಶಗಳು ಧ್ವನಿಸಿದೆ.

ದೆಹಲಿ ಮತ್ತು ಹರಿಯಾಣ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 29 ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ತಮ್ಮ ವಿರೋಧವನ್ನು ಇನ್ನಷ್ಟು ತೀವ್ರಗೊಳಿಸುವ ಉದ್ದೇಶದಿಂದ ಇತ್ತೀಚೆಗೆ ದೇಶದಾದ್ಯಂತ ಉಪವಾಸಕ್ಕೆ ಕರೆ ನೀಡಿದ್ದರು.

ಇದನ್ನೂ ಓದಿ: ಸರ್ವಾಧಿಕಾರಿ ಹಿಟ್ಲರ್ ಮತ್ತು ಆತನ ಬಗೆಗಿನ ಗಮನ ಸೆಳೆದ ವ್ಯಂಗ್ಯಚಿತ್ರಗಳು

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ’ಶಗ್ಗಿ ಬೈನ್’ಗೆ ಬುಕರ್: ಜೀವನ ಸಂಘರ್ಷವೇ ಈ ಕತೆಗಾರನ ಜೀವಾಳ ಮತ್ತು ಬಂಡವಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....