Homeಚಳವಳಿಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! - ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ 'ಬೆಲ್ಲಾ ಚಾವ್'

ಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! – ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ ‘ಬೆಲ್ಲಾ ಚಾವ್’

"ಈ ಹಾಡನ್ನು ಫ್ಯಾಸಿಸ್ಟ್ ವಿರೋಧಿ ಗುಂಪುಗಳ ಸದಸ್ಯರು ಎರಡನೇ ವಿಶ್ವಯುದ್ಧದ ಸಮಯದಲ್ಲಿ ಬೆನಿಟೊ ಮುಸೊಲೊನಿ ವಿರುದ್ಧ ಬಳಸಿದ್ದರು"

- Advertisement -
- Advertisement -

ಪ್ರತಿರೋಧದ ಗೀತೆಯಾಗಿ ಪ್ರಪಂಚದಾದ್ಯಂತ ಪ್ರಸಿದ್ಧಿ ಪಡೆದಿರುವ ‘ಬೆಲ್ಲಾ ಚಾವ್’ ಹಾಡು ಇದೀಗ ರೈತರ ಪ್ರತಿಭಟನೆಯನ್ನೂ ಪ್ರತಿಧ್ವನಿಸುತ್ತಿದೆ. ಇಟಲಿ ಮೂಲದ ಈ ಹಾಡನ್ನು 27 ವರ್ಷದ ಪೂಜನ್ ಸಾಹಿಲ್ ಪಂಜಾಬಿ ಭಾಷೆಗೆ ಅನುವಾದಿಸಿ ಹಾಡಿದ್ದಾರೆ. ಹೋರಾಟನಿರತ ರೈತರೇ ಆರಂಭಿಸಿರುವ ಯೂಟೂಬ್ ಚಾನೆಲ್‌ನಲ್ಲಿ ಇದು ಕೇವಲ ಒಂದು ವಾರದಲ್ಲಿ 2 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿ ದಾಖಲೆ ಮಾಡಿದೆ. ಪ್ರಸ್ತುತ ಈ ಹಾಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ದೆಹಲಿಯ ಶಾಲೆಯೊಂದರಲ್ಲಿ ಗಣಿತ ಪಾಠ ಮಾಡುವ ಸಾಹಿಲ್, “ಸಾಮಾಜಿಕ ಪ್ರಜ್ಞೆಯಿರುವ ಸಂಗೀತಗಾರನಿಗೆ ಭಯ, ನಿಂದನೆ ಮತ್ತು ನಿರಾಶೆಗಳು ಒಂದು ಕೋರ್ಸ್‌ಗೆ ಸಮನಾಗಿರುತ್ತದೆ. ನಮ್ಮ ಪದಗಳು ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ರೈತರಿಗೆ ಬಲ ನೀಡಿದರೆ ಅದು ಸಾರ್ಥಕವಾದಂತೆ. ಕೇಂದ್ರವು ತನ್ನ ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯಲು ಈ ಮೂಲಕ ಒತ್ತಾಯಿಸುತ್ತಿದ್ದೇನೆ” ಎಂದು ಪಿಟಿಐಗೆ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ದೇಶದಾದ್ಯಂತ ನಡೆದ ಸಿಎಎ ಪ್ರತಿಭಟನೆಯ ಸಂದರ್ಭದಲ್ಲಿ ‘ಬೆಲ್ಲಾ ಚಾವ್’ ಹಾಡನ್ನು ಹಿಂದಿಗೆ ಅನುವಾದ ಮಾಡಿ ಹಾಡಲಾಗಿತ್ತು. ಕಳೆದ ಜುಲೈನಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ‘ಮನಿ ಹೈಸ್ಟ್‌’ ವೆಬ್‌ ಸರಣಿಯಲ್ಲಿ ಈ ಮೂಲ ಹಾಡನ್ನು ಬಳಸಿಕೊಳ್ಳಲಾಗಿತ್ತು. ಇದರಿಂದ ವಿಶ್ವದಾದ್ಯಂತ ಈ ಹಾಡು ಇನ್ನಷ್ಟು ಜನಪ್ರಿಯತೆ ಗಳಿಸಿತು.

ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

“ನಾನು ಈಗಾಗಲೇ ಭಾರತದ ವಿವಿಧ ವಿದ್ಯಾರ್ಥಿ ಪ್ರತಿಭಟನೆಗಳಲ್ಲಿ ‘ಬೆಲ್ಲಾ ಚಾವ್’ ಹಾಡಿನ ಹಿಂದಿ ಅನುವಾದ ‘ವಾಪಾಸ್ ಜಾವೊ’ ಹಾಡನ್ನು ರಚಿಸಿದ್ದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ನಂತರ ಇದನ್ನು ಸಿಎಎ ಪ್ರತಿಭಟನೆಗಳಲ್ಲಿ ಹಲವು ಬಾರಿ ಬಳಸಿಕೊಳ್ಳಲಾಗಿದೆ. ಈ ಹಾಡಿನ ಇತಿಹಾಸವನ್ನು ಗಮನಿಸಿದಾಗ ಇದು ರೈತರ ಪ್ರತಿಭಟನೆಗೆ ಚೆನ್ನಾಗಿ ಹೊಂದುತ್ತದೆ ಎಂದು ನಾನು ಭಾವಿಸಿದೆ” ಎಂದು ಸಾಹಿಲ್ ಹೇಳಿದರು.

ಉತ್ತರ ಇಟಲಿಯಲ್ಲಿ 19 ನೇ ಶತಮಾನದ ಉತ್ತರಾರ್ಧದಲ್ಲಿ “ಬೆಲ್ಲಾ ಚಾವ್” (ಗುಡ್‌ಬೈ ಬ್ಯೂಟಿಫುಲ್) ಹಾಡು ಹುಟ್ಟಿಕೊಂಡಿತ್ತು. ಅಲ್ಲಿನ ಮಹಿಳಾ ರೈತರು ಕಠಿಣ ಕೆಲಸದ ಸಂದರ್ಭಗಳಲ್ಲಿ ಇದನ್ನು ಹಾಡುತ್ತಿದ್ದರು. ನಂತರ ಈ ಹಾಡನ್ನು ಫ್ಯಾಸಿಸ್ಟ್ ವಿರೋಧಿ ಗುಂಪುಗಳ ಸದಸ್ಯರು ಎರಡನೇ ವಿಶ್ವಯುದ್ಧದ ಸಮಯದಲ್ಲಿ ಬೆನಿಟೊ ಮುಸೊಲೊನಿ ವಿರುದ್ಧ ಬಳಸಿದ್ದರು. ನಂತರದ ವರ್ಷಗಳಲ್ಲಿ ಇದು ಗ್ರೀಸ್, ಫ್ರಾನ್ಸ್ ಸೇರಿದಂತೆ ಜಗತ್ತಿನಾದ್ಯಂತ ನಡೆಯುವ ಎಲ್ಲಾ ಪ್ರತಿಭಟನೆಯಲ್ಲಿಯೂ ಬಳಕೆಗೆ ಬಂತು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಹಾಡಿನ ಪಂಜಾಬಿ ಸಾಹಿತ್ಯದ ಅನುವಾದದಲ್ಲಿ, ಸಾಮಾಜಿಕ ಸಾಮರಸ್ಯ, ನಾಗರಿಕ ಸಮಾಜದ ಅಭಿಯಾನ, ರೈತರ ತ್ಯಾಗ, ಕೇಂದ್ರದ ಕೃಷಿ ಕಾನೂನುಗಳಿಗೆ ವಿರೋಧ, ಪ್ರತಿಭಟನೆ ಮುಂತಾದ ಅಂಶಗಳು ಧ್ವನಿಸಿದೆ.

ದೆಹಲಿ ಮತ್ತು ಹರಿಯಾಣ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 29 ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ತಮ್ಮ ವಿರೋಧವನ್ನು ಇನ್ನಷ್ಟು ತೀವ್ರಗೊಳಿಸುವ ಉದ್ದೇಶದಿಂದ ಇತ್ತೀಚೆಗೆ ದೇಶದಾದ್ಯಂತ ಉಪವಾಸಕ್ಕೆ ಕರೆ ನೀಡಿದ್ದರು.

ಇದನ್ನೂ ಓದಿ: ಸರ್ವಾಧಿಕಾರಿ ಹಿಟ್ಲರ್ ಮತ್ತು ಆತನ ಬಗೆಗಿನ ಗಮನ ಸೆಳೆದ ವ್ಯಂಗ್ಯಚಿತ್ರಗಳು

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ’ಶಗ್ಗಿ ಬೈನ್’ಗೆ ಬುಕರ್: ಜೀವನ ಸಂಘರ್ಷವೇ ಈ ಕತೆಗಾರನ ಜೀವಾಳ ಮತ್ತು ಬಂಡವಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...