Homeಕರ್ನಾಟಕಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

ಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

- Advertisement -
- Advertisement -

ಹೌದು ನಿಮಗೆ ಆಶ್ಚರ್ಯವಾದರು ಸಹ ಇದು ಸತ್ಯ. ಇಂತಹದೊಂದು ಅಪರೂಪದ ಪ್ರಕ್ರಿಯೆಗೆ ಬಳ್ಳಾರಿ ಚುನಾವಣಾ ಕಣ ಸಾಕ್ಷಿಯಾಗಿದೆ. ಕೇವಲ ಆರು ತಿಂಗಳ ಹಿಂದೆ ನಡೆದ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪನವರು ಪ್ರಚಂಡ ಬಹುಮತದೊಂದಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗಿನ ಸಾರ್ವತ್ರಿಕ ಚುನಾವಣೆಯ ಕಣದಲ್ಲಿಯೂ ಅವರೇ ಕಾಂಗ್ರೆಸ್ ನ ಅಭ್ಯರ್ಥಿ. ಇವರ ವಿರುದ್ಧದ ಪ್ರತಿಸ್ಪರ್ಧಿ ಬಿಜೆಪಿಯಿಂದ ದೇವೆಂದ್ರಪ್ಪನವರು ಕಣಕ್ಕಿಳಿದಿದ್ದಾರೆ.

ವಿಶೇಷವೆನೆಂದರೆ ಬಳ್ಳಾರಿಯ ಹಾಲಿ ಜಿ.ಪಂ ಸದಸ್ಯೆ ಸುಶೀಲಮ್ಮನವರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದವರು. ಅವರ ಪತಿಯೇ ಬಿಜೆಪಿಯಿಂದ ಸ್ಪರ್ಧಿಸಿರುವ ದೇವೆಂದ್ರಪ್ಪನವರಾಗಿದ್ದಾರೆ. ಈ ಮುಂಚೆ ದೇವೆಂದ್ರಪ್ಪನವರು ಸಹ ಕಾಂಗ್ರೆಸ್ ನಲ್ಲಿದ್ದರು. ಕಳೆದ ಉಪಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲು ಅಭ್ಯರ್ಥಿಗಳ ಕೊರತೆ ಕಾಡಿತ್ತು. ಹರಕೆಯ ಕುರಿಯಾಗಲು ಯಾರು ಸಿಗದಿದ್ದಾಗ ಮುಂದೆ ಬಂದವರೆ ದೇವೆಂದ್ರಪ್ಪ.

ಹಾಗೆ ನೋಡಿದರೆ ಹರಪನಹಳ್ಳಿಯ ನಿವಾಸಿಗಳಾದ ದೇವೆಂದ್ರಪ್ಪ ಮತ್ತು ಸುಶೀಲಮ್ಮ ದಂಪತಿಗಳು ಕಾಂಗ್ರೆಸ್ ನಲ್ಲಿದ್ದರೂ ಕೂಡ ಬಿಜೆಪಿ ಬಿ.ಶ್ರೀರಾಮುಲುರವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದವರಾಗಿದ್ದರು. ಹರಪನಹಳ್ಳಿ ತಾಲ್ಲೂಕಿನ ಜಿ.ಪಂ ಸ್ಥಾನಕ್ಕೆ ಸುಶೀಲಮ್ಮನವರು ಕಾಂಗೈನಿಂದ ಆಯ್ಕೆಯಾಗಿದ್ದರು. ಆದರೆ ಅವರ ಪತಿ ದೇವೆಂದ್ರಪ್ಪನವರು ಖಾಲಿ ಇದ್ದರು. ಈಗ ಬಿಜೆಪಿಗೆ ಅಭ್ಯರ್ಥಿಗಳಿಲ್ಲದ ಸಂದರ್ಭವನ್ನು ಬಳಸಿಕೊಂಡು ಬಿಜೆಪಿ ಹಾರಿದ್ದಾರೆ. ಆದರೆ ಅವರ ಪತ್ನಿ ಸುಶೀಲಮ್ಮನವರು ಈಗಲು ಸಹ ಕಾಂಗ್ರೆಸ್ ನ ಅಭ್ಯರ್ಥಿ ವಿ.ಎಸ್ ಉಗ್ರಪ್ಪನವರ ಪರ ಪ್ರಚಾರ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಎಂ.ಎಲ್.ಸಿ ಅಲ್ಲಂ ವೀರಭದ್ರಪ್ಪ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಪ್ರತಿ ಲೋಕಸಭಾ ಚುನಾವಣೆಯಲ್ಲಿಯೂ ರಣರಂಗವಾಗುತ್ತಿತ್ತು. ಅಷ್ಟು ಸುಲಭಕ್ಕೆ ಸೋಲಪ್ಪಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಿದ್ದರಿರಲಿಲ್ಲ. ಕಳೆದ ಐದು ವರ್ಷಗಳ ಹಿಂದೆ ರೆಡ್ಡಿ ಸಹೋದರರ ರಿಪಬ್ಲಿಕ್ ಆಗಿದ್ದ ಬಳ್ಳಾರಿಯಲ್ಲಿ ಇಂದು ಚುನಾವಣೆಗೂ ಮುನ್ನವೇ ಬಿಜೆಪಿ ಸೋಲಪ್ಪಿಕೊಂಡಿರುವುದು ನೋಡಿದರ ಅವರ ಮಹಾನ್ ತಪ್ಪುಗಳಿಗೆ ತಕ್ಕ ಶಿಕ್ಷೆ ಸಿಕ್ಕಿದ ಹಾಗೆ ಆಗಿದೆ. ಹಣದಿಂದ ಜನರನ್ನು ಕೊಂಡುಕೊಳ್ಳುತ್ತೇವೆಂಬ ಅವರ ಅಹಂಕಾರಕ್ಕೆ ದೊಡ್ಡ ಕೊಡಲಿ ಪೆಟ್ಟು ಬಿದ್ದಿದೆ. 2018ರ ವಿಧಾನಸಭಾ ಚುನಾಚಣೆಗುವರೆಗೂ ಸದ್ದು ಮಾಡುತ್ತಿದ್ದ ಬಿ.ಶ್ರೀರಾಮುಲು ಈಗ ಸೋತು ಸುಣ್ಣವಾಗಿದ್ದಾರೆ.

ಶ್ರೀರಾಮುರವರ ಸಹೋದರಿ ಶಾಂತರವರು 2009ರಲ್ಲಿ ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಕಣಕ್ಕಿಳಿದು ಸಂಸದರಾಗಿದ್ದರೆ, 2014ರಲ್ಲಿ ಬಿ ಶ್ರೀರಾಮು ಜಯಶಾಲಿಯಾಗಿ ಸಂಸತ್ ಪ್ರವೇಶಿಸಿದ್ದರು. 2ಸಾವಿರ ಮತಗಳ ಅಂತರದಲ್ಲಿ 2009ರಲ್ಲಿ ಕಾಂಗ್ರೆಸ್ ಅಲ್ಲಿ ಸೋತಿದ್ದರೆ 2014ರಲ್ಲಿ ಸೋಲಿನ ಅಂತರ ಒಂದು ಲಕ್ಷಕ್ಕೆ ಏರಿಕೆಯಾಗಿತ್ತು. ಆದರೆ 2018ರಲ್ಲಿ ಬಿ.ಶ್ರೀರಾಮು ವಿಧಾನಸಭೆಗೆ ಆಯ್ಕೆ ಆದ ಕಾರಣ ತೆರವಾದ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಚಿಂತಕ ವಿ.ಎಸ್ ಉಗ್ರಪ್ಪ ಕಣಕ್ಕಿಳಿದಿದ್ದರು. ಮತ್ತೆ ರಾಮುಲು ಸಹೋದರಿ ಜೆ ಶಾಂತ ಬಿಜೆಪಿಯಿಂದ ಪ್ರತಿಸ್ಪರ್ಧಿಯಾಗಿದ್ದರು. ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ. ಜಿದ್ದಾಜಿದ್ದಿನ ಕಾಳಗದಲ್ಲಿ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪ 2,43,161 ಮತಗಳ ಭಾರೀ ಅಂತರದಿಂದ ಗೆದ್ದು ಬಿಜೆಪಿಯನ್ನು ಧೂಳಿಪಟ ಮಾಡಿದ್ದರು.

Chief Minister BS Yeddyurappa and Opposition leader Siddaramaiah seen in an argument during Assembly Session at Vidhana Soudha in Bangalore on Friday. -KPN

ಗಣಿರೆಡ್ಡಿಗಳ ಮಿತಿಮೀರಿದ ಹಾವಳಿ ವಿರುದ್ಧ ತೊಡೆ ತಟ್ಟಿದ್ದ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿ ಇತಿಹಾಸ ಸೃಷ್ಟಿಸಿದ್ದರು. ನಂತರ ಅಲ್ಲಿನ ವಾತವಾರಣ ನಿಧಾನವಾಗಿ ಬದಲಾಗಲು ಆರಂಭವಾಯಿತು. ಈಗ ಅಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಪಾರಮ್ಯ ಮೆರೆದಿದೆ. ಹಾಗಾಗಿ ಬಿಜೆಪಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿಯಾಗಿತ್ತು. ಹಾಗಾಗಿ ಯಾರು ಕಣಕ್ಕಿಳಿಯಲು ಮನಸ್ಸ ಮಾಡಲಿಲ್ಲ. ಕೊನೆಗೆ ರಾಮುಲು ಹರಕೆಯ ಕುರಿ ದೇವೆಂದ್ರಪ್ಪನನ್ನು ತಂದು ಕಣಕ್ಕೆ ಕಟ್ಟಿದ್ದಾರೆ. ದೇವೆಂದ್ರಪ್ಪನೂ ಕಾಟಚಾರದ ಪ್ರಚಾರ ಮಾಡಿದರೆ ಕಾಂಗ್ರೆಸ್ ಪರ ಆತನ ಪತ್ನಿಯೂ ಸಹ ಕಾಟಚಾರದ ಪ್ರಚಾರವನ್ನಷ್ಟೇ ಮಾಡಲಿದ್ದಾರೆ. ಒಟ್ಟಿನಲ್ಲಿ ಫಲಿತಾಂಶಕ್ಕೆ ಮುನ್ನ ಕಾಂಗ್ರೆಸ್ ಹಬ್ಬ ಆಚರಿಸುತ್ತಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...