Homeಕರ್ನಾಟಕಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

ಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

- Advertisement -
- Advertisement -

ಹೌದು ನಿಮಗೆ ಆಶ್ಚರ್ಯವಾದರು ಸಹ ಇದು ಸತ್ಯ. ಇಂತಹದೊಂದು ಅಪರೂಪದ ಪ್ರಕ್ರಿಯೆಗೆ ಬಳ್ಳಾರಿ ಚುನಾವಣಾ ಕಣ ಸಾಕ್ಷಿಯಾಗಿದೆ. ಕೇವಲ ಆರು ತಿಂಗಳ ಹಿಂದೆ ನಡೆದ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪನವರು ಪ್ರಚಂಡ ಬಹುಮತದೊಂದಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗಿನ ಸಾರ್ವತ್ರಿಕ ಚುನಾವಣೆಯ ಕಣದಲ್ಲಿಯೂ ಅವರೇ ಕಾಂಗ್ರೆಸ್ ನ ಅಭ್ಯರ್ಥಿ. ಇವರ ವಿರುದ್ಧದ ಪ್ರತಿಸ್ಪರ್ಧಿ ಬಿಜೆಪಿಯಿಂದ ದೇವೆಂದ್ರಪ್ಪನವರು ಕಣಕ್ಕಿಳಿದಿದ್ದಾರೆ.

ವಿಶೇಷವೆನೆಂದರೆ ಬಳ್ಳಾರಿಯ ಹಾಲಿ ಜಿ.ಪಂ ಸದಸ್ಯೆ ಸುಶೀಲಮ್ಮನವರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದವರು. ಅವರ ಪತಿಯೇ ಬಿಜೆಪಿಯಿಂದ ಸ್ಪರ್ಧಿಸಿರುವ ದೇವೆಂದ್ರಪ್ಪನವರಾಗಿದ್ದಾರೆ. ಈ ಮುಂಚೆ ದೇವೆಂದ್ರಪ್ಪನವರು ಸಹ ಕಾಂಗ್ರೆಸ್ ನಲ್ಲಿದ್ದರು. ಕಳೆದ ಉಪಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲು ಅಭ್ಯರ್ಥಿಗಳ ಕೊರತೆ ಕಾಡಿತ್ತು. ಹರಕೆಯ ಕುರಿಯಾಗಲು ಯಾರು ಸಿಗದಿದ್ದಾಗ ಮುಂದೆ ಬಂದವರೆ ದೇವೆಂದ್ರಪ್ಪ.

ಹಾಗೆ ನೋಡಿದರೆ ಹರಪನಹಳ್ಳಿಯ ನಿವಾಸಿಗಳಾದ ದೇವೆಂದ್ರಪ್ಪ ಮತ್ತು ಸುಶೀಲಮ್ಮ ದಂಪತಿಗಳು ಕಾಂಗ್ರೆಸ್ ನಲ್ಲಿದ್ದರೂ ಕೂಡ ಬಿಜೆಪಿ ಬಿ.ಶ್ರೀರಾಮುಲುರವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದವರಾಗಿದ್ದರು. ಹರಪನಹಳ್ಳಿ ತಾಲ್ಲೂಕಿನ ಜಿ.ಪಂ ಸ್ಥಾನಕ್ಕೆ ಸುಶೀಲಮ್ಮನವರು ಕಾಂಗೈನಿಂದ ಆಯ್ಕೆಯಾಗಿದ್ದರು. ಆದರೆ ಅವರ ಪತಿ ದೇವೆಂದ್ರಪ್ಪನವರು ಖಾಲಿ ಇದ್ದರು. ಈಗ ಬಿಜೆಪಿಗೆ ಅಭ್ಯರ್ಥಿಗಳಿಲ್ಲದ ಸಂದರ್ಭವನ್ನು ಬಳಸಿಕೊಂಡು ಬಿಜೆಪಿ ಹಾರಿದ್ದಾರೆ. ಆದರೆ ಅವರ ಪತ್ನಿ ಸುಶೀಲಮ್ಮನವರು ಈಗಲು ಸಹ ಕಾಂಗ್ರೆಸ್ ನ ಅಭ್ಯರ್ಥಿ ವಿ.ಎಸ್ ಉಗ್ರಪ್ಪನವರ ಪರ ಪ್ರಚಾರ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಎಂ.ಎಲ್.ಸಿ ಅಲ್ಲಂ ವೀರಭದ್ರಪ್ಪ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಪ್ರತಿ ಲೋಕಸಭಾ ಚುನಾವಣೆಯಲ್ಲಿಯೂ ರಣರಂಗವಾಗುತ್ತಿತ್ತು. ಅಷ್ಟು ಸುಲಭಕ್ಕೆ ಸೋಲಪ್ಪಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಿದ್ದರಿರಲಿಲ್ಲ. ಕಳೆದ ಐದು ವರ್ಷಗಳ ಹಿಂದೆ ರೆಡ್ಡಿ ಸಹೋದರರ ರಿಪಬ್ಲಿಕ್ ಆಗಿದ್ದ ಬಳ್ಳಾರಿಯಲ್ಲಿ ಇಂದು ಚುನಾವಣೆಗೂ ಮುನ್ನವೇ ಬಿಜೆಪಿ ಸೋಲಪ್ಪಿಕೊಂಡಿರುವುದು ನೋಡಿದರ ಅವರ ಮಹಾನ್ ತಪ್ಪುಗಳಿಗೆ ತಕ್ಕ ಶಿಕ್ಷೆ ಸಿಕ್ಕಿದ ಹಾಗೆ ಆಗಿದೆ. ಹಣದಿಂದ ಜನರನ್ನು ಕೊಂಡುಕೊಳ್ಳುತ್ತೇವೆಂಬ ಅವರ ಅಹಂಕಾರಕ್ಕೆ ದೊಡ್ಡ ಕೊಡಲಿ ಪೆಟ್ಟು ಬಿದ್ದಿದೆ. 2018ರ ವಿಧಾನಸಭಾ ಚುನಾಚಣೆಗುವರೆಗೂ ಸದ್ದು ಮಾಡುತ್ತಿದ್ದ ಬಿ.ಶ್ರೀರಾಮುಲು ಈಗ ಸೋತು ಸುಣ್ಣವಾಗಿದ್ದಾರೆ.

ಶ್ರೀರಾಮುರವರ ಸಹೋದರಿ ಶಾಂತರವರು 2009ರಲ್ಲಿ ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಕಣಕ್ಕಿಳಿದು ಸಂಸದರಾಗಿದ್ದರೆ, 2014ರಲ್ಲಿ ಬಿ ಶ್ರೀರಾಮು ಜಯಶಾಲಿಯಾಗಿ ಸಂಸತ್ ಪ್ರವೇಶಿಸಿದ್ದರು. 2ಸಾವಿರ ಮತಗಳ ಅಂತರದಲ್ಲಿ 2009ರಲ್ಲಿ ಕಾಂಗ್ರೆಸ್ ಅಲ್ಲಿ ಸೋತಿದ್ದರೆ 2014ರಲ್ಲಿ ಸೋಲಿನ ಅಂತರ ಒಂದು ಲಕ್ಷಕ್ಕೆ ಏರಿಕೆಯಾಗಿತ್ತು. ಆದರೆ 2018ರಲ್ಲಿ ಬಿ.ಶ್ರೀರಾಮು ವಿಧಾನಸಭೆಗೆ ಆಯ್ಕೆ ಆದ ಕಾರಣ ತೆರವಾದ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಚಿಂತಕ ವಿ.ಎಸ್ ಉಗ್ರಪ್ಪ ಕಣಕ್ಕಿಳಿದಿದ್ದರು. ಮತ್ತೆ ರಾಮುಲು ಸಹೋದರಿ ಜೆ ಶಾಂತ ಬಿಜೆಪಿಯಿಂದ ಪ್ರತಿಸ್ಪರ್ಧಿಯಾಗಿದ್ದರು. ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ. ಜಿದ್ದಾಜಿದ್ದಿನ ಕಾಳಗದಲ್ಲಿ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪ 2,43,161 ಮತಗಳ ಭಾರೀ ಅಂತರದಿಂದ ಗೆದ್ದು ಬಿಜೆಪಿಯನ್ನು ಧೂಳಿಪಟ ಮಾಡಿದ್ದರು.

Chief Minister BS Yeddyurappa and Opposition leader Siddaramaiah seen in an argument during Assembly Session at Vidhana Soudha in Bangalore on Friday. -KPN

ಗಣಿರೆಡ್ಡಿಗಳ ಮಿತಿಮೀರಿದ ಹಾವಳಿ ವಿರುದ್ಧ ತೊಡೆ ತಟ್ಟಿದ್ದ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿ ಇತಿಹಾಸ ಸೃಷ್ಟಿಸಿದ್ದರು. ನಂತರ ಅಲ್ಲಿನ ವಾತವಾರಣ ನಿಧಾನವಾಗಿ ಬದಲಾಗಲು ಆರಂಭವಾಯಿತು. ಈಗ ಅಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಪಾರಮ್ಯ ಮೆರೆದಿದೆ. ಹಾಗಾಗಿ ಬಿಜೆಪಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿಯಾಗಿತ್ತು. ಹಾಗಾಗಿ ಯಾರು ಕಣಕ್ಕಿಳಿಯಲು ಮನಸ್ಸ ಮಾಡಲಿಲ್ಲ. ಕೊನೆಗೆ ರಾಮುಲು ಹರಕೆಯ ಕುರಿ ದೇವೆಂದ್ರಪ್ಪನನ್ನು ತಂದು ಕಣಕ್ಕೆ ಕಟ್ಟಿದ್ದಾರೆ. ದೇವೆಂದ್ರಪ್ಪನೂ ಕಾಟಚಾರದ ಪ್ರಚಾರ ಮಾಡಿದರೆ ಕಾಂಗ್ರೆಸ್ ಪರ ಆತನ ಪತ್ನಿಯೂ ಸಹ ಕಾಟಚಾರದ ಪ್ರಚಾರವನ್ನಷ್ಟೇ ಮಾಡಲಿದ್ದಾರೆ. ಒಟ್ಟಿನಲ್ಲಿ ಫಲಿತಾಂಶಕ್ಕೆ ಮುನ್ನ ಕಾಂಗ್ರೆಸ್ ಹಬ್ಬ ಆಚರಿಸುತ್ತಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...