Homeಕರ್ನಾಟಕಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

ಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

- Advertisement -
- Advertisement -

ಹೌದು ನಿಮಗೆ ಆಶ್ಚರ್ಯವಾದರು ಸಹ ಇದು ಸತ್ಯ. ಇಂತಹದೊಂದು ಅಪರೂಪದ ಪ್ರಕ್ರಿಯೆಗೆ ಬಳ್ಳಾರಿ ಚುನಾವಣಾ ಕಣ ಸಾಕ್ಷಿಯಾಗಿದೆ. ಕೇವಲ ಆರು ತಿಂಗಳ ಹಿಂದೆ ನಡೆದ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪನವರು ಪ್ರಚಂಡ ಬಹುಮತದೊಂದಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗಿನ ಸಾರ್ವತ್ರಿಕ ಚುನಾವಣೆಯ ಕಣದಲ್ಲಿಯೂ ಅವರೇ ಕಾಂಗ್ರೆಸ್ ನ ಅಭ್ಯರ್ಥಿ. ಇವರ ವಿರುದ್ಧದ ಪ್ರತಿಸ್ಪರ್ಧಿ ಬಿಜೆಪಿಯಿಂದ ದೇವೆಂದ್ರಪ್ಪನವರು ಕಣಕ್ಕಿಳಿದಿದ್ದಾರೆ.

ವಿಶೇಷವೆನೆಂದರೆ ಬಳ್ಳಾರಿಯ ಹಾಲಿ ಜಿ.ಪಂ ಸದಸ್ಯೆ ಸುಶೀಲಮ್ಮನವರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದವರು. ಅವರ ಪತಿಯೇ ಬಿಜೆಪಿಯಿಂದ ಸ್ಪರ್ಧಿಸಿರುವ ದೇವೆಂದ್ರಪ್ಪನವರಾಗಿದ್ದಾರೆ. ಈ ಮುಂಚೆ ದೇವೆಂದ್ರಪ್ಪನವರು ಸಹ ಕಾಂಗ್ರೆಸ್ ನಲ್ಲಿದ್ದರು. ಕಳೆದ ಉಪಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲು ಅಭ್ಯರ್ಥಿಗಳ ಕೊರತೆ ಕಾಡಿತ್ತು. ಹರಕೆಯ ಕುರಿಯಾಗಲು ಯಾರು ಸಿಗದಿದ್ದಾಗ ಮುಂದೆ ಬಂದವರೆ ದೇವೆಂದ್ರಪ್ಪ.

ಹಾಗೆ ನೋಡಿದರೆ ಹರಪನಹಳ್ಳಿಯ ನಿವಾಸಿಗಳಾದ ದೇವೆಂದ್ರಪ್ಪ ಮತ್ತು ಸುಶೀಲಮ್ಮ ದಂಪತಿಗಳು ಕಾಂಗ್ರೆಸ್ ನಲ್ಲಿದ್ದರೂ ಕೂಡ ಬಿಜೆಪಿ ಬಿ.ಶ್ರೀರಾಮುಲುರವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದವರಾಗಿದ್ದರು. ಹರಪನಹಳ್ಳಿ ತಾಲ್ಲೂಕಿನ ಜಿ.ಪಂ ಸ್ಥಾನಕ್ಕೆ ಸುಶೀಲಮ್ಮನವರು ಕಾಂಗೈನಿಂದ ಆಯ್ಕೆಯಾಗಿದ್ದರು. ಆದರೆ ಅವರ ಪತಿ ದೇವೆಂದ್ರಪ್ಪನವರು ಖಾಲಿ ಇದ್ದರು. ಈಗ ಬಿಜೆಪಿಗೆ ಅಭ್ಯರ್ಥಿಗಳಿಲ್ಲದ ಸಂದರ್ಭವನ್ನು ಬಳಸಿಕೊಂಡು ಬಿಜೆಪಿ ಹಾರಿದ್ದಾರೆ. ಆದರೆ ಅವರ ಪತ್ನಿ ಸುಶೀಲಮ್ಮನವರು ಈಗಲು ಸಹ ಕಾಂಗ್ರೆಸ್ ನ ಅಭ್ಯರ್ಥಿ ವಿ.ಎಸ್ ಉಗ್ರಪ್ಪನವರ ಪರ ಪ್ರಚಾರ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಎಂ.ಎಲ್.ಸಿ ಅಲ್ಲಂ ವೀರಭದ್ರಪ್ಪ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಪ್ರತಿ ಲೋಕಸಭಾ ಚುನಾವಣೆಯಲ್ಲಿಯೂ ರಣರಂಗವಾಗುತ್ತಿತ್ತು. ಅಷ್ಟು ಸುಲಭಕ್ಕೆ ಸೋಲಪ್ಪಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಿದ್ದರಿರಲಿಲ್ಲ. ಕಳೆದ ಐದು ವರ್ಷಗಳ ಹಿಂದೆ ರೆಡ್ಡಿ ಸಹೋದರರ ರಿಪಬ್ಲಿಕ್ ಆಗಿದ್ದ ಬಳ್ಳಾರಿಯಲ್ಲಿ ಇಂದು ಚುನಾವಣೆಗೂ ಮುನ್ನವೇ ಬಿಜೆಪಿ ಸೋಲಪ್ಪಿಕೊಂಡಿರುವುದು ನೋಡಿದರ ಅವರ ಮಹಾನ್ ತಪ್ಪುಗಳಿಗೆ ತಕ್ಕ ಶಿಕ್ಷೆ ಸಿಕ್ಕಿದ ಹಾಗೆ ಆಗಿದೆ. ಹಣದಿಂದ ಜನರನ್ನು ಕೊಂಡುಕೊಳ್ಳುತ್ತೇವೆಂಬ ಅವರ ಅಹಂಕಾರಕ್ಕೆ ದೊಡ್ಡ ಕೊಡಲಿ ಪೆಟ್ಟು ಬಿದ್ದಿದೆ. 2018ರ ವಿಧಾನಸಭಾ ಚುನಾಚಣೆಗುವರೆಗೂ ಸದ್ದು ಮಾಡುತ್ತಿದ್ದ ಬಿ.ಶ್ರೀರಾಮುಲು ಈಗ ಸೋತು ಸುಣ್ಣವಾಗಿದ್ದಾರೆ.

ಶ್ರೀರಾಮುರವರ ಸಹೋದರಿ ಶಾಂತರವರು 2009ರಲ್ಲಿ ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಕಣಕ್ಕಿಳಿದು ಸಂಸದರಾಗಿದ್ದರೆ, 2014ರಲ್ಲಿ ಬಿ ಶ್ರೀರಾಮು ಜಯಶಾಲಿಯಾಗಿ ಸಂಸತ್ ಪ್ರವೇಶಿಸಿದ್ದರು. 2ಸಾವಿರ ಮತಗಳ ಅಂತರದಲ್ಲಿ 2009ರಲ್ಲಿ ಕಾಂಗ್ರೆಸ್ ಅಲ್ಲಿ ಸೋತಿದ್ದರೆ 2014ರಲ್ಲಿ ಸೋಲಿನ ಅಂತರ ಒಂದು ಲಕ್ಷಕ್ಕೆ ಏರಿಕೆಯಾಗಿತ್ತು. ಆದರೆ 2018ರಲ್ಲಿ ಬಿ.ಶ್ರೀರಾಮು ವಿಧಾನಸಭೆಗೆ ಆಯ್ಕೆ ಆದ ಕಾರಣ ತೆರವಾದ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಚಿಂತಕ ವಿ.ಎಸ್ ಉಗ್ರಪ್ಪ ಕಣಕ್ಕಿಳಿದಿದ್ದರು. ಮತ್ತೆ ರಾಮುಲು ಸಹೋದರಿ ಜೆ ಶಾಂತ ಬಿಜೆಪಿಯಿಂದ ಪ್ರತಿಸ್ಪರ್ಧಿಯಾಗಿದ್ದರು. ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ. ಜಿದ್ದಾಜಿದ್ದಿನ ಕಾಳಗದಲ್ಲಿ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪ 2,43,161 ಮತಗಳ ಭಾರೀ ಅಂತರದಿಂದ ಗೆದ್ದು ಬಿಜೆಪಿಯನ್ನು ಧೂಳಿಪಟ ಮಾಡಿದ್ದರು.

Chief Minister BS Yeddyurappa and Opposition leader Siddaramaiah seen in an argument during Assembly Session at Vidhana Soudha in Bangalore on Friday. -KPN

ಗಣಿರೆಡ್ಡಿಗಳ ಮಿತಿಮೀರಿದ ಹಾವಳಿ ವಿರುದ್ಧ ತೊಡೆ ತಟ್ಟಿದ್ದ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿ ಇತಿಹಾಸ ಸೃಷ್ಟಿಸಿದ್ದರು. ನಂತರ ಅಲ್ಲಿನ ವಾತವಾರಣ ನಿಧಾನವಾಗಿ ಬದಲಾಗಲು ಆರಂಭವಾಯಿತು. ಈಗ ಅಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಪಾರಮ್ಯ ಮೆರೆದಿದೆ. ಹಾಗಾಗಿ ಬಿಜೆಪಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿಯಾಗಿತ್ತು. ಹಾಗಾಗಿ ಯಾರು ಕಣಕ್ಕಿಳಿಯಲು ಮನಸ್ಸ ಮಾಡಲಿಲ್ಲ. ಕೊನೆಗೆ ರಾಮುಲು ಹರಕೆಯ ಕುರಿ ದೇವೆಂದ್ರಪ್ಪನನ್ನು ತಂದು ಕಣಕ್ಕೆ ಕಟ್ಟಿದ್ದಾರೆ. ದೇವೆಂದ್ರಪ್ಪನೂ ಕಾಟಚಾರದ ಪ್ರಚಾರ ಮಾಡಿದರೆ ಕಾಂಗ್ರೆಸ್ ಪರ ಆತನ ಪತ್ನಿಯೂ ಸಹ ಕಾಟಚಾರದ ಪ್ರಚಾರವನ್ನಷ್ಟೇ ಮಾಡಲಿದ್ದಾರೆ. ಒಟ್ಟಿನಲ್ಲಿ ಫಲಿತಾಂಶಕ್ಕೆ ಮುನ್ನ ಕಾಂಗ್ರೆಸ್ ಹಬ್ಬ ಆಚರಿಸುತ್ತಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...