Homeಕರ್ನಾಟಕಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

ಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

- Advertisement -
- Advertisement -

ಹೌದು ನಿಮಗೆ ಆಶ್ಚರ್ಯವಾದರು ಸಹ ಇದು ಸತ್ಯ. ಇಂತಹದೊಂದು ಅಪರೂಪದ ಪ್ರಕ್ರಿಯೆಗೆ ಬಳ್ಳಾರಿ ಚುನಾವಣಾ ಕಣ ಸಾಕ್ಷಿಯಾಗಿದೆ. ಕೇವಲ ಆರು ತಿಂಗಳ ಹಿಂದೆ ನಡೆದ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪನವರು ಪ್ರಚಂಡ ಬಹುಮತದೊಂದಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗಿನ ಸಾರ್ವತ್ರಿಕ ಚುನಾವಣೆಯ ಕಣದಲ್ಲಿಯೂ ಅವರೇ ಕಾಂಗ್ರೆಸ್ ನ ಅಭ್ಯರ್ಥಿ. ಇವರ ವಿರುದ್ಧದ ಪ್ರತಿಸ್ಪರ್ಧಿ ಬಿಜೆಪಿಯಿಂದ ದೇವೆಂದ್ರಪ್ಪನವರು ಕಣಕ್ಕಿಳಿದಿದ್ದಾರೆ.

ವಿಶೇಷವೆನೆಂದರೆ ಬಳ್ಳಾರಿಯ ಹಾಲಿ ಜಿ.ಪಂ ಸದಸ್ಯೆ ಸುಶೀಲಮ್ಮನವರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದವರು. ಅವರ ಪತಿಯೇ ಬಿಜೆಪಿಯಿಂದ ಸ್ಪರ್ಧಿಸಿರುವ ದೇವೆಂದ್ರಪ್ಪನವರಾಗಿದ್ದಾರೆ. ಈ ಮುಂಚೆ ದೇವೆಂದ್ರಪ್ಪನವರು ಸಹ ಕಾಂಗ್ರೆಸ್ ನಲ್ಲಿದ್ದರು. ಕಳೆದ ಉಪಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲು ಅಭ್ಯರ್ಥಿಗಳ ಕೊರತೆ ಕಾಡಿತ್ತು. ಹರಕೆಯ ಕುರಿಯಾಗಲು ಯಾರು ಸಿಗದಿದ್ದಾಗ ಮುಂದೆ ಬಂದವರೆ ದೇವೆಂದ್ರಪ್ಪ.

ಹಾಗೆ ನೋಡಿದರೆ ಹರಪನಹಳ್ಳಿಯ ನಿವಾಸಿಗಳಾದ ದೇವೆಂದ್ರಪ್ಪ ಮತ್ತು ಸುಶೀಲಮ್ಮ ದಂಪತಿಗಳು ಕಾಂಗ್ರೆಸ್ ನಲ್ಲಿದ್ದರೂ ಕೂಡ ಬಿಜೆಪಿ ಬಿ.ಶ್ರೀರಾಮುಲುರವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದವರಾಗಿದ್ದರು. ಹರಪನಹಳ್ಳಿ ತಾಲ್ಲೂಕಿನ ಜಿ.ಪಂ ಸ್ಥಾನಕ್ಕೆ ಸುಶೀಲಮ್ಮನವರು ಕಾಂಗೈನಿಂದ ಆಯ್ಕೆಯಾಗಿದ್ದರು. ಆದರೆ ಅವರ ಪತಿ ದೇವೆಂದ್ರಪ್ಪನವರು ಖಾಲಿ ಇದ್ದರು. ಈಗ ಬಿಜೆಪಿಗೆ ಅಭ್ಯರ್ಥಿಗಳಿಲ್ಲದ ಸಂದರ್ಭವನ್ನು ಬಳಸಿಕೊಂಡು ಬಿಜೆಪಿ ಹಾರಿದ್ದಾರೆ. ಆದರೆ ಅವರ ಪತ್ನಿ ಸುಶೀಲಮ್ಮನವರು ಈಗಲು ಸಹ ಕಾಂಗ್ರೆಸ್ ನ ಅಭ್ಯರ್ಥಿ ವಿ.ಎಸ್ ಉಗ್ರಪ್ಪನವರ ಪರ ಪ್ರಚಾರ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಎಂ.ಎಲ್.ಸಿ ಅಲ್ಲಂ ವೀರಭದ್ರಪ್ಪ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಪ್ರತಿ ಲೋಕಸಭಾ ಚುನಾವಣೆಯಲ್ಲಿಯೂ ರಣರಂಗವಾಗುತ್ತಿತ್ತು. ಅಷ್ಟು ಸುಲಭಕ್ಕೆ ಸೋಲಪ್ಪಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಿದ್ದರಿರಲಿಲ್ಲ. ಕಳೆದ ಐದು ವರ್ಷಗಳ ಹಿಂದೆ ರೆಡ್ಡಿ ಸಹೋದರರ ರಿಪಬ್ಲಿಕ್ ಆಗಿದ್ದ ಬಳ್ಳಾರಿಯಲ್ಲಿ ಇಂದು ಚುನಾವಣೆಗೂ ಮುನ್ನವೇ ಬಿಜೆಪಿ ಸೋಲಪ್ಪಿಕೊಂಡಿರುವುದು ನೋಡಿದರ ಅವರ ಮಹಾನ್ ತಪ್ಪುಗಳಿಗೆ ತಕ್ಕ ಶಿಕ್ಷೆ ಸಿಕ್ಕಿದ ಹಾಗೆ ಆಗಿದೆ. ಹಣದಿಂದ ಜನರನ್ನು ಕೊಂಡುಕೊಳ್ಳುತ್ತೇವೆಂಬ ಅವರ ಅಹಂಕಾರಕ್ಕೆ ದೊಡ್ಡ ಕೊಡಲಿ ಪೆಟ್ಟು ಬಿದ್ದಿದೆ. 2018ರ ವಿಧಾನಸಭಾ ಚುನಾಚಣೆಗುವರೆಗೂ ಸದ್ದು ಮಾಡುತ್ತಿದ್ದ ಬಿ.ಶ್ರೀರಾಮುಲು ಈಗ ಸೋತು ಸುಣ್ಣವಾಗಿದ್ದಾರೆ.

ಶ್ರೀರಾಮುರವರ ಸಹೋದರಿ ಶಾಂತರವರು 2009ರಲ್ಲಿ ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಕಣಕ್ಕಿಳಿದು ಸಂಸದರಾಗಿದ್ದರೆ, 2014ರಲ್ಲಿ ಬಿ ಶ್ರೀರಾಮು ಜಯಶಾಲಿಯಾಗಿ ಸಂಸತ್ ಪ್ರವೇಶಿಸಿದ್ದರು. 2ಸಾವಿರ ಮತಗಳ ಅಂತರದಲ್ಲಿ 2009ರಲ್ಲಿ ಕಾಂಗ್ರೆಸ್ ಅಲ್ಲಿ ಸೋತಿದ್ದರೆ 2014ರಲ್ಲಿ ಸೋಲಿನ ಅಂತರ ಒಂದು ಲಕ್ಷಕ್ಕೆ ಏರಿಕೆಯಾಗಿತ್ತು. ಆದರೆ 2018ರಲ್ಲಿ ಬಿ.ಶ್ರೀರಾಮು ವಿಧಾನಸಭೆಗೆ ಆಯ್ಕೆ ಆದ ಕಾರಣ ತೆರವಾದ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಚಿಂತಕ ವಿ.ಎಸ್ ಉಗ್ರಪ್ಪ ಕಣಕ್ಕಿಳಿದಿದ್ದರು. ಮತ್ತೆ ರಾಮುಲು ಸಹೋದರಿ ಜೆ ಶಾಂತ ಬಿಜೆಪಿಯಿಂದ ಪ್ರತಿಸ್ಪರ್ಧಿಯಾಗಿದ್ದರು. ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ. ಜಿದ್ದಾಜಿದ್ದಿನ ಕಾಳಗದಲ್ಲಿ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪ 2,43,161 ಮತಗಳ ಭಾರೀ ಅಂತರದಿಂದ ಗೆದ್ದು ಬಿಜೆಪಿಯನ್ನು ಧೂಳಿಪಟ ಮಾಡಿದ್ದರು.

Chief Minister BS Yeddyurappa and Opposition leader Siddaramaiah seen in an argument during Assembly Session at Vidhana Soudha in Bangalore on Friday. -KPN

ಗಣಿರೆಡ್ಡಿಗಳ ಮಿತಿಮೀರಿದ ಹಾವಳಿ ವಿರುದ್ಧ ತೊಡೆ ತಟ್ಟಿದ್ದ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿ ಇತಿಹಾಸ ಸೃಷ್ಟಿಸಿದ್ದರು. ನಂತರ ಅಲ್ಲಿನ ವಾತವಾರಣ ನಿಧಾನವಾಗಿ ಬದಲಾಗಲು ಆರಂಭವಾಯಿತು. ಈಗ ಅಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಪಾರಮ್ಯ ಮೆರೆದಿದೆ. ಹಾಗಾಗಿ ಬಿಜೆಪಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿಯಾಗಿತ್ತು. ಹಾಗಾಗಿ ಯಾರು ಕಣಕ್ಕಿಳಿಯಲು ಮನಸ್ಸ ಮಾಡಲಿಲ್ಲ. ಕೊನೆಗೆ ರಾಮುಲು ಹರಕೆಯ ಕುರಿ ದೇವೆಂದ್ರಪ್ಪನನ್ನು ತಂದು ಕಣಕ್ಕೆ ಕಟ್ಟಿದ್ದಾರೆ. ದೇವೆಂದ್ರಪ್ಪನೂ ಕಾಟಚಾರದ ಪ್ರಚಾರ ಮಾಡಿದರೆ ಕಾಂಗ್ರೆಸ್ ಪರ ಆತನ ಪತ್ನಿಯೂ ಸಹ ಕಾಟಚಾರದ ಪ್ರಚಾರವನ್ನಷ್ಟೇ ಮಾಡಲಿದ್ದಾರೆ. ಒಟ್ಟಿನಲ್ಲಿ ಫಲಿತಾಂಶಕ್ಕೆ ಮುನ್ನ ಕಾಂಗ್ರೆಸ್ ಹಬ್ಬ ಆಚರಿಸುತ್ತಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...