Homeಕರ್ನಾಟಕಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

ಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

- Advertisement -
- Advertisement -

ಹೌದು ನಿಮಗೆ ಆಶ್ಚರ್ಯವಾದರು ಸಹ ಇದು ಸತ್ಯ. ಇಂತಹದೊಂದು ಅಪರೂಪದ ಪ್ರಕ್ರಿಯೆಗೆ ಬಳ್ಳಾರಿ ಚುನಾವಣಾ ಕಣ ಸಾಕ್ಷಿಯಾಗಿದೆ. ಕೇವಲ ಆರು ತಿಂಗಳ ಹಿಂದೆ ನಡೆದ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪನವರು ಪ್ರಚಂಡ ಬಹುಮತದೊಂದಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗಿನ ಸಾರ್ವತ್ರಿಕ ಚುನಾವಣೆಯ ಕಣದಲ್ಲಿಯೂ ಅವರೇ ಕಾಂಗ್ರೆಸ್ ನ ಅಭ್ಯರ್ಥಿ. ಇವರ ವಿರುದ್ಧದ ಪ್ರತಿಸ್ಪರ್ಧಿ ಬಿಜೆಪಿಯಿಂದ ದೇವೆಂದ್ರಪ್ಪನವರು ಕಣಕ್ಕಿಳಿದಿದ್ದಾರೆ.

ವಿಶೇಷವೆನೆಂದರೆ ಬಳ್ಳಾರಿಯ ಹಾಲಿ ಜಿ.ಪಂ ಸದಸ್ಯೆ ಸುಶೀಲಮ್ಮನವರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದವರು. ಅವರ ಪತಿಯೇ ಬಿಜೆಪಿಯಿಂದ ಸ್ಪರ್ಧಿಸಿರುವ ದೇವೆಂದ್ರಪ್ಪನವರಾಗಿದ್ದಾರೆ. ಈ ಮುಂಚೆ ದೇವೆಂದ್ರಪ್ಪನವರು ಸಹ ಕಾಂಗ್ರೆಸ್ ನಲ್ಲಿದ್ದರು. ಕಳೆದ ಉಪಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲು ಅಭ್ಯರ್ಥಿಗಳ ಕೊರತೆ ಕಾಡಿತ್ತು. ಹರಕೆಯ ಕುರಿಯಾಗಲು ಯಾರು ಸಿಗದಿದ್ದಾಗ ಮುಂದೆ ಬಂದವರೆ ದೇವೆಂದ್ರಪ್ಪ.

ಹಾಗೆ ನೋಡಿದರೆ ಹರಪನಹಳ್ಳಿಯ ನಿವಾಸಿಗಳಾದ ದೇವೆಂದ್ರಪ್ಪ ಮತ್ತು ಸುಶೀಲಮ್ಮ ದಂಪತಿಗಳು ಕಾಂಗ್ರೆಸ್ ನಲ್ಲಿದ್ದರೂ ಕೂಡ ಬಿಜೆಪಿ ಬಿ.ಶ್ರೀರಾಮುಲುರವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದವರಾಗಿದ್ದರು. ಹರಪನಹಳ್ಳಿ ತಾಲ್ಲೂಕಿನ ಜಿ.ಪಂ ಸ್ಥಾನಕ್ಕೆ ಸುಶೀಲಮ್ಮನವರು ಕಾಂಗೈನಿಂದ ಆಯ್ಕೆಯಾಗಿದ್ದರು. ಆದರೆ ಅವರ ಪತಿ ದೇವೆಂದ್ರಪ್ಪನವರು ಖಾಲಿ ಇದ್ದರು. ಈಗ ಬಿಜೆಪಿಗೆ ಅಭ್ಯರ್ಥಿಗಳಿಲ್ಲದ ಸಂದರ್ಭವನ್ನು ಬಳಸಿಕೊಂಡು ಬಿಜೆಪಿ ಹಾರಿದ್ದಾರೆ. ಆದರೆ ಅವರ ಪತ್ನಿ ಸುಶೀಲಮ್ಮನವರು ಈಗಲು ಸಹ ಕಾಂಗ್ರೆಸ್ ನ ಅಭ್ಯರ್ಥಿ ವಿ.ಎಸ್ ಉಗ್ರಪ್ಪನವರ ಪರ ಪ್ರಚಾರ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಎಂ.ಎಲ್.ಸಿ ಅಲ್ಲಂ ವೀರಭದ್ರಪ್ಪ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಪ್ರತಿ ಲೋಕಸಭಾ ಚುನಾವಣೆಯಲ್ಲಿಯೂ ರಣರಂಗವಾಗುತ್ತಿತ್ತು. ಅಷ್ಟು ಸುಲಭಕ್ಕೆ ಸೋಲಪ್ಪಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಿದ್ದರಿರಲಿಲ್ಲ. ಕಳೆದ ಐದು ವರ್ಷಗಳ ಹಿಂದೆ ರೆಡ್ಡಿ ಸಹೋದರರ ರಿಪಬ್ಲಿಕ್ ಆಗಿದ್ದ ಬಳ್ಳಾರಿಯಲ್ಲಿ ಇಂದು ಚುನಾವಣೆಗೂ ಮುನ್ನವೇ ಬಿಜೆಪಿ ಸೋಲಪ್ಪಿಕೊಂಡಿರುವುದು ನೋಡಿದರ ಅವರ ಮಹಾನ್ ತಪ್ಪುಗಳಿಗೆ ತಕ್ಕ ಶಿಕ್ಷೆ ಸಿಕ್ಕಿದ ಹಾಗೆ ಆಗಿದೆ. ಹಣದಿಂದ ಜನರನ್ನು ಕೊಂಡುಕೊಳ್ಳುತ್ತೇವೆಂಬ ಅವರ ಅಹಂಕಾರಕ್ಕೆ ದೊಡ್ಡ ಕೊಡಲಿ ಪೆಟ್ಟು ಬಿದ್ದಿದೆ. 2018ರ ವಿಧಾನಸಭಾ ಚುನಾಚಣೆಗುವರೆಗೂ ಸದ್ದು ಮಾಡುತ್ತಿದ್ದ ಬಿ.ಶ್ರೀರಾಮುಲು ಈಗ ಸೋತು ಸುಣ್ಣವಾಗಿದ್ದಾರೆ.

ಶ್ರೀರಾಮುರವರ ಸಹೋದರಿ ಶಾಂತರವರು 2009ರಲ್ಲಿ ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಕಣಕ್ಕಿಳಿದು ಸಂಸದರಾಗಿದ್ದರೆ, 2014ರಲ್ಲಿ ಬಿ ಶ್ರೀರಾಮು ಜಯಶಾಲಿಯಾಗಿ ಸಂಸತ್ ಪ್ರವೇಶಿಸಿದ್ದರು. 2ಸಾವಿರ ಮತಗಳ ಅಂತರದಲ್ಲಿ 2009ರಲ್ಲಿ ಕಾಂಗ್ರೆಸ್ ಅಲ್ಲಿ ಸೋತಿದ್ದರೆ 2014ರಲ್ಲಿ ಸೋಲಿನ ಅಂತರ ಒಂದು ಲಕ್ಷಕ್ಕೆ ಏರಿಕೆಯಾಗಿತ್ತು. ಆದರೆ 2018ರಲ್ಲಿ ಬಿ.ಶ್ರೀರಾಮು ವಿಧಾನಸಭೆಗೆ ಆಯ್ಕೆ ಆದ ಕಾರಣ ತೆರವಾದ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಚಿಂತಕ ವಿ.ಎಸ್ ಉಗ್ರಪ್ಪ ಕಣಕ್ಕಿಳಿದಿದ್ದರು. ಮತ್ತೆ ರಾಮುಲು ಸಹೋದರಿ ಜೆ ಶಾಂತ ಬಿಜೆಪಿಯಿಂದ ಪ್ರತಿಸ್ಪರ್ಧಿಯಾಗಿದ್ದರು. ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ. ಜಿದ್ದಾಜಿದ್ದಿನ ಕಾಳಗದಲ್ಲಿ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪ 2,43,161 ಮತಗಳ ಭಾರೀ ಅಂತರದಿಂದ ಗೆದ್ದು ಬಿಜೆಪಿಯನ್ನು ಧೂಳಿಪಟ ಮಾಡಿದ್ದರು.

Chief Minister BS Yeddyurappa and Opposition leader Siddaramaiah seen in an argument during Assembly Session at Vidhana Soudha in Bangalore on Friday. -KPN

ಗಣಿರೆಡ್ಡಿಗಳ ಮಿತಿಮೀರಿದ ಹಾವಳಿ ವಿರುದ್ಧ ತೊಡೆ ತಟ್ಟಿದ್ದ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿ ಇತಿಹಾಸ ಸೃಷ್ಟಿಸಿದ್ದರು. ನಂತರ ಅಲ್ಲಿನ ವಾತವಾರಣ ನಿಧಾನವಾಗಿ ಬದಲಾಗಲು ಆರಂಭವಾಯಿತು. ಈಗ ಅಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಪಾರಮ್ಯ ಮೆರೆದಿದೆ. ಹಾಗಾಗಿ ಬಿಜೆಪಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿಯಾಗಿತ್ತು. ಹಾಗಾಗಿ ಯಾರು ಕಣಕ್ಕಿಳಿಯಲು ಮನಸ್ಸ ಮಾಡಲಿಲ್ಲ. ಕೊನೆಗೆ ರಾಮುಲು ಹರಕೆಯ ಕುರಿ ದೇವೆಂದ್ರಪ್ಪನನ್ನು ತಂದು ಕಣಕ್ಕೆ ಕಟ್ಟಿದ್ದಾರೆ. ದೇವೆಂದ್ರಪ್ಪನೂ ಕಾಟಚಾರದ ಪ್ರಚಾರ ಮಾಡಿದರೆ ಕಾಂಗ್ರೆಸ್ ಪರ ಆತನ ಪತ್ನಿಯೂ ಸಹ ಕಾಟಚಾರದ ಪ್ರಚಾರವನ್ನಷ್ಟೇ ಮಾಡಲಿದ್ದಾರೆ. ಒಟ್ಟಿನಲ್ಲಿ ಫಲಿತಾಂಶಕ್ಕೆ ಮುನ್ನ ಕಾಂಗ್ರೆಸ್ ಹಬ್ಬ ಆಚರಿಸುತ್ತಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...