Homeಕರ್ನಾಟಕಬಳ್ಳಾರಿ: ಗಣಪತಿ ಮೆರವಣಿಗೆ ವೇಳೆ ಮಸೀದಿಗೆ ಚಪ್ಪಲಿ ಎಸೆದ ನಾಲ್ವರ ಬಂಧನ

ಬಳ್ಳಾರಿ: ಗಣಪತಿ ಮೆರವಣಿಗೆ ವೇಳೆ ಮಸೀದಿಗೆ ಚಪ್ಪಲಿ ಎಸೆದ ನಾಲ್ವರ ಬಂಧನ

- Advertisement -
- Advertisement -

ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಮಸೀದಿಯೊಂದಕ್ಕೆ ಚಪ್ಪಲಿ ಎಸೆದ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯಲ್ಲಿ  ನಾಲ್ವರನ್ನು ಪೊಲೀಸರು ಬಂಧಿಸಲಾಗಿದೆ.

“ಕೋಮು ಗಲಭೆ ಸೃಷ್ಟಿಸಲು ಈ ಕೃತ್ಯವನ್ನು ಎಸಗಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ. ಸಿರುಗುಪ್ಪ ಪಟ್ಟಣದಲ್ಲಿ ಘಟನೆ ನಡೆದಿದೆ.

ಆರೋಪಿಗಳನ್ನು ನಿತೇಶ್ ಕುಮಾರ್, ಭೀಮಣ್ಣ, ಅಶೋಕ್ ಮತ್ತು ಆಂಜನೇಯಲು ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. “ನಾವು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.

“ಮೆರವಣಿಗೆಯ ಮಾರ್ಗದಲ್ಲಿ ಗಮನ ಹರಿಸಲು ನಿಯೋಜಿಸಲಾಗಿದ್ದ ಪೊಲೀಸ್ ಅಧಿಕಾರಿಗಳು ಘಟನೆಗೆ ಸಾಕ್ಷಿಯಾಗಿದ್ದರು. ಆದರೆ ಆರಂಭದಲ್ಲಿ ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಆರೋಪಿಗಳು ಚಪ್ಪಲಿ ಎಸೆದಿರುವ ವಿಡಿಯೋ ವೈರಲ್ ಆದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಸಿರುಗುಪ್ಪ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶ), 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಮತ್ತು 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದಲ್ಲಿ ಸಾವರ್ಕರ್‌, ಗೋಡ್ಸೆ ಫೋಟೋ ಪ್ರದರ್ಶನ

ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಗಣೇಶೋತ್ಸವವೂ ವಿವಾದಕ್ಕೆ ಗುರಿಯಾಗಿತ್ತು. ಹಿಂದೂ ಮಹಾಸಭಾದಿಂದ ನಡೆದ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ ಹಾಗೂ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದ ವಿ.ಡಿ.ಸಾವರ್ಕರ್‌ ಫೋಟೋವನ್ನು ಪ್ರದರ್ಶಿಸಲಾಗಿತ್ತು.

ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ವೇಳೆ ಈ ಫೋಟೋಗಳನ್ನು ಪ್ರದರ್ಶಿಸಿದ್ದರು.

ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಬಂದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಸುಭಾಷ್‌ಚಂದ್ರ ಬೋಸ್, ಭಗತ್‌ಸಿಂಗ್ ಜೊತೆಗೆ ಶಿವಮೊಗ್ಗದಲ್ಲಿ ಕೊಲೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ, ವಿ.ಡಿ.ಸಾವರ್ಕರ್ ಹಾಗೂ ನಾಥೂರಾಮ್ ಗೋಡ್ಸೆಯ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿತ್ತು.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್‌!

ಗಣಪತಿಯ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಇಲ್ಲಿನ ಅಮೀರ್‌ಅಹಮದ್ ವೃತ್ತದಲ್ಲಿ ವೀರಸಾವರ್ಕರ್ ಹೆಸರಿನಲ್ಲಿ ಬೃಹತ್ ಮಹಾದ್ವಾರ ನಿರ್ಮಿಸಲಾಗಿತ್ತು. ವಿಶೇಷವೆಂದರೆ ಕೆಲವು ದಿನಗಳ ಹಿಂದಷ್ಟೇ ಇಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು.

ಮೆರವಣಿಗೆಯಲ್ಲಿ ಸಾಗಿ ಬಂದ ಗಣಪತಿ ಮೂರ್ತಿ ಹಿಂಭಾಗದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅಳವಡಿಸಲಾಗಿತ್ತು. ಅಮೀರ್ ಅಹಮದ್ ವೃತ್ತ ಹಾಗೂ ಬಸ್ ನಿಲ್ದಾಣದ ಎದುರು ಅಶೋಕ ಲಾಂಛನದ ಮೇಲೆ ಕೇಸರಿ ಧ್ವಜಗಳು ಹಾರಾಡಿದ್ದವು.

ಮೆರವಣಿಗೆಯಲ್ಲಿ ಡಿಜೆ ಹಾಕಲು ಜಿಲ್ಲಾಡಳಿತ ಮೊದಲು ಅವಕಾಶ ನಿರಾಕರಿಸಿತ್ತು. ನಂತರ ಸಂಘಟಕರ ಒತ್ತಡಕ್ಕೆ ಮಣಿದು ಗೋಪಿ ವೃತ್ತದಲ್ಲಿ ಡಿಜೆಗೆ ಅವಕಾಶ ಕಲ್ಪಿಸಲಾಗಿದೆ. ಶಾಸಕ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡು ಹುರಿದುಂಬಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...