Homeಕರ್ನಾಟಕಬಳ್ಳಾರಿ | ಬಾಣಂತಿಯರ ಸಾವು : 5 ಲಕ್ಷ ಪರಿಹಾರ, ತನಿಖೆಗೆ ತಂಡ ರಚನೆ

ಬಳ್ಳಾರಿ | ಬಾಣಂತಿಯರ ಸಾವು : 5 ಲಕ್ಷ ಪರಿಹಾರ, ತನಿಖೆಗೆ ತಂಡ ರಚನೆ

- Advertisement -
- Advertisement -

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಹಿನ್ನೆಲೆ, ಔಷಧ ಖರೀದಿ ಮತ್ತು ಪ್ರಯೋಗಾಲಯಗಳಲ್ಲಿ ಔಷಧಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವಾಗ ಆಗಿರುವ ಲೋಪಗಳ ಕುರಿತು ತನಿಖೆಗೆ ತಂಡ ರಚಿಸಲಾಗಿದೆ.

ಟೆಂಡರ್ ಮೂಲಕ ಔಷಧಗಳ ಖರೀದಿ ಮತ್ತು ಎಂಪ್ಯಾನಲ್ಡ್ ಪ್ರಯೋಗಾಲಯಗಳಲ್ಲಿ ಔಷಧಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವಾಗ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ (ಕೆಎಸ್‌ಎಂಎಸ್‌ಸಿಎಲ್‌) ಆಗಿರುವ ಲೋಪಗಳ ಕುರಿತು ಪರಿಶೀಲಿಸಿ ವರದಿ ನೀಡಲು ಕರ್ನಾಟಕ ಕೌಶಲ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ.ಕನಗವಲ್ಲಿ ನೇತೃತ್ವದ ಪರಿಶೀಲನಾ ತಂಡವನ್ನು ರಾಜ್ಯ ಸರ್ಕಾರ ರಚಿಸಿದೆ.

ತಂಡದಲ್ಲಿ ಔಷಧ ನಿಯಂತ್ರಣ ಇಲಾಖೆಯ ಕೇಂದ್ರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ್, ಬೆಂಗಳೂರು ವೈದ್ಯಕೀಯ ಕಾಲೇಜಿನ ಮೈಕ್ರೋ ಬಯೋಲಜಿಸ್ಟ್ ಡಾ.ಅಸೀಮಾ ಬಾನು, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಕುಲಪತಿಯಿಂದ ನಾಮನಿರ್ದೇಶಿತರಾದ ಹಿರಿಯ ಫಾರ್ಮಾಲಜಿ ಪ್ರಾಧ್ಯಾಪಕರು ಇರಲಿದ್ದಾರೆ.

ಬಳ್ಳಾರಿ ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣವನ್ನು ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯಿಂದ ಖರೀದಿಸಲಾಗಿದೆ. ನ.30ರವರೆಗೆ 196 ಬ್ಯಾಚ್‌ಗಳಲ್ಲಿ ಈ ದ್ರಾವಣ ಖರೀದಿಸಲಾಗಿದೆ. ಇದರಲ್ಲಿ ಲೋಪಗಳಾಗಿದೆಯಾ? ಎಂಬ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಸರ್ಕಾರ ಆದೇಶದಲ್ಲಿ ಸೂಚಿಸಿದೆ.

5 ಲಕ್ಷ ರೂ. ಪರಿಹಾರ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಝಮೀರ್ ಅಹ್ಮದ್ ತಿಳಿಸಿದ್ದಾರೆ. ಭಾನುವಾರ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಆಗಿದೆ. ಮುಖ್ಯಮಂತ್ರಿಗಳು ಇನ್ನೂ 3 ಲಕ್ಷ ಸೇರಿಸಲು ಹೇಳಿದ್ದಾರೆ. ಹಾಗಾಗಿ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ.

ಪ್ರಕರಣದ ಹಿನ್ನೆಲೆ : ಹೆರಿಗೆಗೆಂದು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಒಂಬತ್ತು ಮಂದಿ ಗರ್ಭಿಣಿಯರಾದ ನಂದಿನಿ, ಲಲಿತಮ್ಮ, ಸುಮಯ್ಯಾ, ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬುವರಿಗೆ ನವೆಂಬರ್​ 9ರಂದು ಸಿಸೇರಿಯನ್​ ಮೂಲಕ ಹೆರಿಗೆ ಮಾಡಲಾಗಿತ್ತು. ಇವರಲ್ಲಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯ್ಯಾ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಬಾಣಂತಿಯರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಹೆರಿಗೆ ಬಳಿಕ ನೀಡಲಾದ ಐವಿ ದ್ರಾವಣ ಬಾಣಂತಿಯರ ಸಾವಿಗೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ : ಇಂದಿನಿಂದ ಚಳಿಗಾಲದ ಅಧಿವೇಶನ : ಅಭಿವೃದ್ದಿ ಚರ್ಚೆ ಅನುಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...