Homeಕರ್ನಾಟಕಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

‘ಜನರು ದಿಕ್ಕು ತಪ್ಪಲು ಕಾರಣವಾಯ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ ಈ ಸುಳ್ಳು ಸಂದೇಶ’

- Advertisement -
- Advertisement -

ಮತ್ತೆ ಜೀವಬರುವುದೆಂದು ಬಾಲಕನೊಬ್ಬನ ಮೃತದೇಹವನ್ನು ಉಪ್ಪಿನಲ್ಲಿ ಮುಚ್ಚಿಟ್ಟಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಈ ಬಾಲಕನಿಗೆ ಜೀವ ಬರಲಿದೆ ಕುಟುಂಬ ನಂಬಿತ್ತು. ಗ್ರಾಮಸ್ಥರೂ ಇದೇ ಅಭಿಪ್ರಾಯ ಹೊಂದಿದ್ದರು. ಮುಗ್ದ ಜನರು ನಂಬುವಂತೆ ಈ ಮೌಢ್ಯವನ್ನು ಸಾಮಾಜಿಕ ಮಾಧ್ಯಮದ ಮೂಲಕ ಹರಡಲಾಗಿದೆ.

ಬಳ್ಳಾರಿ ತಾಲೂಕಿನ ಸಿರವರ ಗ್ರಾಮದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ. ಸುರೇಶ ಸಿರವರ ಎಂಬ 10 ವರ್ಷದ ಬಾಲಕ ಇತ್ತೀಚೆಗೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದನು. ಉಪ್ಪಿನ ರಾಶಿಯಲ್ಲಿಟ್ಟರೆ ಮತ್ತೆ ಬದುಕಬಹುದು ಎಂದು ಭಾವಿಸಿದ್ದ ಗ್ರಾಮಸ್ಥರು, ಆತನ ಮೃತ ದೇಹವನ್ನು ಉಪ್ಪಿನಲ್ಲಿ ಮುಚ್ಚಿಟ್ಟಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಪ್ಪಿನಲ್ಲಿ ಮೃತದೇಹವನ್ನು ಮುಚ್ಚಿಟ್ಟರೆ, ಜೀವ ಮರಳಿ ಬರುತ್ತದೆಂಬ ಮೌಢ್ಯದ ಸಂದೇಶವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ಆ ಸಂದೇಶವನ್ನು ನಂಬಿದ ಬಾಲಕನ ತಂದೆ ಶೇಖರ್ ಮತ್ತು ತಾಯಿ ಗಂಗಮ್ಮ ಹಾಗೂ ಗ್ರಾಮಸ್ಥರು ಮೃತನ ದೇಹವನ್ನು ಎರಡು ಗಂಟೆಗಳ ಕಾಲ ಉಪ್ಪಿನಲ್ಲಿ ಹುದುಗಿಸಿಡಲು ನಿರ್ಧರಿಸಿದ್ದಾರೆ. ಬಳಿಕ, ದೇಹವನ್ನು ನಾಲ್ಕು ಗಂಟೆಗಳ ಕಾಲ ಉಪ್ಪಿನ ಅಡಿಯಲ್ಲಿ ದೇಹವನ್ನು ಇರಿಸಿದ್ದಾರೆ. ಆದರೆ, ಏನೂ ಆಗಲಿಲ್ಲ. ಬಳಿಕ, ಮೃತದೇಹವನ್ನು ಸುಟ್ಟುಹಾಕಿದ್ದಾರೆ.

ಉಪ್ಪಿನಲ್ಲಿ ಇರಿಸಲಾಗಿದ್ದ ಮೃತದೇಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅನೇಕ ಗ್ರಾಮಸ್ಥರು ಈ ವಿಷಯವನ್ನು ಚರ್ಚಿಸಿದ್ದಾರೆ.

“ಸಾವಿನ ಎರಡು ಗಂಟೆಗಳೊಳಗೆ ಅವರ ದೇಹವನ್ನು ಉಪ್ಪಿನ ಅಡಿಯಲ್ಲಿ ಇರಿಸಿದರೆ, ನಾವು ವ್ಯಕ್ತಿಯನ್ನು ಮತ್ತೆ ಬದುಕಿಸಬಹುದು ಎಂಬ ಪೋಸ್ಟ್ ಅನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೆವು. ಇದರ ನಂತರ, ನಾವು ಬಾಲಕ ಸುರೇಶನ ದೇಹದ ಮೇಲೆ 100 ಕೆಜಿಗಿಂತ ಹೆಚ್ಚು ಉಪ್ಪನ್ನು ಹಾಕಿದ್ದೆವು. ಅವನ ಮುಖವನ್ನು ಮಾತ್ರ ಮುಚ್ಚದೆ ಬಿಡಲಾಗಿತ್ತು. ಅದನ್ನು ನಾವು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಇರಿಸಿದ್ದೆವು. ನಾವು ಅವನನ್ನು ಮತ್ತೆ ಬದುಕಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಆತನ ದೇಹವನ್ನು ಸುಟ್ಟು ಹಾಕಿದೆವು” ಎಂದು ಸಿರವರ ಗ್ರಾಮದಲ್ಲಿ ವಾಸಿಸುವ ತಿಪ್ಪೇಸ್ವಾಮಿ ಮತ್ತು ಗಣೇಶ್ ಹೇಳಿದ್ದಾರೆ.

ಮೌಢ್ಯ ಬಿತ್ತಿದ ಸಂದೇಶದಲ್ಲಿ ಏನಿದೆ?

ಮೌಢ್ಯವನ್ನು ಬಿತ್ತುವ ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಪೋಸ್ಟ್ ಹೀಗಿದೆ:

ಅತಿ ಮುಖ್ಯ ಮಾಹಿತಿ: ಯಾರಾದರೂ ನೀರಿನಲ್ಲಿ ಮುಳುಗಿ ಸತ್ತರೆ ಮತ್ತು ಅವರ ದೇಹವು 3-4 ಗಂಟೆಗಳಲ್ಲಿ ಪತ್ತೆಯಾದರೆ, ನಾವು ಅವನ ಜೀವವನ್ನು ಮರಳಿ ತರಲು ಸಾಧ್ಯವಿದೆ. ಯಾರಾದರೂ ಅಂತಹ ಅಪಘಾತವನ್ನು ನೋಡಿದ್ದರೆ ಅಥವಾ ಕೇಳಿದರೆ, ತಕ್ಷಣ ನಮಗೆ ತಿಳಿಸಿ… ಯಾರದ್ದೋ ಜೀವ ಉಳಿಸಬಹುದು. ನಮ್ಮ ಮೊಬೈಲ್‌ ಸಂಖ್ಯೆ ಪ್ರಶಾಂತ್ ತ್ರಿಪಾಠಿ: 919454311111, 919335673001 ಆಗಿದೆ.

ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ತಲುಪಿಸಬೇಕಾಗಿ ನಿಮ್ಮೆಲ್ಲರಲ್ಲಿ ವಿನಮ್ರ ವಿನಂತಿ. ನಾವು ಯಾರೊಬ್ಬರ ಜೀವವನ್ನು ಉಳಿಸಲು ಸಾಧ್ಯವಾದರೆ, ನಮ್ಮ ಜೀವನದಲ್ಲಿ ನಾವು ಯಶಸ್ವಿಯಾಗುತ್ತೇವೆ. ಧನ್ಯವಾದಗಳು.

ಮುಳುಗುವಿಕೆಯಿಂದ ಪ್ರಾಣ ಕಳೆದುಕೊಂಡವರಿಗೆ ಚಿಕಿತ್ಸೆ:

ಒಂದೂವರೆ ಕ್ವಿಂಟಾಲ್ ಉಪ್ಪನ್ನು ಹಾಸಿಗೆಯಂತೆ ಹಾಕಿ, ರೋಗಿಯನ್ನು ಅದರ ಮೇಲೆ ಬಟ್ಟೆಯೊಂದಿಗೆ ಮಲಗಿಸಿ. ಉಪ್ಪು ನಿಧಾನವಾಗಿ ದೇಹದಿಂದ ನೀರನ್ನು ಹೀರಿಕೊಳ್ಳುತ್ತದೆ. ವ್ಯಕ್ತಿಗೆ ನಿಧಾನವಾಗಿ ಪ್ರಜ್ಞೆ ಬರುತ್ತದೆ. ವ್ಯಕ್ತಿಯು ಪ್ರಜ್ಞೆಯನ್ನು ಮರಳಿ ಪಡೆದಾಗ, ಅವನನ್ನು ಆಸ್ಪತ್ರೆಗೆ ಕರೆದೊಯ್ಯಿರಿ. ಇದಕ್ಕೂ ಮುನ್ನ ಆಸ್ಪತ್ರೆಗೆ ಕರೆದೊಯ್ದು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದ ವ್ಯಕ್ತಿಯನ್ನು ಉಪ್ಪಿನ ಚಿಕಿತ್ಸೆ ಮಾಡಿ ಬದುಕಿಸಿದ್ದೇವೆ. ದೇವರ ದಯೆ ಇದ್ದರೆ ಸತ್ತವನೂ ಕೂಡ ಬದುಕುತ್ತಾನೆ. ಪ್ರಯತ್ನ ಮಾಡುವುದರಲ್ಲಿ ತಪ್ಪೇನಿಲ್ಲ.

ವೈದ್ಯರು ಸತ್ತರು ಎಂದು ಘೋಷಿಸಿದ ನಂತರ ಸಂಸ್ಕಾರ ಮಾಡಲು ಆತುರಪಡಬೇಡಿ. ಸಾಧ್ಯವಾದಷ್ಟು ಬೇಗ ಉಪ್ಪಿನ ಚಿಕಿತ್ಸೆ ಮಾಡಿ. ರಾತ್ರಿಯಾದರೂ ಪರವಾಗಿಲ್ಲ. ನಗರಗಳಲ್ಲಿ ಅಂಗಡಿಗಳ ಮುಂದೆ ಉಪ್ಪಿನ ಚೀಲ ಗಳನ್ನು ಇಟ್ಟಿರುತ್ತಾರೆ. ವ್ಯಕ್ತಿಯನ್ನು ಕೂಡಲೇ ಕಾರ್ ಅಥವಾ ಜೀಪಿನಲ್ಲಿ ಅಲ್ಲಿಗೆ ಕರೆದುಕೊಂಡು ಹೋಗಿ, ಉಪ್ಪಿನ ಮೂಟೆಗಳನ್ನು ಬೇಗಬೇಗನೆ ಸುರಿದು ನೀರಿನಲ್ಲಿ ಮುಳುಗಿ ಸತ್ತ ವ್ಯಕ್ತಿಯನ್ನು ಬೇಗನೆ ಉಪ್ಪಿನ ರಾಶಿಯ ಮೇಲೆ ಮಲಗಿಸಿ. ಅಂಗಡಿಯವನ ಗುರುತನ್ನು ಬೆಳಿಗ್ಗೆ ಪತ್ತೆ ಹಚ್ಚಿ ಆತನಿಗೆ ಹಣ ನೀಡಬಹುದು. ಆದರೆ ಪ್ರಾಣ ಉಳಿಸಲು ಸಿಗುವ ಒಂದು ಅವಕಾಶವನ್ನು ಸಹ ಬಿಡಬೇಡಿ.

ಸೂಚನೆ: ಮುಳುಗಿದ ಸಮಯ ಕಡಿಮೆಯಾದಷ್ಟೂ ಬೇಗ ಆ ವ್ಯಕ್ತಿಗೆ ಪ್ರಜ್ಞೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ, ಪ್ರತಿ ಕೆಲಸವನ್ನು ಯುದ್ಧ ಮಟ್ಟದಲ್ಲಿ ಮಾಡಿ. ಕೆಲವರು ಉಪ್ಪು ತರಲು ಮುಂದಾದರೆ, ಫಲಿತಾಂಶವು ಶೀಘ್ರದಲ್ಲೇ ಲಭ್ಯವಾಗುತ್ತದೆ. ದಯವಿಟ್ಟು ಸಂದೇಶವನ್ನು ಫಾರ್ವರ್ಡ್ ಮಾಡಿ, ಯಾರೊಬ್ಬರ ಜೀವವನ್ನು ಉಳಿಸಲು ಇದು ಉಪಯುಕ್ತವಾಗಬಹುದು.

ಇದನ್ನೂ ಓದಿರಿ: ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

-ಹೀಗೆ ಮೌಢ್ಯವನ್ನು ಬಿತ್ತಲಾಗಿದೆ. ಇದನ್ನು ಅನೇಕರು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವುದನ್ನು ಕಾಣಬಹುದು. (‘ನಾನುಗೌರಿ.ಕಾಂ’ ಇಲ್ಲಿನ ನಂಬರ್‌ಗಳಿಗೆ ಕರೆ ಮಾಡಿದಾಗ ಬ್ಯುಸಿ ಬಂದಿದೆ ಹಾಗೂ ಒಂದು ನಂಬರ್‌ ಸ್ವಿಚ್ ಆಫ್ ಆಗಿದೆ. ಯಾರೂ ಕೂಡ ಈ ನಂಬರ್‌ಗಳಿಗೆ ಕರೆ ಮಾಡಬಾರದೆಂದು ವಿನಂತಿಸುತ್ತೇವೆ. ಇದು ಸುಳ್ಳು ಸಂದೇಶವೆಂದು ಕನ್ನಡದ ಫ್ಯಾಕ್ಟ್‌ಚೆಕ್ ಜಾಲತಾಣ ‘ಏನ್‌ಸುದ್ದಿ.ಕಾಂ’ ವರದಿ ಮಾಡಿತ್ತು. ವರದಿಯನ್ನು ‘ಇಲ್ಲಿ’ ಓದಬಹುದು.)

No photo description available.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...