Homeಕರ್ನಾಟಕಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

‘ಜನರು ದಿಕ್ಕು ತಪ್ಪಲು ಕಾರಣವಾಯ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ ಈ ಸುಳ್ಳು ಸಂದೇಶ’

- Advertisement -
- Advertisement -

ಮತ್ತೆ ಜೀವಬರುವುದೆಂದು ಬಾಲಕನೊಬ್ಬನ ಮೃತದೇಹವನ್ನು ಉಪ್ಪಿನಲ್ಲಿ ಮುಚ್ಚಿಟ್ಟಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಈ ಬಾಲಕನಿಗೆ ಜೀವ ಬರಲಿದೆ ಕುಟುಂಬ ನಂಬಿತ್ತು. ಗ್ರಾಮಸ್ಥರೂ ಇದೇ ಅಭಿಪ್ರಾಯ ಹೊಂದಿದ್ದರು. ಮುಗ್ದ ಜನರು ನಂಬುವಂತೆ ಈ ಮೌಢ್ಯವನ್ನು ಸಾಮಾಜಿಕ ಮಾಧ್ಯಮದ ಮೂಲಕ ಹರಡಲಾಗಿದೆ.

ಬಳ್ಳಾರಿ ತಾಲೂಕಿನ ಸಿರವರ ಗ್ರಾಮದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ. ಸುರೇಶ ಸಿರವರ ಎಂಬ 10 ವರ್ಷದ ಬಾಲಕ ಇತ್ತೀಚೆಗೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದನು. ಉಪ್ಪಿನ ರಾಶಿಯಲ್ಲಿಟ್ಟರೆ ಮತ್ತೆ ಬದುಕಬಹುದು ಎಂದು ಭಾವಿಸಿದ್ದ ಗ್ರಾಮಸ್ಥರು, ಆತನ ಮೃತ ದೇಹವನ್ನು ಉಪ್ಪಿನಲ್ಲಿ ಮುಚ್ಚಿಟ್ಟಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಪ್ಪಿನಲ್ಲಿ ಮೃತದೇಹವನ್ನು ಮುಚ್ಚಿಟ್ಟರೆ, ಜೀವ ಮರಳಿ ಬರುತ್ತದೆಂಬ ಮೌಢ್ಯದ ಸಂದೇಶವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ಆ ಸಂದೇಶವನ್ನು ನಂಬಿದ ಬಾಲಕನ ತಂದೆ ಶೇಖರ್ ಮತ್ತು ತಾಯಿ ಗಂಗಮ್ಮ ಹಾಗೂ ಗ್ರಾಮಸ್ಥರು ಮೃತನ ದೇಹವನ್ನು ಎರಡು ಗಂಟೆಗಳ ಕಾಲ ಉಪ್ಪಿನಲ್ಲಿ ಹುದುಗಿಸಿಡಲು ನಿರ್ಧರಿಸಿದ್ದಾರೆ. ಬಳಿಕ, ದೇಹವನ್ನು ನಾಲ್ಕು ಗಂಟೆಗಳ ಕಾಲ ಉಪ್ಪಿನ ಅಡಿಯಲ್ಲಿ ದೇಹವನ್ನು ಇರಿಸಿದ್ದಾರೆ. ಆದರೆ, ಏನೂ ಆಗಲಿಲ್ಲ. ಬಳಿಕ, ಮೃತದೇಹವನ್ನು ಸುಟ್ಟುಹಾಕಿದ್ದಾರೆ.

ಉಪ್ಪಿನಲ್ಲಿ ಇರಿಸಲಾಗಿದ್ದ ಮೃತದೇಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅನೇಕ ಗ್ರಾಮಸ್ಥರು ಈ ವಿಷಯವನ್ನು ಚರ್ಚಿಸಿದ್ದಾರೆ.

“ಸಾವಿನ ಎರಡು ಗಂಟೆಗಳೊಳಗೆ ಅವರ ದೇಹವನ್ನು ಉಪ್ಪಿನ ಅಡಿಯಲ್ಲಿ ಇರಿಸಿದರೆ, ನಾವು ವ್ಯಕ್ತಿಯನ್ನು ಮತ್ತೆ ಬದುಕಿಸಬಹುದು ಎಂಬ ಪೋಸ್ಟ್ ಅನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೆವು. ಇದರ ನಂತರ, ನಾವು ಬಾಲಕ ಸುರೇಶನ ದೇಹದ ಮೇಲೆ 100 ಕೆಜಿಗಿಂತ ಹೆಚ್ಚು ಉಪ್ಪನ್ನು ಹಾಕಿದ್ದೆವು. ಅವನ ಮುಖವನ್ನು ಮಾತ್ರ ಮುಚ್ಚದೆ ಬಿಡಲಾಗಿತ್ತು. ಅದನ್ನು ನಾವು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಇರಿಸಿದ್ದೆವು. ನಾವು ಅವನನ್ನು ಮತ್ತೆ ಬದುಕಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಆತನ ದೇಹವನ್ನು ಸುಟ್ಟು ಹಾಕಿದೆವು” ಎಂದು ಸಿರವರ ಗ್ರಾಮದಲ್ಲಿ ವಾಸಿಸುವ ತಿಪ್ಪೇಸ್ವಾಮಿ ಮತ್ತು ಗಣೇಶ್ ಹೇಳಿದ್ದಾರೆ.

ಮೌಢ್ಯ ಬಿತ್ತಿದ ಸಂದೇಶದಲ್ಲಿ ಏನಿದೆ?

ಮೌಢ್ಯವನ್ನು ಬಿತ್ತುವ ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಪೋಸ್ಟ್ ಹೀಗಿದೆ:

ಅತಿ ಮುಖ್ಯ ಮಾಹಿತಿ: ಯಾರಾದರೂ ನೀರಿನಲ್ಲಿ ಮುಳುಗಿ ಸತ್ತರೆ ಮತ್ತು ಅವರ ದೇಹವು 3-4 ಗಂಟೆಗಳಲ್ಲಿ ಪತ್ತೆಯಾದರೆ, ನಾವು ಅವನ ಜೀವವನ್ನು ಮರಳಿ ತರಲು ಸಾಧ್ಯವಿದೆ. ಯಾರಾದರೂ ಅಂತಹ ಅಪಘಾತವನ್ನು ನೋಡಿದ್ದರೆ ಅಥವಾ ಕೇಳಿದರೆ, ತಕ್ಷಣ ನಮಗೆ ತಿಳಿಸಿ… ಯಾರದ್ದೋ ಜೀವ ಉಳಿಸಬಹುದು. ನಮ್ಮ ಮೊಬೈಲ್‌ ಸಂಖ್ಯೆ ಪ್ರಶಾಂತ್ ತ್ರಿಪಾಠಿ: 919454311111, 919335673001 ಆಗಿದೆ.

ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ತಲುಪಿಸಬೇಕಾಗಿ ನಿಮ್ಮೆಲ್ಲರಲ್ಲಿ ವಿನಮ್ರ ವಿನಂತಿ. ನಾವು ಯಾರೊಬ್ಬರ ಜೀವವನ್ನು ಉಳಿಸಲು ಸಾಧ್ಯವಾದರೆ, ನಮ್ಮ ಜೀವನದಲ್ಲಿ ನಾವು ಯಶಸ್ವಿಯಾಗುತ್ತೇವೆ. ಧನ್ಯವಾದಗಳು.

ಮುಳುಗುವಿಕೆಯಿಂದ ಪ್ರಾಣ ಕಳೆದುಕೊಂಡವರಿಗೆ ಚಿಕಿತ್ಸೆ:

ಒಂದೂವರೆ ಕ್ವಿಂಟಾಲ್ ಉಪ್ಪನ್ನು ಹಾಸಿಗೆಯಂತೆ ಹಾಕಿ, ರೋಗಿಯನ್ನು ಅದರ ಮೇಲೆ ಬಟ್ಟೆಯೊಂದಿಗೆ ಮಲಗಿಸಿ. ಉಪ್ಪು ನಿಧಾನವಾಗಿ ದೇಹದಿಂದ ನೀರನ್ನು ಹೀರಿಕೊಳ್ಳುತ್ತದೆ. ವ್ಯಕ್ತಿಗೆ ನಿಧಾನವಾಗಿ ಪ್ರಜ್ಞೆ ಬರುತ್ತದೆ. ವ್ಯಕ್ತಿಯು ಪ್ರಜ್ಞೆಯನ್ನು ಮರಳಿ ಪಡೆದಾಗ, ಅವನನ್ನು ಆಸ್ಪತ್ರೆಗೆ ಕರೆದೊಯ್ಯಿರಿ. ಇದಕ್ಕೂ ಮುನ್ನ ಆಸ್ಪತ್ರೆಗೆ ಕರೆದೊಯ್ದು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದ ವ್ಯಕ್ತಿಯನ್ನು ಉಪ್ಪಿನ ಚಿಕಿತ್ಸೆ ಮಾಡಿ ಬದುಕಿಸಿದ್ದೇವೆ. ದೇವರ ದಯೆ ಇದ್ದರೆ ಸತ್ತವನೂ ಕೂಡ ಬದುಕುತ್ತಾನೆ. ಪ್ರಯತ್ನ ಮಾಡುವುದರಲ್ಲಿ ತಪ್ಪೇನಿಲ್ಲ.

ವೈದ್ಯರು ಸತ್ತರು ಎಂದು ಘೋಷಿಸಿದ ನಂತರ ಸಂಸ್ಕಾರ ಮಾಡಲು ಆತುರಪಡಬೇಡಿ. ಸಾಧ್ಯವಾದಷ್ಟು ಬೇಗ ಉಪ್ಪಿನ ಚಿಕಿತ್ಸೆ ಮಾಡಿ. ರಾತ್ರಿಯಾದರೂ ಪರವಾಗಿಲ್ಲ. ನಗರಗಳಲ್ಲಿ ಅಂಗಡಿಗಳ ಮುಂದೆ ಉಪ್ಪಿನ ಚೀಲ ಗಳನ್ನು ಇಟ್ಟಿರುತ್ತಾರೆ. ವ್ಯಕ್ತಿಯನ್ನು ಕೂಡಲೇ ಕಾರ್ ಅಥವಾ ಜೀಪಿನಲ್ಲಿ ಅಲ್ಲಿಗೆ ಕರೆದುಕೊಂಡು ಹೋಗಿ, ಉಪ್ಪಿನ ಮೂಟೆಗಳನ್ನು ಬೇಗಬೇಗನೆ ಸುರಿದು ನೀರಿನಲ್ಲಿ ಮುಳುಗಿ ಸತ್ತ ವ್ಯಕ್ತಿಯನ್ನು ಬೇಗನೆ ಉಪ್ಪಿನ ರಾಶಿಯ ಮೇಲೆ ಮಲಗಿಸಿ. ಅಂಗಡಿಯವನ ಗುರುತನ್ನು ಬೆಳಿಗ್ಗೆ ಪತ್ತೆ ಹಚ್ಚಿ ಆತನಿಗೆ ಹಣ ನೀಡಬಹುದು. ಆದರೆ ಪ್ರಾಣ ಉಳಿಸಲು ಸಿಗುವ ಒಂದು ಅವಕಾಶವನ್ನು ಸಹ ಬಿಡಬೇಡಿ.

ಸೂಚನೆ: ಮುಳುಗಿದ ಸಮಯ ಕಡಿಮೆಯಾದಷ್ಟೂ ಬೇಗ ಆ ವ್ಯಕ್ತಿಗೆ ಪ್ರಜ್ಞೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ, ಪ್ರತಿ ಕೆಲಸವನ್ನು ಯುದ್ಧ ಮಟ್ಟದಲ್ಲಿ ಮಾಡಿ. ಕೆಲವರು ಉಪ್ಪು ತರಲು ಮುಂದಾದರೆ, ಫಲಿತಾಂಶವು ಶೀಘ್ರದಲ್ಲೇ ಲಭ್ಯವಾಗುತ್ತದೆ. ದಯವಿಟ್ಟು ಸಂದೇಶವನ್ನು ಫಾರ್ವರ್ಡ್ ಮಾಡಿ, ಯಾರೊಬ್ಬರ ಜೀವವನ್ನು ಉಳಿಸಲು ಇದು ಉಪಯುಕ್ತವಾಗಬಹುದು.

ಇದನ್ನೂ ಓದಿರಿ: ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

-ಹೀಗೆ ಮೌಢ್ಯವನ್ನು ಬಿತ್ತಲಾಗಿದೆ. ಇದನ್ನು ಅನೇಕರು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವುದನ್ನು ಕಾಣಬಹುದು. (‘ನಾನುಗೌರಿ.ಕಾಂ’ ಇಲ್ಲಿನ ನಂಬರ್‌ಗಳಿಗೆ ಕರೆ ಮಾಡಿದಾಗ ಬ್ಯುಸಿ ಬಂದಿದೆ ಹಾಗೂ ಒಂದು ನಂಬರ್‌ ಸ್ವಿಚ್ ಆಫ್ ಆಗಿದೆ. ಯಾರೂ ಕೂಡ ಈ ನಂಬರ್‌ಗಳಿಗೆ ಕರೆ ಮಾಡಬಾರದೆಂದು ವಿನಂತಿಸುತ್ತೇವೆ. ಇದು ಸುಳ್ಳು ಸಂದೇಶವೆಂದು ಕನ್ನಡದ ಫ್ಯಾಕ್ಟ್‌ಚೆಕ್ ಜಾಲತಾಣ ‘ಏನ್‌ಸುದ್ದಿ.ಕಾಂ’ ವರದಿ ಮಾಡಿತ್ತು. ವರದಿಯನ್ನು ‘ಇಲ್ಲಿ’ ಓದಬಹುದು.)

No photo description available.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...