Homeಕರ್ನಾಟಕಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

‘ಜನರು ದಿಕ್ಕು ತಪ್ಪಲು ಕಾರಣವಾಯ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ ಈ ಸುಳ್ಳು ಸಂದೇಶ’

- Advertisement -
- Advertisement -

ಮತ್ತೆ ಜೀವಬರುವುದೆಂದು ಬಾಲಕನೊಬ್ಬನ ಮೃತದೇಹವನ್ನು ಉಪ್ಪಿನಲ್ಲಿ ಮುಚ್ಚಿಟ್ಟಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಈ ಬಾಲಕನಿಗೆ ಜೀವ ಬರಲಿದೆ ಕುಟುಂಬ ನಂಬಿತ್ತು. ಗ್ರಾಮಸ್ಥರೂ ಇದೇ ಅಭಿಪ್ರಾಯ ಹೊಂದಿದ್ದರು. ಮುಗ್ದ ಜನರು ನಂಬುವಂತೆ ಈ ಮೌಢ್ಯವನ್ನು ಸಾಮಾಜಿಕ ಮಾಧ್ಯಮದ ಮೂಲಕ ಹರಡಲಾಗಿದೆ.

ಬಳ್ಳಾರಿ ತಾಲೂಕಿನ ಸಿರವರ ಗ್ರಾಮದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ. ಸುರೇಶ ಸಿರವರ ಎಂಬ 10 ವರ್ಷದ ಬಾಲಕ ಇತ್ತೀಚೆಗೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದನು. ಉಪ್ಪಿನ ರಾಶಿಯಲ್ಲಿಟ್ಟರೆ ಮತ್ತೆ ಬದುಕಬಹುದು ಎಂದು ಭಾವಿಸಿದ್ದ ಗ್ರಾಮಸ್ಥರು, ಆತನ ಮೃತ ದೇಹವನ್ನು ಉಪ್ಪಿನಲ್ಲಿ ಮುಚ್ಚಿಟ್ಟಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಪ್ಪಿನಲ್ಲಿ ಮೃತದೇಹವನ್ನು ಮುಚ್ಚಿಟ್ಟರೆ, ಜೀವ ಮರಳಿ ಬರುತ್ತದೆಂಬ ಮೌಢ್ಯದ ಸಂದೇಶವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ಆ ಸಂದೇಶವನ್ನು ನಂಬಿದ ಬಾಲಕನ ತಂದೆ ಶೇಖರ್ ಮತ್ತು ತಾಯಿ ಗಂಗಮ್ಮ ಹಾಗೂ ಗ್ರಾಮಸ್ಥರು ಮೃತನ ದೇಹವನ್ನು ಎರಡು ಗಂಟೆಗಳ ಕಾಲ ಉಪ್ಪಿನಲ್ಲಿ ಹುದುಗಿಸಿಡಲು ನಿರ್ಧರಿಸಿದ್ದಾರೆ. ಬಳಿಕ, ದೇಹವನ್ನು ನಾಲ್ಕು ಗಂಟೆಗಳ ಕಾಲ ಉಪ್ಪಿನ ಅಡಿಯಲ್ಲಿ ದೇಹವನ್ನು ಇರಿಸಿದ್ದಾರೆ. ಆದರೆ, ಏನೂ ಆಗಲಿಲ್ಲ. ಬಳಿಕ, ಮೃತದೇಹವನ್ನು ಸುಟ್ಟುಹಾಕಿದ್ದಾರೆ.

ಉಪ್ಪಿನಲ್ಲಿ ಇರಿಸಲಾಗಿದ್ದ ಮೃತದೇಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅನೇಕ ಗ್ರಾಮಸ್ಥರು ಈ ವಿಷಯವನ್ನು ಚರ್ಚಿಸಿದ್ದಾರೆ.

“ಸಾವಿನ ಎರಡು ಗಂಟೆಗಳೊಳಗೆ ಅವರ ದೇಹವನ್ನು ಉಪ್ಪಿನ ಅಡಿಯಲ್ಲಿ ಇರಿಸಿದರೆ, ನಾವು ವ್ಯಕ್ತಿಯನ್ನು ಮತ್ತೆ ಬದುಕಿಸಬಹುದು ಎಂಬ ಪೋಸ್ಟ್ ಅನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೆವು. ಇದರ ನಂತರ, ನಾವು ಬಾಲಕ ಸುರೇಶನ ದೇಹದ ಮೇಲೆ 100 ಕೆಜಿಗಿಂತ ಹೆಚ್ಚು ಉಪ್ಪನ್ನು ಹಾಕಿದ್ದೆವು. ಅವನ ಮುಖವನ್ನು ಮಾತ್ರ ಮುಚ್ಚದೆ ಬಿಡಲಾಗಿತ್ತು. ಅದನ್ನು ನಾವು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಇರಿಸಿದ್ದೆವು. ನಾವು ಅವನನ್ನು ಮತ್ತೆ ಬದುಕಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಆತನ ದೇಹವನ್ನು ಸುಟ್ಟು ಹಾಕಿದೆವು” ಎಂದು ಸಿರವರ ಗ್ರಾಮದಲ್ಲಿ ವಾಸಿಸುವ ತಿಪ್ಪೇಸ್ವಾಮಿ ಮತ್ತು ಗಣೇಶ್ ಹೇಳಿದ್ದಾರೆ.

ಮೌಢ್ಯ ಬಿತ್ತಿದ ಸಂದೇಶದಲ್ಲಿ ಏನಿದೆ?

ಮೌಢ್ಯವನ್ನು ಬಿತ್ತುವ ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಪೋಸ್ಟ್ ಹೀಗಿದೆ:

ಅತಿ ಮುಖ್ಯ ಮಾಹಿತಿ: ಯಾರಾದರೂ ನೀರಿನಲ್ಲಿ ಮುಳುಗಿ ಸತ್ತರೆ ಮತ್ತು ಅವರ ದೇಹವು 3-4 ಗಂಟೆಗಳಲ್ಲಿ ಪತ್ತೆಯಾದರೆ, ನಾವು ಅವನ ಜೀವವನ್ನು ಮರಳಿ ತರಲು ಸಾಧ್ಯವಿದೆ. ಯಾರಾದರೂ ಅಂತಹ ಅಪಘಾತವನ್ನು ನೋಡಿದ್ದರೆ ಅಥವಾ ಕೇಳಿದರೆ, ತಕ್ಷಣ ನಮಗೆ ತಿಳಿಸಿ… ಯಾರದ್ದೋ ಜೀವ ಉಳಿಸಬಹುದು. ನಮ್ಮ ಮೊಬೈಲ್‌ ಸಂಖ್ಯೆ ಪ್ರಶಾಂತ್ ತ್ರಿಪಾಠಿ: 919454311111, 919335673001 ಆಗಿದೆ.

ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ತಲುಪಿಸಬೇಕಾಗಿ ನಿಮ್ಮೆಲ್ಲರಲ್ಲಿ ವಿನಮ್ರ ವಿನಂತಿ. ನಾವು ಯಾರೊಬ್ಬರ ಜೀವವನ್ನು ಉಳಿಸಲು ಸಾಧ್ಯವಾದರೆ, ನಮ್ಮ ಜೀವನದಲ್ಲಿ ನಾವು ಯಶಸ್ವಿಯಾಗುತ್ತೇವೆ. ಧನ್ಯವಾದಗಳು.

ಮುಳುಗುವಿಕೆಯಿಂದ ಪ್ರಾಣ ಕಳೆದುಕೊಂಡವರಿಗೆ ಚಿಕಿತ್ಸೆ:

ಒಂದೂವರೆ ಕ್ವಿಂಟಾಲ್ ಉಪ್ಪನ್ನು ಹಾಸಿಗೆಯಂತೆ ಹಾಕಿ, ರೋಗಿಯನ್ನು ಅದರ ಮೇಲೆ ಬಟ್ಟೆಯೊಂದಿಗೆ ಮಲಗಿಸಿ. ಉಪ್ಪು ನಿಧಾನವಾಗಿ ದೇಹದಿಂದ ನೀರನ್ನು ಹೀರಿಕೊಳ್ಳುತ್ತದೆ. ವ್ಯಕ್ತಿಗೆ ನಿಧಾನವಾಗಿ ಪ್ರಜ್ಞೆ ಬರುತ್ತದೆ. ವ್ಯಕ್ತಿಯು ಪ್ರಜ್ಞೆಯನ್ನು ಮರಳಿ ಪಡೆದಾಗ, ಅವನನ್ನು ಆಸ್ಪತ್ರೆಗೆ ಕರೆದೊಯ್ಯಿರಿ. ಇದಕ್ಕೂ ಮುನ್ನ ಆಸ್ಪತ್ರೆಗೆ ಕರೆದೊಯ್ದು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದ ವ್ಯಕ್ತಿಯನ್ನು ಉಪ್ಪಿನ ಚಿಕಿತ್ಸೆ ಮಾಡಿ ಬದುಕಿಸಿದ್ದೇವೆ. ದೇವರ ದಯೆ ಇದ್ದರೆ ಸತ್ತವನೂ ಕೂಡ ಬದುಕುತ್ತಾನೆ. ಪ್ರಯತ್ನ ಮಾಡುವುದರಲ್ಲಿ ತಪ್ಪೇನಿಲ್ಲ.

ವೈದ್ಯರು ಸತ್ತರು ಎಂದು ಘೋಷಿಸಿದ ನಂತರ ಸಂಸ್ಕಾರ ಮಾಡಲು ಆತುರಪಡಬೇಡಿ. ಸಾಧ್ಯವಾದಷ್ಟು ಬೇಗ ಉಪ್ಪಿನ ಚಿಕಿತ್ಸೆ ಮಾಡಿ. ರಾತ್ರಿಯಾದರೂ ಪರವಾಗಿಲ್ಲ. ನಗರಗಳಲ್ಲಿ ಅಂಗಡಿಗಳ ಮುಂದೆ ಉಪ್ಪಿನ ಚೀಲ ಗಳನ್ನು ಇಟ್ಟಿರುತ್ತಾರೆ. ವ್ಯಕ್ತಿಯನ್ನು ಕೂಡಲೇ ಕಾರ್ ಅಥವಾ ಜೀಪಿನಲ್ಲಿ ಅಲ್ಲಿಗೆ ಕರೆದುಕೊಂಡು ಹೋಗಿ, ಉಪ್ಪಿನ ಮೂಟೆಗಳನ್ನು ಬೇಗಬೇಗನೆ ಸುರಿದು ನೀರಿನಲ್ಲಿ ಮುಳುಗಿ ಸತ್ತ ವ್ಯಕ್ತಿಯನ್ನು ಬೇಗನೆ ಉಪ್ಪಿನ ರಾಶಿಯ ಮೇಲೆ ಮಲಗಿಸಿ. ಅಂಗಡಿಯವನ ಗುರುತನ್ನು ಬೆಳಿಗ್ಗೆ ಪತ್ತೆ ಹಚ್ಚಿ ಆತನಿಗೆ ಹಣ ನೀಡಬಹುದು. ಆದರೆ ಪ್ರಾಣ ಉಳಿಸಲು ಸಿಗುವ ಒಂದು ಅವಕಾಶವನ್ನು ಸಹ ಬಿಡಬೇಡಿ.

ಸೂಚನೆ: ಮುಳುಗಿದ ಸಮಯ ಕಡಿಮೆಯಾದಷ್ಟೂ ಬೇಗ ಆ ವ್ಯಕ್ತಿಗೆ ಪ್ರಜ್ಞೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ, ಪ್ರತಿ ಕೆಲಸವನ್ನು ಯುದ್ಧ ಮಟ್ಟದಲ್ಲಿ ಮಾಡಿ. ಕೆಲವರು ಉಪ್ಪು ತರಲು ಮುಂದಾದರೆ, ಫಲಿತಾಂಶವು ಶೀಘ್ರದಲ್ಲೇ ಲಭ್ಯವಾಗುತ್ತದೆ. ದಯವಿಟ್ಟು ಸಂದೇಶವನ್ನು ಫಾರ್ವರ್ಡ್ ಮಾಡಿ, ಯಾರೊಬ್ಬರ ಜೀವವನ್ನು ಉಳಿಸಲು ಇದು ಉಪಯುಕ್ತವಾಗಬಹುದು.

ಇದನ್ನೂ ಓದಿರಿ: ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

-ಹೀಗೆ ಮೌಢ್ಯವನ್ನು ಬಿತ್ತಲಾಗಿದೆ. ಇದನ್ನು ಅನೇಕರು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವುದನ್ನು ಕಾಣಬಹುದು. (‘ನಾನುಗೌರಿ.ಕಾಂ’ ಇಲ್ಲಿನ ನಂಬರ್‌ಗಳಿಗೆ ಕರೆ ಮಾಡಿದಾಗ ಬ್ಯುಸಿ ಬಂದಿದೆ ಹಾಗೂ ಒಂದು ನಂಬರ್‌ ಸ್ವಿಚ್ ಆಫ್ ಆಗಿದೆ. ಯಾರೂ ಕೂಡ ಈ ನಂಬರ್‌ಗಳಿಗೆ ಕರೆ ಮಾಡಬಾರದೆಂದು ವಿನಂತಿಸುತ್ತೇವೆ. ಇದು ಸುಳ್ಳು ಸಂದೇಶವೆಂದು ಕನ್ನಡದ ಫ್ಯಾಕ್ಟ್‌ಚೆಕ್ ಜಾಲತಾಣ ‘ಏನ್‌ಸುದ್ದಿ.ಕಾಂ’ ವರದಿ ಮಾಡಿತ್ತು. ವರದಿಯನ್ನು ‘ಇಲ್ಲಿ’ ಓದಬಹುದು.)

No photo description available.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...