Homeಕರ್ನಾಟಕಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

‘ಜನರು ದಿಕ್ಕು ತಪ್ಪಲು ಕಾರಣವಾಯ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ ಈ ಸುಳ್ಳು ಸಂದೇಶ’

- Advertisement -
- Advertisement -

ಮತ್ತೆ ಜೀವಬರುವುದೆಂದು ಬಾಲಕನೊಬ್ಬನ ಮೃತದೇಹವನ್ನು ಉಪ್ಪಿನಲ್ಲಿ ಮುಚ್ಚಿಟ್ಟಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಈ ಬಾಲಕನಿಗೆ ಜೀವ ಬರಲಿದೆ ಕುಟುಂಬ ನಂಬಿತ್ತು. ಗ್ರಾಮಸ್ಥರೂ ಇದೇ ಅಭಿಪ್ರಾಯ ಹೊಂದಿದ್ದರು. ಮುಗ್ದ ಜನರು ನಂಬುವಂತೆ ಈ ಮೌಢ್ಯವನ್ನು ಸಾಮಾಜಿಕ ಮಾಧ್ಯಮದ ಮೂಲಕ ಹರಡಲಾಗಿದೆ.

ಬಳ್ಳಾರಿ ತಾಲೂಕಿನ ಸಿರವರ ಗ್ರಾಮದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ. ಸುರೇಶ ಸಿರವರ ಎಂಬ 10 ವರ್ಷದ ಬಾಲಕ ಇತ್ತೀಚೆಗೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದನು. ಉಪ್ಪಿನ ರಾಶಿಯಲ್ಲಿಟ್ಟರೆ ಮತ್ತೆ ಬದುಕಬಹುದು ಎಂದು ಭಾವಿಸಿದ್ದ ಗ್ರಾಮಸ್ಥರು, ಆತನ ಮೃತ ದೇಹವನ್ನು ಉಪ್ಪಿನಲ್ಲಿ ಮುಚ್ಚಿಟ್ಟಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಪ್ಪಿನಲ್ಲಿ ಮೃತದೇಹವನ್ನು ಮುಚ್ಚಿಟ್ಟರೆ, ಜೀವ ಮರಳಿ ಬರುತ್ತದೆಂಬ ಮೌಢ್ಯದ ಸಂದೇಶವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ಆ ಸಂದೇಶವನ್ನು ನಂಬಿದ ಬಾಲಕನ ತಂದೆ ಶೇಖರ್ ಮತ್ತು ತಾಯಿ ಗಂಗಮ್ಮ ಹಾಗೂ ಗ್ರಾಮಸ್ಥರು ಮೃತನ ದೇಹವನ್ನು ಎರಡು ಗಂಟೆಗಳ ಕಾಲ ಉಪ್ಪಿನಲ್ಲಿ ಹುದುಗಿಸಿಡಲು ನಿರ್ಧರಿಸಿದ್ದಾರೆ. ಬಳಿಕ, ದೇಹವನ್ನು ನಾಲ್ಕು ಗಂಟೆಗಳ ಕಾಲ ಉಪ್ಪಿನ ಅಡಿಯಲ್ಲಿ ದೇಹವನ್ನು ಇರಿಸಿದ್ದಾರೆ. ಆದರೆ, ಏನೂ ಆಗಲಿಲ್ಲ. ಬಳಿಕ, ಮೃತದೇಹವನ್ನು ಸುಟ್ಟುಹಾಕಿದ್ದಾರೆ.

ಉಪ್ಪಿನಲ್ಲಿ ಇರಿಸಲಾಗಿದ್ದ ಮೃತದೇಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅನೇಕ ಗ್ರಾಮಸ್ಥರು ಈ ವಿಷಯವನ್ನು ಚರ್ಚಿಸಿದ್ದಾರೆ.

“ಸಾವಿನ ಎರಡು ಗಂಟೆಗಳೊಳಗೆ ಅವರ ದೇಹವನ್ನು ಉಪ್ಪಿನ ಅಡಿಯಲ್ಲಿ ಇರಿಸಿದರೆ, ನಾವು ವ್ಯಕ್ತಿಯನ್ನು ಮತ್ತೆ ಬದುಕಿಸಬಹುದು ಎಂಬ ಪೋಸ್ಟ್ ಅನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೆವು. ಇದರ ನಂತರ, ನಾವು ಬಾಲಕ ಸುರೇಶನ ದೇಹದ ಮೇಲೆ 100 ಕೆಜಿಗಿಂತ ಹೆಚ್ಚು ಉಪ್ಪನ್ನು ಹಾಕಿದ್ದೆವು. ಅವನ ಮುಖವನ್ನು ಮಾತ್ರ ಮುಚ್ಚದೆ ಬಿಡಲಾಗಿತ್ತು. ಅದನ್ನು ನಾವು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಇರಿಸಿದ್ದೆವು. ನಾವು ಅವನನ್ನು ಮತ್ತೆ ಬದುಕಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಆತನ ದೇಹವನ್ನು ಸುಟ್ಟು ಹಾಕಿದೆವು” ಎಂದು ಸಿರವರ ಗ್ರಾಮದಲ್ಲಿ ವಾಸಿಸುವ ತಿಪ್ಪೇಸ್ವಾಮಿ ಮತ್ತು ಗಣೇಶ್ ಹೇಳಿದ್ದಾರೆ.

ಮೌಢ್ಯ ಬಿತ್ತಿದ ಸಂದೇಶದಲ್ಲಿ ಏನಿದೆ?

ಮೌಢ್ಯವನ್ನು ಬಿತ್ತುವ ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಪೋಸ್ಟ್ ಹೀಗಿದೆ:

ಅತಿ ಮುಖ್ಯ ಮಾಹಿತಿ: ಯಾರಾದರೂ ನೀರಿನಲ್ಲಿ ಮುಳುಗಿ ಸತ್ತರೆ ಮತ್ತು ಅವರ ದೇಹವು 3-4 ಗಂಟೆಗಳಲ್ಲಿ ಪತ್ತೆಯಾದರೆ, ನಾವು ಅವನ ಜೀವವನ್ನು ಮರಳಿ ತರಲು ಸಾಧ್ಯವಿದೆ. ಯಾರಾದರೂ ಅಂತಹ ಅಪಘಾತವನ್ನು ನೋಡಿದ್ದರೆ ಅಥವಾ ಕೇಳಿದರೆ, ತಕ್ಷಣ ನಮಗೆ ತಿಳಿಸಿ… ಯಾರದ್ದೋ ಜೀವ ಉಳಿಸಬಹುದು. ನಮ್ಮ ಮೊಬೈಲ್‌ ಸಂಖ್ಯೆ ಪ್ರಶಾಂತ್ ತ್ರಿಪಾಠಿ: 919454311111, 919335673001 ಆಗಿದೆ.

ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ತಲುಪಿಸಬೇಕಾಗಿ ನಿಮ್ಮೆಲ್ಲರಲ್ಲಿ ವಿನಮ್ರ ವಿನಂತಿ. ನಾವು ಯಾರೊಬ್ಬರ ಜೀವವನ್ನು ಉಳಿಸಲು ಸಾಧ್ಯವಾದರೆ, ನಮ್ಮ ಜೀವನದಲ್ಲಿ ನಾವು ಯಶಸ್ವಿಯಾಗುತ್ತೇವೆ. ಧನ್ಯವಾದಗಳು.

ಮುಳುಗುವಿಕೆಯಿಂದ ಪ್ರಾಣ ಕಳೆದುಕೊಂಡವರಿಗೆ ಚಿಕಿತ್ಸೆ:

ಒಂದೂವರೆ ಕ್ವಿಂಟಾಲ್ ಉಪ್ಪನ್ನು ಹಾಸಿಗೆಯಂತೆ ಹಾಕಿ, ರೋಗಿಯನ್ನು ಅದರ ಮೇಲೆ ಬಟ್ಟೆಯೊಂದಿಗೆ ಮಲಗಿಸಿ. ಉಪ್ಪು ನಿಧಾನವಾಗಿ ದೇಹದಿಂದ ನೀರನ್ನು ಹೀರಿಕೊಳ್ಳುತ್ತದೆ. ವ್ಯಕ್ತಿಗೆ ನಿಧಾನವಾಗಿ ಪ್ರಜ್ಞೆ ಬರುತ್ತದೆ. ವ್ಯಕ್ತಿಯು ಪ್ರಜ್ಞೆಯನ್ನು ಮರಳಿ ಪಡೆದಾಗ, ಅವನನ್ನು ಆಸ್ಪತ್ರೆಗೆ ಕರೆದೊಯ್ಯಿರಿ. ಇದಕ್ಕೂ ಮುನ್ನ ಆಸ್ಪತ್ರೆಗೆ ಕರೆದೊಯ್ದು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದ ವ್ಯಕ್ತಿಯನ್ನು ಉಪ್ಪಿನ ಚಿಕಿತ್ಸೆ ಮಾಡಿ ಬದುಕಿಸಿದ್ದೇವೆ. ದೇವರ ದಯೆ ಇದ್ದರೆ ಸತ್ತವನೂ ಕೂಡ ಬದುಕುತ್ತಾನೆ. ಪ್ರಯತ್ನ ಮಾಡುವುದರಲ್ಲಿ ತಪ್ಪೇನಿಲ್ಲ.

ವೈದ್ಯರು ಸತ್ತರು ಎಂದು ಘೋಷಿಸಿದ ನಂತರ ಸಂಸ್ಕಾರ ಮಾಡಲು ಆತುರಪಡಬೇಡಿ. ಸಾಧ್ಯವಾದಷ್ಟು ಬೇಗ ಉಪ್ಪಿನ ಚಿಕಿತ್ಸೆ ಮಾಡಿ. ರಾತ್ರಿಯಾದರೂ ಪರವಾಗಿಲ್ಲ. ನಗರಗಳಲ್ಲಿ ಅಂಗಡಿಗಳ ಮುಂದೆ ಉಪ್ಪಿನ ಚೀಲ ಗಳನ್ನು ಇಟ್ಟಿರುತ್ತಾರೆ. ವ್ಯಕ್ತಿಯನ್ನು ಕೂಡಲೇ ಕಾರ್ ಅಥವಾ ಜೀಪಿನಲ್ಲಿ ಅಲ್ಲಿಗೆ ಕರೆದುಕೊಂಡು ಹೋಗಿ, ಉಪ್ಪಿನ ಮೂಟೆಗಳನ್ನು ಬೇಗಬೇಗನೆ ಸುರಿದು ನೀರಿನಲ್ಲಿ ಮುಳುಗಿ ಸತ್ತ ವ್ಯಕ್ತಿಯನ್ನು ಬೇಗನೆ ಉಪ್ಪಿನ ರಾಶಿಯ ಮೇಲೆ ಮಲಗಿಸಿ. ಅಂಗಡಿಯವನ ಗುರುತನ್ನು ಬೆಳಿಗ್ಗೆ ಪತ್ತೆ ಹಚ್ಚಿ ಆತನಿಗೆ ಹಣ ನೀಡಬಹುದು. ಆದರೆ ಪ್ರಾಣ ಉಳಿಸಲು ಸಿಗುವ ಒಂದು ಅವಕಾಶವನ್ನು ಸಹ ಬಿಡಬೇಡಿ.

ಸೂಚನೆ: ಮುಳುಗಿದ ಸಮಯ ಕಡಿಮೆಯಾದಷ್ಟೂ ಬೇಗ ಆ ವ್ಯಕ್ತಿಗೆ ಪ್ರಜ್ಞೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ, ಪ್ರತಿ ಕೆಲಸವನ್ನು ಯುದ್ಧ ಮಟ್ಟದಲ್ಲಿ ಮಾಡಿ. ಕೆಲವರು ಉಪ್ಪು ತರಲು ಮುಂದಾದರೆ, ಫಲಿತಾಂಶವು ಶೀಘ್ರದಲ್ಲೇ ಲಭ್ಯವಾಗುತ್ತದೆ. ದಯವಿಟ್ಟು ಸಂದೇಶವನ್ನು ಫಾರ್ವರ್ಡ್ ಮಾಡಿ, ಯಾರೊಬ್ಬರ ಜೀವವನ್ನು ಉಳಿಸಲು ಇದು ಉಪಯುಕ್ತವಾಗಬಹುದು.

ಇದನ್ನೂ ಓದಿರಿ: ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

-ಹೀಗೆ ಮೌಢ್ಯವನ್ನು ಬಿತ್ತಲಾಗಿದೆ. ಇದನ್ನು ಅನೇಕರು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವುದನ್ನು ಕಾಣಬಹುದು. (‘ನಾನುಗೌರಿ.ಕಾಂ’ ಇಲ್ಲಿನ ನಂಬರ್‌ಗಳಿಗೆ ಕರೆ ಮಾಡಿದಾಗ ಬ್ಯುಸಿ ಬಂದಿದೆ ಹಾಗೂ ಒಂದು ನಂಬರ್‌ ಸ್ವಿಚ್ ಆಫ್ ಆಗಿದೆ. ಯಾರೂ ಕೂಡ ಈ ನಂಬರ್‌ಗಳಿಗೆ ಕರೆ ಮಾಡಬಾರದೆಂದು ವಿನಂತಿಸುತ್ತೇವೆ. ಇದು ಸುಳ್ಳು ಸಂದೇಶವೆಂದು ಕನ್ನಡದ ಫ್ಯಾಕ್ಟ್‌ಚೆಕ್ ಜಾಲತಾಣ ‘ಏನ್‌ಸುದ್ದಿ.ಕಾಂ’ ವರದಿ ಮಾಡಿತ್ತು. ವರದಿಯನ್ನು ‘ಇಲ್ಲಿ’ ಓದಬಹುದು.)

No photo description available.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....