Homeಕರ್ನಾಟಕ25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

- Advertisement -
- Advertisement -

25 ವರ್ಷಗಳ ಹಿಂದೆ ಕುಟುಂಬದೊಂದಿಗೆ ಸಂಪರ್ಕ ಕಳೆದುಕೊಂಡ ಕರ್ನಾಟಕದ 50 ವರ್ಷದ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ವೃದ್ಧಾಶ್ರಮದಲ್ಲಿದ್ದ ಮಹಿಳೆ ಸಾಕಮ್ಮ ಮತ್ತೆ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾರೆ. ಅಧಿಕಾರಿಗಳ ನೆರವಿನಿಂದ ಬುಧವಾರ ಅವರು ತನ್ನ ಮನೆಗೆ ಮರಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಡಣನಾಯಕನಕೆರೆ ಗ್ರಾಮದ ಸಾಕಮ್ಮ ಅವರು 25 ವರ್ಷಗಳ ಹಿಂದೆ ಹೊಸಪೇಟೆಯಲ್ಲಿ ಸಂಬಂಧಿಕರ ಮದುವೆಗೆ ಮಕ್ಕಳೊಂದಿಗೆ ಹಾಜರಾಗಿದ್ದರು. ಮಾನಸಿಕ ಅಸ್ವಸ್ತರಾಗಿದ್ದ ಅವರು, ಆಕಸ್ಮಿಕವಾಗಿ ಚಂಡೀಗಢಕ್ಕೆ ರೈಲನ್ನು ಹತ್ತಿದರು. ನಂತರ, ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಕಷ್ಟಕರ ಸಂದರ್ಭಗಳಲ್ಲಿ ವಾಸಿಸುತ್ತಿದ್ದರು.

ಸಾಕಮ್ಮನ ಮನೆಯವರು ನಾಪತ್ತೆ ದೂರು ದಾಖಲಿಸಿದ್ದರು; ಇಷ್ಟು ವರ್ಷಗಳಾದರೂ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ಅಂತ್ಯ ಸಂಸ್ಕಾರವನ್ನೂ ಮಾಡಿದ್ದರು.

ಕರ್ನಾಟಕ ಮೂಲದ ಯುವ ಐಪಿಎಸ್ ಅಧಿಕಾರಿಯೊಬ್ಬರು ವೃದ್ಧಾಶ್ರಮಕ್ಕೆ ಭೇಟಿ ನೀಡಿದಾಗ ಮಹಿಳೆ ಕನ್ನಡದಲ್ಲಿ ಮಾತನಾಡುತ್ತಿರುವುದನ್ನು ಕಂಡು ಆಕೆಯ ಸಂಪರ್ಕವನ್ನು ಪತ್ತೆಹಚ್ಚಿದ್ದಾರೆ.

ಸಾಕಮ್ಮ ಅವರನ್ನು ಕರೆತರಲು ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ.

ಮಂಡಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಪೊಲೀಸ್ ಅಧಿಕಾರಿ ರವಿನಂದನ್ ಬಿ ಎಂ, ಸಾಕಮ್ಮ ಅವರೊಂದಿಗೆ ಮಾತನಾಡಿದ ವಿಡಿಯೋ ಪೋಸ್ಟ್ ಮಾಡಿದ್ದರು. ನಂತರ ಈ ವಿಡಿಯೋವನ್ನು ಬೆಂಗಳೂರಿನಲ್ಲಿರುವ ತನ್ನ ಸ್ನೇಹಿತ ವಿಜಯ್ ಕುಮಾರ್ ಗೆ ಕಳುಹಿಸಿದ್ದಾರೆ. ವಿಜಯ್ ಕುಮಾರ್ ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ಪೋಸ್ಟ್ ನೋಡಿದ ತಕ್ಷಣ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರು ಗುರುವಾರ ಮಂಡಿ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿನಂದನ್ ಅವರನ್ನು ಸಂಪರ್ಕಿಸಿದರು. ಅಂದಿನಿಂದ ಸಮಾಜ ಕಲ್ಯಾಣ ಇಲಾಖೆಯು ಸಾಕಮ್ಮನನ್ನು ಹಿಂದಿರುಗಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಮಂಡಿ ನಿರಾಶ್ರಿತರ ಕೇಂದ್ರದಲ್ಲಿರುವ ಸಾಕಮ್ಮ ಅವರನ್ನು ಕರೆತರಲು ಸಮಾಜ ಕಲ್ಯಾಣ ಇಲಾಖೆಯ ತ್ರಿಸದಸ್ಯರ ತಂಡ ತೆರಳಿತ್ತು. “ಚಂಡೀಗಢದಿಂದ ಬೆಂಗಳೂರಿಗೆ ವಿಮಾನದಲ್ಲಿ ಬರಲಿದ್ದಾರೆ. ನಂತರ, ಅವರನ್ನು ಕರೆತರುತ್ತೇವೆ” ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದರು.

ಸದ್ಯ ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯಲ್ಲಿ ವಾಸವಾಗಿರುವ ಸಾಕಮ್ಮ ಅವರ ಪುತ್ರ ಯಲ್ಲಪ್ಪ, “ನಮ್ಮ ತಾಯಿ ಚಿಕ್ಕಂದಿನಲ್ಲಿ ನಾಪತ್ತೆಯಾಗಿದ್ದರು, ಈಗ ಪತ್ತೆಯಾಗಿದ್ದಾರೆ, ನಮ್ಮ ತಾಯಿ ಮರಳಿ ಬಂದರೆ ನಮಗೆ ಸಂತೋಷವಾಗುತ್ತದೆ” ಎಂದರು.

ಸಾಕಮ್ಮ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಅವರ ಪುತ್ರ.

ಸಾಕಮ್ಮನ ಸಂಬಂಧಿಯೊಬ್ಬರು ಮಾತನಾಡಿ, “ನಮ್ಮ ಚಿಕ್ಕಮ್ಮ ನಾಪತ್ತೆಯಾಗಿ ಸುಮಾರು 20 ವರ್ಷಗಳಾಗಿವೆ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಆಕೆ ತೀರಿಕೊಂಡಿದ್ದಾಳೆಂದು ತಿಥಿ ನಡೆಸಿದ್ದೆವು. ಅಧಿಕಾರಿ, ಮೂಲತಃ ಹಾಸನ ಜಿಲ್ಲೆಯವರು, ಮಕ್ಕಳಿಗೆ ಈಗ ತಾಯಿ ಇದ್ದಾರೆ ಎಂದು ನಮಗೆ ಸಂತೋಷವಾಗಿದೆ” ಎಂದರು.

ವಿಡಿಯೋದಲ್ಲಿ ಸಾಕಮ್ಮ ತನ್ನ ಹುಟ್ಟೂರು ಹೊಸಪೇಟೆ ಸಮೀಪದ ಡಣಾನಾಯಕನಹಳ್ಳಿ ಎಂದು ಹೇಳಿದ್ದಾಳೆ. ತಾನು ರೈಲಿನಲ್ಲಿ ಮಂಡಿ ಜಿಲ್ಲೆಗೆ ಬಂದು ಕೆಲವು ವರ್ಷಗಳಿಂದ ಇಲ್ಲೇ ಇದ್ದೇನೆ ಎಂದು ಹೇಳಿದ್ದರು. ತನ್ನ ಹಳ್ಳಿಯಲ್ಲಿ ತನಗೆ ಒಬ್ಬ ಅಣ್ಣ ಮತ್ತು ತಂಗಿ ಇದ್ದಾರೆ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ; ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಆದಿವಾಸಿ, ಎಡಪಕ್ಷಗಳಿಂದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...