Homeಕರ್ನಾಟಕ25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

- Advertisement -
- Advertisement -

25 ವರ್ಷಗಳ ಹಿಂದೆ ಕುಟುಂಬದೊಂದಿಗೆ ಸಂಪರ್ಕ ಕಳೆದುಕೊಂಡ ಕರ್ನಾಟಕದ 50 ವರ್ಷದ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ವೃದ್ಧಾಶ್ರಮದಲ್ಲಿದ್ದ ಮಹಿಳೆ ಸಾಕಮ್ಮ ಮತ್ತೆ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾರೆ. ಅಧಿಕಾರಿಗಳ ನೆರವಿನಿಂದ ಬುಧವಾರ ಅವರು ತನ್ನ ಮನೆಗೆ ಮರಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಡಣನಾಯಕನಕೆರೆ ಗ್ರಾಮದ ಸಾಕಮ್ಮ ಅವರು 25 ವರ್ಷಗಳ ಹಿಂದೆ ಹೊಸಪೇಟೆಯಲ್ಲಿ ಸಂಬಂಧಿಕರ ಮದುವೆಗೆ ಮಕ್ಕಳೊಂದಿಗೆ ಹಾಜರಾಗಿದ್ದರು. ಮಾನಸಿಕ ಅಸ್ವಸ್ತರಾಗಿದ್ದ ಅವರು, ಆಕಸ್ಮಿಕವಾಗಿ ಚಂಡೀಗಢಕ್ಕೆ ರೈಲನ್ನು ಹತ್ತಿದರು. ನಂತರ, ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಕಷ್ಟಕರ ಸಂದರ್ಭಗಳಲ್ಲಿ ವಾಸಿಸುತ್ತಿದ್ದರು.

ಸಾಕಮ್ಮನ ಮನೆಯವರು ನಾಪತ್ತೆ ದೂರು ದಾಖಲಿಸಿದ್ದರು; ಇಷ್ಟು ವರ್ಷಗಳಾದರೂ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ಅಂತ್ಯ ಸಂಸ್ಕಾರವನ್ನೂ ಮಾಡಿದ್ದರು.

ಕರ್ನಾಟಕ ಮೂಲದ ಯುವ ಐಪಿಎಸ್ ಅಧಿಕಾರಿಯೊಬ್ಬರು ವೃದ್ಧಾಶ್ರಮಕ್ಕೆ ಭೇಟಿ ನೀಡಿದಾಗ ಮಹಿಳೆ ಕನ್ನಡದಲ್ಲಿ ಮಾತನಾಡುತ್ತಿರುವುದನ್ನು ಕಂಡು ಆಕೆಯ ಸಂಪರ್ಕವನ್ನು ಪತ್ತೆಹಚ್ಚಿದ್ದಾರೆ.

ಸಾಕಮ್ಮ ಅವರನ್ನು ಕರೆತರಲು ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ.

ಮಂಡಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಪೊಲೀಸ್ ಅಧಿಕಾರಿ ರವಿನಂದನ್ ಬಿ ಎಂ, ಸಾಕಮ್ಮ ಅವರೊಂದಿಗೆ ಮಾತನಾಡಿದ ವಿಡಿಯೋ ಪೋಸ್ಟ್ ಮಾಡಿದ್ದರು. ನಂತರ ಈ ವಿಡಿಯೋವನ್ನು ಬೆಂಗಳೂರಿನಲ್ಲಿರುವ ತನ್ನ ಸ್ನೇಹಿತ ವಿಜಯ್ ಕುಮಾರ್ ಗೆ ಕಳುಹಿಸಿದ್ದಾರೆ. ವಿಜಯ್ ಕುಮಾರ್ ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ಪೋಸ್ಟ್ ನೋಡಿದ ತಕ್ಷಣ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರು ಗುರುವಾರ ಮಂಡಿ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿನಂದನ್ ಅವರನ್ನು ಸಂಪರ್ಕಿಸಿದರು. ಅಂದಿನಿಂದ ಸಮಾಜ ಕಲ್ಯಾಣ ಇಲಾಖೆಯು ಸಾಕಮ್ಮನನ್ನು ಹಿಂದಿರುಗಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಮಂಡಿ ನಿರಾಶ್ರಿತರ ಕೇಂದ್ರದಲ್ಲಿರುವ ಸಾಕಮ್ಮ ಅವರನ್ನು ಕರೆತರಲು ಸಮಾಜ ಕಲ್ಯಾಣ ಇಲಾಖೆಯ ತ್ರಿಸದಸ್ಯರ ತಂಡ ತೆರಳಿತ್ತು. “ಚಂಡೀಗಢದಿಂದ ಬೆಂಗಳೂರಿಗೆ ವಿಮಾನದಲ್ಲಿ ಬರಲಿದ್ದಾರೆ. ನಂತರ, ಅವರನ್ನು ಕರೆತರುತ್ತೇವೆ” ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದರು.

ಸದ್ಯ ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯಲ್ಲಿ ವಾಸವಾಗಿರುವ ಸಾಕಮ್ಮ ಅವರ ಪುತ್ರ ಯಲ್ಲಪ್ಪ, “ನಮ್ಮ ತಾಯಿ ಚಿಕ್ಕಂದಿನಲ್ಲಿ ನಾಪತ್ತೆಯಾಗಿದ್ದರು, ಈಗ ಪತ್ತೆಯಾಗಿದ್ದಾರೆ, ನಮ್ಮ ತಾಯಿ ಮರಳಿ ಬಂದರೆ ನಮಗೆ ಸಂತೋಷವಾಗುತ್ತದೆ” ಎಂದರು.

ಸಾಕಮ್ಮ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಅವರ ಪುತ್ರ.

ಸಾಕಮ್ಮನ ಸಂಬಂಧಿಯೊಬ್ಬರು ಮಾತನಾಡಿ, “ನಮ್ಮ ಚಿಕ್ಕಮ್ಮ ನಾಪತ್ತೆಯಾಗಿ ಸುಮಾರು 20 ವರ್ಷಗಳಾಗಿವೆ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಆಕೆ ತೀರಿಕೊಂಡಿದ್ದಾಳೆಂದು ತಿಥಿ ನಡೆಸಿದ್ದೆವು. ಅಧಿಕಾರಿ, ಮೂಲತಃ ಹಾಸನ ಜಿಲ್ಲೆಯವರು, ಮಕ್ಕಳಿಗೆ ಈಗ ತಾಯಿ ಇದ್ದಾರೆ ಎಂದು ನಮಗೆ ಸಂತೋಷವಾಗಿದೆ” ಎಂದರು.

ವಿಡಿಯೋದಲ್ಲಿ ಸಾಕಮ್ಮ ತನ್ನ ಹುಟ್ಟೂರು ಹೊಸಪೇಟೆ ಸಮೀಪದ ಡಣಾನಾಯಕನಹಳ್ಳಿ ಎಂದು ಹೇಳಿದ್ದಾಳೆ. ತಾನು ರೈಲಿನಲ್ಲಿ ಮಂಡಿ ಜಿಲ್ಲೆಗೆ ಬಂದು ಕೆಲವು ವರ್ಷಗಳಿಂದ ಇಲ್ಲೇ ಇದ್ದೇನೆ ಎಂದು ಹೇಳಿದ್ದರು. ತನ್ನ ಹಳ್ಳಿಯಲ್ಲಿ ತನಗೆ ಒಬ್ಬ ಅಣ್ಣ ಮತ್ತು ತಂಗಿ ಇದ್ದಾರೆ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ; ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಆದಿವಾಸಿ, ಎಡಪಕ್ಷಗಳಿಂದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...