Homeಕರ್ನಾಟಕ25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

- Advertisement -
- Advertisement -

25 ವರ್ಷಗಳ ಹಿಂದೆ ಕುಟುಂಬದೊಂದಿಗೆ ಸಂಪರ್ಕ ಕಳೆದುಕೊಂಡ ಕರ್ನಾಟಕದ 50 ವರ್ಷದ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ವೃದ್ಧಾಶ್ರಮದಲ್ಲಿದ್ದ ಮಹಿಳೆ ಸಾಕಮ್ಮ ಮತ್ತೆ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾರೆ. ಅಧಿಕಾರಿಗಳ ನೆರವಿನಿಂದ ಬುಧವಾರ ಅವರು ತನ್ನ ಮನೆಗೆ ಮರಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಡಣನಾಯಕನಕೆರೆ ಗ್ರಾಮದ ಸಾಕಮ್ಮ ಅವರು 25 ವರ್ಷಗಳ ಹಿಂದೆ ಹೊಸಪೇಟೆಯಲ್ಲಿ ಸಂಬಂಧಿಕರ ಮದುವೆಗೆ ಮಕ್ಕಳೊಂದಿಗೆ ಹಾಜರಾಗಿದ್ದರು. ಮಾನಸಿಕ ಅಸ್ವಸ್ತರಾಗಿದ್ದ ಅವರು, ಆಕಸ್ಮಿಕವಾಗಿ ಚಂಡೀಗಢಕ್ಕೆ ರೈಲನ್ನು ಹತ್ತಿದರು. ನಂತರ, ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಕಷ್ಟಕರ ಸಂದರ್ಭಗಳಲ್ಲಿ ವಾಸಿಸುತ್ತಿದ್ದರು.

ಸಾಕಮ್ಮನ ಮನೆಯವರು ನಾಪತ್ತೆ ದೂರು ದಾಖಲಿಸಿದ್ದರು; ಇಷ್ಟು ವರ್ಷಗಳಾದರೂ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ಅಂತ್ಯ ಸಂಸ್ಕಾರವನ್ನೂ ಮಾಡಿದ್ದರು.

ಕರ್ನಾಟಕ ಮೂಲದ ಯುವ ಐಪಿಎಸ್ ಅಧಿಕಾರಿಯೊಬ್ಬರು ವೃದ್ಧಾಶ್ರಮಕ್ಕೆ ಭೇಟಿ ನೀಡಿದಾಗ ಮಹಿಳೆ ಕನ್ನಡದಲ್ಲಿ ಮಾತನಾಡುತ್ತಿರುವುದನ್ನು ಕಂಡು ಆಕೆಯ ಸಂಪರ್ಕವನ್ನು ಪತ್ತೆಹಚ್ಚಿದ್ದಾರೆ.

ಸಾಕಮ್ಮ ಅವರನ್ನು ಕರೆತರಲು ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ.

ಮಂಡಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಪೊಲೀಸ್ ಅಧಿಕಾರಿ ರವಿನಂದನ್ ಬಿ ಎಂ, ಸಾಕಮ್ಮ ಅವರೊಂದಿಗೆ ಮಾತನಾಡಿದ ವಿಡಿಯೋ ಪೋಸ್ಟ್ ಮಾಡಿದ್ದರು. ನಂತರ ಈ ವಿಡಿಯೋವನ್ನು ಬೆಂಗಳೂರಿನಲ್ಲಿರುವ ತನ್ನ ಸ್ನೇಹಿತ ವಿಜಯ್ ಕುಮಾರ್ ಗೆ ಕಳುಹಿಸಿದ್ದಾರೆ. ವಿಜಯ್ ಕುಮಾರ್ ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ಪೋಸ್ಟ್ ನೋಡಿದ ತಕ್ಷಣ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರು ಗುರುವಾರ ಮಂಡಿ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿನಂದನ್ ಅವರನ್ನು ಸಂಪರ್ಕಿಸಿದರು. ಅಂದಿನಿಂದ ಸಮಾಜ ಕಲ್ಯಾಣ ಇಲಾಖೆಯು ಸಾಕಮ್ಮನನ್ನು ಹಿಂದಿರುಗಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಮಂಡಿ ನಿರಾಶ್ರಿತರ ಕೇಂದ್ರದಲ್ಲಿರುವ ಸಾಕಮ್ಮ ಅವರನ್ನು ಕರೆತರಲು ಸಮಾಜ ಕಲ್ಯಾಣ ಇಲಾಖೆಯ ತ್ರಿಸದಸ್ಯರ ತಂಡ ತೆರಳಿತ್ತು. “ಚಂಡೀಗಢದಿಂದ ಬೆಂಗಳೂರಿಗೆ ವಿಮಾನದಲ್ಲಿ ಬರಲಿದ್ದಾರೆ. ನಂತರ, ಅವರನ್ನು ಕರೆತರುತ್ತೇವೆ” ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದರು.

ಸದ್ಯ ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯಲ್ಲಿ ವಾಸವಾಗಿರುವ ಸಾಕಮ್ಮ ಅವರ ಪುತ್ರ ಯಲ್ಲಪ್ಪ, “ನಮ್ಮ ತಾಯಿ ಚಿಕ್ಕಂದಿನಲ್ಲಿ ನಾಪತ್ತೆಯಾಗಿದ್ದರು, ಈಗ ಪತ್ತೆಯಾಗಿದ್ದಾರೆ, ನಮ್ಮ ತಾಯಿ ಮರಳಿ ಬಂದರೆ ನಮಗೆ ಸಂತೋಷವಾಗುತ್ತದೆ” ಎಂದರು.

ಸಾಕಮ್ಮ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಅವರ ಪುತ್ರ.

ಸಾಕಮ್ಮನ ಸಂಬಂಧಿಯೊಬ್ಬರು ಮಾತನಾಡಿ, “ನಮ್ಮ ಚಿಕ್ಕಮ್ಮ ನಾಪತ್ತೆಯಾಗಿ ಸುಮಾರು 20 ವರ್ಷಗಳಾಗಿವೆ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಆಕೆ ತೀರಿಕೊಂಡಿದ್ದಾಳೆಂದು ತಿಥಿ ನಡೆಸಿದ್ದೆವು. ಅಧಿಕಾರಿ, ಮೂಲತಃ ಹಾಸನ ಜಿಲ್ಲೆಯವರು, ಮಕ್ಕಳಿಗೆ ಈಗ ತಾಯಿ ಇದ್ದಾರೆ ಎಂದು ನಮಗೆ ಸಂತೋಷವಾಗಿದೆ” ಎಂದರು.

ವಿಡಿಯೋದಲ್ಲಿ ಸಾಕಮ್ಮ ತನ್ನ ಹುಟ್ಟೂರು ಹೊಸಪೇಟೆ ಸಮೀಪದ ಡಣಾನಾಯಕನಹಳ್ಳಿ ಎಂದು ಹೇಳಿದ್ದಾಳೆ. ತಾನು ರೈಲಿನಲ್ಲಿ ಮಂಡಿ ಜಿಲ್ಲೆಗೆ ಬಂದು ಕೆಲವು ವರ್ಷಗಳಿಂದ ಇಲ್ಲೇ ಇದ್ದೇನೆ ಎಂದು ಹೇಳಿದ್ದರು. ತನ್ನ ಹಳ್ಳಿಯಲ್ಲಿ ತನಗೆ ಒಬ್ಬ ಅಣ್ಣ ಮತ್ತು ತಂಗಿ ಇದ್ದಾರೆ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ; ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಆದಿವಾಸಿ, ಎಡಪಕ್ಷಗಳಿಂದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...