Homeಕರ್ನಾಟಕಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ...

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

- Advertisement -
- Advertisement -

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲುಗೊಳಿಸಿ, ಹಲ್ಲೆ ನಡೆಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ.

ಈ ಕುರಿತು ದಲಿತ  ಮುಖಂಡರಾದ ಈಶ್ವರಿ ಪದ್ಮುಂಜ ಅವರು ವಿವರಣೆ ನೀಡಿದ್ದು, ‘ವಾರ್ತಾ ಭಾರತಿ’ ವರದಿ ಮಾಡಿದೆ.

“ಸರಕಾರಿ ಜಮೀನಿನಲ್ಲಿ ನಿವೇಶನದ ವಿಚಾರವನ್ನು ಮುಂದಿಟ್ಟುಕೊಂಡು ದುಷ್ಕರ್ಮಿಗಳ ತಂಡವೊಂದು ಆದಿವಾಸಿ ಸಮುದಾಯದ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕ ರಸ್ತೆಯಲ್ಲಿ ಆಕೆಯ ಉಟ್ಟ ಬಟ್ಟೆಗಳನ್ನು ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಕೇಕೆ ಹಾಕಿ ಅದನ್ನು ವೀಡಿಯೊ ಚಿತ್ರೀಕರಣವನ್ನೂ ಮಾಡಿದ ಅಮಾನವೀಯ ಘಟನೆ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ” ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಳಕೆ ನಿವಾಸಿ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರು ಈ ಕೃತ್ಯವನ್ನು ಎಸಗಿದವರು. ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏ.19 ರಂದು ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸಲ್ಲಿಸಿದ್ದ 94ಸಿ ಅರ್ಜಿಯ ಅಳತೆಗೆಂದು ಅಧಿಕಾರಿಗಳು ಬಂದಿದ್ದರು. ಈ ಸಂದರ್ಭ ಜಾಗದ ಬಗ್ಗೆ ಇನ್ನೊಂದು ತಂಡ ತಕರಾರು ತೆಗೆದಿದೆ. ಇದರಿಂದಾಗಿ ಅಳತೆಗೆ ಬಂದವರು ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದಾರೆ. ಅಧಿಕಾರಿಗಳು ತೆರಳಿದ ಬಳಿಕ ಸಾರ್ವಜನಿಕ ರಸ್ತೆಯಲ್ಲಿ ನಿಂತಿದ್ದ ಮಹಿಳೆಯರ ಮೇಲೆ ಈ ತಂಡ ಎರಗಿದೆ ಎಂದು ಅವರು ವಿವರಿಸಿದ್ದಾರೆ.

ಮಹಿಳೆಯರೂ ಇದ್ದ ತಂಡ ಮೊದಲು ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಕ್ಕನ ಮೇಲೆ ಹಲ್ಲೆ ನಡೆಸಿದ್ದು, ಇದನ್ನು ನೋಡಿ ಅಕ್ಕನ ರಕ್ಷಣೆಗೆ ತೆರಳಿದ ತಂಗಿಯ ಮೇಲೆ ಇವರು ಮುಗಿಬಿದ್ದು ಆಕೆಯ ಬಟ್ಟೆಗಳನ್ನು ಸಂಪೂರ್ಣವಾಗಿ ಹರಿದುಹಾಕಿದ್ದಾರೆ. ಅಲ್ಲದೆ ಅನಾಗರಿಕರಂತೆ ಕೇಕೆ ಹಾಕಿ ಅರೆಬೆತ್ತಲೆಯಾಗಿದ್ದ ಮಹಿಳೆಯ ವಿಡಿಯೊ ಚಿತ್ರೀಕರಣ ಮಾಡಿದ್ದಾರೆ.  ಅಲ್ಲಿಂದ ಆಕೆಯನ್ನು ಮನೆಯ ಕಡೆಗೆ ಹೋಗಲೂ ಬಿಡದೆ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನು ನೋಡಿ ಬಂದ ಆಕೆಯ ತಾಯಿಯ ಮೇಲೂ ಇವರು ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳ ತಂಡ ಅಲ್ಲಿಂದ ತೆರಳಿದ ಬಳಿಕವಷ್ಟೇ ಈ ಮಹಿಳೆಯರಿಗೆ ಮನೆಗೆ ಹೋಗಲು ಸಾಧ್ಯವಾಯಿತು ಎಂದು ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಸ್ಥಳದಲ್ಲಿ ಗ್ರಾಪಂ ಸದಸ್ಯ ಸೇರಿದಂತೆ ಸುಮಾರು ಮೂವತ್ತಕ್ಕೂ ಅಧಿಕ ಜನರಿದ್ದರು. ಆದರೆ ಯಾರೂ ಅದನ್ನು ತಡೆಯಲು ಮುಂದಾಗಿಲ್ಲ ಎಂದು ವಿಷಾದಿಸಿದ್ದಾರೆ.

ಉಜಿರೆ ಗುರಿಪಳ್ಳ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಹತ್ತಾರು ವಾಹನಗಳಲ್ಲಿ ಹೋದವರೂ ಇದೆಲ್ಲ ನೋಡಿಕೊಂಡು ಹೋಗಿದ್ದಾರೆ. ಆದರೆ ಯಾರೂ ನಮ್ಮ ನೆರವಿಗೆ ಬರಲಿಲ್ಲ ಎಂದು ತಮ್ಮ ನೋವನ್ನು ದೌರ್ಜನ್ಯಕ್ಕೀಡಾದ ಮಹಿಳೆಯರು ತೋಡಿಕೊಳ್ಳುತ್ತಾರೆ ಎಂದು ಈಶ್ವರಿ ತಿಳಿಸಿದ್ದಾರೆ.

ಉತ್ತರ ಪ್ರದೇಶವನ್ನೂ ನಾಚಿಸುವ ರೀತಿಯಲ್ಲಿ ಉಜಿರೆಯಲ್ಲಿ ಆದಿವಾಸಿ ಸಮುದಾಯದ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಲಾಗಿದೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರವೃತ್ತಿಯಾಗಿದೆ. ಬಿಜೆಪಿ ಮುಖಂಡನ ನೇತೃತ್ವದ ತಂಡ ಈ ಕೃತ್ಯವನ್ನು ಎಸಗಿದ್ದು, ಆರಂಭದಲ್ಲಿ ಹಲವು ಒತ್ತಡಗಳಿಂದ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಯತ್ನಿಸಿದ್ದರು. ನಾವು ಹೋದ ಬಳಿಕವಷ್ಟೇ ಪ್ರಕರಣ ದಾಖಲಿಸಿದ್ದಾರೆ. ಕೃತ್ಯ ನಡೆಸಿದ ದುಷ್ಕರ್ಮಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ತಕ್ಷಣ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಠಾಣೆ ಚಲೋ ನಡೆಸಲಾಗುವುದು: ಶೇಖರ್‌ ಲಾಯಿಲ ಎಚ್ಚರಿಕೆ

ಸರ್ಕಾರಿ ಜಮೀನಿನ ನಿವೇಶನಕ್ಕೆ ಸಂಬಂಧಿಸಿದಂತೆ ಆದಿವಾಸಿ ಮಹಿಳೆಯರ ಮೇಲೆ ದಾಳಿ ನಡೆಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿದ ಕೃತ್ಯ ಅತ್ಯಂತ ಅಮಾನವೀಯವಾದುದು. ಇದರ ನೇತೃತ್ವವನ್ನು ಬಿಜೆಪಿ ಎಸ್ಟಿ ಮೋರ್ಛಾದ ಅಧ್ಯಕ್ಷ ವಹಿಸಿರುವುದು ಮಹಿಳೆಯರನ್ನು ಮಾತೆ , ದೇವತೆ ಎನ್ನುವವರ ನಿಜ ಬಣ್ಣ ಬಯಲಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

ಉಜಿರೆ ಗ್ರಾಮದಲ್ಲಿ ನಡೆದ ಈ ಅಮಾನವೀಯ ಕೃತ್ಯ ಇಡೀ ಮಾನವ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಮಹಿಳೆಯರನ್ನು ಮಾತೆ , ದೇವತೆ ಎನ್ನುವ ಬಿಜೆಪಿ ಪಕ್ಷದ ಎಸ್ಟಿ ಮೋರ್ಛಾದ ಜಿಲ್ಲಾಧ್ಯಕ್ಷ ಚೆನ್ನಕೇಶವ ಎಂಬಾತನ ನೇತೃತ್ವದಲ್ಲಿ ಮಹಿಳೆಯನ್ನು ನಡು ರಸ್ತೆಯಲ್ಲಿ ಅರಬೆತ್ತಲೆಗೊಳಿಸಿರುವುದು ರಾಮರಾಜ್ಯದ ಪರಿಕಲ್ಪನೆಯೇ? ಮಹಿಳೆಯರನ್ನು ಮಹಿಳೆಯರನ್ನು ಮಾತೆ , ದೇವತೆ ಎಂದು ಹೇಳುವುದು ನಿಮ್ಮ ಕಪಟ ನಾಟಕವೇ? ಎಂದು ಪ್ರಶ್ನಿಸಿದ್ದಾರೆ.

ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಶಾಸಕ ಹರೀಶ್ ಪೂಂಜಾರ ಮೌನ ಮಹಿಳೆಯನ್ನು ನಡು ಬೀದಿಯಲ್ಲಿ ಅರಬೆತ್ತಲೆಗೊಳಿಸಿರುವುದಕ್ಕೆ ಮೌನ ಸಮ್ಮತಿಯೇ ? ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಸಂಘಪರಿವಾರದ ಸಂಘಟನೆಗಳ ಹೋರಾಟ ಏಕಿಲ್ಲ? ಎಂದು ಕೇಳಿದ್ದಾರೆ.

ಈ ಘಟನೆ ಉತ್ತರ ಪ್ರದೇಶ, ಗುಜರಾತ್ ಮಾದರಿಯಂತಿದೆ. ಇಂತಹ ಘಟನೆಯ ಹಿಂದೆ ಶಾಸಕ ಹರೀಶ್ ಪೂಂಜಾರ ಮುಂದಿನ ಚುನಾವಣಾ ರಾಜಕೀಯದ ಹಿಡನ್ ಅಜೆಂಡಾ ಅಡಗಿದೆ. ತಪ್ಪಿತಸ್ಥ ಆರೋಪಿಗಳನ್ನು 36 ಘಂಟೆಗಳಲ್ಲಿ ಬಂಧಿಸದಿದ್ದರೆ ಪೋಲಿಸ್ ಠಾಣೆ ಚಲೋ ಕಾರ್ಯಕ್ರಮ ಹಮ್ಮಿಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....