Homeಕರ್ನಾಟಕಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ...

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

- Advertisement -
- Advertisement -

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲುಗೊಳಿಸಿ, ಹಲ್ಲೆ ನಡೆಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ.

ಈ ಕುರಿತು ದಲಿತ  ಮುಖಂಡರಾದ ಈಶ್ವರಿ ಪದ್ಮುಂಜ ಅವರು ವಿವರಣೆ ನೀಡಿದ್ದು, ‘ವಾರ್ತಾ ಭಾರತಿ’ ವರದಿ ಮಾಡಿದೆ.

“ಸರಕಾರಿ ಜಮೀನಿನಲ್ಲಿ ನಿವೇಶನದ ವಿಚಾರವನ್ನು ಮುಂದಿಟ್ಟುಕೊಂಡು ದುಷ್ಕರ್ಮಿಗಳ ತಂಡವೊಂದು ಆದಿವಾಸಿ ಸಮುದಾಯದ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕ ರಸ್ತೆಯಲ್ಲಿ ಆಕೆಯ ಉಟ್ಟ ಬಟ್ಟೆಗಳನ್ನು ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಕೇಕೆ ಹಾಕಿ ಅದನ್ನು ವೀಡಿಯೊ ಚಿತ್ರೀಕರಣವನ್ನೂ ಮಾಡಿದ ಅಮಾನವೀಯ ಘಟನೆ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ” ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಳಕೆ ನಿವಾಸಿ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರು ಈ ಕೃತ್ಯವನ್ನು ಎಸಗಿದವರು. ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏ.19 ರಂದು ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸಲ್ಲಿಸಿದ್ದ 94ಸಿ ಅರ್ಜಿಯ ಅಳತೆಗೆಂದು ಅಧಿಕಾರಿಗಳು ಬಂದಿದ್ದರು. ಈ ಸಂದರ್ಭ ಜಾಗದ ಬಗ್ಗೆ ಇನ್ನೊಂದು ತಂಡ ತಕರಾರು ತೆಗೆದಿದೆ. ಇದರಿಂದಾಗಿ ಅಳತೆಗೆ ಬಂದವರು ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದಾರೆ. ಅಧಿಕಾರಿಗಳು ತೆರಳಿದ ಬಳಿಕ ಸಾರ್ವಜನಿಕ ರಸ್ತೆಯಲ್ಲಿ ನಿಂತಿದ್ದ ಮಹಿಳೆಯರ ಮೇಲೆ ಈ ತಂಡ ಎರಗಿದೆ ಎಂದು ಅವರು ವಿವರಿಸಿದ್ದಾರೆ.

ಮಹಿಳೆಯರೂ ಇದ್ದ ತಂಡ ಮೊದಲು ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಕ್ಕನ ಮೇಲೆ ಹಲ್ಲೆ ನಡೆಸಿದ್ದು, ಇದನ್ನು ನೋಡಿ ಅಕ್ಕನ ರಕ್ಷಣೆಗೆ ತೆರಳಿದ ತಂಗಿಯ ಮೇಲೆ ಇವರು ಮುಗಿಬಿದ್ದು ಆಕೆಯ ಬಟ್ಟೆಗಳನ್ನು ಸಂಪೂರ್ಣವಾಗಿ ಹರಿದುಹಾಕಿದ್ದಾರೆ. ಅಲ್ಲದೆ ಅನಾಗರಿಕರಂತೆ ಕೇಕೆ ಹಾಕಿ ಅರೆಬೆತ್ತಲೆಯಾಗಿದ್ದ ಮಹಿಳೆಯ ವಿಡಿಯೊ ಚಿತ್ರೀಕರಣ ಮಾಡಿದ್ದಾರೆ.  ಅಲ್ಲಿಂದ ಆಕೆಯನ್ನು ಮನೆಯ ಕಡೆಗೆ ಹೋಗಲೂ ಬಿಡದೆ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನು ನೋಡಿ ಬಂದ ಆಕೆಯ ತಾಯಿಯ ಮೇಲೂ ಇವರು ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳ ತಂಡ ಅಲ್ಲಿಂದ ತೆರಳಿದ ಬಳಿಕವಷ್ಟೇ ಈ ಮಹಿಳೆಯರಿಗೆ ಮನೆಗೆ ಹೋಗಲು ಸಾಧ್ಯವಾಯಿತು ಎಂದು ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಸ್ಥಳದಲ್ಲಿ ಗ್ರಾಪಂ ಸದಸ್ಯ ಸೇರಿದಂತೆ ಸುಮಾರು ಮೂವತ್ತಕ್ಕೂ ಅಧಿಕ ಜನರಿದ್ದರು. ಆದರೆ ಯಾರೂ ಅದನ್ನು ತಡೆಯಲು ಮುಂದಾಗಿಲ್ಲ ಎಂದು ವಿಷಾದಿಸಿದ್ದಾರೆ.

ಉಜಿರೆ ಗುರಿಪಳ್ಳ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಹತ್ತಾರು ವಾಹನಗಳಲ್ಲಿ ಹೋದವರೂ ಇದೆಲ್ಲ ನೋಡಿಕೊಂಡು ಹೋಗಿದ್ದಾರೆ. ಆದರೆ ಯಾರೂ ನಮ್ಮ ನೆರವಿಗೆ ಬರಲಿಲ್ಲ ಎಂದು ತಮ್ಮ ನೋವನ್ನು ದೌರ್ಜನ್ಯಕ್ಕೀಡಾದ ಮಹಿಳೆಯರು ತೋಡಿಕೊಳ್ಳುತ್ತಾರೆ ಎಂದು ಈಶ್ವರಿ ತಿಳಿಸಿದ್ದಾರೆ.

ಉತ್ತರ ಪ್ರದೇಶವನ್ನೂ ನಾಚಿಸುವ ರೀತಿಯಲ್ಲಿ ಉಜಿರೆಯಲ್ಲಿ ಆದಿವಾಸಿ ಸಮುದಾಯದ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಲಾಗಿದೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರವೃತ್ತಿಯಾಗಿದೆ. ಬಿಜೆಪಿ ಮುಖಂಡನ ನೇತೃತ್ವದ ತಂಡ ಈ ಕೃತ್ಯವನ್ನು ಎಸಗಿದ್ದು, ಆರಂಭದಲ್ಲಿ ಹಲವು ಒತ್ತಡಗಳಿಂದ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಯತ್ನಿಸಿದ್ದರು. ನಾವು ಹೋದ ಬಳಿಕವಷ್ಟೇ ಪ್ರಕರಣ ದಾಖಲಿಸಿದ್ದಾರೆ. ಕೃತ್ಯ ನಡೆಸಿದ ದುಷ್ಕರ್ಮಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ತಕ್ಷಣ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಠಾಣೆ ಚಲೋ ನಡೆಸಲಾಗುವುದು: ಶೇಖರ್‌ ಲಾಯಿಲ ಎಚ್ಚರಿಕೆ

ಸರ್ಕಾರಿ ಜಮೀನಿನ ನಿವೇಶನಕ್ಕೆ ಸಂಬಂಧಿಸಿದಂತೆ ಆದಿವಾಸಿ ಮಹಿಳೆಯರ ಮೇಲೆ ದಾಳಿ ನಡೆಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿದ ಕೃತ್ಯ ಅತ್ಯಂತ ಅಮಾನವೀಯವಾದುದು. ಇದರ ನೇತೃತ್ವವನ್ನು ಬಿಜೆಪಿ ಎಸ್ಟಿ ಮೋರ್ಛಾದ ಅಧ್ಯಕ್ಷ ವಹಿಸಿರುವುದು ಮಹಿಳೆಯರನ್ನು ಮಾತೆ , ದೇವತೆ ಎನ್ನುವವರ ನಿಜ ಬಣ್ಣ ಬಯಲಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

ಉಜಿರೆ ಗ್ರಾಮದಲ್ಲಿ ನಡೆದ ಈ ಅಮಾನವೀಯ ಕೃತ್ಯ ಇಡೀ ಮಾನವ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಮಹಿಳೆಯರನ್ನು ಮಾತೆ , ದೇವತೆ ಎನ್ನುವ ಬಿಜೆಪಿ ಪಕ್ಷದ ಎಸ್ಟಿ ಮೋರ್ಛಾದ ಜಿಲ್ಲಾಧ್ಯಕ್ಷ ಚೆನ್ನಕೇಶವ ಎಂಬಾತನ ನೇತೃತ್ವದಲ್ಲಿ ಮಹಿಳೆಯನ್ನು ನಡು ರಸ್ತೆಯಲ್ಲಿ ಅರಬೆತ್ತಲೆಗೊಳಿಸಿರುವುದು ರಾಮರಾಜ್ಯದ ಪರಿಕಲ್ಪನೆಯೇ? ಮಹಿಳೆಯರನ್ನು ಮಹಿಳೆಯರನ್ನು ಮಾತೆ , ದೇವತೆ ಎಂದು ಹೇಳುವುದು ನಿಮ್ಮ ಕಪಟ ನಾಟಕವೇ? ಎಂದು ಪ್ರಶ್ನಿಸಿದ್ದಾರೆ.

ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಶಾಸಕ ಹರೀಶ್ ಪೂಂಜಾರ ಮೌನ ಮಹಿಳೆಯನ್ನು ನಡು ಬೀದಿಯಲ್ಲಿ ಅರಬೆತ್ತಲೆಗೊಳಿಸಿರುವುದಕ್ಕೆ ಮೌನ ಸಮ್ಮತಿಯೇ ? ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಸಂಘಪರಿವಾರದ ಸಂಘಟನೆಗಳ ಹೋರಾಟ ಏಕಿಲ್ಲ? ಎಂದು ಕೇಳಿದ್ದಾರೆ.

ಈ ಘಟನೆ ಉತ್ತರ ಪ್ರದೇಶ, ಗುಜರಾತ್ ಮಾದರಿಯಂತಿದೆ. ಇಂತಹ ಘಟನೆಯ ಹಿಂದೆ ಶಾಸಕ ಹರೀಶ್ ಪೂಂಜಾರ ಮುಂದಿನ ಚುನಾವಣಾ ರಾಜಕೀಯದ ಹಿಡನ್ ಅಜೆಂಡಾ ಅಡಗಿದೆ. ತಪ್ಪಿತಸ್ಥ ಆರೋಪಿಗಳನ್ನು 36 ಘಂಟೆಗಳಲ್ಲಿ ಬಂಧಿಸದಿದ್ದರೆ ಪೋಲಿಸ್ ಠಾಣೆ ಚಲೋ ಕಾರ್ಯಕ್ರಮ ಹಮ್ಮಿಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...