Homeಕರ್ನಾಟಕಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ...

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

- Advertisement -
- Advertisement -

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲುಗೊಳಿಸಿ, ಹಲ್ಲೆ ನಡೆಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ.

ಈ ಕುರಿತು ದಲಿತ  ಮುಖಂಡರಾದ ಈಶ್ವರಿ ಪದ್ಮುಂಜ ಅವರು ವಿವರಣೆ ನೀಡಿದ್ದು, ‘ವಾರ್ತಾ ಭಾರತಿ’ ವರದಿ ಮಾಡಿದೆ.

“ಸರಕಾರಿ ಜಮೀನಿನಲ್ಲಿ ನಿವೇಶನದ ವಿಚಾರವನ್ನು ಮುಂದಿಟ್ಟುಕೊಂಡು ದುಷ್ಕರ್ಮಿಗಳ ತಂಡವೊಂದು ಆದಿವಾಸಿ ಸಮುದಾಯದ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕ ರಸ್ತೆಯಲ್ಲಿ ಆಕೆಯ ಉಟ್ಟ ಬಟ್ಟೆಗಳನ್ನು ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಕೇಕೆ ಹಾಕಿ ಅದನ್ನು ವೀಡಿಯೊ ಚಿತ್ರೀಕರಣವನ್ನೂ ಮಾಡಿದ ಅಮಾನವೀಯ ಘಟನೆ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ” ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಳಕೆ ನಿವಾಸಿ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರು ಈ ಕೃತ್ಯವನ್ನು ಎಸಗಿದವರು. ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏ.19 ರಂದು ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸಲ್ಲಿಸಿದ್ದ 94ಸಿ ಅರ್ಜಿಯ ಅಳತೆಗೆಂದು ಅಧಿಕಾರಿಗಳು ಬಂದಿದ್ದರು. ಈ ಸಂದರ್ಭ ಜಾಗದ ಬಗ್ಗೆ ಇನ್ನೊಂದು ತಂಡ ತಕರಾರು ತೆಗೆದಿದೆ. ಇದರಿಂದಾಗಿ ಅಳತೆಗೆ ಬಂದವರು ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದಾರೆ. ಅಧಿಕಾರಿಗಳು ತೆರಳಿದ ಬಳಿಕ ಸಾರ್ವಜನಿಕ ರಸ್ತೆಯಲ್ಲಿ ನಿಂತಿದ್ದ ಮಹಿಳೆಯರ ಮೇಲೆ ಈ ತಂಡ ಎರಗಿದೆ ಎಂದು ಅವರು ವಿವರಿಸಿದ್ದಾರೆ.

ಮಹಿಳೆಯರೂ ಇದ್ದ ತಂಡ ಮೊದಲು ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಕ್ಕನ ಮೇಲೆ ಹಲ್ಲೆ ನಡೆಸಿದ್ದು, ಇದನ್ನು ನೋಡಿ ಅಕ್ಕನ ರಕ್ಷಣೆಗೆ ತೆರಳಿದ ತಂಗಿಯ ಮೇಲೆ ಇವರು ಮುಗಿಬಿದ್ದು ಆಕೆಯ ಬಟ್ಟೆಗಳನ್ನು ಸಂಪೂರ್ಣವಾಗಿ ಹರಿದುಹಾಕಿದ್ದಾರೆ. ಅಲ್ಲದೆ ಅನಾಗರಿಕರಂತೆ ಕೇಕೆ ಹಾಕಿ ಅರೆಬೆತ್ತಲೆಯಾಗಿದ್ದ ಮಹಿಳೆಯ ವಿಡಿಯೊ ಚಿತ್ರೀಕರಣ ಮಾಡಿದ್ದಾರೆ.  ಅಲ್ಲಿಂದ ಆಕೆಯನ್ನು ಮನೆಯ ಕಡೆಗೆ ಹೋಗಲೂ ಬಿಡದೆ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನು ನೋಡಿ ಬಂದ ಆಕೆಯ ತಾಯಿಯ ಮೇಲೂ ಇವರು ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳ ತಂಡ ಅಲ್ಲಿಂದ ತೆರಳಿದ ಬಳಿಕವಷ್ಟೇ ಈ ಮಹಿಳೆಯರಿಗೆ ಮನೆಗೆ ಹೋಗಲು ಸಾಧ್ಯವಾಯಿತು ಎಂದು ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಸ್ಥಳದಲ್ಲಿ ಗ್ರಾಪಂ ಸದಸ್ಯ ಸೇರಿದಂತೆ ಸುಮಾರು ಮೂವತ್ತಕ್ಕೂ ಅಧಿಕ ಜನರಿದ್ದರು. ಆದರೆ ಯಾರೂ ಅದನ್ನು ತಡೆಯಲು ಮುಂದಾಗಿಲ್ಲ ಎಂದು ವಿಷಾದಿಸಿದ್ದಾರೆ.

ಉಜಿರೆ ಗುರಿಪಳ್ಳ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಹತ್ತಾರು ವಾಹನಗಳಲ್ಲಿ ಹೋದವರೂ ಇದೆಲ್ಲ ನೋಡಿಕೊಂಡು ಹೋಗಿದ್ದಾರೆ. ಆದರೆ ಯಾರೂ ನಮ್ಮ ನೆರವಿಗೆ ಬರಲಿಲ್ಲ ಎಂದು ತಮ್ಮ ನೋವನ್ನು ದೌರ್ಜನ್ಯಕ್ಕೀಡಾದ ಮಹಿಳೆಯರು ತೋಡಿಕೊಳ್ಳುತ್ತಾರೆ ಎಂದು ಈಶ್ವರಿ ತಿಳಿಸಿದ್ದಾರೆ.

ಉತ್ತರ ಪ್ರದೇಶವನ್ನೂ ನಾಚಿಸುವ ರೀತಿಯಲ್ಲಿ ಉಜಿರೆಯಲ್ಲಿ ಆದಿವಾಸಿ ಸಮುದಾಯದ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಲಾಗಿದೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರವೃತ್ತಿಯಾಗಿದೆ. ಬಿಜೆಪಿ ಮುಖಂಡನ ನೇತೃತ್ವದ ತಂಡ ಈ ಕೃತ್ಯವನ್ನು ಎಸಗಿದ್ದು, ಆರಂಭದಲ್ಲಿ ಹಲವು ಒತ್ತಡಗಳಿಂದ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಯತ್ನಿಸಿದ್ದರು. ನಾವು ಹೋದ ಬಳಿಕವಷ್ಟೇ ಪ್ರಕರಣ ದಾಖಲಿಸಿದ್ದಾರೆ. ಕೃತ್ಯ ನಡೆಸಿದ ದುಷ್ಕರ್ಮಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ತಕ್ಷಣ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಠಾಣೆ ಚಲೋ ನಡೆಸಲಾಗುವುದು: ಶೇಖರ್‌ ಲಾಯಿಲ ಎಚ್ಚರಿಕೆ

ಸರ್ಕಾರಿ ಜಮೀನಿನ ನಿವೇಶನಕ್ಕೆ ಸಂಬಂಧಿಸಿದಂತೆ ಆದಿವಾಸಿ ಮಹಿಳೆಯರ ಮೇಲೆ ದಾಳಿ ನಡೆಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿದ ಕೃತ್ಯ ಅತ್ಯಂತ ಅಮಾನವೀಯವಾದುದು. ಇದರ ನೇತೃತ್ವವನ್ನು ಬಿಜೆಪಿ ಎಸ್ಟಿ ಮೋರ್ಛಾದ ಅಧ್ಯಕ್ಷ ವಹಿಸಿರುವುದು ಮಹಿಳೆಯರನ್ನು ಮಾತೆ , ದೇವತೆ ಎನ್ನುವವರ ನಿಜ ಬಣ್ಣ ಬಯಲಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

ಉಜಿರೆ ಗ್ರಾಮದಲ್ಲಿ ನಡೆದ ಈ ಅಮಾನವೀಯ ಕೃತ್ಯ ಇಡೀ ಮಾನವ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಮಹಿಳೆಯರನ್ನು ಮಾತೆ , ದೇವತೆ ಎನ್ನುವ ಬಿಜೆಪಿ ಪಕ್ಷದ ಎಸ್ಟಿ ಮೋರ್ಛಾದ ಜಿಲ್ಲಾಧ್ಯಕ್ಷ ಚೆನ್ನಕೇಶವ ಎಂಬಾತನ ನೇತೃತ್ವದಲ್ಲಿ ಮಹಿಳೆಯನ್ನು ನಡು ರಸ್ತೆಯಲ್ಲಿ ಅರಬೆತ್ತಲೆಗೊಳಿಸಿರುವುದು ರಾಮರಾಜ್ಯದ ಪರಿಕಲ್ಪನೆಯೇ? ಮಹಿಳೆಯರನ್ನು ಮಹಿಳೆಯರನ್ನು ಮಾತೆ , ದೇವತೆ ಎಂದು ಹೇಳುವುದು ನಿಮ್ಮ ಕಪಟ ನಾಟಕವೇ? ಎಂದು ಪ್ರಶ್ನಿಸಿದ್ದಾರೆ.

ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಶಾಸಕ ಹರೀಶ್ ಪೂಂಜಾರ ಮೌನ ಮಹಿಳೆಯನ್ನು ನಡು ಬೀದಿಯಲ್ಲಿ ಅರಬೆತ್ತಲೆಗೊಳಿಸಿರುವುದಕ್ಕೆ ಮೌನ ಸಮ್ಮತಿಯೇ ? ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಸಂಘಪರಿವಾರದ ಸಂಘಟನೆಗಳ ಹೋರಾಟ ಏಕಿಲ್ಲ? ಎಂದು ಕೇಳಿದ್ದಾರೆ.

ಈ ಘಟನೆ ಉತ್ತರ ಪ್ರದೇಶ, ಗುಜರಾತ್ ಮಾದರಿಯಂತಿದೆ. ಇಂತಹ ಘಟನೆಯ ಹಿಂದೆ ಶಾಸಕ ಹರೀಶ್ ಪೂಂಜಾರ ಮುಂದಿನ ಚುನಾವಣಾ ರಾಜಕೀಯದ ಹಿಡನ್ ಅಜೆಂಡಾ ಅಡಗಿದೆ. ತಪ್ಪಿತಸ್ಥ ಆರೋಪಿಗಳನ್ನು 36 ಘಂಟೆಗಳಲ್ಲಿ ಬಂಧಿಸದಿದ್ದರೆ ಪೋಲಿಸ್ ಠಾಣೆ ಚಲೋ ಕಾರ್ಯಕ್ರಮ ಹಮ್ಮಿಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...