Homeಕರ್ನಾಟಕಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ...

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

- Advertisement -
- Advertisement -

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲುಗೊಳಿಸಿ, ಹಲ್ಲೆ ನಡೆಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ.

ಈ ಕುರಿತು ದಲಿತ  ಮುಖಂಡರಾದ ಈಶ್ವರಿ ಪದ್ಮುಂಜ ಅವರು ವಿವರಣೆ ನೀಡಿದ್ದು, ‘ವಾರ್ತಾ ಭಾರತಿ’ ವರದಿ ಮಾಡಿದೆ.

“ಸರಕಾರಿ ಜಮೀನಿನಲ್ಲಿ ನಿವೇಶನದ ವಿಚಾರವನ್ನು ಮುಂದಿಟ್ಟುಕೊಂಡು ದುಷ್ಕರ್ಮಿಗಳ ತಂಡವೊಂದು ಆದಿವಾಸಿ ಸಮುದಾಯದ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕ ರಸ್ತೆಯಲ್ಲಿ ಆಕೆಯ ಉಟ್ಟ ಬಟ್ಟೆಗಳನ್ನು ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಕೇಕೆ ಹಾಕಿ ಅದನ್ನು ವೀಡಿಯೊ ಚಿತ್ರೀಕರಣವನ್ನೂ ಮಾಡಿದ ಅಮಾನವೀಯ ಘಟನೆ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ” ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಳಕೆ ನಿವಾಸಿ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರು ಈ ಕೃತ್ಯವನ್ನು ಎಸಗಿದವರು. ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏ.19 ರಂದು ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸಲ್ಲಿಸಿದ್ದ 94ಸಿ ಅರ್ಜಿಯ ಅಳತೆಗೆಂದು ಅಧಿಕಾರಿಗಳು ಬಂದಿದ್ದರು. ಈ ಸಂದರ್ಭ ಜಾಗದ ಬಗ್ಗೆ ಇನ್ನೊಂದು ತಂಡ ತಕರಾರು ತೆಗೆದಿದೆ. ಇದರಿಂದಾಗಿ ಅಳತೆಗೆ ಬಂದವರು ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದಾರೆ. ಅಧಿಕಾರಿಗಳು ತೆರಳಿದ ಬಳಿಕ ಸಾರ್ವಜನಿಕ ರಸ್ತೆಯಲ್ಲಿ ನಿಂತಿದ್ದ ಮಹಿಳೆಯರ ಮೇಲೆ ಈ ತಂಡ ಎರಗಿದೆ ಎಂದು ಅವರು ವಿವರಿಸಿದ್ದಾರೆ.

ಮಹಿಳೆಯರೂ ಇದ್ದ ತಂಡ ಮೊದಲು ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಕ್ಕನ ಮೇಲೆ ಹಲ್ಲೆ ನಡೆಸಿದ್ದು, ಇದನ್ನು ನೋಡಿ ಅಕ್ಕನ ರಕ್ಷಣೆಗೆ ತೆರಳಿದ ತಂಗಿಯ ಮೇಲೆ ಇವರು ಮುಗಿಬಿದ್ದು ಆಕೆಯ ಬಟ್ಟೆಗಳನ್ನು ಸಂಪೂರ್ಣವಾಗಿ ಹರಿದುಹಾಕಿದ್ದಾರೆ. ಅಲ್ಲದೆ ಅನಾಗರಿಕರಂತೆ ಕೇಕೆ ಹಾಕಿ ಅರೆಬೆತ್ತಲೆಯಾಗಿದ್ದ ಮಹಿಳೆಯ ವಿಡಿಯೊ ಚಿತ್ರೀಕರಣ ಮಾಡಿದ್ದಾರೆ.  ಅಲ್ಲಿಂದ ಆಕೆಯನ್ನು ಮನೆಯ ಕಡೆಗೆ ಹೋಗಲೂ ಬಿಡದೆ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನು ನೋಡಿ ಬಂದ ಆಕೆಯ ತಾಯಿಯ ಮೇಲೂ ಇವರು ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳ ತಂಡ ಅಲ್ಲಿಂದ ತೆರಳಿದ ಬಳಿಕವಷ್ಟೇ ಈ ಮಹಿಳೆಯರಿಗೆ ಮನೆಗೆ ಹೋಗಲು ಸಾಧ್ಯವಾಯಿತು ಎಂದು ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಸ್ಥಳದಲ್ಲಿ ಗ್ರಾಪಂ ಸದಸ್ಯ ಸೇರಿದಂತೆ ಸುಮಾರು ಮೂವತ್ತಕ್ಕೂ ಅಧಿಕ ಜನರಿದ್ದರು. ಆದರೆ ಯಾರೂ ಅದನ್ನು ತಡೆಯಲು ಮುಂದಾಗಿಲ್ಲ ಎಂದು ವಿಷಾದಿಸಿದ್ದಾರೆ.

ಉಜಿರೆ ಗುರಿಪಳ್ಳ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಹತ್ತಾರು ವಾಹನಗಳಲ್ಲಿ ಹೋದವರೂ ಇದೆಲ್ಲ ನೋಡಿಕೊಂಡು ಹೋಗಿದ್ದಾರೆ. ಆದರೆ ಯಾರೂ ನಮ್ಮ ನೆರವಿಗೆ ಬರಲಿಲ್ಲ ಎಂದು ತಮ್ಮ ನೋವನ್ನು ದೌರ್ಜನ್ಯಕ್ಕೀಡಾದ ಮಹಿಳೆಯರು ತೋಡಿಕೊಳ್ಳುತ್ತಾರೆ ಎಂದು ಈಶ್ವರಿ ತಿಳಿಸಿದ್ದಾರೆ.

ಉತ್ತರ ಪ್ರದೇಶವನ್ನೂ ನಾಚಿಸುವ ರೀತಿಯಲ್ಲಿ ಉಜಿರೆಯಲ್ಲಿ ಆದಿವಾಸಿ ಸಮುದಾಯದ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಲಾಗಿದೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರವೃತ್ತಿಯಾಗಿದೆ. ಬಿಜೆಪಿ ಮುಖಂಡನ ನೇತೃತ್ವದ ತಂಡ ಈ ಕೃತ್ಯವನ್ನು ಎಸಗಿದ್ದು, ಆರಂಭದಲ್ಲಿ ಹಲವು ಒತ್ತಡಗಳಿಂದ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಯತ್ನಿಸಿದ್ದರು. ನಾವು ಹೋದ ಬಳಿಕವಷ್ಟೇ ಪ್ರಕರಣ ದಾಖಲಿಸಿದ್ದಾರೆ. ಕೃತ್ಯ ನಡೆಸಿದ ದುಷ್ಕರ್ಮಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ತಕ್ಷಣ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಠಾಣೆ ಚಲೋ ನಡೆಸಲಾಗುವುದು: ಶೇಖರ್‌ ಲಾಯಿಲ ಎಚ್ಚರಿಕೆ

ಸರ್ಕಾರಿ ಜಮೀನಿನ ನಿವೇಶನಕ್ಕೆ ಸಂಬಂಧಿಸಿದಂತೆ ಆದಿವಾಸಿ ಮಹಿಳೆಯರ ಮೇಲೆ ದಾಳಿ ನಡೆಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿದ ಕೃತ್ಯ ಅತ್ಯಂತ ಅಮಾನವೀಯವಾದುದು. ಇದರ ನೇತೃತ್ವವನ್ನು ಬಿಜೆಪಿ ಎಸ್ಟಿ ಮೋರ್ಛಾದ ಅಧ್ಯಕ್ಷ ವಹಿಸಿರುವುದು ಮಹಿಳೆಯರನ್ನು ಮಾತೆ , ದೇವತೆ ಎನ್ನುವವರ ನಿಜ ಬಣ್ಣ ಬಯಲಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

ಉಜಿರೆ ಗ್ರಾಮದಲ್ಲಿ ನಡೆದ ಈ ಅಮಾನವೀಯ ಕೃತ್ಯ ಇಡೀ ಮಾನವ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಮಹಿಳೆಯರನ್ನು ಮಾತೆ , ದೇವತೆ ಎನ್ನುವ ಬಿಜೆಪಿ ಪಕ್ಷದ ಎಸ್ಟಿ ಮೋರ್ಛಾದ ಜಿಲ್ಲಾಧ್ಯಕ್ಷ ಚೆನ್ನಕೇಶವ ಎಂಬಾತನ ನೇತೃತ್ವದಲ್ಲಿ ಮಹಿಳೆಯನ್ನು ನಡು ರಸ್ತೆಯಲ್ಲಿ ಅರಬೆತ್ತಲೆಗೊಳಿಸಿರುವುದು ರಾಮರಾಜ್ಯದ ಪರಿಕಲ್ಪನೆಯೇ? ಮಹಿಳೆಯರನ್ನು ಮಹಿಳೆಯರನ್ನು ಮಾತೆ , ದೇವತೆ ಎಂದು ಹೇಳುವುದು ನಿಮ್ಮ ಕಪಟ ನಾಟಕವೇ? ಎಂದು ಪ್ರಶ್ನಿಸಿದ್ದಾರೆ.

ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಶಾಸಕ ಹರೀಶ್ ಪೂಂಜಾರ ಮೌನ ಮಹಿಳೆಯನ್ನು ನಡು ಬೀದಿಯಲ್ಲಿ ಅರಬೆತ್ತಲೆಗೊಳಿಸಿರುವುದಕ್ಕೆ ಮೌನ ಸಮ್ಮತಿಯೇ ? ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಸಂಘಪರಿವಾರದ ಸಂಘಟನೆಗಳ ಹೋರಾಟ ಏಕಿಲ್ಲ? ಎಂದು ಕೇಳಿದ್ದಾರೆ.

ಈ ಘಟನೆ ಉತ್ತರ ಪ್ರದೇಶ, ಗುಜರಾತ್ ಮಾದರಿಯಂತಿದೆ. ಇಂತಹ ಘಟನೆಯ ಹಿಂದೆ ಶಾಸಕ ಹರೀಶ್ ಪೂಂಜಾರ ಮುಂದಿನ ಚುನಾವಣಾ ರಾಜಕೀಯದ ಹಿಡನ್ ಅಜೆಂಡಾ ಅಡಗಿದೆ. ತಪ್ಪಿತಸ್ಥ ಆರೋಪಿಗಳನ್ನು 36 ಘಂಟೆಗಳಲ್ಲಿ ಬಂಧಿಸದಿದ್ದರೆ ಪೋಲಿಸ್ ಠಾಣೆ ಚಲೋ ಕಾರ್ಯಕ್ರಮ ಹಮ್ಮಿಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...