Homeಕರ್ನಾಟಕಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ...

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

- Advertisement -
- Advertisement -

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲುಗೊಳಿಸಿ, ಹಲ್ಲೆ ನಡೆಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ.

ಈ ಕುರಿತು ದಲಿತ  ಮುಖಂಡರಾದ ಈಶ್ವರಿ ಪದ್ಮುಂಜ ಅವರು ವಿವರಣೆ ನೀಡಿದ್ದು, ‘ವಾರ್ತಾ ಭಾರತಿ’ ವರದಿ ಮಾಡಿದೆ.

“ಸರಕಾರಿ ಜಮೀನಿನಲ್ಲಿ ನಿವೇಶನದ ವಿಚಾರವನ್ನು ಮುಂದಿಟ್ಟುಕೊಂಡು ದುಷ್ಕರ್ಮಿಗಳ ತಂಡವೊಂದು ಆದಿವಾಸಿ ಸಮುದಾಯದ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕ ರಸ್ತೆಯಲ್ಲಿ ಆಕೆಯ ಉಟ್ಟ ಬಟ್ಟೆಗಳನ್ನು ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಕೇಕೆ ಹಾಕಿ ಅದನ್ನು ವೀಡಿಯೊ ಚಿತ್ರೀಕರಣವನ್ನೂ ಮಾಡಿದ ಅಮಾನವೀಯ ಘಟನೆ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ” ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಳಕೆ ನಿವಾಸಿ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರು ಈ ಕೃತ್ಯವನ್ನು ಎಸಗಿದವರು. ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏ.19 ರಂದು ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸಲ್ಲಿಸಿದ್ದ 94ಸಿ ಅರ್ಜಿಯ ಅಳತೆಗೆಂದು ಅಧಿಕಾರಿಗಳು ಬಂದಿದ್ದರು. ಈ ಸಂದರ್ಭ ಜಾಗದ ಬಗ್ಗೆ ಇನ್ನೊಂದು ತಂಡ ತಕರಾರು ತೆಗೆದಿದೆ. ಇದರಿಂದಾಗಿ ಅಳತೆಗೆ ಬಂದವರು ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದಾರೆ. ಅಧಿಕಾರಿಗಳು ತೆರಳಿದ ಬಳಿಕ ಸಾರ್ವಜನಿಕ ರಸ್ತೆಯಲ್ಲಿ ನಿಂತಿದ್ದ ಮಹಿಳೆಯರ ಮೇಲೆ ಈ ತಂಡ ಎರಗಿದೆ ಎಂದು ಅವರು ವಿವರಿಸಿದ್ದಾರೆ.

ಮಹಿಳೆಯರೂ ಇದ್ದ ತಂಡ ಮೊದಲು ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಕ್ಕನ ಮೇಲೆ ಹಲ್ಲೆ ನಡೆಸಿದ್ದು, ಇದನ್ನು ನೋಡಿ ಅಕ್ಕನ ರಕ್ಷಣೆಗೆ ತೆರಳಿದ ತಂಗಿಯ ಮೇಲೆ ಇವರು ಮುಗಿಬಿದ್ದು ಆಕೆಯ ಬಟ್ಟೆಗಳನ್ನು ಸಂಪೂರ್ಣವಾಗಿ ಹರಿದುಹಾಕಿದ್ದಾರೆ. ಅಲ್ಲದೆ ಅನಾಗರಿಕರಂತೆ ಕೇಕೆ ಹಾಕಿ ಅರೆಬೆತ್ತಲೆಯಾಗಿದ್ದ ಮಹಿಳೆಯ ವಿಡಿಯೊ ಚಿತ್ರೀಕರಣ ಮಾಡಿದ್ದಾರೆ.  ಅಲ್ಲಿಂದ ಆಕೆಯನ್ನು ಮನೆಯ ಕಡೆಗೆ ಹೋಗಲೂ ಬಿಡದೆ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನು ನೋಡಿ ಬಂದ ಆಕೆಯ ತಾಯಿಯ ಮೇಲೂ ಇವರು ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳ ತಂಡ ಅಲ್ಲಿಂದ ತೆರಳಿದ ಬಳಿಕವಷ್ಟೇ ಈ ಮಹಿಳೆಯರಿಗೆ ಮನೆಗೆ ಹೋಗಲು ಸಾಧ್ಯವಾಯಿತು ಎಂದು ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಸ್ಥಳದಲ್ಲಿ ಗ್ರಾಪಂ ಸದಸ್ಯ ಸೇರಿದಂತೆ ಸುಮಾರು ಮೂವತ್ತಕ್ಕೂ ಅಧಿಕ ಜನರಿದ್ದರು. ಆದರೆ ಯಾರೂ ಅದನ್ನು ತಡೆಯಲು ಮುಂದಾಗಿಲ್ಲ ಎಂದು ವಿಷಾದಿಸಿದ್ದಾರೆ.

ಉಜಿರೆ ಗುರಿಪಳ್ಳ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಹತ್ತಾರು ವಾಹನಗಳಲ್ಲಿ ಹೋದವರೂ ಇದೆಲ್ಲ ನೋಡಿಕೊಂಡು ಹೋಗಿದ್ದಾರೆ. ಆದರೆ ಯಾರೂ ನಮ್ಮ ನೆರವಿಗೆ ಬರಲಿಲ್ಲ ಎಂದು ತಮ್ಮ ನೋವನ್ನು ದೌರ್ಜನ್ಯಕ್ಕೀಡಾದ ಮಹಿಳೆಯರು ತೋಡಿಕೊಳ್ಳುತ್ತಾರೆ ಎಂದು ಈಶ್ವರಿ ತಿಳಿಸಿದ್ದಾರೆ.

ಉತ್ತರ ಪ್ರದೇಶವನ್ನೂ ನಾಚಿಸುವ ರೀತಿಯಲ್ಲಿ ಉಜಿರೆಯಲ್ಲಿ ಆದಿವಾಸಿ ಸಮುದಾಯದ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಲಾಗಿದೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರವೃತ್ತಿಯಾಗಿದೆ. ಬಿಜೆಪಿ ಮುಖಂಡನ ನೇತೃತ್ವದ ತಂಡ ಈ ಕೃತ್ಯವನ್ನು ಎಸಗಿದ್ದು, ಆರಂಭದಲ್ಲಿ ಹಲವು ಒತ್ತಡಗಳಿಂದ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಯತ್ನಿಸಿದ್ದರು. ನಾವು ಹೋದ ಬಳಿಕವಷ್ಟೇ ಪ್ರಕರಣ ದಾಖಲಿಸಿದ್ದಾರೆ. ಕೃತ್ಯ ನಡೆಸಿದ ದುಷ್ಕರ್ಮಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ತಕ್ಷಣ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಠಾಣೆ ಚಲೋ ನಡೆಸಲಾಗುವುದು: ಶೇಖರ್‌ ಲಾಯಿಲ ಎಚ್ಚರಿಕೆ

ಸರ್ಕಾರಿ ಜಮೀನಿನ ನಿವೇಶನಕ್ಕೆ ಸಂಬಂಧಿಸಿದಂತೆ ಆದಿವಾಸಿ ಮಹಿಳೆಯರ ಮೇಲೆ ದಾಳಿ ನಡೆಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿದ ಕೃತ್ಯ ಅತ್ಯಂತ ಅಮಾನವೀಯವಾದುದು. ಇದರ ನೇತೃತ್ವವನ್ನು ಬಿಜೆಪಿ ಎಸ್ಟಿ ಮೋರ್ಛಾದ ಅಧ್ಯಕ್ಷ ವಹಿಸಿರುವುದು ಮಹಿಳೆಯರನ್ನು ಮಾತೆ , ದೇವತೆ ಎನ್ನುವವರ ನಿಜ ಬಣ್ಣ ಬಯಲಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

ಉಜಿರೆ ಗ್ರಾಮದಲ್ಲಿ ನಡೆದ ಈ ಅಮಾನವೀಯ ಕೃತ್ಯ ಇಡೀ ಮಾನವ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಮಹಿಳೆಯರನ್ನು ಮಾತೆ , ದೇವತೆ ಎನ್ನುವ ಬಿಜೆಪಿ ಪಕ್ಷದ ಎಸ್ಟಿ ಮೋರ್ಛಾದ ಜಿಲ್ಲಾಧ್ಯಕ್ಷ ಚೆನ್ನಕೇಶವ ಎಂಬಾತನ ನೇತೃತ್ವದಲ್ಲಿ ಮಹಿಳೆಯನ್ನು ನಡು ರಸ್ತೆಯಲ್ಲಿ ಅರಬೆತ್ತಲೆಗೊಳಿಸಿರುವುದು ರಾಮರಾಜ್ಯದ ಪರಿಕಲ್ಪನೆಯೇ? ಮಹಿಳೆಯರನ್ನು ಮಹಿಳೆಯರನ್ನು ಮಾತೆ , ದೇವತೆ ಎಂದು ಹೇಳುವುದು ನಿಮ್ಮ ಕಪಟ ನಾಟಕವೇ? ಎಂದು ಪ್ರಶ್ನಿಸಿದ್ದಾರೆ.

ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಶಾಸಕ ಹರೀಶ್ ಪೂಂಜಾರ ಮೌನ ಮಹಿಳೆಯನ್ನು ನಡು ಬೀದಿಯಲ್ಲಿ ಅರಬೆತ್ತಲೆಗೊಳಿಸಿರುವುದಕ್ಕೆ ಮೌನ ಸಮ್ಮತಿಯೇ ? ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಸಂಘಪರಿವಾರದ ಸಂಘಟನೆಗಳ ಹೋರಾಟ ಏಕಿಲ್ಲ? ಎಂದು ಕೇಳಿದ್ದಾರೆ.

ಈ ಘಟನೆ ಉತ್ತರ ಪ್ರದೇಶ, ಗುಜರಾತ್ ಮಾದರಿಯಂತಿದೆ. ಇಂತಹ ಘಟನೆಯ ಹಿಂದೆ ಶಾಸಕ ಹರೀಶ್ ಪೂಂಜಾರ ಮುಂದಿನ ಚುನಾವಣಾ ರಾಜಕೀಯದ ಹಿಡನ್ ಅಜೆಂಡಾ ಅಡಗಿದೆ. ತಪ್ಪಿತಸ್ಥ ಆರೋಪಿಗಳನ್ನು 36 ಘಂಟೆಗಳಲ್ಲಿ ಬಂಧಿಸದಿದ್ದರೆ ಪೋಲಿಸ್ ಠಾಣೆ ಚಲೋ ಕಾರ್ಯಕ್ರಮ ಹಮ್ಮಿಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...