Homeದಲಿತ್ ಫೈಲ್ಸ್ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣದಲ್ಲಿ ನಾಲ್ವರ ಬಂಧನ

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣದಲ್ಲಿ ನಾಲ್ವರ ಬಂಧನ

- Advertisement -
- Advertisement -

ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ದಲಿತ ಯುವಕನೊಬ್ಬ ಅಸಹಜವಾಗಿ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಶಿಬಾಜೆ ನಿವಾಸಿಗಳಾಗಿರುವ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಆನಂದ ಗೌಡ ಹಾಗೂ ಮಹೇಶ್ ಪೂಜಾರಿ ಎಂಬವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಶಿಬಾಜೆ ಗ್ರಾಮದ ಸಾರಾ ಫಾರ್ಮ್‌ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆ ಮೂಲದ ದಲಿತ ಯುವಕ ಶ್ರೀಧರ (30) ಎಂಬವರ ಮೃತದೇಹ ಕಳೆದ ಡಿ.18ರಂದು ಬೆಳಗ್ಗೆ ಇವರು ಕೆಲಸ ಮಾಡುವ ತೋಟದ ಮೂಲೆಯಲ್ಲಿ ಪತ್ತೆಯಾಗಿತ್ತು. ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿತ್ತು.

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಕೊಲೆ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಘಟನೆಯ ಬಳಿಕ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಗಳು ಪುತಿಭಟನೆಗೂ ಮುಂದಾಗಿದ್ದರು. ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನೂ ಬಂಧಿಸಿರುವುದಾಗಿ ತಿಳಿದು ಬಂದಿದೆ.

ಶಿಬಾಜೆ ಗ್ರಾಮದ ಎ.ಸಿ.ಕುರಿಯನ್ ಮಾಲಿಕತ್ವದ ಸಾರಾ ಫಾರ್ಮ್ ತೋಟದಲ್ಲಿ ಘಟನೆ ನಡೆದಿತ್ತು. ಫಾರ್ಮ್ ತೋಟದಲ್ಲಿ ಮೇಲ್ವಿಚಾರಕನಾಗಿ ಶ್ರೀಧರ ಕೆಲಸ ಮಾಡುತ್ತಿದ್ದರು.

ಶ್ರೀಧರ ಮೇಲೆ ಡಿ. 17ರಂದು ನಾಲ್ವರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ವೇಳೆ ತೋಟದ ಸಿಬ್ಬಂದಿ ಅಬ್ರಾಹಂ ಮತ್ತು ಪರಮೇಶ್ವರ್ ರಕ್ಷಣೆ ಮಾಡಿದ್ದರು. ಇದಾದ ನಂತರ ಏಟು ತಿಂದ ಶ್ರೀಧರ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಆರೋಪಿಗಳು ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿ ತುಂಡರಿಸಿ ಬಂದು, ಕೊಲೆ ಮಾಡಿ ತೋಟದ ಅಣತೆ ದೂರದಲ್ಲಿ ಎಸೆದಿದ್ದರು. ಜೊತೆಗೆ ಕೊಲೆಯಾದ ಶ್ರೀಧರ ಬಳಿ ಇದ್ದ 9500 ರೂ. ಹಣವನ್ನು ದೋಚಿ ಪರಾರಿಯಾಗಿದ್ದರು ಎಂದು ವರದಿಯಾಗಿತ್ತು.

ಡಿ.18ರಂದು ಬೆಳಗ್ಗೆ ಕೊಠಡಿ ಬಳಿ ಬಂದು ನೋಡಿದಾಗ ಶ್ರೀಧರ ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಶ್ರೀಧರನನ್ನು ಹುಡುಕಿದಾಗ ತೋಟದ 250 ರಿಂದ 300 ಮೀಟರ್ ದೂರದಲ್ಲಿ ನಗ್ನ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವರ್ಷದಲ್ಲಿ ಎರಡನೇ ಪ್ರಕರಣ

ಬೆಳ್ತಂಗಡಿ ತಾಲ್ಲೂಕಿನಲ್ಲಿ ದಲಿತರ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಶ್ರೀಧರ ಕೊಲೆ ಜೊತೆಗೆ 2022ನೇ ಇಸವಿಯಲ್ಲಿ ಇಂಥದ್ದೇ ಮತ್ತೊಂದು ಘಟನೆ ಫೆಬ್ರುವರಿಯಲ್ಲಿ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿ ಗ್ರಾಮದ ಪರಶಿಷ್ಟ ಜಾತಿಗೆ ಸೇರಿದ ದಿನೇಶ್ (40) ಎಂಬ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳ ಮುಖಂಡನೊಬ್ಬ ಜಮೀನು ವಿವಾದಕ್ಕೆ ಸಂಬಂಧಿಸಿ ಹತ್ಯೆ ಮಾಡಿದ್ದನು. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ 45 ಸೆಕೆಂಡ್‌ಗಳ ಸಿಸಿಟಿವಿ ದೃಶ್ಯಾವಳಿ ಇರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅದರಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಬಜರಂಗದಳ ಮುಖಂಡ ಕೃಷ್ಣ ಎಳೆದಾಡಿ, ಥಳಿಸುತ್ತಿರುವುದು ಸೆರೆಯಾಗಿತ್ತು.

ಇದನ್ನೂ ಓದಿರಿ: ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

ಫೆಬ್ರವರಿ 23ರಂದು ಕೃಷ್ಣ ಎಂಬ ಬಜರಂಗದಳ ಮುಖಂಡನು ದಿನೇಶ್‌ಗೆ, “ನಿನ್ನ ಜಮೀನನ ದಾಖಲೆಗಳನ್ನು ನಾನು ಮಾಡಿಕೊಟ್ಟಿದ್ದೇನೆ. ಆದರೆ ನೀನು ಯಾವಾಗಲೂ ಕಾಂಗ್ರೆಸ್ ಕಾಂಗ್ರೆಸ್ ಎಂದು ಬೊಬ್ಬೆ ಹಾಕುತ್ತೀಯ” ಎಂದು ಬೈದಿದ್ದನು. ಆಗ ದಿನೇಶ್, “ಇಲ್ಲ ನನ್ನ ಜಮೀನಿನ ದಾಖಲೆಗಳನ್ನು ಕಾಂಗ್ರೆಸ್‌ನವರು ಮಾಡಿಕೊಟ್ಟಿದ್ದಾರೆ” ಸಾರ್ವಜನಿಕವಾಗಿ ಹೇಳಿದ್ದರು. ಇದರಿಂದ ರೊಚ್ಚಿಗೆದ್ದ ಕೃಷ್ಣ, ದಿನೇಶ್‌ಗೆ ಮನಬಂದಂತೆ ಥಳಿಸಿದ್ದನು. ಆತನ ಹೊಟ್ಟೆ ಮೇಲೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದಿದ್ದನು. ಪೆಟ್ಟು ತಿಂದ ದಿನೇಶ್ ತನ್ನ ಬಳಿ ಹಣವಿಲ್ಲದ ಕಾರಣ ಹೊಟ್ಟೆ ನೋವೆಂದು ಮನೆಯಲ್ಲಿ ಅಳುತ್ತಾ, ಒದ್ದಾಡುತ್ತಿದ್ದರು. ಆಗ ಕಾರಣ ಕೇಳಿದಾಗ ಕೃಷ್ಣ ಥಳಿಸಿದ್ದನ್ನು ಮನೆಯವರಿಗೆ ತಿಳಿಸಿದ್ದರು.

ಇದರಿಂದ ಕುಪಿತಗೊಂಡ ಮನೆಯವರು ಕೃಷ್ಣನ ಬಳಿ ಜಗಳವಾಡಿ, “ನೀನೇ ಆಸ್ಪತ್ರೆಗೆ ತೋರಿ” ಎಂದು ತಾಕೀತು ಮಾಡಿದ್ದರು. ಕೃಷ್ಣ ಸಂತ್ರಸ್ತ ದಿನೇಶ್‌ ರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದಾರೆ ಎಂದು ವೈದ್ಯರ ಬಳಿ ಸುಳ್ಳು ಹೇಳಿದ್ದನು. ಆದರೆ ಹೊಟ್ಟೆಯಲ್ಲಿನ ಒಳನೋವುಗಳಿಂದ ಬಳಲುತ್ತಿದ್ದ ದಿನೇಶ್ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರ ಬೆಳಗ್ಗಿನ ಜಾವ 2.30ರಲ್ಲಿ ನಿಧನರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...