Homeಕರ್ನಾಟಕಮಂಗಳೂರು| ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಬಿಜೆಪಿ ಶಾಸಕ ಹರೀಶ್ ಪೂಂಜಾ: ಸ್ಥಳೀಯ ಬ್ಯಾರಿ...

ಮಂಗಳೂರು| ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಬಿಜೆಪಿ ಶಾಸಕ ಹರೀಶ್ ಪೂಂಜಾ: ಸ್ಥಳೀಯ ಬ್ಯಾರಿ ಸಮುದಾಯದ ನಿಂದನೆ

ಸಾಮರಸ್ಯದ ಊರಿನಲ್ಲಿ ಜನಪ್ರತಿನಿಧಿಯಿಂದಲೇ ಮತೀಯ ದ್ವೇಷ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ನೂತನ ದೇವಸ್ಥಾನದ ಬ್ರಹ್ಮಕಲಶ (ಉದ್ಘಾಟನೆ) ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ವಿರುದ್ದ ಕೋಮುದ್ವೇಷದ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜನಪ್ರತಿನಿಧಿಯೇ ಶಾಂತಿ, ಸಾಮರಸ್ಯದ ಊರಿನಲ್ಲಿ  ಮತೀಯದ್ವೇಷ ಕಾರಿರುವುದಕ್ಕೆ ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕೊನೆಯ ದಿನವಾದ ಶನಿವಾರ (ಮೇ.3) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹರೀಶ್ ಪೂಂಜಾ, ಬ್ಯಾರಿ ಸಮುದಾಯದವರ (ಸ್ಥಳೀಯ ಮುಸ್ಲಿಮರು) ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ.

ಈ ಕುರಿತ ಕೆಲವು ವಿಡಿಯೋ ತುಣುಕುಗಳು ನಾನುಗೌರಿ.ಕಾಂಗೆ ಲಭ್ಯವಾಗಿದೆ. ತುಳು ಭಾಷೆಯಲ್ಲಿ ಶಾಸಕ ಮಾಡಿರುವ ಪ್ರಚೋದನಕಾರಿ ಭಾಷಣದ ಕನ್ನಡ ಅನುವಾದ ಕೆಳಗಿದೆ.

“ಬ್ಯಾರಿಗಳ (ಮುಸ್ಲಿಮರ) ಆಕ್ರಮಣದಿಂದ ಅಯೋಧ್ಯೆಯ ರಾಮ ಮಂದಿರ ಮಸೀದಿಯಾದ ಬಳಿಕ ನಾವು 500 ವರ್ಷ ಕಾದೆವು. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು.. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಂದಾಗ ಅರ್ಥ ಮಾಡಿಕೊಳ್ಳಲಿಲ್ಲ. ನಾವು 500 ವರ್ಷ ಕಾದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದೆವು.”

Video Credit : Screen record From youtube.com/@tulutimeslive

“ತೆಕ್ಕಾರಿನಲ್ಲಿ ಒಬ್ಬನೇ ಒಬ್ಬ ಬ್ಯಾರಿ (ಮುಸ್ಲಿಂ) ಇಲ್ಲದಿದ್ದಾಗಲೂ ನಮ್ಮ ಹಿರಿಯರು ಗೋಪಾಲಕೃಷ್ಣ ದೇವರನ್ನು ನಂಬಿಕೊಂಡು ಬಂದಿದ್ದರು. ಬಳಿಕ ಬ್ಯಾರಿಗಳ ಅಥವಾ ಟಿಪ್ಪುವಿನ ಆಕ್ರಮಣದಿಂದ ಗೋಪಾಲಕೃಷ್ಣ ದೇವಸ್ಥಾನ ಧ್ವಂಸಗೊಂಡು ನೆಲದಡಿಗೆ ಹೋದರೂ, ನಾವು ಹಿಂದೂ ಸಮಾಜ ನಿದ್ದೆಯಲ್ಲಿದ್ದೆವು, ನಾವು ಎದ್ದಿರಲಿಲ್ಲ. ಕಾಲಚಕ್ರ ಉರುಳಿ, ಉರುಳಿ ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠೆ ಆದ ಮರುವರ್ಷ, ಅಂದರೆ 2025ರಲ್ಲಿ ತೆಕ್ಕಾರಿನಲ್ಲಿ ಇರುವ ಅತ್ಯಲ್ಪ ಹಿಂದೂ ಸಮಾಜ ಒಂದಾಗಿ ಗೋಪಾಲಕೃಷ್ಣ ದೇವರನ್ನು ಪ್ರತಿಷ್ಠೆ ಮಾಡುವ ಸಂಕಲ್ಪ ಬಂತಲ್ವ ಅದಕ್ಕೆ ಗೋಪಾಲಕೃಷ್ಣ ದೇವರ ಪ್ರೇರಣೆ ಇದೆ.”

“ಇತಿಹಾಸವನ್ನು ಮತ್ತೊಮ್ಮೆ ನೀವು ಮರೆತ್ತದ್ದೇ ಆದರೆ, ನಿಮ್ಮ ಊರಿನಲ್ಲಿರುವುದು 150 ಹಿಂದೂಗಳ ಮನೆಗಳು, ಒಂದು ಸಾವಿರಕ್ಕಿಂತಲೂ ಅಧಿಕ ಇರುವುದು ಬ್ಯಾರಿಗಳು. ಇನ್ನು 10 ವರ್ಷ ಕಳೆದರೆ 1,200 ಇರುವ ಬ್ಯಾರಿಗಳ ಸಂಖ್ಯೆ 600ಕ್ಕೆ ಇಳಿಯುವುದಿಲ್ಲ. ಇನ್ನು 10 ವರ್ಷ ಕಳೆದರೆ ತೆಕ್ಕಾರಿನ ಬ್ಯಾರಿಗಳ ಸಂಖ್ಯೆ 5 ಸಾವಿರ ಆಗುತ್ತದೆ. 5 ಸಾವಿರದಿಂದ 10 ಸಾವಿರ ಆದರೂ, ಇಲ್ಲಿರುವ ಹಿಂದೂ ಸಮಾಜ ಸನಾತನವಾಗಿ ಸಾವಿರ ವರ್ಷ ಗೋಪಾಲಕೃಷ್ಣ ದೇವರನ್ನು ಆರಾಧನೆ ಮಾಡುತ್ತೇವೆ ಎನ್ನುವ ಸಂಕಲ್ಪ ಮಾಡುವ ದಿನ, ಇಂದಿನ ಬ್ರಹ್ಮಕಲಶೋತ್ಸವದ ದಿನ.”

Video Credit : Screen record From youtube.com/@tulutimeslive

“ಬ್ಯಾರಿಗಳಲ್ಲಿ ಎಷ್ಟು ಜಾತಿ ಇದೆ ಎಂದು ಕೇಳಿದರೆ ಅಂಕಿ ಅಂಶ ಹೇಳುತ್ತದೆ, ಮೊನ್ನೆ ಸಿದ್ದರಾಮಯ್ಯ ಜನಗಣತಿ ಮಾಡಿದರು, ಅದರಲ್ಲಿ ಬ್ಯಾರಿಗಳಲ್ಲಿ ಜಾತಿ ಇದೆಯಾ ಕೇಳಿದರೆ, ಜಾತಿ ಇಲ್ಲ ಎಂದಿದ್ದಾರೆ. ಬ್ಯಾರಿಗಳಲ್ಲಿ ಕನಿಷ್ಠ 70-74 ಜಾತಿಗಳಿವೆ. ಆದರೆ, ನಮಗೆ ಯಾವ ಜಾತಿ ಎಂದು ಯಾರಿಗೂ ಗೊತ್ತಿಲ್ಲ. ನಮಗೆ ಗೊತ್ತಿರುವುದು ಏನು ಎಂದರೆ, ಉಸ್ಮಾನಾಕ, ಅಬ್ದುಲ್ಲಾಕ, ಇಬ್ರಾಹಿಂ ಎಲ್ಲಾ ಬ್ಯಾರಿ ಎಂದೇ ಗೊತ್ತಿರುವುದು. ಆದರೆ, ಹಿಂದೂ ಸಮಾಜದಲ್ಲಿ ನಾವು ಆ ರೀತಿಯಲ್ಲ. ಅವನು ಯಾರು..ಅವನು ಬ್ರಾಹ್ಮಣ, ಇವನು ಯಾರು..ಅವನು ಶೆಟ್ಟಿ, ಅವನು ಯಾರು.. ಅವನು ಬಿಲ್ಲವ, ಇವನು ಯಾರು..ಅವನು ಗೌಡ, ಇವನು ಯಾರು..ಅವನು ಕುಲಾಲ, ಈ ರೀತಿಯ ಜಾತಿ-ಜಾತಿ ನಮಗೆ ಮಾತ್ರ ಗೊತ್ತಿರುವುದಲ್ಲ, ಬ್ಯಾರಿಗಳಿಗೂ ಗೊತ್ತಿದೆ.”

Video Credit : Screen record From youtube.com/@tulutimeslive

“ಒಂದು ಸರ್ಕಾರಿ ಜಾಗವಿದೆ, ಅದನ್ನು ಒಬ್ಬ ಬ್ಯಾರಿ ಅತಿಕ್ರಮಣ ಮಾಡಿ ಅಡಿಕೆ ಗಿಡ ನೆಟ್ಟಿದ್ದಾನೆ. ನೀವು ಏನಾದರು ಮಾಡಿ ಸಹಕಾರ ಮಾಡಿದರೆ ನಮಗೆ ದೇವಸ್ಥಾನ ಮಾಡಬಹುದು ಎಂದು ತೆಕ್ಕಾರಿನವರು ಹೇಳಿದ್ದರು. ಎಲ್ಲಾ ಯುವಕರು ಒಂದು ನೆನಪು ಇಟ್ಟುಕೊಳ್ಳಿ ಆವತ್ತು ಇದ್ದಿದ್ದು ಬಿಜೆಪಿ ಸರ್ಕಾರ. ಆವತ್ತು ನಾನು ತಹಶೀಲ್ದಾರ್‌ಗೆ ಕರೆ ಮಾಡಿ ಮರುದಿನ ಹೋಗಿ ಸ್ಥಳ ಮಹಜರು ಮಾಡಿ ವರದಿ ಕೊಡಿ ಎಂದು ಹೇಳಿದ್ದೆ. ನಾನು ಹೇಳಿದ ಮರುದಿನ ತಹಶೀಲ್ದಾರ್ ಬಂದು ಸ್ಥಳ ತನಿಖೆ ಮಾಡಿ ವರದಿ ಕೊಟ್ಟರು. ವರದಿ ಕೊಟ್ಟ ಬಳಿಕ ಡಿಸಿಯಾದ ರವಿ ಅವರಿಗೆ ಆ ಜಾಗದಲ್ಲಿ ಗೋಪಾಲಕೃಷ್ಣ ದೇವಸ್ಥಾನ ಇದೆ ಎಂದು ನಾನು ಹೇಳಿದ್ದೆ. ತಕ್ಷಣ ಆ ಜಾಗದ ಆರ್‌ಟಿಸಿಯನ್ನು ಗೋಪಾಲಕೃಷ್ಣ ದೇವರ ಹೆಸರಿಗೆ ಮಾಡಿ ಕೊಡಿ ಎಂದಿದ್ದೆ. 25 ಸೆಂಟ್ಸ್ ಜಾಗ ಗೋಪಾಲಕೃಷ್ಣ ದೇವರ ಹೆಸರಿಗೆ ಆಯ್ತು. ಇದು ನಾನು, ಡಿಸಿ ಸೇರಿದಂತೆ ಯಾರ ಸಾಧನೆಯೂ ಅಲ್ಲ, ಇತಿಹಾಸದಲ್ಲಿ ಈ ಮೊದಲು ಈ ರೀತಿ ಅಗಿಲ್ಲ, ಮುಂದೆಯೂ ಆಗಲ್ಲ.”

Video Credit : Screen record From youtube.com/@tulutimeslive

“ಇಲ್ಲಿನ ಕಂತ್ರಿ (ದುಷ್ಟ) ಬ್ಯಾರಿಗಳು ಟ್ಯೂಬ್‌ಲೈಟ್ ಪುಡಿಗೈದಾಗ, ಸಂಖ್ಯೆ ಕಡಿಮೆ ಇದ್ದರೂ ಜನ ಸಾಗರ ಇರುವ ಗ್ರಾಮದ ರೀತಿ ತೆಕ್ಕಾರಿನವರು ಯಾರೂ ಎದೆಗುಂದಲಿಲ್ಲ. ಅಣ್ಣ ದಿನ ಬೆಳಗಾದರೆ ತೆಕ್ಕಾರಿನ ಕಂತ್ರಿ ಬ್ಯಾರಿಗಳು ಬಂದು ಟ್ಯೂಬ್ ಲೈಟ್‌ ಪುಡಿ ಮಾಡುತ್ತಿದ್ದಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ನಮ್ಮ ಯುವಕರು ಹೇಳಿದ್ದಾರೆ. ನಾನು ಹೇಳಿದೆ ನೀವು ಏನೂ ತಲೆಬಿಸಿ ಮಾಡಿಕೊಳ್ಳಬೇಡಿ. ಬ್ರಹ್ಮಕಲಶ ಆಗಿ ನಾಡಿದ್ದು ದೊಡ್ಡ ಕಲಶ ಆಗುವ ಮುನ್ನ ಟ್ಯೂಬ್‌ಲೈಟ್ ಪುಡಿ ಮಾಡಿದವರಲ್ಲಿ ಯಾರಿಗಾದರು ಗೊತ್ತಾಗುತ್ತದೆ. ಗೋಪಾಲಕೃಷ್ಣ ದೇವರು ಎಲ್ಲಾದರು ತೋರಿಸುತ್ತಾರೆ, ನೀವು ಗಡಿಬಿಡಿ ಮಾಡಲು ಹೋಗಬೇಡಿ ಎಂದು ಹೇಳಿದೆ.”

“ನಿಮಗಿದು ಗೊತ್ತಿರಲಿ, ನಮ್ಮ ದೇವಸ್ಥಾನದ ನಮ್ಮ ದೊಡ್ಡ ತಪ್ಪು ಯಾವುದೆಂದರೆ, ನಾವು ಎಲ್ಲರನ್ನು ಸೌಹಾರ್ದತೆಯಿಂದ ಕೊಂಡೊಯ್ಯಲು ನೋಡುವುದು. ನಾವು ಮಸೀದಿಗೆ ಏಕೆ ಆಹ್ವಾನ ಪತ್ರಿಕೆ ಕೊಡಬೇಕಿತ್ತು? ಮಸೀದಿಗೆ ಹೋಗಿ ಆಹ್ವಾನ ಪತ್ರಿಕೆ ಕೊಟ್ಟಿದ್ದಕ್ಕಲ್ವ ಟ್ಯೂಬ್ ಲೈಟ್ ಪುಡಿಯಾಗಿದ್ದು? ಆಹ್ವಾನ ಪತ್ರಿಕೆ ಕೊಟ್ಟಿಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ನಮಗೂ ಅವರಿಗೂ (ಮುಸ್ಲಿಮರು) ಸಂಬಂಧ ಇಲ್ಲ. ನಾವು ಯಾವುದನ್ನೂ ಸರಿದೂಗಿಸಿಕೊಂಡು ಹೋಗುವ ಅಗತ್ಯ ಇಲ್ಲ. ನಾವು ಹಿಂದೂಗಳು ಹಿಂದೂಗಳೇ, ಅದರಲ್ಲಿ ಎರಡು ಮಾತಿಲ್ಲ. ಟ್ಯೂಬ್‌ಲೈಟ್‌ ಪುಡಿ ಮಾಡಿದ್ದು ನಾನೇ ಎಂದು, ಕಂತ್ರಿ ಬ್ಯಾರಿಯನ್ನು ತೆಕ್ಕಾರಿನ ಜನತೆಯ ಮುಂದೆ ಗೋಪಾಲಕೃಷ್ಣ ದೇವರು ತೋರಿಸಲಿ”

Video Credit : Screen record From youtube.com/@tulutimeslive

“ಬೆಳ್ತಂಗಡಿ ತಾಲೂಕಿನಲ್ಲಿ ಅತಿ ಹೆಚ್ಚು ಮುಸ್ಲಿಮರು ವಾಸವಿರುವ ಗ್ರಾಮಗಳಲ್ಲಿ ತೆಕ್ಕಾರು ಗ್ರಾಮವೂ ಒಂದು. ಇಲ್ಲಿ ಹಿಂದೂಗಳು, ಮುಸ್ಲಿಮರು, ಕ್ರೈಸ್ತರು, ಜೈನರು ಬಹಳ ಅನ್ಯೋನ್ಯತೆಯಿಂದ ಬದುಕುತ್ತಿದ್ದೇವೆ. ನೂತನ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶಕ್ಕೆ ಮುಸ್ಲಿಮರು ಕೂಡ ಕೈಲಾದ ಸಹಾಯ ಮಾಡಿದ್ದಾರೆ. ಬ್ಯಾನರ್‌ಗಳನ್ನು ಹಾಕಿ ಸಂತೋಷದಿಂದ ಶುಭಕೋರಿದ್ದಾರೆ. ಕಾರ್ಯಕ್ರಮಕ್ಕೆ ಬಂದವರ ವಾಹನ ಪಾರ್ಕಿಂಗ್‌ಗೆ ಜಾಗ ಕೊಟ್ಟಿದ್ದಾರೆ. ಬ್ರಹ್ಮಕಲಶದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಹೀಗಿರುವಾಗ ಶಾಸಕರು ಬಂದು ಕೋಮುದ್ವೇಷದ ಭಾಷಣ ಮಾಡಿರುವುದು ಕೇದಕರ” ಎಂದು ತೆಕ್ಕಾರು ಗ್ರಾಮದ ವ್ಯಕ್ತಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ತೆಕ್ಕಾರು ಗ್ರಾಮದ ಮೂಡಡ್ಕದ ಮುಸ್ಲಿಮರು ಶುಭಕೋರಿ ಹಾಕಿರುವ ಬ್ಯಾನರ್

ಗೃಹ ಸಚಿವರು ‘ಕೋಮುದ್ವೇಷ ನಿಗ್ರಹ ಘಟಕ’ ಘೋಷಿಸಿದ ದಿನವೇ ದ್ವೇಷ ಭಾಷಣ

ಮಂಗಳೂರು ನಗರದ ಹೊರವಲಯಗಳಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಕೇರಳದ ಮೂಲದ ಅಶ್ರಫ್  ಮತ್ತು ರೌಡಿ ಶೀಟರ್ ಸುಹಾಸ್ ಎಂಬವರ ಹತ್ಯೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಭಯದ ವಾತಾವಾರಣ ನಿರ್ಮಾಣವಾಗಿದೆ.

ಶನಿವಾರ ಮಂಗಳೂರಿಗೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪೊಲೀಸ್ ಮತ್ತು ಇತರ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.

ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಗೃಹ ಸಚಿವರು, ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ‘ಕೋಮುದ್ವೇಷ ನಿಗ್ರಹ ಘಟಕ’ (Anti Communal Force) ಆರಂಭಿಸುವುದಾಗಿ ಘೋಷಿಸಿದ್ದಾರೆ. ಕೋಮುದ್ವೇಷದ ಭಾಷಣ ಮಾಡುವ, ಹೇಳಿಕೆ ಕೊಡುವವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲು ಈ ಘಟಕಕ್ಕೆ ಕಾನೂನು ವ್ಯಾಪ್ತಿಯಲ್ಲಿ ಅಧಿಕಾರ ನೀಡಲಾಗುವುದು ಎಂದಿದ್ದಾರೆ. ಆದರೆ, ಅದೇ ದಿನ ರಾತ್ರಿ ಜನ ಪ್ರತಿನಿಧಿಯಾದ ಶಾಸಕರೇ ಕೋಮುದ್ವೇಷದ ಭಾಷಣ ಮಾಡಿದ್ದಾರೆ. ಹಾಗಾಗಿ, ಶಾಸಕ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರಾ? ಎಂದು ಜನರು ಪ್ರಶ್ನಿಸಿದ್ದಾರೆ.

ಎರಡು ಕೋಮುಗಳ ಇಬ್ಬರು ವ್ಯಕ್ತಿಗಳ ಹತ್ಯೆಯಿಂದ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ವೇಳೆ ಜನಪ್ರತಿನಿಧಿಯಾದ ಶಾಸಕ ಶಾಂತಿ, ಸಾಮರಸ್ಯ ಕಾಪಾಡಲು ಪ್ರಯತ್ನಿಸುವ ಬದಲು ಸೌಹಾರ್ದತೆಯ ಊರಿನಲ್ಲಿ ದ್ವೇಷ ಭಾಷಣ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಜನರು ಹೇಳಿದ್ದಾರೆ.

ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....